AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಹೆಂಡ್ತಿಯಾದವಳು ಗಂಡನ ಮುಂದೆ ಈ ಮಾತುಗಳನ್ನಾಡಬಾರದೆಂದು ಚಾಣಕ್ಯರು ಹೇಳುತ್ತಾರೆ

ಪತಿ ಮತ್ತು ಪತ್ನಿಯ ನಡುವಿನ ಬಾಂಧವ್ಯವನ್ನು ಬಲಪಡಿಸಲು ಚಾಣಕ್ಯರು ತಮ್ಮ ನೀತಿಯಲ್ಲಿ ಹಲವಾರು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಅದೇ ರೀತಿ ಅವರು ಹೆಂಡತಿ ಗಂಡನ ಮುಂದೆ ಕೆಲವು ವಿಷಯಗಳನ್ನು ಹೇಳಬಾರದು, ಹೀಗೆ ಮಾಡಿದರೆ ಮಾತ್ರ ಸಂಸಾರ ಸುಖವಾಗಿ ಸಾಗಲು ಸಾಧ್ಯ ಎಂದು ಹೇಳಿದ್ದಾರೆ. ಹಾಗಿದ್ದರೆ ಪತ್ನಿಯಾದವಳು ಗಂಡನ ಮುಂದೆ ಯಾವ ಮಾತುಗಳನ್ನಾಡಬಾರದು ಎಂಬುದನ್ನು ತಪ್ಪದೇ ತಿಳಿಯಿರಿ.

Chanakya Niti: ಹೆಂಡ್ತಿಯಾದವಳು ಗಂಡನ ಮುಂದೆ ಈ ಮಾತುಗಳನ್ನಾಡಬಾರದೆಂದು ಚಾಣಕ್ಯರು ಹೇಳುತ್ತಾರೆ
ಚಾಣಕ್ಯ ನೀತಿImage Credit source: Getty Images
ಮಾಲಾಶ್ರೀ ಅಂಚನ್​
|

Updated on: Nov 11, 2025 | 6:33 PM

Share

ಪ್ರತಿಯೊಂದು ಸಂಬಂಧವು ಪ್ರೀತಿ, ನಂಬಿಕೆ ಮತ್ತು ತಿಳುವಳಿಕೆಯನ್ನು ಆಧರಿಸಿದೆ. ಅದರಲ್ಲೂ ಗಂಡ ಹೆಂಡತಿಯ (husband wife) ಸಂಬಂಧ ಎನ್ನುವಂತಹದ್ದು ತುಂಬಾನೇ ಪವಿತ್ರವಾದದ್ದು, ಗಂಡ ಹೆಂಡತಿಯ ನಡುವೆ ಯಾವುದೇ ರೀತಿಯ ಮುಚ್ಚುಮರೆ ಇರಬಾರದು, ಸಂಗಾತಿಗಳಿಬ್ಬರೂ ಮುಕ್ತವಾಗಿ ಮಾತನಾಡಬೇಕು ಎಂದು ಹೇಳಲಾಗುತ್ತದೆ. ಆದರೆ ಆಚಾರ್ಯ ಚಾಣಕ್ಯರು ಹೆಂಡತಿಯಾದವಳು ಯಾವುದೇ ಕಾರಣಕ್ಕೂ ಗಂಡನ ಜೊತೆ ಈ ಕೆಲವು ಮಾತುಗಳನ್ನಾಡಬಾರದು ಎಂದು ಹೇಳಿದ್ದಾರೆ.  ಪತ್ನಿ ತನ್ನ ಪತಿಯ ಮುಂದೆ ಆಡುವ ಈ ಕೆಲವು ಮಾತುಗಳು ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗಬಹುದು, ಅಂತಹ ಮಾತುಗಳನ್ನಾಡದಿದ್ದರೆಯೇ ಒಳ್ಳೆಯದು ಎಂದಿದ್ದಾರೆ. ಹಾಗಿದ್ದರೆ ಹೆಂಡ್ತಿ ಗಂಡನ ಮುಂದೆ ಯಾವ ಮಾತುಗಳನ್ನಾಡಬಾರದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ಹೆಂಡತಿ ತನ್ನ ಗಂಡನ ಜೊತೆ ಈ ಮಾತುಗಳನ್ನಾಡಬಾರದು:

ಕುಟುಂಬ ಸದಸ್ಯರನ್ನು ಹೋಲಿಕೆ ಮಾಡಿ ಮಾತನಾಡುವುದು: ಮದುವೆಯ ನಂತರ ಹೆಂಡತಿ ತನ್ನ ಹೆತ್ತವರ ಮನೆಯ ಸದಸ್ಯರೊಂದಿಗೆ ಗಂಡನ ಮನೆಯ ಸದಸ್ಯರನ್ನು ಹೋಲಿಕೆ ಮಾಡಿ ಮಾತನಾಡಬಾರದು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ.  ಪ್ರತಿಯೊಂದು ಕುಟುಂಬದ ಪರಿಸ್ಥಿತಿಯೂ ವಿಭಿನ್ನವಾಗಿರುತ್ತದೆ ಮತ್ತು ತನ್ನ ಗಂಡನ ಮನೆಯನ್ನು ತಾಯಿಯ ಮನೆಯೊಂದಿಗೆ ಹೋಲಿಸುವುದು ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗಬಹುದು. ಇದು ಗಂಡನಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಮತ್ತು ಮನೆಯ ವಾತಾವರಣವನ್ನು ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ.

ಸುಳ್ಳು ಮಾತುಗಳನ್ನಾಡುವುದು: ಚಾಣಕ್ಯನ ಪ್ರಕಾರ, ಸಂಬಂಧದ ಅಡಿಪಾಯ ನಂಬಿಕೆಯ ಮೇಲೆ ಅವಲಂಬಿತವಾಗಿದೆ. ಒಮ್ಮೆ ಸುಳ್ಳು ಬಹಿರಂಗವಾದರೆ, ಒಡೆದು ಹೋದ ನಂಬಿಕೆಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ, ಸಣ್ಣ ವಿಷಯಗಳಲ್ಲಿಯೂ ಪ್ರಾಮಾಣಿಕವಾಗಿರುವುದು ಬಹಳ ಮುಖ್ಯ. ಸತ್ಯವು ಸಂಬಂಧಗಳನ್ನು ಬಲಪಡಿಸುತ್ತದೆ. ಹಾಗಾಗಿ ಗಂಡನ ಬಳಿ ಯಾವುದೇ ಕಾರಣಕ್ಕೂ ಸುಳ್ಳು ಮಾತುಗಳನ್ನಾಡಬೇಡಿ.

ಗಂಡನೊಂದಿಗೆ ಇತರರೊಂದಿಗೆ ಹೋಲಿಸಿ ಮಾತನಾಡುವುದು: ಕೆಲ ಮಹಿಳೆಯರು ತಮ್ಮ ಗಂಡನನ್ನು ಇತರರೊಂದಿಗೆ ಹೋಲಿಸಿ ಮಾತನಾಡುತ್ತಾರೆ. ಉದಾಹರಣೆಗೆ ನನ್ನ ಸ್ನೇಹಿತೆ ಗಂಡ ಆಕೆಗೆ ಚಿನ್ನವನ್ನು ಕೊಡಿಸಿದ್ದಾರೆ, ನೀವೇನು ಕೊಡಿಸಿದ್ದೀರಿ, ನೀವ್ಯಾಕೆ ಆ ಹುಡುಗನಂತೆ ಸ್ಟೈಲ್‌ ಮಾಡೋದಿಲ್ಲ ಎಂದು ಇತರ ಪುರುಷರ ಜೊತೆ ಹೋಲಿಕೆ ಮಾಡುತ್ತಾರೆ. ಇದು ಪುರುಷನ ಸ್ವಾಭಿಮಾನಕ್ಕೆ ಧಕ್ಕೆ ತರುತ್ತದೆ. ನಿಮ್ಮ ಈ ಕಠೋರ ಮಾತುಗಳು ಸಂಬಂಧದಲ್ಲಿ ಬಿರುಕು ಮೂಡಲು ಸಾಧ್ಯವಾಗಬಹುದು. ಆದ್ದರಿಂದ ಇಂತಹ ಹೋಲಿಕೆಯ ಮಾತುಗಳನ್ನಾಡಬೇಡಿ ಎನ್ನುತ್ತಾರೆ ಚಾಣಕ್ಯ.

ಇದನ್ನೂ ಓದಿ: ನಾಲ್ಕು ಕೆಲಸಗಳನ್ನು ಮಾಡುವ ಜನರಿಗೆ ಎಂದಿಗೂ ಆರ್ಥಿಕ ಸಂಕಷ್ಟ ಎದುರಾಗುವುದಿಲ್ಲವಂತೆ

ಹಣಕಾಸಿನ ವಿಷಯಗಳಲ್ಲಿ ಗೌಪ್ಯತೆ ಇರಲಿ: ಹೆಂಡತಿ ತನ್ನ ಉಳಿತಾಯ, ದೇಣಿಗೆ ಅಥವಾ ಕುಟುಂಬದ ಖರ್ಚುಗಳ ಬಗ್ಗೆ ಗಂಡನಿಗೆ ಸಂಪೂರ್ಣ ಮಾಹಿತಿಯನ್ನು ನೀಡುವುದು ಅನಿವಾರ್ಯವಲ್ಲ. ಕೆಲವು ವಿಷಯಗಳನ್ನು ರಹಸ್ಯವಾಗಿಡುವುದರಿಂದ ಕುಟುಂಬದ ಆರ್ಥಿಕ ಸಮತೋಲನ ಕಾಯ್ದುಕೊಳ್ಳಬಹುದು. ಆದರೂ ಪ್ರಮುಖ ನಿರ್ಧಾರಗಳ ಬಗ್ಗೆ ಇಬ್ಬರ ನಡುವಿನ ಸಂವಹನ ಮುಖ್ಯ ಎನ್ನುತ್ತಾರೆ ಚಾಣಕ್ಯ.

ಕೋಪದಲ್ಲಿ ಏನನ್ನೂ ಹೇಳಬೇಡಿ: ಒಬ್ಬ ವ್ಯಕ್ತಿ ಕೋಪದಲ್ಲಿ ಮಾತನಾಡಿದ ಆತನ ಮಾತುಗಳು ಕೂಡ ಕಠೋರವಾಗಿರುತ್ತದೆ. ಕೋಪದಲ್ಲಿ ಮಾತನಾಡುವ ಒಂದು ಮಾತು ಕೂಡ ಸಂಬಂಧವನ್ನು ನಾಶಮಾಡುತ್ತದೆ ಎಂದು ಚಾಣಕ್ಯರು ಹೇಳುತ್ತಾರೆ. ಕೋಪದಲ್ಲಿ ಹೆಂಡತಿ ತನ್ನ ಗಂಡನಿಗೆ ಹೇಳುವ ಮಾತು ಅವನಿಗೆ ತುಂಬಾ ನೋವುಂಟು ಮಾಡುತ್ತದೆ. ಆದ್ದರಿಂದ, ಅಂತಹ ಪರಿಸ್ಥಿತಿಯಲ್ಲಿ ಮೌನವಾಗಿರುವುದು ಉತ್ತಮ. ಮೌನವು ಸಂಬಂಧವನ್ನು ರಕ್ಷಿಸುತ್ತದೆ ಮತ್ತು ಪ್ರೀತಿಯನ್ನು ಬಲಪಡಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?