AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಈ ಕೆಲವು ಸಂದರ್ಭಗಳಲ್ಲಿ ಮೌನವಾಗಿರುವುದೇ ಉತ್ತಮ

ಕೆಲವೊಮ್ಮೆ ಮಾತುಗಳು ದುಬಾರಿಯಾಬಹುದು, ಈ ಮಾತುಗಳೇ ಸಂಕಷ್ಟಗಳಿಗೆ ಮುನ್ನುಡಿಯಾಗಬಹುದು. ಆದ್ದರಿಂದ ಒಂದಷ್ಟು ಸಂದರ್ಭಗಳಲ್ಲಿ ಮಾತನಾಡದೆ ಸುಮ್ಮನಿದ್ದರೆಯೇ ತುಂಬಾ ಒಳ್ಳೆಯದು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಜೀವನದಲ್ಲಿ ಎದುರಾಗುವ ಅನಗತ್ಯ ತೊಂದರೆಗಳಿಂದ ಪಾರಾಗಲು ಯಾವ ಸಂದರ್ಭಗಳಲ್ಲಿ ಮೌನವಾಗಿರಬೇಕು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

Chanakya Niti: ಈ ಕೆಲವು ಸಂದರ್ಭಗಳಲ್ಲಿ ಮೌನವಾಗಿರುವುದೇ ಉತ್ತಮ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Feb 19, 2026 | 6:29 PM

Share

ಆಚಾರ್ಯ ಚಾಣಕ್ಯರು (Acharya Chanakya) ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಯಶಸ್ಸು, ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು ದಾಂಪತ್ಯ ಜೀವನ ಚೆನ್ನಾಗಿರಬೇಕೆಂದರೆ ಪತಿಪತ್ನಿಯರು ಹೇಗಿರಬೇಕು ಎಂಬುದರ ಬಗ್ಗೆ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. ಅದೇ ರೀತಿ ಅವರು ಜೀವನದಲ್ಲಿ ಎದುರಾಗುವಂತಹ ಅನಗತ್ಯ ಸಂಕಷ್ಟಗಳನ್ನು ತಪ್ಪಿಸಲು ಒಂದಷ್ಟು ಸಂದರ್ಭಗಳಲ್ಲಿ ಮಾತನಾಡದೇ ಮೌನವಾಗಿರಬೇಕು ಎಂದು ಎಚ್ಚರಿಕೆಯ ಸಂದೇಶವನ್ನೂ ನೀಡಿದ್ದಾರೆ. ಹಾಗಿದ್ರೆ ಯಾವೆಲ್ಲಾ ಸಂದರ್ಭಗಳಲ್ಲಿ ಮೌನವಾಗಿರಬೇಕು ಎಂಬುದನ್ನು ತಿಳಿದುಕೊಳ್ಳಿ.

ಈ ಸಂದರ್ಭಗಳಲ್ಲಿ ಮೌನವಾಗಿರುವುದೇ ಉತ್ತಮ:

ಯಾರೂ ನಿಮ್ಮ ಮಾತನ್ನು ಕೇಳಲು ಸಿದ್ಧರಿಲ್ಲದಿದ್ದಾಗ: ಚಾಣಕ್ಯರು ಹೇಳುವಂತೆ ನಿಮ್ಮ ಮಾತನ್ನು ಕೇಳದವರ ಬಳಿ ನೀವು ಮಾತನಾಡುವುದು ಅಥವಾ ಅವರಿಗೆ  ನೀಡುವುದು ನಿಷ್ಪ್ರಯೋಜಕ. ನಿಮ್ಮ ಮಾತುಗಳಿಗೆ ಬೆಲೆ ಇಲ್ಲದಿರುವಲ್ಲಿ ನೀವು ಮೌನವಾಗಿರುವುದೇ ಉತ್ತಮ.

ನಿಮಗೆ ಸಂಪೂರ್ಣ ಮಾಹಿತಿ ಇಲ್ಲದಿದ್ದಾಗ: ಅಪೂರ್ಣ ಜ್ಞಾನ ಯಾವಾಗಲೂ ಅಪಾಯಕಾರಿ. ಒಂದು ವಿಷಯದ ಬಗ್ಗೆ ನಿಮಗೆ ಎಲ್ಲವೂ ತಿಳಿದಿಲ್ಲದಿದ್ದರೆ,  ಅದರ ಬಗ್ಗೆ ಮಾತನಾಡಲು ಹೋಗಬೇಡಿ, ಆ ಸಂದರ್ಭದಲ್ಲಿ ಮೌನವಾಗಿರುವುದೇ ಉತ್ತಮ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಈ ಸಂದರ್ಭಗಳಲ್ಲಿ ಮೌನವಾಗಿರುವುದರಿಂದ ನೀವು ನಗೆಪಾಟಲಿಗೆ ಗುರಿಯಾಗುವುದನ್ನು ತಪ್ಪಿಸಬಹುದು ಜೊತೆಗೆ ನಿಮಗೆ ಎದುರಾಗುವ ಅಪಾಯವನ್ನೂ ತಪ್ಪಿಸಬಹುದು.

ಕೋಪದಲ್ಲಿರುವಾಗ ಮೌನವಾಗಿರಿ: ಕೋಪದಲ್ಲಿ ಯಾವತ್ತೂ ಮಾತನಾಡಲು ಹೋಗಬಾರದು ಎಂದು ಚಾಣಕ್ಯರು ಒತ್ತಿ ಹೇಳಿದ್ದಾರೆ. ಕೋಪದಲ್ಲಿ ಮಾತನಾಡುವ ಮಾತುಗಳು ಸಂಬಂಧಗಳಲ್ಲಿ ಬಿರುಕು ಉಂಟುಮಾಡುತ್ತವೆ, ಇದರಿಂದ ಸುಂದರ ಸಂಬಂಧವೇ ಹಾಳಾಗುತ್ತದೆ. ಆದ್ದರಿಂದ ನೀವು ಕೋಪಗೊಂಡಾಗಲೆಲ್ಲಾ ತಕ್ಷಣ ಮೌನವಾಗಿರಿ. ಮೌನವು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ನಿಮ್ಮನ್ನು ರಕ್ಷಿಸುತ್ತದೆ.

ಇದನ್ನೂ ಓದಿ: ಯೌವನದಲ್ಲಿ ಕೆಲಸಗಳನ್ನು ಮಾಡಿದರೆ ವೃದ್ಧಾಪ್ಯವು ಸಂತೋಷದಿಂದಿರುವುದು

ಯಾರಾದರೂ ಯಾರ ಬಗ್ಗೆಯಾದರೂ ಗಾಸಿಪ್‌ ಮಾಡುವಾಗ: ಮೂರನೇ ವ್ಯಕ್ತಿಯೊಬ್ಬರು ನಿಮ್ಮ ಮುಂದೆ ಯಾರನ್ನಾದರೂ ಗಾಸಿಪ್ ಮಾಡುತ್ತಿದ್ದರೆ ಅಥವಾ ಆ ವ್ಯಕ್ತಿಯ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದರೆ, ಆ ಚರ್ಚೆಯಲ್ಲಿ ತೊಡಗಿಕೊಳ್ಳುವುದನ್ನು ತಪ್ಪಿಸಿ. ನಿಮ್ಮ ಈ ಮೌನವು ಭವಿಷ್ಯದಲ್ಲಿ ದೊಡ್ಡ ಘರ್ಷಣೆಗಳು ಮತ್ತು ವಿವಾದಗಳಿಂದ ನಿಮ್ಮನ್ನು ರಕ್ಷಿಸುತ್ತದೆ.

ನಿಮ್ಮ ಗುರಿಗಳು ಮತ್ತು ರಹಸ್ಯಗಳ ಬಗ್ಗೆ ಮಾತನಾಡಬೇಡಿ: ಆಚಾರ್ಯ ಚಾಣಕ್ಯರು ನಿಮ್ಮ ರಹಸ್ಯಗಳನ್ನು ಮತ್ತು ಯಶಸ್ಸಿನ ಹಾದಿಯನ್ನು ಎಂದಿಗೂ ಹಂಚಿಕೊಳ್ಳಬಾರದು, ಇದರ ಬಗ್ಗೆ ಮೌನವಾಗಿರುವುದು ಉತ್ತಮ ಎಂದು ಹೇಳಿದ್ದಾರೆ. ನಿಮ್ಮ ಗುರಿ ಸಾಧಿಸುವವರೆಗೆ ಮೌನವಾಗಿರಿ. ಏಕೆಂದರೆ ನಿಮ್ಮ ರಹಸ್ಯಗಳನ್ನು ಹಂಚಿಕೊಂಡರೆ ಕೆಲವರು ನಿಮ್ಮ ದಾರಿಗೆ ಅಡ್ಡಿಯುಂಟುಮಾಡುವ ಸಾಧ್ಯತೆ ಇರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ