AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಲೈಫಲ್ಲಿ ಸಕ್ಸಸ್‌ ಬೇಕಂದ್ರೆ ಯಶಸ್ಸಿನ ಈ ಮೂಲ ಗುಟ್ಟುಗಳ ಬಗ್ಗೆ ಮೊದಲು ತಿಳಿಯಿರಿ

ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು ಅನ್ನೋ ಆಸೆ ಪ್ರತಿಯೊಬ್ಬರಿಗೂ ಇದ್ದೇ ಇದೆ. ಆದ್ರೆ ಯಶಸ್ಸನ್ನು ಸಾಧಿಸಲು ಮೊದಲು ಮಾಡಬೇಕಾದದ್ದೇನು ಎಂಬ ವಿಚಾರ ಹಲವರಿಗೆ ತಿಳಿದೇ ಇಲ್ಲ. ಸಕ್ಸಸ್‌ನ ಈ ರಹಸ್ಯವನ್ನು ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ವಿವರಿಸಿದ್ದಾರೆ, ಇದನ್ನು ಪಾಲಿಸುವ ಮೂಲಕ ನೀವು ಸಹ ಲೈಫಲ್ಲಿ ಸಕ್ಸಸ್‌ ಆಗಬಹುದು.

Chanakya Niti: ಲೈಫಲ್ಲಿ ಸಕ್ಸಸ್‌ ಬೇಕಂದ್ರೆ ಯಶಸ್ಸಿನ ಈ ಮೂಲ ಗುಟ್ಟುಗಳ ಬಗ್ಗೆ ಮೊದಲು ತಿಳಿಯಿರಿ
ಚಾಣಕ್ಯ ನೀತಿImage Credit source: Pexels
ಮಾಲಾಶ್ರೀ ಅಂಚನ್​
|

Updated on: Nov 25, 2025 | 6:01 PM

Share

ಯಶಸ್ಸನ್ನು (success) ಸಾಧಿಸಬೇಕು ಎಂಬ ಹಂಬಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಹಲವರಿಗೆ ಸರಿಯಾದ ಮಾರ್ಗದರ್ಶವನೇ ಇರುವುದಿಲ್ಲ, ಇದರಿಂದ ಯಶಸ್ಸಿನ ಹಾದಿಯಲ್ಲಿ ಎಡವುತ್ತಾರೆ. ಇನ್ನೂ ಲೈಫಲ್ಲಿ ಸಕ್ಸಸ್‌ ಆದವರು ತಮ್ಮ ಯಶಸ್ಸಿನ ಗುಟ್ಟನ್ನು ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ. ಆದರೆ ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಯಶಸ್ಸಿನ ಗುಟ್ಟನ್ನು ವಿವರಿಸಿದ್ದು, ಇದನ್ನು ನೀವು ಪಾಲಿಸಿದ್ದೇ ಆದಲ್ಲಿ ಖಂಡಿತವಾಗಿಯೂ ಲೈಫಲ್ಲಿ ಸಕ್ಸಕ್‌ ಆಗ್ತೀರಿ. ಆ ಯಶಸ್ಸಿನ ಗುಟ್ಟು  ಯಾವುದೆಂದು ನೋಡೋಣ ಬನ್ನಿ.

ಇದುವೇ ಯಶಸ್ಸಿನ ಮೂಲ ಗುಟ್ಟು:

ಯೋಜನೆಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ: ಆಚಾರ್ಯ ಚಾಣಕ್ಯರು ನಿಮ್ಮ ಯೋಜನೆಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಅದು ಪೂರ್ಣಗೊಳ್ಳುವವರೆಗೆ ಅದನ್ನು ರಹಸ್ಯವಾಗಿಡಿ ಎಂದು ಸಲಹೆ ನೀಡುತ್ತಾರೆ. ಕೆಲವೊಮ್ಮೆ, ನೀವು ನಿಮ್ಮ ಯೋಜನೆಗಳನ್ನು ಇತರರೊಂದಿಗೆ ಹಂಚಿಕೊಂಡಾಗ, ಅವರು ನಿಮ್ಮ ಆಲೋಚನೆಯನ್ನು ಅಪಹಾಸ್ಯ ಮಾಡಬಹುದು, ಅಡೆತಡೆಗಳನ್ನು ಸೃಷ್ಟಿಸಬಹುದು.

ಕೆಲಸದಲ್ಲಿ ಆತುರಬೇಡ: ಜೀವನದಲ್ಲಿ ಯಶಸ್ವಿಯಾಗಲು ಬಯಸಿದರೆ, ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಬದಲಿಗೆ ನೀವು ತಾಳ್ಮೆಯಿಂದಿರಬೇಕು, ಇದರಿಂದ ಪರಿಸ್ಥಿತಿಯನ್ನು ನಿರ್ಣಯಿಸಲು ಸಾಧ್ಯವಾಗುತ್ತದೆ. ಮತ್ತು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ಜೀವನದಲ್ಲಿ ಘಟಿಸುವ ಸಂಗತಿಗಳು ಹಣೆಬರಹದ ಮೇಲೆ ನಿರ್ಧರಿತವಾಗಿರುತ್ತವೆ

ಎಲ್ಲರನ್ನೂ ನಂಬಬೇಡಿ: ಕುರುಡು ನಂಬಿಕೆ ವಿನಾಶಕ್ಕೆ ಕಾರಣವಾಗಬಹುದು ಆದ್ದರಿಂದ ಎಲ್ಲರನ್ನು ನಂಬಲು ಹೋಗಬೇಡಿ, ಎಚ್ಚರಿಕೆಯಿಂದ ಸ್ನೇಹ ಬೆಳೆಸಿ, ನಿಮ್ಮ ಮಿತಿಗಳನ್ನು ನಿರ್ಮಿಸಿ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ.

ವೈಫಲ್ಯಕ್ಕೆ ಹೆದರಬೇಡಿ, ಅದರಿಂದ ಕಲಿಯಿರಿ: ವೈಫಲ್ಯಗಳಿಗೆ ಹೆದರಿ ಹಿಂದೆ ಸರಿಯುವವರು ಜೀವನದಲ್ಲಿ ಎಂದಿಗೂ ಯಶಸ್ಸನ್ನು ಸಾಧಿಸಲು ಸಾಧ್ಯವಿಲ್ಲ. ಸೋಲುಗಳಿಂದ ಗೆಲುವಿನ ಪಾಠವನ್ನು ಕಲಿತು ಮುನ್ನಡೆದರೆ ಮಾತ್ರ ಯಶಸ್ಸು ನಿಮ್ಮದಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ