AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಇಂತಹ ವ್ಯಕ್ತಿಗಳು ಭೂಮಿಗೆ ಭಾರ ಎನ್ನುತ್ತಾರೆ ಚಾಣಕ್ಯ

ಯಾರಾದ್ರೂ ಪದೇ ಪದೇ ನಮ್ಮ ನೆಮ್ಮದಿಯನ್ನು ಕೆಡಿಸಲು ಯತ್ನಿಸಿದರೆ ಅಂತಹ ಜನರನ್ನು ನಾವು ಭೂಮಿಗೆ ಭಾರವೆಂದು ಹೇಳ್ತೇವೆ. ಇದರ ಜೊತೆಗೆ ಈ ಒಂದಷ್ಟು ಜನಗಳು ಕೂಡಾ ಭೂಮಿಗೆ ಹೊರೆಯಂತೆ, ಇವರಿಂದ ಯಾರಿಗೂ ಒಂದಿಷ್ಟು ಪ್ರಯೋಜನ ಆಗುವುದಿಲ್ಲ, ಅವರು ಎಂದಿಗೂ ಸುಧಾರಿಸುವುದಿಲ್ಲ ಎನ್ನುತ್ತಾರೆ ಚಾಣಕ್ಯ. ಹಾಗಿದ್ರೆ ಚಾಣಕ್ಯರು ಹೇಳುವಂತೆ ಎಂತಹ ವ್ಯಕ್ತಿಗಳು ಭೂಮಿಗೆ ಭಾರ, ದಂಡಪಿಂಡಗಳು ಎಂಬುದನ್ನು ನೋಡೋಣ ಬನ್ನಿ.

Chanakya Niti: ಇಂತಹ ವ್ಯಕ್ತಿಗಳು ಭೂಮಿಗೆ ಭಾರ ಎನ್ನುತ್ತಾರೆ ಚಾಣಕ್ಯ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Oct 10, 2025 | 9:32 AM

Share

ಆಚಾರ್ಯ ಚಾಣಕ್ಯರು (Acharya Chanakya) ತನ್ನ ನೀತಿಶಾಸ್ತ್ರದಲ್ಲಿ ಧರ್ಮ, ರಾಜಕೀಯ ಮಾತ್ರವಲ್ಲದೆ ಸಮಾಜಕ್ಕೆ, ಜನರಿಗೆ ಮಾರ್ಗದರ್ಶನ ನೀಡುವಂತಹ ಹಲವು ವಿಚಾರಗಳ ಬಗ್ಗೆ ವಿವರಿಸಿದ್ದಾರೆ. ಹೌದು ನಾವು ಸಮಾಜದಲ್ಲಿ ಹೇಗೆ ವರ್ತಿಸಬೇಕು, ಎಂತಹ ವ್ಯಕ್ತಿಗಳ ಸಹವಾಸ ಮಾಡಬಾರದು, ದಾಂಪತ್ಯ ಜೀವನ ಚೆನ್ನಾಗಿರಬೇಕೆಂದರೆ ಏನು ಮಾಡಬೇಕು, ವಿದ್ಯೆಯ ಮಹತ್ವ, ವೃತ್ತಿ ಜೀವನ, ಶತ್ರು-ಮಿತ್ರ ಹೀಗೆ ಹತ್ತು ಹಲವು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಈ ಒಂದಷ್ಟು ಜನ ಭೂಮಿಗೆ ಭಾರ ಎಂಬುದನ್ನು ಸಹ ಹೇಳಿದ್ದಾರೆ. ಸಾಮಾನ್ಯವಾಗಿ ನಾವು ಪದೇ ಪದೇ ಕೆಟ್ಟ ಕೆಲಸಗಳನ್ನು ಮಾಡುವವರನ್ನು, ಇತರರ ನೆಮ್ಮದಿ ಕೆಡಿಸುವವರನ್ನು ಭೂಮಿಗೆ ಭಾರ ಕೂಳಿಗೆ ದಂಡ ಅನ್ನುತ್ತೇವಲ್ವಾ. ಆದ್ರೆ ನಿಜವಾಗ್ಲೂ ದಂಡಪಿಂಡಗಳು ಯಾರು ಗೊತ್ತಾ? ಈ ಬಗ್ಗೆ ಚಾಣಕ್ಯರು ಏನು ಹೇಳಿದ್ದಾರೆ ನೋಡಿ.

ಚಾಣಕ್ಯರ ಪ್ರಕಾರ ಇಂತಹ ವ್ಯಕ್ತಿಗಳು ಭೂಮಿಗೆ ಭಾರ:

  • ಆಚಾರ್ಯ ಚಾಣಕ್ಯ ಹೇಳುವಂತೆ ಅಧ್ಯಯನವನ್ನು ತಪ್ಪಿಸುವ ಮತ್ತು ಜ್ಞಾನವನ್ನು ಪಡೆಯಲು ನಿರಾಕರಿಸುವ ವ್ಯಕ್ತಿಯು ಭೂಮಿಗೆ ಭಾರ. ಶಿಕ್ಷಣವು ನಮ್ಮನ್ನು ಉತ್ತಮ ಮನುಷ್ಯರಾಗಲು ಸಹಾಯ ಮಾಡುತ್ತದೆ. ಆದರೆ ಶಿಕ್ಷಣವನ್ನು ದೂರ ಉಳಿಯುವ ವ್ಯಕ್ತಿ ಎಂದಿಗೂ ಜ್ಞಾನವನ್ನು ಸಂಪಾದಿಸಲಾರ. ಆತ ಕೊನೆಯವರೆಗೂ ದಂಡಪಿಂಡನಾಗಿಯೇ ಇರುತ್ತಾನೆ.
  • ತಾನು ಗಳಿಸಿದ ಸಂಪತ್ತನ್ನು ಒಳ್ಳೆಯ ಉದ್ದೇಶಗಳಿಗಾಗಿ ಬಳಸದ ಅಥವಾ ದಾನ ಮಾಡದ ವ್ಯಕ್ತಿಯನ್ನು ಆಚಾರ್ಯ ಚಾಣಕ್ಯ ಭೂಮಿಗೆ ಹೊರೆ ಎಂದು ಪರಿಗಣಿಸಿದ್ದಾರೆ. ಆದ್ದರಿಂದ, ಒಬ್ಬ ವ್ಯಕ್ತಿಯು ತನ್ನ ಸಂಪತ್ತನ್ನು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಮತ್ತು ಅಗತ್ಯವಿರುವವರಿಗೆ ದಾನವನ್ನೂ ಮಾಡಬೇಕು.
  • ಇತರರೊಂದಿಗೆ ಕೆಟ್ಟದಾಗಿ ವರ್ತಿಸುವ ಮತ್ತು ನಿರಂತರವಾಗಿ ಕಟುವಾಗಿ ಮಾತನಾಡುವ, ಯಾವಾಗ್ಲೂ ಕೆಟ್ಟ ಬೈಗುಳಗಳನ್ನಾಡುವ ವ್ಯಕ್ತಿಯನ್ನು ಯಾರು ಇಷ್ಟಪಡುವುದಿಲ್ಲ. ಬದಲಾಗಿ ಆತನನ್ನು ಕಿರಿಕಿರಿ ಎಂದು ಭಾವಿಸುತ್ತಾರೆ. ಇಂತಹ ವ್ಯಕ್ತಿಗಳು ಕೂಡಾ ದಂಡಪಿಂಡಗಳು ಎನ್ನುತ್ತಾರೆ ಚಾಣಕ್ಯ.
  • ಚಾಣಕ್ಯರ ಪ್ರಕಾರ ಇತರರ ಬಗ್ಗೆ ಅಸೂಯೆ ಮತ್ತು ದ್ವೇಷದ ಭಾವನೆಗಳನ್ನು ಹೊಂದಿರುವ, ಸ್ವಾರ್ಥಿ ವ್ಯಕ್ತಿಯು ಸಹ ಭೂಮಿಗೆ ಭಾರವಾಗಿಯೇ ಇರುತ್ತಾನೆ.
  • ಆಚಾರ್ಯ ಚಾಣಕ್ಯರು ಮಹಿಳೆಯರು ಮತ್ತು ಹಿರಿಯರನ್ನು ಗೌರವಿಸದ ವ್ಯಕ್ತಿಯನ್ನು ಭೂಮಿಗೆ ಭಾರ ಎಂದು ಹೇಳಿದ್ದಾರೆ. ಅಲ್ಲದೆ  ಮಹಿಳೆಯರು ಮತ್ತು ಹಿರಿಯರನ್ನು ಗೌರವಿಸದ ವ್ಯಕ್ತಿಗೆ ದೇವರ ಆಶೀರ್ವಾದ ಎಂದಿಗೂ ಸಿಗುವುದಿಲ್ಲ, ಅಂತಹ ವ್ಯಕ್ತಿ ಯಾವತ್ತಿದ್ದರೂ ಭೂಮಿಗೆ ಭಾರ ಎಂದು ಹೇಳಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?