Chanakya Niti: ಈ ಐದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡುವುದು ತರವಲ್ಲ

ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಮತ್ತು ನೆಮ್ಮದಿಯಿಂದ ಜಜೀವನ ನಡೆಸಲು ತಾಳ್ಮೆ ಮತ್ತು ಚಿಂತನಶೀಲ ನಿರ್ಧಾರ ತೆಗೆದುಕೊಳ್ಳುವುದು ಅತ್ಯಗತ್ಯ. ಅದರಲ್ಲೂ ಈ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಂದಿಗೂ ಆತುರ ಪಡಬಾರದು ಇದರಿಂದ ಜೀವನವೇ ಹಾಳಾಗುವ ಸಾಧ್ಯತೆ ಇದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಜೀವನದಲ್ಲಿ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡಬಾರದು ಎಂಬುದನ್ನು ನೋಡೋಣ ಬನ್ನಿ.

Chanakya Niti: ಈ ಐದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡುವುದು ತರವಲ್ಲ
ಚಾಣಕ್ಯ ನೀತಿ
Image Credit source: Pinterest

Updated on: Jun 01, 2026 | 7:21 PM

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಕೆಲವು ಸಂಗತಿಗಳನ್ನು ವಿವರಿಸಿದ್ದಾರೆ.  ನಾವು ಕೆಲವೊಮ್ಮೆ ತಾಳ್ಮೆಯನ್ನು ವಹಿಸದೆ  ಆತುರದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಇದರಿಂದಾಗಿ ಭವಿಷ್ಯದಲ್ಲಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಜೊತೆಗೆ ಈ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ, ಕೆಲಸಗಳನ್ನು ಮಾಡುವಾಗ ತುಂಬಾನೇ ತಾಳ್ಮೆಯನ್ನು ವಹಿಸಬೇಕು, ಚಿಂತಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಭವಿಷ್ಯವೇ ಹಾಳಾಗುತ್ತದೆ ಎಂದು ಎಂದಿದ್ದಾರೆ. ಹಾಗಿದ್ರೆ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡಬಾರದು ಎಂಬುದನ್ನು ನೋಡೋಣ ಬನ್ನಿ.

ಈ ವಿಚಾರಗಳ ಬಗ್ಗೆ ಆತುರ ಬೇಡ:

ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಬೇಡ: ನಿಮ್ಮ ಜೀವನದಲ್ಲಿ ಉದ್ಯೋಗ, ವೃತ್ತಿ ಅಥವಾ ಜೀವನ ಸಂಗಾತಿಯ ಆಯ್ಕೆ, ಹೊಸ ವ್ಯವಹಾರವನ್ನು ಪ್ರಾರಂಭಿಸುವಂತಹ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ  ಆತುರಪಡಬಾರದು ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಪೂರ್ಣ ಮಾಹಿತಿಯಿಲ್ಲದ ಮತ್ತು ಯೋಚಿಸದೆ ತೆಗೆದುಕೊಳ್ಳುವ ನಿರ್ಧಾರವು ಭವಿಷ್ಯದಲ್ಲಿ ದೊಡ್ಡ ಸಮಸ್ಯೆಯನ್ನು ಉಂಟುಮಾಡಬಹುದು. ಹಾಗಾಗಿ ಈ ವಿಷಯಗಳಿಗೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ತೆಗೆದುಕೊಳ್ಳುವಾಗ, ಪ್ರತಿಯೊಂದು ಅಂಶದ ಬಗ್ಗೆಯೂ ಎಚ್ಚರಿಕೆ ವಹಿಸುವುದು ಅತ್ಯಗತ್ಯ.

ಸಂಬಂಧಗಳನ್ನು ಮಾಡುವಾಗ ಮತ್ತು ಮುರಿಯುವಾಗ ಆತುರ ಬೇಡ: ಚಾಣಕ್ಯ ನೀತಿಯ ಪ್ರಕಾರ, ಸ್ನೇಹಿತರನ್ನು ಮಾಡಿಕೊಳ್ಳುವಾಗ, ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಮತ್ತು ಸಂಬಂಧವನ್ನು ಮುರಿಯುವುದು ಇವೆಲ್ಲವೂ ತುಂಬಾ ಸೂಕ್ಷ್ಮ ವಿಷಯ. ಇಂತಹ ವಿಚಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ, ಸಂಬಂಧಗಳ ವಿಷಯಕ್ಕೆ ಬಂದಾಗ, ಯಾವಾಗಲೂ ತಾಳ್ಮೆ ಮತ್ತು ತಿಳುವಳಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಹಣಕ್ಕೆ ಸಂಬಂಧಿಸಿದ ವಹಿವಾಟುಗಳ ಬಗ್ಗೆ ಆತುರ ಬೇಡ: ಹಣದ ವಿಚಅರದ  ಬಗ್ಗೆ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಒಂದು ಸ್ಥಳದಲ್ಲಿ ಹೂಡಿಕೆ ಮಾಡುವುದಾಗಲಿ ಅಥವಾ ದೊಡ್ಡ ವಸ್ತುಗಳನ್ನು ಖರೀದಿ ಮಾಡುವುದಾಗಲಿ ಇಂತಹ ವಿಚಾರಗಳಲ್ಲಿ ನೀವು ಯೋಚಿಸದೆ ನಿರ್ಧಾರ ತೆಗೆದುಕೊಂಡರೆ, ಅದು ಆರ್ಥಿಕ  ನಷ್ಟಕ್ಕೆ, ಆರ್ಥಿಕ ಸಮಸ್ಯೆಗಳು ಉದ್ಭವಿಸಲು ಕಾರಣವಾಗಬಹುದು. ಹಾಗಾಗಿ ಹಣದ ವಿಚಾರದಲ್ಲಿ ಯಾವಾಗಲೂ ಚಿಂತನಶೀಲ ನಿರ್ಧಾರಗಳನ್ನು ತೆಗೆದುಕೊಳ್ಳುವುದು ತುಂಬಾನೇ ಮುಖ್ಯ.

ಇದನ್ನೂ ಓದಿ:  ತಪ್ಪುಗಳು ವ್ಯಕ್ತಿಯ ಜೀವನವನ್ನು ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಕೋಪದಲ್ಲಿ ಪ್ರತಿಕ್ರಿಯಿಸುವುದು: ಕೋಪವು ವ್ಯಕ್ತಿಯನ್ನು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಒಂದು ಪ್ರಚೋದನೆಯಾಗಿದೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ.  ಕೋಪದಲ್ಲಿ ಮಾತನಾಡುವ ಮಾತುಗಳು ಮತ್ತು ಮಾಡುವ ಕ್ರಿಯೆಗಳು ನಿಮ್ಮ ಸಂಬಂಧವನ್ನು ಮಾತ್ರವಲ್ಲದೆ ನಿಮ್ಮ ಸ್ವಾಭಿಮಾನವನ್ನೂ ಹಾಳುಮಾಡುತ್ತವೆ. ಹಾಗಾಗಿ ನೀವು ಕೋಪಗೊಂಡಾಗ ತಕ್ಷಣ ಪ್ರತಿಕ್ರಿಯಿಸುವ ಬದಲು ತಾಳ್ಮೆಯಿಂದ ವರ್ತಿಸಿ.

ಯಾರನ್ನಾದರೂ ನಂಬುವುದು: ಆಚಾರ್ಯ ಚಾಣಕ್ಯರ ಪ್ರಕಾರ, ನೀವು ಭೇಟಿಯಾಗುವ ಪ್ರತಿಯೊಬ್ಬ ವ್ಯಕ್ತಿಯೂ ನಮ್ಮ ನಂಬಿಕೆಗೆ ಅರ್ಹರಲ್ಲ. ನೀವು ಯಾರನ್ನಾದರೂ ಆತುರದಿಂದ ನಂಬಿದರೆ, ಭವಿಷ್ಯದಲ್ಲಿ ನೀವು ಮೋಸ ಹೋಗಬಹುದು. ಯಾರನ್ನಾದರೂ ನಂಬುವ ಮೊದಲು ಅವರ ನಡವಳಿಕೆ ಮತ್ತು ಅವರ ಉದ್ದೇಶಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us