AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಲೈಫಲ್ಲಿ ಸಕ್ಸಸ್‌ ಸಿಗ್ಬೇಕಂದ್ರೆ ಚಾಣಕ್ಯರು ಹೇಳಿದ ಈ ತಂತ್ರಗಳನ್ನು ಅನುಸರಿಸಿ

ಲೈಫಲ್ಲಿ ಸಕ್ಸಸ್‌ ಆಗ್ಬೇಕು, ಯಶಸ್ವಿ ಜೀವನವನ್ನು ನಡೆಸಬೇಕು ಎಂದು ಎಲ್ಲರೂ ಬಯಸುತ್ತಾರೆ. ಈ ಯಶಸ್ಸಿಗೆ ಕಠಿಣ ಪರಿಶ್ರಮ ಎಷ್ಟು ಮುಖ್ಯವೋ, ಅದೇ ರೀತಿ ಉತ್ತಮ ತಂತ್ರದ ಅಗತ್ಯವೂ ಇದೆ. ಹೌದು ಜೀವನದಲ್ಲಿ ಯಶಸ್ವಿಯಾಗಲು, ನೀವು ಆಚಾರ್ಯ ಚಾಣಕ್ಯರು ಹೇಳಿರುವ ಕೆಲವು ವಿಷಯಗಳಿಗೆ ವಿಶೇಷ ಗಮನ ನೀಡಬೇಕು, ಆಗ ಮಾತ್ರ ಯಶಸ್ಸು ನಿಮ್ಮನ್ನು ಹಿಂಬಾಲಿಸುತ್ತದೆ. ಚಾಣಕ್ಯರು ಹೇಳಿರುವ ಯಶಸ್ಸಿನ ಆ ತಂತ್ರಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ಲೈಫಲ್ಲಿ ಸಕ್ಸಸ್‌ ಸಿಗ್ಬೇಕಂದ್ರೆ ಚಾಣಕ್ಯರು ಹೇಳಿದ ಈ ತಂತ್ರಗಳನ್ನು ಅನುಸರಿಸಿ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Sep 19, 2025 | 9:59 AM

Share

ಜೀವನದಲ್ಲಿ ಯಶಸ್ಸು (Success)  ಸಾಧಿಸಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಕೆಲವರು ಅಲ್ಪ ಸಮಯದಲ್ಲಿಯೇ ಯಶಸ್ಸನ್ನು ಸಾಧಿಸಿದರೆ ಇನ್ನೂ ಕೆಲವರು ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸನ್ನು ಗಳಿಸಲು ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಹೀಗೆ ಯಶಸ್ಸನ್ನು ಗಳಿಸಲು ಕಠಿಣ ಪರಿಶ್ರಮ ತುಂಬಾನೇ ಮುಖ್ಯ. ಇದರ ಜೊತೆಗೆ ಯಶಸ್ಸಿಗೆ ಉತ್ತಮ ತಂತ್ರದ ಅಗತ್ಯವೂ ಇದೆ. ಈ ತಂತ್ರಗಳನ್ನು ಮತ್ತು ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡರೆ ಯಶಸ್ಸು ನಿಮ್ಮದಾಗುತ್ತೆ ಎನ್ನುತ್ತಾರೆ ಆಚಾರ್ಯ ಚಾಣಕ್ಯರು (Acharya Chanakya). ಹಾಗಿದ್ರೆ ಯಶಸ್ಸು ನಿಮ್ಮನ್ನು ಹಿಂಬಾಲಿಸಲು ಚಾಣಕ್ಯರು ತಿಳಿಸಿರುವ ಯಶಸ್ಸಿನ ಆ ತಂತ್ರಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ಯಶಸ್ಸು ಗಳಿಸಲು ಚಾಣಕ್ಯರು ಹೇಳಿರುವ ತಂತ್ರಗಳು ಯಾವುವು?

ಸಮಯದ ಸರಿಯಾದ ಬಳಕೆ:  ನಿಮಗೆ ಸಿಕ್ಕ ಸಮಯವನ್ನು ನೀವು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು. ನೀವು ಸರಿಯಾದ ನಿರ್ಧಾರಗಳ ಜೊತೆಗೆ ಸರಿಯಾದ ಕ್ರಮಗಳನ್ನು ತೆಗೆದುಕೊಂಡರೆ  ಕಷ್ಟಕರವಾಗಿರುವಂತಹ ಕೆಲಸಗಳು ಸಹ ಸುಲಭವಾಗುತ್ತವೆ. ಸರಿಯಾದ ಸಮಯದಲ್ಲಿ ಕಾರ್ಯನಿರ್ವಹಿಸಲು ವಿಫಲವಾದರೆ ಅಥವಾ ಅಂದುಕೊಂಡ ಕೆಲಸ ಮಾಡಲು ವಿಳಂಬ ಮಾಡಿದರೆ ಅವಕಾಶಗಳು ನಿಮ್ಮ ಕೈತಪ್ಪಿ ಹೋಗುತ್ತವೆ. ಹಾಗಾಗಿ ಸಿಕ್ಕ ಸಮಯವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಚಾಣಕ್ಯರು ಹೇಳುತ್ತಾರೆ.

ಯೋಜನೆಗಳೊಂದಿಗೆ ಕೆಲಸ ಮಾಡಿ: ಯೋಚಿಸದೆ ಕೆಲಸ ಮಾಡುವುದಕ್ಕಿಂತ ಯೋಜನೆಯೊಂದಿಗೆ ಕೆಲಸ ಮಾಡುವುದು ಉತ್ತಮ. ಆಚಾರ್ಯ ಚಾಣಕ್ಯರ ಪ್ರಕಾರ, ಬುದ್ಧಿವಂತ ವ್ಯಕ್ತಿಯು ಮೊದಲು ಯೋಚಿಸಿ ನಂತರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾನೆ. ಯೋಜನೆ ರೂಪಿಸಿದಾಗ ಸರಿಯಾದ ರೀತಿಯಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಮತ್ತು ಪ್ರಯತ್ನಕ್ಕೆ ಸರಿಯಾದ ಫಲಿತಾಂಶವೂ ಸಿಗುತ್ತದೆ. ಹಾಗಾಗಿ ಯಾವುದೇ ಕೆಲಸ ಮಾಡುವ ಮುನ್ನ ಸರಿಯಾದ ಯೋಜನೆಗಳನ್ನು ರೂಪಿಸಿ.

ಇದನ್ನೂ ಓದಿ
Image
ಈ ಜನರಿಗೆ ಸಹಾಯ ಮಾಡುವ ತಪ್ಪನ್ನು ಎಂದಿಗೂ ಮಾಡಬೇಡಿ
Image
ಹೆಣ್ಮಕ್ಳು ಸಾಧ್ಯವಾದಷ್ಟು ಇಂತಹ ಜನರಿಂದ ದೂರವಿರಬೇಕು
Image
ಮಾನಸಿಕವಾಗಿ ಬಲಿಷ್ಠರಾಗಿರಲು ಚಾಣಕ್ಯರ ಈ ಮಾತುಗಳನ್ನು ತಪ್ಪದೆ ಪಾಲಿಸಿ
Image
ನಿಮ್ಮ ಅತಿಯಾದ ಕೋಪದಿಂದಾಗಿ ಈ ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತೆ

ಇದನ್ನೂ ಓದಿ: ಜನರಿಗೆ ಸಹಾಯ ಮಾಡುವ ತಪ್ಪನ್ನು ಎಂದಿಗೂ ಮಾಡಬೇಡಿ

ಸರಿಯಾದ ಜನರೊಂದಿಗೆ ಸ್ನೇಹ: ಚಾಣಕ್ಯರ ಪ್ರಕಾರ, ನಾವು ಮುಂದುವರಿಯಲು, ಯಶಸ್ಸು ಗಳಿಸಲು ನಮ್ಮ ಸುತ್ತಮುತ್ತಲಿನವರಿಂದಲೂ ಸಾಕಷ್ಟು ಕಲಿಯಬೇಕು. ಸರಿಯಾದ ಜನರೊಂದಿಗೆ ನೀವು ಸ್ನೇಹವನ್ನು ಬೆಳೆಸಿದರೆ ಮತ್ತು ಅವರ ಸಂಘದೊಂದಿಗೆ ಇದ್ದರೆ ಅವರ  ಅನುಭವಗಳಿಂದ ನಿಮಗೆ ಸಾಕಷ್ಟು ಕಲಿಯಲು ಅವಕಾಶ ಸಿಗುತ್ತದೆ.  ಸರಿಯಾದ ಜನರು ಸರಿಯಾದ ಸಮಯದಲ್ಲಿ ಸ್ಫೂರ್ತಿ ನೀಡುತ್ತಾರೆ, ಯಾವುದೇ ತಪ್ಪುಗಳಾಗದಂತೆ ನೋಡಿಕೊಂಡು ನಿಮಗೆ ಸರಿಯಾದ ದಿಕ್ಕನ್ನು ತೋರಿಸುತ್ತಾರೆ.  ಇದು ಕೂಡ ಯಶಸ್ಸಿಗೆ ಅತ್ಯಗತ್ಯ ಎನ್ನುತ್ತಾರೆ ಚಾಣಕ್ಯ.

ವಿಷಯಗಳನ್ನು ಕಲಿಯುತ್ತಲೇ ಇರಿ: ಆಚಾರ್ಯ ಚಾಣಕ್ಯರ ಪ್ರಕಾರ, ನೀವು ಜೀವನದಲ್ಲಿ ಯಶಸ್ವಿಯಾಗಬೇಕಾದರೆ, ನೀವು ಯಾವಾಗಲೂ ಹೊಸ ಹೊಸ ವಿಷಯಗಳನ್ನು ಕಲಿಯುತ್ತಿರಬೇಕು. ಜೀವನಕ್ಕೆ ಸಂಬಂಧಿಸಿದ ವಿಚಾರಗಳು, ಅನುಭವಗಳನ್ನು ಕಲಿಯುತ್ತಲೇ ಇರಬೇಕು. ಈ ಅನುಭವಗಳು ಯಶಸ್ಸಿಗೆ ದಾರಿ ಮಾಡಿಕೊಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ