Chanakya Niti: ಈ ಮೂರು ವಿಷಯಗಳ ಬಗ್ಗೆ ಕೋಪಗೊಳ್ಳುವುದು ಸರಿಯಲ್ಲ ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ಯಶಸ್ಸನ್ನು ಗಳಿಸಲು ಯಾವ ತತ್ವಗಳನ್ನು ಅನುಸರಿಸಬೇಕು ಎಂದು ಹೇಳಿರುವಂತೆ ಮನುಷ್ಯನಾದವನು ಈ ಮೂರು ವಿಷಯಗಳಿಗೆ ಎಂದಿಗೂ ಕೋಪಗೊಳ್ಳಬಾರದು ಎಂದಿದ್ದಾರೆ. ಚಾಣಕ್ಯರು ಹೇಳಿರುವ ಆ ಮೂರು ವಿಷಯಗಳ್ಯಾವುವು, ಯಾವ ಕಾರಣಕ್ಕೆ ಕೋಪ ಮಾಡಿಕೊಳ್ಳುವುದು ಸೂಕ್ತವಲ್ಲ ಎಂಬುದನ್ನು ನೋಡೋಣ ಬನ್ನಿ.

Chanakya Niti: ಈ ಮೂರು ವಿಷಯಗಳ ಬಗ್ಗೆ ಕೋಪಗೊಳ್ಳುವುದು ಸರಿಯಲ್ಲ ಎನ್ನುತ್ತಾರೆ ಚಾಣಕ್ಯ
ಚಾಣಕ್ಯ ನೀತಿ
Image Credit source: Pinterest

Updated on: Nov 30, 2025 | 7:59 PM

ಕೋಪ (Anger) ಮತ್ತು ಕೋಪದಲ್ಲಿ ಮಾತನಾಡುವ ಕೆಲವೊಂದು ಪದಗಳು ಸಂಬಂಧವನ್ನೇ ಹಾಳು ಮಾಡುತ್ತದೆ. ಅದಕ್ಕಾಗಿಯೇ ಅತಿಯಾದ ಕೋಪ ಒಳ್ಳೆಯದಲ್ಲ ಎಂದು  ಹೇಳುವುದು. ಅದರಲ್ಲೂ ಈ ಮೂರು ವಿಷಯಗಳ ಬಗ್ಗೆ ಕೋಪಗೊಳ್ಳಲೇಬಾರದು ಎಂದು ಆಚಾರ್ಯ ಚಾಣಕ್ಯರು  ಹೇಳಿದ್ದಾರೆ. ಹೌದು ಈ ಮೇಲೆ ಕೋಪಗೊಳ್ಳುವ ಬದಲು ಬುದ್ಧಿವಂತಿಕೆಯಿಂದ, ಶಾಂತ ರೀತಿಯಲ್ಲಿ  ವರ್ತಿಸುವುದು ಉತ್ತಮ ಎಂದಿದ್ದಾರೆ. ಆ ಮೂರು ವಿಷಯಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ಈ ಮೂರು ವಿಷಯಗಳ ಬಗ್ಗೆ ಕೋಪಗೊಳ್ಳಬೇಡಿ:

ಪುಟ್ಟ ಮಕ್ಕಳ ತಪ್ಪುಗಳ ಬಗ್ಗೆ:  ಚಿಕ್ಕ ಮಕ್ಕಳು ಕಲಿಕೆಯ ಹಂತದಲ್ಲಿರುತ್ತಾರೆ. ಏನಾದರೂ ಕಲಿಯುವಾಗ ಸಾಕಷ್ಟು ತಪ್ಪುಗಳನ್ನು ಮಾಡುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಕೋಪಗೊಂಡರೆ ಅಥವಾ ಗದರಿಸಿದರೆ, ಮಕ್ಕಳು ಭಯಪಡುತ್ತಾರೆ. ಈ ಭಯದಿಂದಾಗಿ ಅವರ ಕಲಿಕಾ ಸಾಮರ್ಥ್ಯ ಕಡಿಮೆಯಾಗುತ್ತದೆ.

ಹಿರಿಯರ ಮಾತಿನ ಮೇಲೆ: ಕೆಲವೊಮ್ಮೆ ಹಿರಿಯರ ಮಾತುಗಳು ನಮ್ಮ ಸ್ವಂತ ಆಲೋಚನೆಗೆ ಹೊಂದಿಕೆಯಾಗುವುದಿಲ್ಲ, ಅವರು ಪದೇ ಪದೇ ಹೇಳಿದ್ದನ್ನೇ ಹೇಳಿ ಕಿರಿಕಿರಿ ಮಾಡುತ್ತಾರೆ ಎಂದು ಹಲವರು ಕೋಪಗೊಳ್ಳುತ್ತಾರೆ. ಹೀಗೆ ಹಿರಿಯರ ಮಾತಿನ ಮೇಲೆ ಕೋಪಗೊಳ್ಳುವುದು ಸರಿಯಲ್ಲ ಎನ್ನುತ್ತಾರೆ ಚಾಣಕ್ಯರು.

ಇದನ್ನೂ ಓದಿ: ಚಾಣಕ್ಯರ ಪ್ರಕಾರ ಗುಣಗಳಿರುವ ಹೆಣ್ಣಿದ್ದರೆ ಮನೆ ಬಂಗಾರದಂತಿರುತ್ತದೆ

ಪ್ರತಿಕೂಲ ಸಂದರ್ಭಗಳಲ್ಲಿ ಕೋಪಗೊಳ್ಳಬಾರದು: ಆಚಾರ್ಯ ಚಾಣಕ್ಯ ಹೇಳುವಂತೆ, ಕೆಲವೊಮ್ಮೆ ನಾವು ಜೀವನದಲ್ಲಿ ನಮ್ಮ ನಿಯಂತ್ರಣಕ್ಕೆ ಮೀರಿದ ಸನ್ನಿವೇಶಗಳನ್ನು ಎದುರಿಸುತ್ತೇವೆ. ಅಂತಹ ಸಂದರ್ಭಗಳಲ್ಲಿ, ಕೋಪವು ಸಮಸ್ಯೆಗಳನ್ನು ಬಗೆಹರಿಸುವ ಬದಲು ಅವುಗಳನ್ನು ಇನ್ನಷ್ಟು ಹದಗೆಡಿಸುತ್ತದೆ. ಹಾಗಾಗಿ ಅಂತಹ ಸಂದರ್ಭಗಳಲ್ಲಿ, ನೀವು ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಬೇಕು ಮತ್ತು ಬುದ್ಧಿವಂತಿಕೆಯಿಂದ ವರ್ತಿಸಬೇಕು ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us