AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಮದುವೆಯ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡಬೇಡಿ; ದಾಂಪತ್ಯ ಜೀವನವೇ ಹಾಳಾಗಬಹುದು ಜೋಕೆ

ದಾಂಪತ್ಯ ಜೀವನ ಎನ್ನುವಂತಹದ್ದು, ನಂಬಿಕೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ನಿಂತಿರುತ್ತದೆ ಎಂದು ಹೇಳುತ್ತಾರೆ. ಆದರೆ ನೀವು ಮಾಡುವ ಒಂದಷ್ಟು ತಪ್ಪುಗಳು ನಿಮ್ಮ ಚಂದದ ಸಂಸಾರವನ್ನೇ ಹಾಳು ಮಾಡುತ್ತದೆ. ಹಾಗಾಗಿ ದಾಂಪತ್ಯ ಜೀವನ, ಸಂಬಂಧ ಗಟ್ಟಿಯಾಗಿರಬೇಕೆಂದರೆ ವಿವಾಹಿತರು ಈ ಕೆಲವೊಂದಿಷ್ಟು ತಪ್ಪುಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು ಎನ್ನುತ್ತಾರೆ ಆಚಾರ್ಯ ಚಾಣಕ್ಯ.

Chanakya Niti: ಮದುವೆಯ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡಬೇಡಿ; ದಾಂಪತ್ಯ ಜೀವನವೇ ಹಾಳಾಗಬಹುದು ಜೋಕೆ
ಆಚಾರ್ಯ ಚಾಣಕ್ಯImage Credit source: Getty Images
Follow us
ಮಾಲಾಶ್ರೀ ಅಂಚನ್​
|

Updated on: May 01, 2025 | 6:56 PM

ಆಚಾರ್ಯ ಚಾಣಕ್ಯರು (Chanakya) ತಮ್ಮ ನೀತಿಶಾಸ್ತ್ರದಲ್ಲಿ ಯಾರೊಂದಿಗೆ ಸ್ನೇಹ ಬೆಳೆಸಬೇಕು, ವೈವಾಹಿಕ ಜೀವನ ಸಂತೋಷದಿಂದ ಕೂಡಿರಲು ಏನು ಮಾಡಬೇಕು, ನಮ್ಮ ಶತ್ರು ಯಾರು, ನಮ್ಮ ಮಿತ್ರ ಯಾರು,  ಯಶಸ್ಸಿನ ಹಾದಿ ಹೀಗೆ ಜೀವನಕ್ಕೆ (Life) ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಹೇಳಿದ್ದಾರೆ. ಇದು ಇಂದಿಗೂ ನಮಗೆಲ್ಲರಿಗೂ ಸರಿಯಾದ ದಾರಿಯಲ್ಲಿ ನಡೆಯಲು ಮಾರ್ಗದರ್ಶನದಂತಿದೆ. ಅದೇ ರೀತಿ ಚಾಣಕ್ಯರು ಯಾರೇ ಆದರೂ ಸರಿ ಮದುವೆಯಾದ ಬಳಿಕ ಈ ಕೆಲವೊಂದಿಷ್ಟು ತಪ್ಪುಗಳನ್ನು ಮಾಡಲೇಬಾರದು ಎಂಬುದನ್ನು ಹೇಳಿದ್ದಾರೆ. ಹೌದು ದಾಂಪತ್ಯ ಜೀವನ (married life) ಸುಖಕರವಾಗಿ ಸಾಗಲು, ಸಂಬಂಧ ಇನ್ನಷ್ಟು ಬಲಗೊಳ್ಳಲು ವಿವಾಹಿತರು ಕೆಲವೊಂದು ತಪ್ಪುಗಳನ್ನು ಮಾಡಬಾರದು ಎಂದಿದ್ದಾರೆ. ಅದು ಏನು ಎಂಬುದನ್ನು ನೋಡೋಣ ಬನ್ನಿ.

ಮದುವೆಯ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡಬೇಡಿ:

ಬೇರೊಬ್ಬರ ಕಡೆ ಆಕರ್ಷಣೆಗೆ ಒಳಗಾಗುವುದು:

ವಿವಾಹಿತ ಮಹಿಳೆಯಾಗಿರಲಿ ಅಥವಾ ವಿವಾಹಿತ ಪುರುಷನಾಗಿರಲಿ ಬೇರೊಬ್ಬ ಮಹಿಳೆ, ಪರ ಪುರುಷನ ಆಕರ್ಷಣೆಗೆ ಒಳಗಾಗಬಾರದು ಅಥವಾ ಪ್ರೀತಿಯಲ್ಲಿ ಬೀಳಬಾರದು. ಇದು ಖಂಡಿತವಾಗಿಯೂ ಸುಂದರ ಸಂಸಾರವನ್ನು ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯರು.

ಸುಳ್ಳು ಹೇಳುವುದು:

ಗಂಡ ಹೆಂಡತಿಯ ಸಂಬಂಧ ಎನ್ನುವಂತಹದ್ದು, ನಂಬಿಕೆ ಪ್ರೀತಿ-ವಿಶ್ವಾಸದ ಮೇಲೆ ನಿಂತಿರುವಂತಹದ್ದು. ಹೀಗಿರುವಾಗ ಸುಳ್ಳುಗಳನ್ನು ಹೇಳುತ್ತಾ ಹೋದರೆ ಕೊನೆಗೊಂದು ದಿನ ಇದೇ ಸುಳ್ಳಿನ ಕಾರಣದಿಂದ ಸಂಸಾರ ಮುರಿದು ಬೀಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಸುಳ್ಳು ಹೇಳಬಾರದು.

ಇದನ್ನೂ ಓದಿ
Image
ಹುಡುಗರಂತೆ ಗಡ್ಡ, ಮೀಸೆ ಬರುತ್ತಾ? ತಲೆಬಿಸಿ ಬೇಡ ಈ ರೀತಿ ಮಾಡಿ
Image
ನದಿಗಳಿಗೆ ನಾಣ್ಯ ಎಸೆಯುವುದರಿಂದ ಇಷ್ಟಾರ್ಥಗಳು ಈಡೇರುತ್ತಾ?
Image
ರೆಡ್ ವೈನ್ ಕುಡಿಯಬೇಕಾಗಿಲ್ಲ, ಮುಖಕ್ಕೆ ಹಚ್ಚಿ ನೋಡಿ!
Image
ಮನುಕುಲಕ್ಕೆ ಸಂದೇಶ ಸಾರಿದ ಮಹಾನ್‌ ಸಮಾಜ ಸುಧಾರಕ ಬಸವೇಶ್ವರರು

 ಅತಿಯಾದ ಕೋಪ:

ಆಚಾರ್ಯ ಚಾಣಕ್ಯರ ಪ್ರಕಾರ ಅತಿಯಾದ ಕೋಪವು ಒಂದು ಸಂಬಂಧವನ್ನು ದುರ್ಬಲಗೊಳಿಸುತ್ತದೆ. ದಾಂಪತ್ಯದಲ್ಲಿ ಗಂಡ ಹೆಂಡತಿ ಯಾವಾಗಲೂ ತಮ್ಮ ಕೋಪವನ್ನು ನಿಯಂತ್ರಿಸಿಕೊಳ್ಳಬೇಕು. ಕೋಪದಲ್ಲಿ  ದುಡುಕಿ ತೆಗೆದುಕೊಂಡ ನಿರ್ಧಾರವು ಇಬ್ಬರ ಭವಿಷ್ಯವನ್ನು ಹಾಳು ಮಾಡುತ್ತದೆ. ಆದ್ದರಿಂದ ಗಂಡ ಹೆಂಡತಿ ನಡುವೆ ಪ್ರೀತಿ ಇರಬೇಕೇ ವಿನಃ ಅತಿಯಾದ ಕೋಪ ಇರಬಾರದು.

ಇದನ್ನೂ ಓದಿ: ನದಿಗಳಿಗೆ ನಾಣ್ಯ ಎಸೆಯುವುದರಿಂದ ಇಷ್ಟಾರ್ಥಗಳು ಈಡೇರುತ್ತಾ? ಪ್ರೇಮಾನಂದ ಮಹಾರಾಜ್ ಹೇಳಿದ್ದೇನು?

ಕೀಳಾಗಿ ಕಾಣುವುದು:

ಗಂಡನಾದವನು ಹೆಂಡತಿಯನ್ನಾಗಿರಲಿ ಅಥವಾ ಪತ್ನಿಯಾದವಳು ತನ್ನ ಪತಿಯನ್ನು ಯಾವುದೇ ಕಾರಣಕ್ಕೂ ಕೀಳಾಗಿ ನೋಡಬಾರದು. ಹೌದು ನಾನೇ ಶ್ರೇಷ್ಠ ನನ್ನಿಂದಲೇ ನೀನು ಎಂಬ ದುರಹಂಕಾರವನ್ನು ತೋರಬಾರದು. ಬದಲಿಗೆ ಒಬ್ಬರನ್ನೊಬ್ಬರು ಸಮಾನವಾಗಿ ಕಾಣಬೇಕು. ಪರಸ್ಪರ ಗೌರವವನ್ನೂ ಕೊಡಬೇಕು.

ಪ್ರಾಮಾಣಿಕತೆ ತುಂಬಾ ಮುಖ್ಯ:

ಕೆಲ ಪುರುಷರು ಅಥವಾ ಮಹಿಳೆಯರು ಮದುವೆಯ ಬಳಿಕ ತಮ್ಮ ಸಂಗಾತಿಗೆ ಮೋಸ ಮಾಡುತ್ತಾರೆ. ಈ ರೀತಿ ಯಾವತ್ತೂ ಮೋಸ ಮಾಡಬಾರದು ಇದರಿಂದ ಸುಂದರ ಸಂಬಂಧ ಹಾಳಾಗುವ ಸಾಧ್ಯತೆ ಹೆಚ್ಚು. ಹಾಗಾಗಿ ಸಂಗಾತಿಯೊಂದಿಗೆ ಪ್ರಾಮಾಣಿಕವಾಗಿರಬೇಕು ಎಂದು ಹೇಳುತ್ತಾರೆ ಆಚಾರ್ಯ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು