AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಈ ಅಭ್ಯಾಸಗಳು ಒಬ್ಬ ವ್ಯಕ್ತಿಯನ್ನು ಖಂಡಿತವಾಗಿ ಬಡವನನ್ನಾಗಿ ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಜೀವನದಲ್ಲಿ ಯಶಸ್ಸು, ಸಿರಿವಂತಿಕೆಯನ್ನು ಗಳಿಸುವುದು ಹೇಗೆ, ಯಶಸ್ವಿ ಜೀವನದವನ್ನು ನಡೆಸುವುದು ಹೇಗೆ ನಮ್ಮ ಜೀವನಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳ ಬಗ್ಗೆ ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಈ ಕೆಲವೊಂದಿಷ್ಟು ಅಭ್ಯಾಸಗಳು ವ್ಯಕ್ತಿಯನ್ನು ಬಡವನನ್ನಾಗಿ ಮಾಡುತ್ತದೆ ಎಂಬುದನ್ನು ಹೇಳಿದ್ದಾರೆ. ವ್ಯಕ್ತಿಯ ಬಡತನಕ್ಕೆ ಕಾರಣವಾಗುವ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ಈ ಅಭ್ಯಾಸಗಳು ಒಬ್ಬ ವ್ಯಕ್ತಿಯನ್ನು ಖಂಡಿತವಾಗಿ ಬಡವನನ್ನಾಗಿ ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Sep 07, 2025 | 10:36 AM

Share

ಪ್ರತಿಯೊಬ್ಬರೂ ತಾನು ಜೀವನದಲ್ಲಿ ಯಶಸ್ಸು (Success) ಗಳಿಸಬೇಕು, ಶ್ರೀಮಂತನಾಗಬೇಕು, ಯಾವುದೇ ಕುಂದು ಕೊರತೆಯಿಲ್ಲದೆ ನೆಮ್ಮದಿಯಿಂದ ಜೀವನವನ್ನು ನಡೆಸಬೇಕು ಎಂದು ಬಯಸುತ್ತಾರೆ. ಮಾನವನ ಜೀವನಕ್ಕೆ ಸಂಬಂಧಿಸಿದ ಈ ಯಶಸ್ಸಿನ ರಹಸ್ಯಗಳನ್ನು ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿ ಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಯಶಸ್ಸನ್ನು ಗಳಿಸಲು ಯಾವ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂಬುದನ್ನು ಹೇಳಿರುವಂತೆ ಆಚಾರ್ಯ ಚಾಣಕ್ಯರು ಯಾವ ಅಭ್ಯಾಸಗಳು ವ್ಯಕ್ತಿಯನ್ನು ಬಡತನಕ್ಕೆ ನೂಕುತ್ತವೆ ಎಂಬುದನ್ನು ಸಹ ಹೇಳಿದ್ದಾರೆ. ಹಾಗಿದ್ರೆ ಚಾಣಕ್ಯರು ಹೇಳಿರುವಂತೆ ವ್ಯಕ್ತಿಯ ಬಹುದೊಡ್ಡ ಶತ್ರುವಾಗಿರುವ ಆ ಕೆಟ್ಟ ಅಭ್ಯಾಸಗಳು ಯಾವುದೆಂಬುದನ್ನು ನೋಡೋಣ ಬನ್ನಿ.

ವ್ಯಕ್ತಿಯನ್ನು ಬಡವನನ್ನಾಗಿಸುವ ಅಭ್ಯಾಸಗಳಿವು:

ಕೊಳಕುತನ:  ಕೊಳಕುತನದಿಂದ ಬದುಕುವವರು ಯಾವಾಗಲೂ ಬಡವರಾಗಿಯೇ ಉಳಿಯುತ್ತಾರೆ ಎಂದು ಚಾಣಕ್ಯರು ಹೇಳುತ್ತಾರೆ. ಚಾಣಕ್ಯರ ಪ್ರಕಾರ ಯಾರು ಕೊಳಕಾಗಿರುತ್ತಾರೋ, ಸ್ವಚ್ಛವಾದ ಬಟ್ಟೆಗಳನ್ನು ಧರಿಸುವುದಿಲ್ಲವೋ ಅಥವಾ ತಮ್ಮ ಸುತ್ತಲಿನ ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದಿಲ್ಲವೋ ಅಂತಹ ಜನರಿಗೆ ಲಕ್ಷ್ಮೀ ದೇವಿ ಒಲಿಯುವುದಿಲ್ಲ. ಅಂತಹ ಜನರು ಯಾವಾಗಲೂ ಬಡತನದ ಜೀವನವನ್ನು ನಡೆಸುತ್ತಾರೆ. ಮತ್ತು ಅವರು  ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ಜನರು ಈ ಅಭ್ಯಾಸವನ್ನು ತಕ್ಷಣವೇ ತ್ಯಜಿಸಬೇಕು ಇಲ್ಲದಿದ್ದರೆ ಅವರ ಅವನತಿ ಖಚಿತ ಎನ್ನುತ್ತಾರೆ ಚಾಣಕ್ಯರು.

ಅತಿಯಾಗಿ ಖರ್ಚು ಮಾಡುವವರು: ತಮ್ಮ ಖರ್ಚಿನ ಮೇಲೆ ನಿಯಂತ್ರಣವಿಲ್ಲದ ಜನರು ಬೇಗನೆ ಬಡವರಾಗುತ್ತಾರೆ. ಯಾರು ತಮ್ಮ ಆದಾಯಕ್ಕಿಂತ ಹೆಚ್ಚು ಹಣವನ್ನು ಖರ್ಚು ಮಾಡುತ್ತಾರೋ ಅಂತಹ ಜನರು ಒಂದಲ್ಲ ಒಂದು ದಿನ ಬಡವರಾಗುವುದು ಖಚಿತ ಎಂದು ಚಾಣಕ್ಯರು ಹೇಳುತ್ತಾರೆ. ಆದ್ದರಿಂದ ಅಗತ್ಯಕ್ಕೆ ತಕ್ಕಂತೆ ಮಿತವಾಗಿ ಖರ್ಚು ಮಾಡುವುದು ಉತ್ತಮ.

ಇದನ್ನೂ ಓದಿ
Image
ಈ ಎರಡು ವಿಷಯಗಳಿಗೆ ಹೆದರುವವರು ಎಂದಿಗೂ ಯಶಸ್ಸನ್ನು ಗಳಿಸಲು ಸಾಧ್ಯವಿಲ್ಲ
Image
ಈ ನಾಲ್ಕು ಅಭ್ಯಾಸಗಳನ್ನು ಅಳವಡಿಸಿಕೊಂಡರೆ ಜೀವನದ ದುಃಖವೆಲ್ಲಾ ಮಾಯವಾಗುತ್ತದೆ
Image
ಯಶಸ್ಸು ಸಾಧಿಸಲು ಬೆಳಗಿನ ದಿನಚರಿ ಹೀಗಿರಲಿ
Image
ಶ್ರೀಮಂತರಾಗಲು ಬಯಸುವವರು ಈ ಅಭ್ಯಾಸಗಳನ್ನು ತ್ಯಜಿಸಬೇಕು

ಇದನ್ನೂ ಓದಿ: ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಬಯಸುವವರು ಎಂದಿಗೂ ಎರಡು ವಿಷಯಗಳಿಗೆ ಹೆದರಬಾರದು

ಮುಸ್ಸಂಜೆಯ ಹೊತ್ತು ಮಲಗುವ ಅಭ್ಯಾಸ: ಸೂರ್ಯಾಸ್ತದ ಸಮಯವನ್ನು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಆಚಾರ್ಯ ಚಾಣಕ್ಯರ ಪ್ರಕಾರ, ಸೂರ್ಯಾಸ್ತದ ಸಮಯದಲ್ಲಿ ಮಲಗುವವರು ಬಡವರಾಗಿ ಉಳಿಯುತ್ತಾರಂತೆ. ಈ ಸಮಯವು ಲಕ್ಷ್ಮಿ ದೇವಿಯನ್ನು ಪೂಜಿಸುವ ಸಮಯ ಮತ್ತು ಈ ಸಮಯದಲ್ಲಿ ಮಲಗುವವರಿಗೆ ಲಕ್ಷ್ಮಿ ದೇವಿಯ ಆಶೀರ್ವಾದ ಎಂದಿಗೂ ಸಿಗುವುದಿಲ್ಲ ಮತ್ತು ಅವರು ತಮ್ಮ ಜೀವನದುದ್ದಕ್ಕೂ ಬಡವರಾಗಿರುತ್ತಾರೆ ಎಂದು ಅವರು ಹೇಳುತ್ತಾರೆ.

ಸೋಮಾರಿತನ: ಮನುಷ್ಯನ ದೊಡ್ಡ ಶತ್ರು ಸೋಮಾರಿತನ. ಸ್ವಭಾವತಃ ಸೋಮಾರಿಯಾಗಿರುವ ಜನರು ಭೂಮಿಗೆ ಭಾರ ಎಂದು ಚಾಣಕ್ಯರು ಹೇಳುತ್ತಾರೆ. ಸೋಮಾರಿಯಾಗಿರುವ ಜನರು ತಮ್ಮ ಜೀವನದಲ್ಲಿ ಎಂದಿಗೂ ಯಶಸ್ವಿಯಾಗಲು ಸಾಧ್ಯವಿಲ್ಲ. ಹಾಗಾಗಿ ಸೋಮಾರಿತನವನ್ನು ಬಿಟ್ಟುಬಿಡಬೇಕು. ಸೋಮಾರಿತನವನ್ನು ಬಿಟ್ಟು ಬಿಟ್ಟರೆ ಮಾತ್ರ ಜೀವನದಲ್ಲಿ ಏನಾದರೂ ಸಾಧಿಸಲು ಸಾಧ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ