AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಪುರುಷರು ಮದುವೆ ವಿಚಾರದಲ್ಲಿ ಇಂತಹ ಮಹಿಳೆಯರಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತಾರೆ ಚಾಣಕ್ಯ

ಚಾಣಕ್ಯರು ತಮ್ಮ ತಮ್ಮ ನೀತಿಶಾಸ್ತ್ರದಲ್ಲಿ ಜೀವನದಲ್ಲಿ ಯಶಸ್ಸನ್ನು ಗಳಿಸಲು, ವೈಯಕ್ತಿಯ ಜೀವನ ಸಂತೋಷದಿಂದಿರಲು ಬೇಕಾದಂತಹ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಮಾನಸಿಕ ನೆಮ್ಮದಿ, ಕುಟುಂಬದ ಒಳಿತು, ಯಶಸ್ಸಿಗಾಗಿ ಪುರುಷರು ಮದುವೆ, ಪ್ರೀತಿ-ಪ್ರೇಮದ ವಿಚಾರದಲ್ಲಿ ಈ ಕೆಲವೊಂದಿಷ್ಟು ಮಹಿಳೆಯರಿಂದ ದೂರವಿದ್ದಷ್ಟು ಒಳ್ಳೆಯದು, ಇಲ್ಲದಿದ್ದರೆ, ಜೀವನ ಅವನತಿಯತ್ತ ಸಾಗುತ್ತದೆ ಎಂದು ಹೇಳಿದ್ದಾರೆ. ಹಾಗಿದ್ರೆ ಪುರುಷರು ಎಂತಹ ಮಹಿಳೆಯರಿಂದ ಅಂತರವನ್ನು ಕಾಯ್ದುಕೊಳ್ಳಬೇಕು ಎಂಬ ವಿಚಾರವನ್ನು ತಿಳಿಯಿರಿ.

Chanakya Niti: ಪುರುಷರು ಮದುವೆ ವಿಚಾರದಲ್ಲಿ ಇಂತಹ ಮಹಿಳೆಯರಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತಾರೆ ಚಾಣಕ್ಯ
ಚಾಣಕ್ಯ ನೀತಿImage Credit source: Unsplash
ಮಾಲಾಶ್ರೀ ಅಂಚನ್​
|

Updated on: Nov 02, 2025 | 4:45 PM

Share

ಜೀವನದ ಏಳ್ಗೆ, ಯಶಸ್ಸಿನಲ್ಲಿ ಜೀವನ ಸಂಗಾತಿಯ (Life Partner) ಪಾತ್ರ ಕೂಡ ಬಹುಮುಖ್ಯವಾಗಿರುತ್ತದೆ. ಅದಕ್ಕಾಗಿಯೇ ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ಎಚ್ಚರದಿಂದ ಆಯ್ಕೆ ಮಾಡಬೇಕು ಎಂದು ಹೇಳುವುದು. ಕೆಲವೊಮ್ಮೆ ತಪ್ಪು ಆಯ್ಕೆಗಳಿಂದ ಜೀವನವೇ ಹಾಳಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ಪುರುಷರು ಮದುವೆ, ಪ್ರೀತಿ-ಪ್ರೇಮದ ವಿಚಾರದಲ್ಲಿ ಇಂತಹ ಮಹಿಳೆಯರಿಂದ ಆದಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು, ಇಲ್ಲದಿದ್ದರೆ ಕುಟುಂಬದ ನೆಮ್ಮದಿ ಹಾಳಾಗುವುದರ ಜೊತೆಗೆ ಜೀವನವೂ ಹಾಳಾಗುತ್ತದೆ ಎಂದು ಚಾಣಕ್ಯರು ಹೇಳಿದ್ದಾರೆ. ಹೀಗಿರುವಾಗ ಜೀವನದಲ್ಲಿ ಯಶಸ್ಸನ್ನು ಸಾಧಿಸುವುದರ ಜೊತೆಗೆ ಕುಟುಂಬವೂ ನೆಮ್ಮದಿಯಿಂದಿರಲು ಪುರುಷರು ಎಂತಹ ಮಹಿಳೆಯರಿಂದ ದೂರವಿದ್ದರೆ ಒಳ್ಳೆಯದು ಎಂಬುದನ್ನು ತಿಳಿಯಿರಿ.

ಇಂತಹ ಮಹಿಳೆಯರಿಂದ ಪುರುಷರು ಅಂತರವನ್ನು ಕಾಯ್ದುಕೊಳ್ಳಬೇಕಂತೆ:

ಸ್ವಾರ್ಥಿ ಮತ್ತು ದುರಾಸೆಯ ಮಹಿಳೆಯರಿಂದ ದೂರವಿರಿ: ಚಾಣಕ್ಯನ ಪ್ರಕಾರ, ಸ್ವಾರ್ಥಕ್ಕಾಗಿ ಪ್ರೀತಿಸುವಂತಹ ಹೆಣ್ಣಿನಿಂದ ದೂರವಿರಬೇಕಂತೆ.  ಏಕೆಂದರೆ ಅಂತಹ ಮಹಿಳೆಯರು ತಮ್ಮ ಉದ್ದೇಶ ಸಾಧಿಸಿದ ನಂತರ ಸಂಬಂಧಗಳನ್ನು ಮುರಿದುಕೊಂಡು ಹೋಗುತ್ತಾರೆ.  ಇದು ಪುರುಷನ ಜೀವನದಲ್ಲಿ ಅಶಾಂತಿಯನ್ನು ಉಂಟುಮಾಡುತ್ತದೆ. ಈ ಅಂಶ ಆತನ ನೆಮ್ಮದಿಯನ್ನು ಕೆಡಿಸುವುದರ ಜೊತೆಗೆ ಆತನ ವಿನಾಶಕ್ಕೂ ಕಾರಣವಾಗುತ್ತದಂತೆ.

ಕೆಟ್ಟ ಸ್ವಭಾವದ ಮಹಿಳೆಯರು: ಮಹಿಳೆಯ ದೇಹ ಸೌಂದರ್ಯವನ್ನು ನೋಡಿ ಆಕೆಯನ್ನು ಜೀವನ ಸಂಗಾತಿಯೆಂದು ಆಯ್ಕೆ ಮಾಡಬಾರದು, ಆಕೆಯ ಗುಣವನ್ನು ನೋಡಬೇಕು ಎಂದು ಚಾಣಕ್ಯರು ಹೇಳುತ್ತಾರೆ. ಅವರ ಪ್ರಕಾರ ಮೌಲ್ಯಗಳ ಕೊರತೆಯಿರುವ ಮಹಿಳೆಯರು ಇತರರಿಗೂ ಅಗೌರವ ತೋರುತ್ತಾರೆ. ಹೀಗಿರುವಾಗ ಇಂತಹ ಮಹಿಳೆಯನ್ನು ಮದುವೆಯಾದರೆ ಸಂಬಂಧದಲ್ಲಿ ಬಿರುಕು ಮೂಡಿ ಮನೆಯೇ ಒಡೆದು ಹೋಗುವ ಸಾಧ್ಯತೆ ಇರುತ್ತದೆ. ಇದು ಪುರುಷನ ವೈಯಕ್ತಿಕ ಮತ್ತು ವೃತ್ತಿ ಜೀವನ ಎರಡರ ಮೇಲೂ ಪರಿಣಾಮವನ್ನು ಬೀರುತ್ತದೆ.

ಇದನ್ನೂ ಓದಿ
Image
ಇಂತಹ ಜನರೊಂದಿಗೆ ಇದ್ದರೆ ನೀವು ಜೀವನದಲ್ಲಿ ಉದ್ಧಾರವಾಗಲು ಸಾಧ್ಯವೇ ಇಲ್ಲ
Image
ಕೆಲವರು ಎಷ್ಟೇ ಸಂಪಾದನೆ ಮಾಡಿದರೂ ಬಡವರಾಗಿಯೇ ಉಳಿಯಲು ಕಾರಣ ಏನು ಗೊತ್ತಾ?
Image
ಕೆಲಸದ ಸ್ಥಳದಲ್ಲಿ ಇಂತಹ ಜನರಿಂದ ನೀವು ದೂರವಿದ್ದಷ್ಟು ಒಳ್ಳೆಯದು
Image
ಇತರರಿಗೆ ಸಹಾಯ ಮಾಡುವ ಮುನ್ನ, ಚಾಣಕ್ಯರ ಈ ಮಾತುಗಳನ್ನೊಮ್ಮೆ ಕೇಳಿ

ಚಾರಿತ್ರ್ಯವಿಲ್ಲದ ಮಹಿಳೆ: ಆಚಾರ್ಯ ಚಾಣಕ್ಯರ ಪ್ರಕಾರ, ಸದ್ಗುಣಗಳಿರುವ ಹೆಣ್ಣು ನಿಮ್ಮ ಜೀವನಕ್ಕೆ ಬಂದರೆ ಜೀವನ ಬೆಳಗುವಂತೆ, ಸುಳ್ಳು ಹೇಳುವ, ಗೌರವ ನೀಡದ ಚಾರಿತ್ರ್ಯಹೀನ ಮಹಿಳೆಯಿಂದ ಜೀವನವೇ ಹಾಳಾಗುತ್ತದೆ. ಹೌದು ಕೆಲವರು ಪ್ರೀತಿಯಲ್ಲಿದ್ದರೂ, ಅಥವಾ ಮದುವೆಯಾಗಿದ್ದರೂ ಇನ್ನೊಬ್ಬರ ಜೊತೆ ಸಂಬಂಧ ಇಟ್ಟುಕೊಂಡಿರುತ್ತಾರೆ. ಇಂತಹವರ ಜೊತೆ ಇದ್ರೆ ಜೀವನವೇ ಹಾಳಾಗುತ್ತದೆ ಮಾತ್ರವಲ್ಲದೆ ಸಾಕಷ್ಟು ಅವಮಾನಗಳನ್ನೂ ಎದುರಿಸಬೇಕಾಗುತ್ತದೆ. ಹಾಗಾಗಿ ಅಂತಹ ಮಹಿಳೆಯರಿಂದ ದೂರವಿರಬೇಕೆಂದು ಚಾಣಕ್ಯರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: ಇಂತಹ ಜನರೊಂದಿಗೆ ಇದ್ದರೆ ನೀವು ಜೀವನದಲ್ಲಿ ಉದ್ಧಾರವಾಗಲು ಸಾಧ್ಯವೇ ಇಲ್ಲ ಎನ್ನುತ್ತಾರೆ ಚಾಣಕ್ಯ

ಅಜ್ಞಾನಿ ಮಹಿಳೆಯರ ಬಗ್ಗೆಯೂ ಎಚ್ಚರದಿಂದಿರಿ: ಅಜ್ಞಾನಿ ಮತ್ತು ಸಾಮಾನ್ಯ ಜ್ಞಾನವಿಲ್ಲದ ಮಹಿಳೆಯರಿಂದಲೂ ದೂರವಿರಬೇಕು ಎಂದು ಚಾಣಕ್ಯರು ಹೇಳಿದ್ದಾರೆ.  ಜ್ಞಾನವು ಜೀವನದ ದಿಕ್ಕನ್ನು ನಿರ್ಧರಿಸುತ್ತದೆ ಎಂದು ನಂಬಿದ್ದ ಆಚಾರ್ಯ ಚಾಣಕ್ಯರು, ಶಿಕ್ಷಣ ಮತ್ತು ತಿಳುವಳಿಕೆಯ ಕೊರತೆಯಿರುವ ಮಹಿಳೆಯರು ತಾವು ಹಿಂದೆ ಉಳಿಯುವುದಲ್ಲದೆ ತಮ್ಮ ಕುಟುಂಬವನ್ನು ಮುನ್ನಡೆಸುವಲ್ಲಿ ವಿಫಲರಾಗುತ್ತಾರೆ ಎಂದು ಹೇಳಿದ್ದಾರೆ.

ಒಟ್ಟಾರೆಯಾಗಿ ಚಾಣಕ್ಯನ ಪ್ರಕಾರ, ಉತ್ತಮ ನಡವಳಿಕೆಯ, ಸುಸಂಸ್ಕೃತ ಮತ್ತು ಜ್ಞಾನವುಳ್ಳ ಒಬ್ಬ ಮಹಿಳೆ ಮಾತ್ರ ಪುರುಷನನ್ನು ಯಶಸ್ಸಿನತ್ತ ಕೊಂಡೊಯ್ಯಬಲ್ಲಳು. ಅಂತಹ ಮಹಿಳೆಯರು ಗಂಡನ ಏಳ್ಗೆಗೆ ಶ್ರಮಿಸುವುದರ ಜೊತೆಗೆ ಕುಟುಂಬವನ್ನೂ ಸರಿದೂಗಿಸಿಕೊಂಡು ಹೋಗುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ