AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಲೇಬೇಕು

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಚಾರಗಳು ಮಾತ್ರವಲ್ಲದೆ ಒಬ್ಬ ವ್ಯಕ್ತಿ ಜೀವನದಲ್ಲಿ ಪ್ರಗತಿ ಸಾಧಿಸಲು, ಶ್ರೀಮಂತಿಕೆಯನ್ನು ಗಳಿಸಲು, ಯಶಸ್ವಿ ಜೀವನವನ್ನು ನಡೆಸಲು ಏನು ಮಾಡಬೇಕು ಎಂಬುದನ್ನು ಸಹ ವಿವರಿಸಿದ್ದಾರೆ. ಇದಕ್ಕಾಗಿ ಹಲವಾರು ದಾರಿಗಳ ಬಗ್ಗೆ ಹೇಳಿಕೊಟ್ಟಿದ್ದಾರೆ. ಅದರಲ್ಲಿ ಒಂದು ರಾತ್ರಿ ಮಲಗುವ ಮುನ್ನ ಒಂದಷ್ಟು ಕೆಲಸಗಳನ್ನು ಮಾಡಬೇಕು ಎಂದಿದ್ದಾರೆ. ಹಾಗಿದ್ರೆ ಯಶಸ್ಸನ್ನು ಗಳಿಸಲು ರಾತ್ರಿ ಮಲಗುವ ಮುನ್ನ ಮಾಡಬೇಕಾದ ಕೆಲಸಗಳೇನು ಎಂಬುದನ್ನು ನೋಡೋಣ ಬನ್ನಿ.

Chanakya Niti: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಲೇಬೇಕು
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Feb 04, 2026 | 7:58 PM

Share

ಪ್ರತಿಯೊಬ್ಬರೂ ಸಹ ಜೀವನದಲ್ಲಿ ಯಶಸ್ಸನ್ನು (success) ಸಾಧಿಸಲು ಬಯಸುತ್ತಾರೆ. ಇದಕ್ಕಾಗಿ ಸಾಕಷ್ಟು ಕಠಿಣ ಪರಿಶ್ರಮ ಪಡುತ್ತಾರೆ. ಹೀಗಿದ್ರೂ ಕೂಡ ಕೆಲವರಿಗೆ ಯಶಸ್ಸು, ಶ್ರೀಮಂತಿಕೆ ಎನ್ನುವಂತಹದ್ದು ಲಭಿಸುವುದೇ ಇಲ್ಲ. ಯಶಸ್ಸಿಗೆ ಕಠಿಣ ಪರಿಶ್ರಮ ಮಾತ್ರವಲ್ಲ ಸರಿಯಾದ ಯೋಜನೆಯೂ ಅತ್ಯಗತ್ಯ ಎನ್ನುತ್ತಾರೆ ಚಾಣಕ್ಯರು.ಅಷ್ಟೇ ಅಲ್ಲದೆ ಸಕ್ಸಸ್‌ ಬಯಸುವವರು ರಾತ್ರಿ ಮಲಗುವ ಮುನ್ನ ಈ ಒಂದಷ್ಟು ಕೆಲಸಗಳನ್ನು ತಪ್ಪದೇ ಮಾಡಲೇಬೇಕು ಎಂದಿದ್ದಾರೆ. ಇವರು ಹೇಳಿಕೊಟ್ಟಿರುವ ಯಶಸ್ಸಿನ ಸೂತ್ರಗಳನ್ನು ಪಾಲಿಸಿದರೆ ನೀವು ಯಶಸ್ಸು ಮತ್ತು ಸಂಪತ್ತು ಎರಡನ್ನೂ ಪಡೆಯಬಹುದು. ಹಾಗಿದ್ರೆ ಯಶಸ್ಸನ್ನು ಗಳಿಸಲು ರಾತ್ರಿ ಮಲಗುವ ಮುನ್ನ ಯಾವೆಲ್ಲಾ ಕೆಲಸಗಳನ್ನು ಮಾಡಿದರೆ ಉತ್ತಮ ಅನ್ನೋದನ್ನು ನೋಡೋಣ ಬನ್ನಿ.

ಯಶಸ್ಸನ್ನು ಸಾಧಿಸಲು ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿ:

ನಿಮ್ಮ ದಿನ ಹೇಗೆ ಹೋಯಿತು ಎಂಬುದನ್ನು ಯೋಚಿಸಿ: ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ತನ್ನ ಕ್ರಿಯೆಗಳ ಬಗ್ಗೆ ನಿಗಾ ಇಡುವ ವ್ಯಕ್ತಿಯು ಜೀವನದಲ್ಲಿ ಎಂದಿಗೂ ವಿಫಲನಾಗಲು ಸಾಧ್ಯವಿಲ್ಲ ಎಂಬುದನ್ನು ವಿವರಿಸಿದ್ದಾರೆ. ಆದ್ದರಿಂದ ನೀವು ದಿನಪೂರ್ತಿ ಮಾಡಿದ ಕೆಲಸಗಳ ದೈನಂದಿನ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ನೀವೇನಾದರೂ ಆ ದಿನ ತಪ್ಪುಗಳನ್ನು ಮಾಡಿದರೆ, ಅವುಗಳನ್ನು ತಿದ್ದಿ ನಡೆಯುವುದೇಗೆ, ಅಂದುಕೊಂಡ ಕಾರ್ಯವನ್ನು ಇನ್ನಷ್ಟು ಉತ್ತಮಗೊಳಿಸುವುದೇಕೆ ಎಂದು ಯೋಚಿಸಬೇಕು. ಈ ಅಭ್ಯಾಸ ಖಂಡಿತವಾಗಿಯೂ ನಿಮ್ಮನ್ನು ಯಶಸ್ವಿಗೊಳಿಸುತ್ತದೆ.

ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ: ಮಲಗುವ ಮುನ್ನ ಸ್ವಲ್ಪ ಸಮಯವನ್ನು ತೆಗೆದುಕೊಂಡು ಅರ್ಥಪೂರ್ಣ, ನಿಮ್ಮ ಕೆಲಸಕ್ಕೆ ಪೂರಕವಾಗುವಂತಹ ಪುಸ್ತಕಗಳನ್ನು ಓದಿ. ಪುಸ್ತಕಗಳ ಮುಖಾಂತರ ಜ್ಞಾನ ಹೆಚ್ಚಾಗುತ್ತದೆ. ಚಾಣಕ್ಯರು ಹೇಳುವಂತೆ ಜ್ಞಾನವೇ ದೊಡ್ಡ ಸಂಪತ್ತು. ನೀವು ಯಶಸ್ವಿಯಾಗಲು, ಶ್ರೀಮಂತಿಕೆ ಗಳಿಸಲು ಬಯಸಿದರೆ ಜ್ಞಾನವನ್ನು ಹೆಚ್ಚಿಸುವತ್ತ ಗಮನಹರಿಸಬೇಕು.

ಮರುದಿನಕ್ಕೆ ಯೋಜನೆಗಳನ್ನು ಮಾಡಿ: ಉತ್ಪಾದಕತೆಯನ್ನು ಹೆಚ್ಚಿಸಲು ಮರುದಿನಕ್ಕೆ ಸರಿಯಾದ ಯೋಜನೆಗಳನ್ನು ರೂಪಿಸಿ. ದಿನಕ್ಕೆ ನಿರ್ದಿಷ್ಟ ಕಾರ್ಯಸೂಚಿಗಳನ್ನು ಹೊಂದಿಸಿ. ನೀವು ನಾಳೆ ಏನು ಮಾಡಬೇಕು ಎಂಬುದನ್ನು ಇಂದು ಮಲಗುವ ಮುನ್ನ ನಿರ್ಧರಿಸಿ, ಈ ಯೋಜನೆ ಮರುದಿನ ನಿಮ್ಮ ಉತ್ಪಾದಕತೆಯನ್ನು ಹೆಚ್ಚಿಸುವುದಲ್ಲದೆ ಕೆಲಸವನ್ನೂ ಸುಲಭಗೊಳಿಸುತ್ತದೆ. ಸಮಯಕ್ಕೆ ಸರಿಯಾಗಿ ಗುರಿ ತಲುಪಲೂ ಸಾಧ್ಯವಾಗುತ್ತದೆ.

ಇದನ್ನೂ ಓದಿ: ಇಂತಹ ಮಕ್ಕಳನ್ನು ಪಡೆದ ಪೋಷಕರೇ ನಿಜವಾದ ಅದೃಷ್ಟವಂತರು ಎನ್ನುತ್ತಾರೆ ಚಾಣಕ್ಯ

ಗುರಿಯ ಬಗ್ಗೆ ಯೋಚಿಸಿ: ಒಬ್ಬ ವ್ಯಕ್ತಿಯ ಮನಸ್ಸು ಯಾವಾಗಲೂ ತನ್ನ ಗುರಿಯತ್ತ ಕೇಂದ್ರೀಕೃತವಾಗಿರಬೇಕು. ಸ್ಪಷ್ಟ ಗುರಿಯನ್ನು ಹೊಂದಿರುವವನು ಭವಿಷ್ಯದಲ್ಲಿ ಎಂದಿಗೂ ಸೋಲುವುದಿಲ್ಲ ಮತ್ತು ಆತ ಖಂಡಿತವಾಗಿಯೂ ಯಶಸ್ಸನ್ನೂ ಸಾಧಿಸುತ್ತಾನೆ ಎನ್ನುತ್ತಾರೆ ಚಾಣಕ್ಯ. ಆದ್ದರಿಂದ ರಾತ್ರಿ ಮಲಗುವ ಮುನ್ನ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ಯೋಚಿಸಿ.

ದಿನವನ್ನು ಸಕಾರಾತ್ಮಕ ಚಿಂತನೆಗಳೊಂದಿಗೆ ಕೊನೆಗೊಳಿಸಿ: ರಾತ್ರಿ ಮಲಗುವಾಗ ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸಿನಲ್ಲಿ ಬರಲು ಬಿಡಬೇಡಿ. ಸಕಾರಾತ್ಮಕ ಯೋಚನೆಗಳೊಂದಿಗೆ ನಿದ್ರೆ ಮಾಡಿ. ಜೀವನದ ಪ್ರತಿಯೊಂದು ಒಳ್ಳೆಯ ವಿಚಾರಗಳನ್ನು ನೆನಪಿಡಿ. ಖಂಡಿತವಾಗಿಯೂ ಇದು ನಿಮಗೆ ಯಶಸ್ಸನ್ನು ಗಳಿಸಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?