AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಅತಿಯಾದ ಒಳ್ಳೆಯತನ ಒಳ್ಳೆಯದಲ್ಲ; ಏಕೆ ಗೊತ್ತಾ?

ಕೆಲವೊಬ್ಬರು ತುಂಬಾನೇ ಒಳ್ಳೆಯವರಾಗಿರುತ್ತಾರೆ, ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಾರೆ. ಆದರೆ ಈ ಅತಿಯಾದ ಒಳ್ಳೆಯತನ ಒಳ್ಳೆಯದಲ್ಲ ಎಂದಿದ್ದಾರೆ ಆಚಾರ್ಯ ಚಾಣಕ್ಯ. ನಾವು ಜಾಸ್ತಿ ಒಳ್ಳೆಯತನವನ್ನು ತೋರಿದರೆ ಕೆಲವೊಮ್ಮೆ ಅದೇ ಗುಣವು ದೌರ್ಬಲ್ಯವಾಗಿ ಬದಲಾಗಬಹುದು ಆದ್ದರಿಂದ, ಪರಿಸ್ಥಿತಿಯ ಬಗ್ಗೆ ಯೋಚಿಸಿ ಸಮತೋಲನದಿಂದ ವರ್ತಿಸುವುದು ಬಹಳ ಮುಖ್ಯ ಎಂದಿದ್ದಾರೆ.

Chanakya Niti: ಅತಿಯಾದ ಒಳ್ಳೆಯತನ ಒಳ್ಳೆಯದಲ್ಲ; ಏಕೆ ಗೊತ್ತಾ?
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on:Jun 11, 2026 | 7:33 PM

Share

ಒಳ್ಳೆಯ ವ್ಯಕ್ತಿಯಾಗಿ ಸಮಾಜದಲ್ಲಿ ಬಾಳುವುದು ತುಂಬಾನೇ ಮುಖ್ಯ. ಆದರೆ ಅತಿಯಾದ ಒಳ್ಳೆಯತನ  (honesty) ಎಂದಿಗೂ ಒಳ್ಳೆಯದಲ್ಲ. ಅತಿಯಾದರೆ ಅಮೃತವೂ ವಿಷವೆನ್ನುವಂತೆ ಅತಿಯಾದ ಒಳ್ಳೆಯತನದಿಂದ ನಾವೇ ಸಮಸ್ಯೆಗೆ ಸಿಲುಕಿಕೊಳ್ಳಬಹುದು. ಹಾಗಾಗಿ ಪ್ರತಿಯೊಂದು ಒಳ್ಳೆಯ ಗುಣಕ್ಕೂ ಒಂದು ಮಿತಿ ಇರಬೇಕು, ಜಾಸ್ತಿ ಒಳ್ಳೆಯತನವನ್ನು ತೋರಿದರೆ  ಕೆಲವೊಮ್ಮೆ ಅದೇ ಗುಣವು ದೌರ್ಬಲ್ಯವಾಗಿ ಬದಲಾಗಬಹುದು ಮತ್ತು ಜನ  ನಮ್ಮ ಈ ಒಳ್ಳೆಯತನ ಲಾಭವನ್ನು ಪಡೆಯಬಹುದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ.  ಅತಿಯಾದ ಒಳ್ಳೆಯತನ ಏಕೆ ಒಳ್ಳೆಯದಲ್ಲ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಅತಿಯಾದ ಒಳ್ಳೆಯತನ ಏಕೆ ಒಳ್ಳೆಯದಲ್ಲ?

ಸುಲಭವಾಗಿ ಮೋಸ ಹೋಗಬಹುದು: ಎಲ್ಲದಕ್ಕೂ ಹೌದು ಎಂದು ಹೇಳುವುದು ಅಥವಾ ನಾನು ಇಲ್ಲ ಎಂದು ಹೇಳಿದರೆ ಅವರ ಭಾವನೆಗಳಿಗೆ ನೋವಾಗಬಹುದೇನೋ ಎಂದು ಭಾವಿಸಿ ಎಲ್ಲದಕ್ಕೂ ಹೌದು ಹೇಳಿ ಅತಿಯಾದ ಒಳ್ಳೆಯತನ ತೋರಿಸುತ್ತಾ ಹೋದರೆ ನೀವು ಸುಲಭವಾಗಿ ಮೋಸ ಹೋಗುತ್ತೀರಿ. ಜನ ತಮ್ಮ ಸ್ವಾರ್ಥಕ್ಕಾಗಿ ನಿಮ್ಮನ್ನು ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇದಲ್ಲದೆ ನೀವು ನಿಮ್ಮ ಅಭಿಪ್ರಾಯಗಳನ್ನು ಧೈರ್ಯದಿಂದ ವ್ಯಕ್ತಪಡಿಸಲು ಸಾಧ್ಯವಾಗದಿದ್ದರೆ, ಇತರರು ನಿಮ್ಮನ್ನು ದುರ್ಬಲರೆಂದು ನೋಡುತ್ತಾರೆ.

ಇತರರ ಸ್ವಾರ್ಥಕ್ಕಾಗಿ ಬಲಿಯಾಗಬೇಕಾಗುತ್ತದೆ: ತುಂಬಾ ಒಳ್ಳೆಯವರಾಗಿದ್ದರೆ ನೀವು ಇತರರ ಸ್ವಾರ್ಥಕ್ಕೆ ಬಹುಬೇಗನೇ ಬಲಿಯಾಗುತ್ತೀರಿ. ಜಾಸ್ತಿ ಒಳ್ಳೆಯತನವನ್ನು ತೋರಿದರೆ  ಕೆಲವೊಮ್ಮೆ ಅದೇ ಗುಣವು ದೌರ್ಬಲ್ಯವಾಗಿ ಬದಲಾಗಬಹುದು ಆದ್ದರಿಂದ, ಪರಿಸ್ಥಿತಿಯ ಬಗ್ಗೆ ಯೋಚಿಸಿ ಸಮತೋಲನದಿಂದ ವರ್ತಿಸುವುದು ಬಹಳ ಮುಖ್ಯ.

ಇದನ್ನೂ ಓದಿ: ಚಾಣಕ್ಯರ ಮಾತುಗಳನ್ನು ಅನುಸರಿಸಿದವರು ಜೀವನದಲ್ಲಿ ಖಂಡಿತವಾಗಿಯೂ ಯಶಸ್ಸು ಕಾಣುತ್ತಾರಂತೆ

ಅವಕಾಶಗಳು ಕಳೆದುಹೋಗುತ್ತವೆ: ಯಾವಾಗಲೂ ಒಳ್ಳೆಯತನ ತೋರುವುದರಿಂದ ಇತರರಿಗೆ ಒಳ್ಳೆಯದಾಗಲಿ ಎಂದು ನೀವು ಅವರಿಗಾಗಿ ಅವಕಾಶಗಳನ್ನು ಬಿಟ್ಟುಕೊಟ್ಟಾಗ ನಿಮ್ಮ ಪಾಲಿಗೆ ಬರುವಂತಹ ಒಳ್ಳೊಳ್ಳೆ ಅವಕಾಶಗಳು ಕೈ ತಪ್ಪಿ ಹೋಗುತ್ತವೆ. ಇದರಿಂದ ಇತರರು ಜೀವನದಲ್ಲಿ ಮುಂದೆ ಸಾಗುತ್ತಾರೆ ನೀವು ಹಿಂದೆಯೇ ಉಳಿಯಬೇಕಾಗುತ್ತದೆ. ಹಾಗಾಗಿ ಯಾವತ್ತಿಗೂ ಅತಿಯಾಗಿ ಒಳ್ಳೆಯವರಾಗಿರಬೇಡಿ

ಒಳ್ಳೆಯತನ ಒಳ್ಳೆಯದೆ ಆದರೆ ಅತಿಯಾದ ಒಳ್ಳೆಯತನ ನಿಮಗೆಯೇ ಮುಳುವಾಗಿ ಪರಿಣಮಿಸುತ್ತದೆ. ಆದ್ದರಿಂದ ನಿಮ್ಮ ಯಶಸ್ಸಿಗಾಗಿ ನೀವು ಶ್ರಮಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 pm, Thu, 11 June 26

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು