AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಹೆಣ್ಮಕ್ಳು ಸಾಧ್ಯವಾದಷ್ಟು ಇಂತಹ ಜನರಿಂದ ದೂರವಿರಬೇಕು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು ನಮ್ಮ ಜೀವನಕ್ಕೆ ಉಪಯುಕ್ತವಾಗಿರುವಂತ ಹಲವಾರು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಇವರು ತಮ್ಮ ನೀತಿಗಳಲ್ಲಿ, ಪ್ರತಿಯೊಬ್ಬ ಹುಡುಗಿಯೂ ಸಾಧ್ಯವಾದಷ್ಟು ಅಂತರ ಕಾಯ್ದುಕೊಳ್ಳಬೇಕಾದ ಕೆಲವು ಜನರ ಬಗ್ಗೆ ಉಲ್ಲೇಖಿಸಿದ್ದಾರೆ. ಇಂತಹ ಜನಗಳಿಂದ ಹೆಣ್ಣುಮಕ್ಕಳು ಅಂತರ ಕಾಯ್ದುಕೊಳ್ಳದಿದ್ದರೆ ಜೀವನವೇ ಹಾಳಾಗಬಹುದು ಎಂದು ಎಚ್ಚರಿಸಿದ್ದಾರೆ.

Chanakya Niti: ಹೆಣ್ಮಕ್ಳು ಸಾಧ್ಯವಾದಷ್ಟು ಇಂತಹ ಜನರಿಂದ ದೂರವಿರಬೇಕು ಎನ್ನುತ್ತಾರೆ ಚಾಣಕ್ಯ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Sep 15, 2025 | 5:59 PM

Share

ಸುತ್ತಮುತ್ತಲಿನ ಜನರ ಬಗ್ಗೆ ಎಷ್ಟು ಜಾಗರೂಕರಾಗಿದ್ದರೂ ಸಾಲದು. ಅದರಲ್ಲೂ ಹೆಣ್ಮಕ್ಳಂತೂ (women) ಜೀವನದಲ್ಲಿ ತುಂಬಾನೇ ಎಚ್ಚರಿಕೆಯಿಂದಿರಬೇಕು. ಅದರಲ್ಲೂ ಈ ಒಂದಷ್ಟು ಜನರ ಬಗ್ಗೆ ತುಂಬಾನೇ ಎಚ್ಚರಿಕೆಯನ್ನು ವಹಿಸಬೇಕು ಇಲ್ಲದಿದ್ದರೆ ಜೀವನವೇ ನರಕವಾಗುವ ಸಾಧ್ಯತೆ ಇರುತ್ತದೆ ಎಂದು ಮಹಾನ್‌ ತತ್ವಜ್ಞಾನಿ  ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಇವರು ಮದುವೆ, ಪ್ರೇಮ ಜೀವನ, ವೃತ್ತಿ ಜೀವನ, ಯಶಸ್ಸು ಸೇರಿದಂತೆ ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಮಹಿಳೆಯರಿಗೆ ಸಂಬಂಧಿಸಿದ ಒಂಷ್ಟು ವಿಚಾರಗಳ ಬಗ್ಗೆ ತಿಳಿಸಿದ್ದು, ಹೆಣ್ಣು ಮಕ್ಕಳು ಇಂತಹ ಜನರಿಂದ ಸಾಧ್ಯವಾದಷ್ಟು ದೂರವಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಹೆಣ್ಮಕ್ಳು ಸಾಧ್ಯವಾದಷ್ಟು ಇಂತಹ ಜನರಿಂದ ದೂರವಿರಬೇಕು:

ಮೋಸಗಾರರು ಮತ್ತು ಸುಳ್ಳುಗಾರರು: ಯಾವುದೇ ಸಂಬಂಧವಾಗಿರಬಹುದು ಅಥವಾ ಜೀವನದಲ್ಲಿಯೇ ಆಗಿರಬಹುದು ಸತ್ಯ ಎನ್ನುವಂತಹದ್ದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೀಗಿರುವಾಗ ಸುಳ್ಳು ಹೇಳುವ ಜನರನ್ನು ಎಂದಿಗೂ ನಂಬಬಾರದು. ಅದರಲ್ಲೂ ಮಹಿಳೆಯರು ಸುಳ್ಳು ಹೇಳುವ ಜನರೊಂದಿಗೆ ಸ್ನೇಹ ಅಥವಾ ಸಂಬಂಧವನ್ನು ಯಾವುದೇ ಕಾರಣಕ್ಕೂ ಬೆಳೆಸಬಾರದು. ಅವರು ನಂಬಿಕೆಗೆ ಅರ್ಹರಲ್ಲ ಯಾವಾಗ ಬೇಕಾದರೂ ಬಣ್ಣ ಬದಲಾಯಿಸುವ ಸಾಧ್ಯತೆ ಇರುತ್ತದೆ ಹೌದು ಅವರು ಸಿಹಿಯಾಗಿ ಮಾತನಾಡುವ ಮೂಲಕ ನಿಮ್ಮ ನಂಬಿಕೆಯನ್ನು ಗೆಲ್ಲುತ್ತಾರೆ ಮತ್ತು  ಅವಕಾಶ ಸಿಕ್ಕ ತಕ್ಷಣ ನಿಮಗೆ ದ್ರೋಹ ಬಗೆಯುತ್ತಾರೆ ಎಂದು ಚಾಣಕ್ಯರು ಹೇಳುತ್ತಾರೆ.

ನಿಯಂತ್ರಿಸಲು ಬಯಸುವವರು:  ಅನೇಕ  ಪುರುಷರು ಮಹಿಳೆಯರನ್ನು ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಬಯಸುತ್ತಾರೆ. ಹೀಗೆ ನಿಮ್ಮನ್ನು ನಿಯಂತ್ರಿಸುವ ಹಾಗೂ ನಿಮ್ಮ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಬಯಸುವ ವ್ಯಕ್ತಿಯ ಜೊತೆ ಇರಬಾರದು ಅವರು ಯಾವತ್ತಿದ್ದರೂ ಅಪಾಯಕಾರಿ ಎನ್ನುತ್ತಾರೆ ಆಚಾರ್ಯ ಚಾಣಕ್ಯ. ಅಂತಹ ಜನರು ನಿಮ್ಮ ಸ್ವಾಭಿಮಾನಕ್ಕೆ ನೋವುಂಟು ಮಾಡುತ್ತಾರೆ. ಇದರಿಂದ ನಿಮ್ಮ ಆತ್ಮವಿಶ್ವಾಸ ಕಳೆದುಹೋಗಬಹುದು ಮತ್ತು ನೀವು ನಿಮ್ಮ ಗುರಿಯನ್ನು ತಲುಪಲು ಸಾಧ್ಯವಾಗುವುದಿಲ್ಲ.  ಹಾಗಾಗಿ ಮಹಿಳೆಯರು ತಮ್ಮ ಸ್ವಾಭಿಮಾನದೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಬಾರದು ಎಂದು ಚಾಣಕ್ಯರು ಹೇಳುತ್ತಾರೆ.

ಇದನ್ನೂ ಓದಿ
Image
ಮಾನಸಿಕವಾಗಿ ಬಲಿಷ್ಠರಾಗಿರಲು ಚಾಣಕ್ಯರ ಈ ಮಾತುಗಳನ್ನು ತಪ್ಪದೆ ಪಾಲಿಸಿ
Image
ನಿಮ್ಮ ಅತಿಯಾದ ಕೋಪದಿಂದಾಗಿ ಈ ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತೆ
Image
ಜೀವನದಲ್ಲಿ ಈ ಐದು ಜನರನ್ನು ಯಾವುದೇ ಕಾರಣಕ್ಕೂ ನಂಬಬೇಡಿ
Image
ಈ ಅಭ್ಯಾಸಗಳು ಒಬ್ಬ ವ್ಯಕ್ತಿಯನ್ನು ಖಂಡಿತವಾಗಿ ಬಡವನನ್ನಾಗಿ ಮಾಡುತ್ತದೆ

ಇದನ್ನೂ ಓದಿ: ಮಾನಸಿಕವಾಗಿ ಬಲಿಷ್ಠರಾಗಿರಲು ಚಾಣಕ್ಯರ ಮಾತುಗಳನ್ನು ತಪ್ಪದೆ ಪಾಲಿಸಿ

ದುರಾಸೆಯ ಜನ: ತಮ್ಮ ಲಾಭವನ್ನೇ ಬಯಸುವವರು, ತಮ್ಮ ಲಾಭಕ್ಕಾಗಿ ಇತರರೊಂದಿಗೆ ಸಂಬಂಧ ಬೆಳೆಸಿಕೊಳ್ಳುತ್ತಾರೆ. ಚಾಣಕ್ಯನ ಪ್ರಕಾರ, ಮಹಿಳೆಯರು ಅಂತಹ ಜನರೊಂದಿಗೆ ಯಾವತ್ತಿಗೂ ಸಂಬಂಧವನ್ನು ಇಟ್ಟುಕೊಳ್ಳಬಾರದು. ಸ್ವಾರ್ಥಕ್ಕಾಗಿಯೇ ಬದುಕುವ ಈ ಜನರು ಕಷ್ಟದ ಸಮಯದಲ್ಲಿ ನಿಮ್ಮನ್ನು ಬಿಟ್ಟು ಹೋಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಿಮ್ಮನ್ನು ಗೌರವಿಸುವ ಜನರೊಂದಿಗೆ ಇರಿ.

ನಕಾರಾತ್ಮಕ ಜನ: ಚಾಣಕ್ಯನ ಪ್ರಕಾರ, ನಿಮ್ಮ ಯಶಸ್ಸಿನ ಬಗ್ಗೆ ಅಸೂಯೆ ಪಡುವ ಅಥವಾ ಯಾವಾಗಲೂ ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡುತ್ತಾರೆ. ಇಂತಹ ಜನರಿಂದ ಜೀವನವೇ ನರಕವಾಗುತ್ತದೆ.  ಅಲ್ಲದೆ ಅವರ ನಕಾರಾತ್ಮಕ ವೈಬ್ ನಿಮ್ಮ ಉತ್ಸಾಹವನ್ನೇ  ನಾಶಪಡಿಸಬಹುದು ಮತ್ತು ಇದರಿಂದ ನೀವು ಖಿನ್ನತೆಗೆ ಒಳಗಾಗಬಹುದು. ಹಾಗಾಗಿ ಅಂತಹ ಜನರ ಬಗ್ಗೆ ಜಾಗರೂಕರಾಗಿರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್