AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಈ ರೀತಿಯ ಜನರಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ, ಅದೇ ರೀತಿ ಇತರರಿಗೆ ಸಹಾಯ ಮಾಡಬೇಕು ಎಂಬುದನ್ನೂ ಹೇಳಿದ್ದಾರೆ. ಇದು ಮಾತ್ರವಲ್ಲದೆ ಈ ಕೆಲವೊಂದಷ್ಟು ಜನರಿಗೆ ಯಾವುದೇ ಕಾರಣಕ್ಕೂ ಸಹಾಯ ಮಾಡಬಾರದು, ಅವರಿಂದು ದೂರವಿದ್ದಷ್ಟು ಒಳ್ಳೆಯದು ಎಂಬ ವಿಚಾರವನ್ನು ತಿಳಿಸಿದ್ದಾರೆ. ಹಾಗಿದ್ರೆ ಯಾರಿಂದ ದೂರವಿರಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.

Chanakya Niti: ಈ ರೀತಿಯ ಜನರಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತಾರೆ ಚಾಣಕ್ಯ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Feb 09, 2026 | 7:38 PM

Share

ಸಹಾಯ (help) ಮಾಡುವುದು ಒಳ್ಳೆಯ ಗುಣ. ಹೌದು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಮಾನವೀಯತೆ. ಆದರೆ ಇಂತಹ ಕೆಲವೊಂದಿಷ್ಟು ಜನರಿಗೆ ಯಾವುದೇ ಕಾರಣಕ್ಕೂ ಸಹಾಯ ಮಾಡಬಾರದು ಅಂತಹ ಜನರಿಂದ ಸಾಧ್ಯವಾದಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಚಾಣಕ್ಯರು ಹೇಳುವಂತೆ ಯಾವ ರೀತಿಯ ಜನರಿಗೆ ಸಹಾಯ ಮಾಡಬಾರದು, ಅಂತಹ ಜನರಿಂದ ಯಾವ ಕಾರಣಕ್ಕಾಗಿ ದೂರವಿರಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

ಇಂತಹ ಜನರಿಗೆ ಸಹಾಯ ಮಾಡಬಾರದು:

ಮೂರ್ಖ ವ್ಯಕ್ತಿ: ಆಚಾರ್ಯ ಚಾಣಕ್ಯರು ಮೂರ್ಖ ವ್ಯಕ್ತಿಯಿಂದ ಆದಷ್ಟು ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ. ಏಕೆಂದರೆ ಮೂರ್ಖನಿಗೆ ನಿಮ್ಮ ಸಹಾಯದ ಮಹತ್ವ ಅರ್ಥವಾಗುವುದಿಲ್ಲ, ಇಂತಹವರಿಗೆ ಉಪಕಾರ ಮಾಡುವುದೇ ನಿಷ್ಪ್ರಯೋಜಕ. ಆದ್ದರಿಂದ ಇಂತಹ ಜನರಿಂದ ದೂರವಿರುವುದೇ ತುಂಬಾ ಒಳ್ಳೆಯದು.

ಕೆಟ್ಟ ಸ್ವಭಾವದ ವ್ಯಕ್ತಿ: ಕೆಟ್ಟ ಸ್ವಭಾವದ ಯಾರಾದರೂ ನಿಮಗೆ ತಿಳಿದಿದ್ದರೆ, ಅವರಿಂದ ದೂರವಿರುವುದು ತುಂಬಾ ಒಳ್ಳೆಯದು. ಅಂತಹ ಜನರಿಗೆ ಸಹಾಯ ಮಾಡುವುದು ಅಥವಾ ಒಳ್ಳೆಯದನ್ನು ಮಾಡುವುದು ಸಹ ಹಾನಿಯನ್ನುಂಟುಮಾಡುತ್ತದೆ. ಅಂತಹ ಜನರೊಂದಿಗೆ ಸಂಪರ್ಕದಲ್ಲಿದ್ದರೆ ಸಮಾಜ ಮತ್ತು ಕುಟುಂಬ ವರ್ಗದಲ್ಲಿ ನಿಮ್ಮ ಗೌರವ ಹಾಳಾಗುತ್ತದೆ. ಇದು ಅವಮಾನಕ್ಕೆ ಸಹ ಕಾರಣವಾಗಬಹುದು. ಜೊತೆಗೆ ಅಂತಹ ಜನರ ಸಹವಾಸ ಮಾಡಿದರೇ ನೀವು ಕೂಡ ಕೆಟ್ಟ ಬುದ್ಧಿಯನ್ನು ಕಲಿಯುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಕೆಟ್ಟ ಸ್ವಭಾವದ ಜನರಿಂದ ದೂರವಿರಬೇಕು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ..

ಅನಗತ್ಯವಾಗಿ ದುಃಖಿತನಾಗಿರುವ ವ್ಯಕ್ತಿ: ತಮ್ಮ ಜೀವನದಲ್ಲಿ ಅತೃಪ್ತರಾಗಿರುವ ಮತ್ತು ನಿರಂತರವಾಗಿ ದುಃಖಿತನಾಗಿರುವ ವ್ಯಕ್ತಿ ಇತರರ ಪ್ರಗತಿಯನ್ನು ನೋಡಿ ಅಸೂಯೆ ಪಡುತ್ತಾನೆ. ಆದ್ದರಿಂದ ಇಂತಹ ಸ್ವಭಾವದ ವ್ಯಕ್ತಿಗಳಿಂದ ದೂರವಿರಿ ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಅವರು ಇತರರ ಸಂತೋಷವನ್ನು ಅಸೂಯೆಪಡುತ್ತಾರೆ ಮತ್ತು ಶಪಿಸುತ್ತಾರೆ. ಹೀಗಾಗಿ, ಅಸೂಯೆ ಭಾವನೆಗಳನ್ನು ಹೊಂದಿರುವ ಮತ್ತು ಅತೃಪ್ತರಾಗಿರುವವರಿಂದ ದೂರವಿರುವುದು ನಮಗೆ ಒಳ್ಳೆಯದು.

ಇದನ್ನೂ ಓದಿ: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಕೆಲಸಗಳನ್ನು ಮಾಡಲೇಬೇಕು

ಕೋಪಗೊಂಡ ಅಥವಾ ಮುಂಗೋಪದ ಜನರು:  ಆಚಾರ್ಯ ಚಾಣಕ್ಯರು ಕೋಪದ ಸ್ವಭಾವ ಹೊಂದಿರುವ ವ್ಯಕ್ತಿಯನ್ನು ಎಂದಿಗೂ ಹತ್ತಿರ ಸೇರಿಸಬಾರದು ಎಂದು ಸಲಹೆ ನೀಡಿದ್ದಾರೆ. ಮನುಷ್ಯನ ದೊಡ್ಡ ಶತ್ರು ಕೋಪ. ಕೋಪವು ವ್ಯಕ್ತಿಯ ತರ್ಕಿಸುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ. ಕೋಪಗೊಂಡ ವ್ಯಕ್ತಿಯು ತನ್ನನ್ನು ಮತ್ತು ಇತರರನ್ನು ನೋಯಿಸಿಕೊಳ್ಳುತ್ತಾನೆ. ಈ ವ್ಯಕ್ತಿ ವಿರೋಧಿಗಳಿಗಿಂತ ಹೆಚ್ಚು ಅಪಾಯಕಾರಿ ಆದ್ದರಿಂದ ಇಂತಹ ವ್ಯಕ್ತಿಗಳಿಂದ ದೂರವಿದ್ದಷ್ಟು ಒಳ್ಳೆಯದು.

ಮಾದಕ ವ್ಯಸನಿಗಳು: ಮಾದಕ ವ್ಯಸನಿಗಳಿಗೆ ಸಹಾಯ ಮಾಡದಂತೆ ಆಚಾರ್ಯ ಚಾಣಕ್ಯ ಸಲಹೆ ನೀಡಿದ್ದಾರೆ. ಅಂತಹ ಜನರು ಎಂದಾದರೂ ಸಹಾಯ ಕೇಳಿದರೆ, ನಿರಾಕರಿಸುವುದು ಉತ್ತಮ. ಏಕೆಂದರೆ ಅಂತಹ ಜನರು, ಮಾದಕತೆಯ ಪ್ರಭಾವದಲ್ಲಿ, ಉಳಿದೆಲ್ಲವನ್ನೂ ಮರೆತು ನೀರಿನಂತೆ ಹಣವನ್ನು ಖರ್ಚು ಮಾಡುತ್ತಾರೆ. ಅಲ್ಲದೆ ಇವರಿಂದ ಇತರರಿಗೆ ಹಾನಿಯೇ ಹೆಚ್ಚು. ಆದ್ದರಿಂದ ಅಂತಹ ಜನರಿಗೆ ಎಂದಿಗೂ ಸಹಾಯ ಮಾಡಬಾರದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು