AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ನಿಮ್ಮ ಅತಿಯಾದ ಕೋಪದಿಂದಾಗಿ ಈ ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತೆ, ಜೋಕೆ

ಆಚಾರ್ಯ ಚಾಣಕ್ಯರು ರಾಜಕೀಯ ನೀತಿಗಳು ಮಾತ್ರವಲ್ಲದೆ ನಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ದಾಂಪತ್ಯ, ಸ್ನೇಹ, ವೃತ್ತಿ ಜೀವನ, ಯಶಸ್ಸು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಅವರು ಮನುಷ್ಯ ಏಕೆ ಕೋಪ ಮಾಡಿಕೊಳ್ಳಬಾರದು, ಅತಿಯಾದ ಕೋಪದಿಂದಾಗುವ ನಷ್ಟಗಳೇನು ಎಂಬ ಬಗ್ಗೆಯೂ ಚಾಣಕ್ಯರು ತಿಳಿಸಿಕೊಟ್ಟಿದ್ದಾರೆ.

Chanakya Niti: ನಿಮ್ಮ ಅತಿಯಾದ ಕೋಪದಿಂದಾಗಿ ಈ ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತೆ, ಜೋಕೆ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
| Updated By: ಸಾಯಿನಂದಾ|

Updated on: Sep 12, 2025 | 9:45 AM

Share

ಕೋಪವನ್ನು (anger) ಮನುಷ್ಯನ ದೊಡ್ಡ ದೌರ್ಬಲ್ಯವೆಂದು ಹೇಳಲಾಗುತ್ತದೆ. ಅತಿಯಾದ ಕೋಪ ಎಂದಿಗೂ ಒಳ್ಳೆಯದಲ್ಲ, ಒಂದು ನಿಮಿಷದ ಕೋಪ ಒಂದು ಸಂಬಂಧ, ಒಬ್ಬರ ಜೀವನವನ್ನೇ ಹಾಳು ಮಾಡಿಬಿಡುತ್ತದೆ. ಆಚಾರ್ಯ ಚಾಣಕ್ಯರು (Acharya Chanakya) ಸಹ ಈ ಕೋಪದ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಅವರು ಹೇಳುತ್ತಾರೆ ಕೋಪವೇ ಮನುಷ್ಯನ ಅತಿದೊಡ್ಡ ಶತ್ರು, ಕೋಪದಿಂದಾಗಿ ಜೀವನದಲ್ಲಿ ಈ ಎಲ್ಲವನ್ನು ಕಳೆದುಕೊಳ್ಳಬೇಕಾಗುತ್ತದೆ, ಅತಿಯಾದ ಕೋಪ ಎಂದಿಗೂ ಒಳ್ಳೆಯದಲ್ಲವೆಂದು. ಹಾಗಿದ್ರೆ ಚಾಣಕ್ಯರು ಹೇಳಿರುವ ಪ್ರಕಾರ ಅತಿಯಾದ ಕೋಪದಿಂದಾಗಿ ಏನೆಲ್ಲಾ ತೊಂದರೆಗಳಾಗುತ್ತದೆ ಎಂಬುದನ್ನು ನೋಡೋಣ ಬನ್ನಿ.

ಅತಿಯಾದ ಕೋಪದಿಂದಾಗುವ ಸಮಸ್ಯೆಗಳು: ಸಂಬಂಧಗಳಲ್ಲಿ ಅಂತರ ಸೃಷ್ಟಿಯಾಗುತ್ತದೆ: ಕೋಪ ಮಾಡಿಕೊಂಡಾಗ ಒಬ್ಬ ವ್ಯಕ್ತಿಯು ತನ್ನ ಪ್ರೀತಿಪಾತ್ರರನ್ನು ನೋಯಿಸುತ್ತಾನೆ. ಕೋಪದಲ್ಲಿ ಮಾತನಾಡುವ ಕಠಿಣ ಮಾತುಗಳು ಸಂಬಂಧಗಳ ಅಡಿಪಾಯವನ್ನು ಬುಡಮೇಲು ಮಾಡುತ್ತದೆ. ಹೀಗೆ ಕೋಪದಲ್ಲಾಡಿದ ಮಾತುಗಳೇ ಸಂಬಂಧದಲ್ಲಿ ಅಂತರವನ್ನು ಸೃಷ್ಟಿಸುತ್ತದೆ.

ವೃತ್ತಿಜೀವನದಲ್ಲಿನ ಅಡೆತಡೆಗಳು: ಕೋಪದಲ್ಲಿ, ಒಬ್ಬ ವ್ಯಕ್ತಿಯು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾನೆ, ಅದು ಅವನ ವೃತ್ತಿಜೀವನಕ್ಕೆ ಒಂದು ಕಪ್ಪು ಚುಕ್ಕೆಯಂತಾಗುತ್ತದೆ. ಅತಿಯಾಗಿ ಕೋಪಗೊಳ್ಳುವ ವ್ಯಕ್ತಿಯನ್ನು ಕೆಲಸದ ಸ್ಥಳದಲ್ಲಿ ವಿಶ್ವಾಸಾರ್ಹ ವ್ಯಕ್ತಿ ಎಂದು ಪರಿಗಣಿಸಲಾಗುವುದಿಲ್ಲ. ಅಂತಹ ಜನರು ನಾಯಕತ್ವದ ಜವಾಬ್ದಾರಿಯನ್ನು ಎಂದಿಗೂ ಪೂರೈಸಲು ಸಾಧ್ಯವಾಗುವುದಿಲ್ಲ ಎನ್ನುತ್ತಾರೆ ಚಾಣಕ್ಯ.

ಇದನ್ನೂ ಓದಿ
Image
ಜೀವನದಲ್ಲಿ ಈ ಐದು ಜನರನ್ನು ಯಾವುದೇ ಕಾರಣಕ್ಕೂ ನಂಬಬೇಡಿ
Image
ಈ ಅಭ್ಯಾಸಗಳು ಒಬ್ಬ ವ್ಯಕ್ತಿಯನ್ನು ಖಂಡಿತವಾಗಿ ಬಡವನನ್ನಾಗಿ ಮಾಡುತ್ತದೆ
Image
ಈ ಎರಡು ವಿಷಯಗಳಿಗೆ ಹೆದರುವವರು ಎಂದಿಗೂ ಯಶಸ್ಸನ್ನು ಗಳಿಸಲು ಸಾಧ್ಯವಿಲ್ಲ
Image
ಈ ನಾಲ್ಕು ಅಭ್ಯಾಸಗಳನ್ನು ಅಳವಡಿಸಿಕೊಂಡರೆ ಜೀವನದ ದುಃಖವೆಲ್ಲಾ ಮಾಯವಾಗುತ್ತದೆ

ಗೌರವ ಕಳೆದುಕೊಳ್ಳಬೇಕಾಗುತ್ತದೆ: ಪದೇ ಪದೇ ಕೋಪಗೊಳ್ಳುವುದರಿಂದ ಸಮಾಜದಲ್ಲಿ ಆ ವ್ಯಕ್ತಿಯ ಇಮೇಜ್ ಹಾಳಾಗುತ್ತದೆ. ಜನರು ಅಂತಹ ವ್ಯಕ್ತಿಯಿಂದ ಸಾಧ್ಯವಾದಷ್ಟು ದೂರವಿರಲು ಪ್ರಾರಂಭಿಸುತ್ತಾರೆ ಮತ್ತು ಅತಿಯಾಗಿ ಕೋಪ ಮಾಡಿಕೊಳ್ಳುವವರ ಗೌರವವೂ ಕ್ರಮೇಣ ಕಡಿಮೆಯಾಗುತ್ತದೆ ಹೀಗೆ ಕೋಪದಲ್ಲಿ ಮನಸ್ಸಿಗೆ ನೋವುಂಟು ಮಾಡುವ ವ್ಯಕ್ತಿಗಳೊಂದಿಗೆ ಯಾರು ಇರಲು ಇಷ್ಟಪಡುವುದಿಲ್ಲ. ಈ ಪರಿಸ್ಥಿತಿಯು ಆ ವ್ಯಕ್ತಿಯನ್ನು ಒಂಟಿತನದತ್ತ ತಳ್ಳುತ್ತದೆ ಎಂದು ಚಾಣಕ್ಯ ಹೇಳುತ್ತಾರೆ.

ಮಾನಸಿಕ ಶಾಂತಿ ಕಳೆದುಕೊಳ್ಳಬೇಕಾಗುತ್ತದೆ: ಕೋಪವು ಒಬ್ಬ ವ್ಯಕ್ತಿಯ ಮಾನಸಿಕ ನೆಮ್ಮದಿಯನ್ನೇ ಹಾಲು ಮಾಡಿಬಿಡುತ್ತದೆ. ಹೌದು ಅತಿಯಾದ ಕೋಪದಿಂದಾಗಿ ಮಾನಸಿಕ ಶಾಂತಿ ಹಾಳಾಗುತ್ತದೆ. ಮತ್ತು ಇದು ಒತ್ತಡ, ಆತಂಕ, ಮಾನಸಿಕ ಅಸ್ಥಿರತೆಯನ್ನು ಹೆಚ್ಚಿಸುತ್ತದೆ. ಕಾಲಾನಂತರದಲ್ಲಿ ಇದು ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ ಎನ್ನುತ್ತಾರೆ ಚಾಣಕ್ಯ.

ಇದನ್ನೂ ಓದಿ: ಜೀವನದಲ್ಲಿ ಈ ಐದು ಜನರನ್ನು ಯಾವುದೇ ಕಾರಣಕ್ಕೂ ನಂಬಬೇಡಿ; ಯಾಕೆ ಗೊತ್ತಾ?

ತಪ್ಪು ನಿರ್ಧಾರಗಳು ಮತ್ತು ವಿಷಾದಗಳು: ಅತಿಯಾಗಿ ಕೋಪಗೊಂಡಾಗ ವ್ಯಕ್ತಿಯ ಯೋಚಿಸುವ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಕಳೆದುಹೋಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ತಪ್ಪಾಗಿಯೇ ಇರುತ್ತದೆ. ಈ ತಪ್ಪು ನಿರ್ಧಾರಗಳು ಸಂಬಂಧವನ್ನು ಹಾಳು ಮಾಡುತ್ತವೆ, ವೃತ್ತಿ ಜೀವನಕ್ಕೆ ಹೊಡೆತ ನೀಡುತ್ತದೆ. ಇದರಿಂದಾಗಿ ನಂತರ ವಿಷಾದ ಪಡಬೇಕಾಗುತ್ತದೆ. ಹಾಗಾಗಿ ಎಂದಿಗೂ ಅತಿಯಾದ ಕೋಪ ಒಳ್ಳೆಯದಲ್ಲ, ಕೋಪ ಮಾಡಿಕೊಂಡರೂ ನಿಯಂತ್ರಣವನ್ನು ಕಳೆದುಕೊಳ್ಳಬಾರದು ಎನ್ನುತ್ತಾರೆ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ