AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಈ ನಾಲ್ಕು ಜನರನ್ನು ತಂದೆಯಂತೆಯೇ ಗೌರವಿಸಬೇಕು ಎನ್ನುತ್ತಾರೆ ಚಾಣಕ್ಯರು

ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ಮನುಷ್ಯನ ಯಶಸ್ವಿ ಜೀವನಕ್ಕೆ ಬೇಕಾದ ಹಲವಾರು ಸಂಗತಿಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಇಂದಿಗೂ ಹಲವು ಜನ ಚಾಣಕ್ಯರ ನೀತಿಗಳನ್ನು ಅನುಸರಿಸಿಕೊಂಡು, ಯಶಸ್ಸಿನ ಹಾದಿಯತ್ತ ಸಾಗುತ್ತಿದ್ದಾರೆ. ಯಶಸ್ವಿ ಜೀವನವನ್ನು ನಡೆಸುವುದು ಹೇಗೆ ಎಂದು ಚಾಣಕ್ಯರು ಹೇಳಿದ್ದಾರೆ, ಅದೇ ರೀತಿ ಅವರು ತಂದೆಯನ್ನು ಗೌರವಿಸುವಂತೆಯೇ ನಿಮ್ಮ ಜೀವನದಲ್ಲಿ ಈ ನಾಲ್ವರನ್ನು ಗೌರವಿಸಲೇಬೇಕು ಎಂದು ಹೇಳಿದ್ದಾರೆ.

Chanakya Niti: ಈ ನಾಲ್ಕು ಜನರನ್ನು ತಂದೆಯಂತೆಯೇ ಗೌರವಿಸಬೇಕು ಎನ್ನುತ್ತಾರೆ ಚಾಣಕ್ಯರು
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Jul 10, 2025 | 7:33 PM

Share

ಮಕ್ಕಳ ಜೀವನದಲ್ಲಿ ತಂದೆಗೆ (Father) ವಿಶೇಷ ಸ್ಥಾನವಿದೆ. ಅಮ್ಮ ಮಮತೆಯ ಬಂಡಿಯಾದರೆ ತಂದೆ ಜವಬ್ದಾರಿ, ಶಿಸ್ತು, ನೈತಿಕತೆ, ಸದ್ಗುಣ, ಜೀವನ ಪಾಠಗಳನ್ನು ಕಲಿಸುವ ಶಿಕ್ಷಕ. ಇದೇ ಕಾರಣಕ್ಕೆ ತಂದೆ ಎಂಬ ಸೂಪರ್‌ ಹೀರೋ ಎಂದ್ರೆ ಮಕ್ಕಳಿಗೆ ಗೌರವ, ಪ್ರೀತಿ. ಪ್ರತಿಯೊಬ್ಬರು ತಮ್ಮ ತಂದೆಗೆ ವಿಶೇಷವಾದ ಗೌರವವನ್ನು ನೀಡೇ ನೀಡುತ್ತಾರೆ. ಹೀಗೆ ತಂದೆಗೆ ಯಾವ ರೀತಿ ಗೌರವ ನೀಡುತ್ತೇವೋ, ಅಷ್ಟೇ ಗೌರವವನ್ನು ಈ ನಾಲ್ವರಿಗೆ ನೀಡಬೇಕು ಎನ್ನುತ್ತಾರೆ ಚಾಣಕ್ಯರು. ಹಾಗಿದ್ರೆ ಚಾಣಕ್ಯರ (Chanakya) ಪ್ರಕಾರ ಯಾರನ್ನೆಲ್ಲಾ ತಂದೆಯಂತೆ ಗೌರವಿಸಬೇಕು ಎಂಬುದನ್ನು ನೋಡೋಣ ಬನ್ನಿ.

ಚಾಣಕ್ಯರ ಪ್ರಕಾರ, ಈ ಐವರನ್ನು ತಂದೆಯಂತೆಯೇ ಗೌರವಿಸಬೇಕು:

ಗುರುವನ್ನು ತಂದೆಯಂತೆ ಗೌರವಿಸಿ: ಆಚಾರ್ಯ ಚಾಣಕ್ಯರ ಪ್ರಕಾರ, ತಂದೆ-ತಾಯಿಯ  ನಂತರ, ನಮ್ಮ ಯಶಸ್ಸನ್ನು ನೋಡಲು ಬಯಸುವ ವ್ಯಕ್ತಿ ಎಂದರೆ ಅದು ಗುರುಗಳು. ತಂದೆ ತನ್ನ ಮಕ್ಕಳ ಭವಿಷ್ಯವನ್ನು ನಿರ್ಮಿಸಲು ಹಗಲಿರುಳು ಶ್ರಮಿಸಿದರೆ, ಗುರುಗಳು ತಮ್ಮ ಜ್ಞಾನದ ಮೂಲಕ ವಿದ್ಯಾರ್ಥಿಗಳ ಜೀವನವನ್ನು ಬೆಳಗುತ್ತಾರೆ. ಆದ್ದರಿಂದ, ಗುರುವನ್ನು ತಂದೆಯಂತೆ ಗೌರವಿಸಬೇಕು ಎಂದು ಹೇಳಿದ್ದಾರೆ.

ಪುರೋಹಿತರು: ಆಚಾರ್ಯ ಚಾಣಕ್ಯರ ಪ್ರಕಾರ, ಯಜ್ಞ, ಪೂಜೆ, ಪುನಸ್ಕಾರ ನಡೆಸುವ ಪುರೋಹಿತರು ಸಹ ತಂದೆಯಂತೆ ಗೌರವಕ್ಕೆ ಅರ್ಹರು. ಹಾಗಾಗಿ ಪುರೋಹಿತರನ್ನು ತಂದೆಯಂತೆ ಗೌರವಿಸಬೇಕು.

ಇದನ್ನೂ ಓದಿ
Image
“ಇಲ್ಲ” ಎಂದು ಹೇಳುವ ಅಭ್ಯಾಸವನ್ನು ರೂಢಿಸಿಕೊಳ್ಳುವುದು ಏಕೆ ಮುಖ್ಯ ಗೊತ್ತಾ?
Image
ನೋಡಿ… ಈ ತಪ್ಪುಗಳೇ ಸಂಬಂಧ ಹಾಳಾಗಲು ಮುಖ್ಯ ಕಾರಣ
Image
ಇಂತಹವರಿಗೆ ಯಾವತ್ತಿಗೂ ಸಾಲ ಕೊಡಬಾರದಂತೆ
Image
ಮಕ್ಕಳಿಗೆ ಪೋಷಕರು ತಪ್ಪದೆ ಈ ವಿಚಾರಗಳನ್ನು ಕಲಿಸಬೇಕಂತೆ

ಇದನ್ನೂ ಓದಿ: ಯಾವುದೇ ಕಾರಣಕ್ಕೂ ಇಂತಹವರಿಗೆ ಹಣವನ್ನು ಸಾಲ ಕೊಡಬೇಡಿ; ಯಾಕೆ ಗೊತ್ತಾ?

ನಿಮ್ಮನ್ನು ತಂದೆಯಂತೆ ನೋಡಿಕೊಳ್ಳುವ ವ್ಯಕ್ತಿ: ನೀವು ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದರೆ ಅಥವಾ ಮನೆ ಬಿಟ್ಟು ಬೇರೆ ಯಾವುದೋ ಕಡೆ ಕೆಲಸ ಮಾಡುತ್ತಿದ್ದರೆ, ಅಲ್ಲಿ ನಿಮ್ಮನ್ನು ನೋಡಿಕೊಳ್ಳುವ, ಆರೈಕೆ ಮಾಡುವ ವ್ಯಕ್ತಿಯನ್ನು ನೀವು ತಂದೆಯಂತೆ ಗೌರವಿಸಬೇಕು ಎಂದು ಹೇಳುತ್ತಾರೆ ಚಾಣಕ್ಯ.

ಕಷ್ಟದ ಸಮಯದಲ್ಲಿ ನಿಮಗೆ ಸಹಾಯ ಮಾಡುವ ವ್ಯಕ್ತಿ: ನಿಮ್ಮ ಕಷ್ಟದ ಸಮಯದಲ್ಲಿ ನಿಮಗೆ ಸಹಾಯ ಮಾಡುವ ವ್ಯಕ್ತಿ, ಅಪಾಯದ ಪರಿಸ್ಥಿಯಲ್ಲಿ ನಿಮ್ಮನ್ನು ರಕ್ಷಿಸುವ ವ್ಯಕ್ತಿಯನ್ನು ಸಹ ತಂದೆಯಂತೆಯೇ ಗೌರವಿಸಬೇಕು ಎಂದು ಆಚಾರ್ಯ ಚಾಣಕ್ಯೆ ಹೇಳುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ