AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಚಾಣಕ್ಯ ಹೇಳ್ತಾರೆ ಹೆಂಡತಿಯಾದವಳು ತನ್ನ ಗಂಡನಿಂದ ಬಯಸೋದು ಇದನ್ನು ಮಾತ್ರವಂತೆ

ಮಹಾನ್‌ ವಿದ್ವಾಂಸ, ತತ್ವಜ್ಞಾನಿ, ಅರ್ಥಶಾಸ್ತ್ರಜ್ಞರಾದ ಆಚಾರ್ಯ ಚಾಣಕ್ಯರು ಸುಖ ದಾಂಪತ್ಯ ಜೀವನ, ಉದ್ಯೋಗ, ಯಶಸ್ಸು, ಒಳ್ಳೆಯ ಸ್ನೇಹ ಹೀಗೆ ನಮ್ಮ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ಪ್ರಮುಖ ವಿಚಾರಗಳ ಬಗ್ಗೆ ತಮ್ಮ ನೀತಿ ಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ವಿವಾಹಿತ ಮಹಿಳೆ ತನ್ನ ಗಂಡನಿಂದ ಏನನ್ನು ಬಯಸುತ್ತಾಳೆ ಎಂಬ ವಿಚಾರವನ್ನೂ ಹೇಳಿದ್ದಾರೆ. ಆ ವಿಚಾರಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

Chanakya Niti: ಚಾಣಕ್ಯ ಹೇಳ್ತಾರೆ ಹೆಂಡತಿಯಾದವಳು ತನ್ನ ಗಂಡನಿಂದ ಬಯಸೋದು ಇದನ್ನು ಮಾತ್ರವಂತೆ
ಚಾಣಕ್ಯ ನೀತಿImage Credit source: Pinterest
TV9 Web
| Edited By: |

Updated on: Aug 17, 2025 | 8:14 PM

Share

ವೈವಾಹಿಕ ಜೀವನ ಎನ್ನುವಂತಹದ್ದು, ಕೇವಲ ಒಂದು ಬಂಧವಲ್ಲ, ಪ್ರೀತಿ, ಗೌರವ ಮತ್ತು ತಿಳುವಳಿಕೆಯ ಆಳವಾದ ಅಡಿಪಾಯವಾಗಿದೆ. ಈ ಸಂಬಂಧದಲ್ಲಿ ಒಂದಷ್ಟು ನಿರೀಕ್ಷೆಗಳು ಎನ್ನುವಂತಹದ್ದು ಇರುತ್ತದೆ. ಹೌದು ಗಂಡ ತನ್ನ ಹೆಂಡತಿ  (Husband and Wife) ಹೀಗೆಯೇ ಇರಬೇಕೆಂದು ಬಯಸಿದರೆ, ಹೆಂಡತಿಯಾದವಳು ನನ್ನ ಗಂಡ ನನ್ನನ್ನು ಅತಿಯಾಗಿ ಪ್ರೀತಿಸಬೇಕು, ಕಾಳಜಿ ತೋರಬೇಕು ಅಂತೆಲ್ಲಾ ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾಳೆ. ಗಂಡನಾದವನು ತನ್ನ ಹೆಂಡತಿಯ ಈ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ಪೂರೈಸಲು ಪ್ರಯತ್ನಿಸಿದರೆ, ಅವರ ದಾಂಪತ್ಯ ಜೀವನವು ತುಂಬಾನೇ ಚೆನ್ನಾಗಿರುತ್ತದೆ ಎಂದು ಚಾಣಕ್ಯರು (Acharya Chanakya) ಹೇಳುತ್ತಾರೆ. ಹಾಗಿದ್ರೆ ಚಾಣಕ್ಯರ ಪ್ರಕಾರ ಹೆಂಡತಿಯಾದವಳು ಏನನ್ನು ಅತಿಯಾಗಿ ಬಯಸುತ್ತಾಳೆ ಎಂಬುದನ್ನು ನೋಡೋಣ ಬನ್ನಿ.

ಹೆಂಡತಿಯಾದವಳು ಗಂಡನಿಂದ ಬಯಸುವ ವಿಷಯಗಳು:

ಪ್ರಾಮಾಣಿಕತೆ:  ಆಚಾರ್ಯ ಚಾಣಕ್ಯ ಹೇಳುವಂತೆ ಪ್ರತಿಯೊಬ್ಬ ಮಹಿಳೆಯು ತನ್ನ ಗಂಡ ಪ್ರಾಮಾಣಿಕವಾಗಿರಬೇಕು, ನನಗೆ ಸುಳ್ಳು ಹೇಳಬಾರದು, ನನ್ನ ನಂಬಿಕೆಗೆ ಮೋಸ ಮಾಡಬಾರದು ಎಂದು ಬಯಸುತ್ತಾಳೆ. ಹಾಗಾಗಿ ಗಂಡ ಯಾವಾಗಲೂ ತನ್ನ ಸಂಗಾತಿಯೊಂದಿಗೆ ಪ್ರಾಮಾಣಿಕವಾಗಿರಬೇಕು, ಸಂಗಾತಿಗೆ ನಿಷ್ಠರಾಗಿರಬೇಕು ಹೀಗಿದ್ದರೆ ಜೀವನದ ಅರ್ಧದಷ್ಟು ಸಮಸ್ಯೆಗಳು ಕೊನೆಗೊಳ್ಳುತ್ತವೆ. ದಾಂಪತ್ಯ ಜೀವನವೂ ಸುಖವಾಗಿರುತ್ತದೆ.

ಪ್ರೀತಿ ಮತ್ತು ವಾತ್ಸಲ್ಯ: ಈ ಜಗತ್ತಿನ ಯಾವುದೇ ಸಂಬಂಧವು ನಿಂತಿರುವುದೇ ಪ್ರೀತಿಯ ಆಧಾರದ ಮೇಲೆ ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ.  ಪ್ರತಿಯೊಬ್ಬ ಮಹಿಳೆಯೂ ಸಹ ತನ್ನ ಗಂಡನಿಂದ ಅತಿಯಾದ ಪ್ರೀತಿಯನ್ನು ನಿರೀಕ್ಷಿಸುತ್ತಾಳೆ. ಹಾಗಾಗಿ ಗಂಡನಾದವನು ತನ್ನ ಹೆಂಡತಿಯ ನಿರೀಕ್ಷೆಗೆ ತಕ್ಕಂತೆ ಆಕೆಗೆ ಪ್ರೀತಿಯನ್ನು ನೀಡಿ, ಆಕೆಯ ಬಗ್ಗೆ ಕಾಳಜಿಯನ್ನು  ತೋರಬೇಕು. ಇದು ಖಂಡಿತವಾಗಿಯೂ ದಾಂಪತ್ಯ ಜೀವನದಲ್ಲಿ ಮಾಧುರ್ಯವನ್ನು ತರುತ್ತದೆ.

ಇದನ್ನೂ ಓದಿ
Image
ಇದೇ ಕಾರಣಕ್ಕಂತೆ ವಿವಾಹಿತ ಪುರುಷರು ಅನ್ಯ ಮಹಿಳೆಯ ಮೋಹಕ್ಕೆ ಬೀಳುವುದು
Image
ನೋಡಿ… ಈ ತಪ್ಪುಗಳೇ ಸಂಬಂಧ ಹಾಳಾಗಲು ಮುಖ್ಯ ಕಾರಣ
Image
ಹೆಂಡತಿಯಾದವಳು ಈ ವಿಷಯಗಳನ್ನು ಗಂಡನಿಂದ ಮುಚ್ಚಿಡುತ್ತಾಳಂತೆ
Image
ಗಂಡನಾದವನು ತನ್ನ ಸಂಸಾರದ ಈ ವಿಷಯಗಳ ಬಗ್ಗೆ ಯಾರ ಬಳಿಯೂ ಹೇಳಬಾರದು

ಗೌರವ: ಹೆಂಡತಿ ತನ್ನ ಗಂಡ ಪ್ರತಿಯೊಂದು ಸಂದರ್ಭದಲ್ಲೂ ತನ್ನನ್ನು ಗೌರವಿಸಬೇಕು, ಮನೆಕೆಲಸದಲ್ಲಿ ಸಹಾಯ ಮಾಡಬೇಕು, ಸ್ನೇಹಿತರು ಮತ್ತು ಕುಟುಂಬಸ್ಥರ ಮುಂದೆ ತನ್ನನ್ನು ಕೀಳಾಗಿ ಕಾಣಬಾರದು ಎಂದು ಬಯಸುತ್ತಾಳೆ. ಆದ್ದರಿಂದ ಗಂಡನಾದವನು ತಾನು ಎಷ್ಟೇ ಕೋಪದಲ್ಲಿದ್ದರೂ, ಹೆಂಡತಿಯ ಬಗ್ಗೆ ಕೀಳಾಗಿ ಮಾತನಾಡದೆ, ಆಕೆಯನ್ನು ಗೌರವದಿಂದ ನಡೆಸಿಕೊಳ್ಳಬೇಕು.

ಇದನ್ನೂ ಓದಿ: ಇದೇ ಕಾರಣಕ್ಕಂತೆ ವಿವಾಹಿತ ಪುರುಷರು ಅನ್ಯ ಮಹಿಳೆಯ ಮೋಹಕ್ಕೆ ಬೀಳುವುದು

ಸಮಯ: ಪ್ರತಿಯೊಬ್ಬ ಮಹಿಳೆಯೂ ತನ್ನ ಗಂಡ ನನಗೆ ಸಮಯವನ್ನು ನೀಡಬೇಕು, ನನ್ನೊಂದಿಗೆ ಸಮಯವನ್ನು ಕಳೆಯಬೇಕೆಂದು ಬಯಸುತ್ತಾಳೆ. ಆದರೆ ಇಂದಿನ ಬ್ಯುಸಿ ಜೀವನದಲ್ಲಿ ಸಮಯ ಸಿಗುವುದೇ ತುಂಬಾ ಕಷ್ಟ. ಹೀಗಿರುವಾಗ ಸಿಗುವಂತಹ ಅಲ್ಪ ಸಮಯದಲ್ಲಿ ಗಂಡನಾದವನು ತನ್ನ ಸಂಗಾತಿಯ ಒಟ್ಟಿಗೆ ಕುಳಿತು ಮಾತನಾಡುವುದು, ಒಟ್ಟಿಗೆ ಕುಳಿತು ಊಟ, ತಿಂಡಿ ಮಾಡುವುದು ಮಾಡುತ್ತಿರಬೇಕು. ಈ ಎಲ್ಲಾ ವಿಷಯಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿದರೆ, ನಿಮ್ಮ ದಾಂಪತ್ಯ  ಜೀವನವು ಸಂತೋಷವಾಗಿರುತ್ತದೆ ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!