AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: 2026 ರಲ್ಲಿ ಯಶಸ್ಸು ನಿಮ್ಮದಾಗಲು ಆಚಾರ್ಯ ಚಾಣಕ್ಯರ ಈ ಸಲಹೆಗಳನ್ನು ಅನುಸರಿಸಿ

ಹೊಸ ಉತ್ಸಾಹ, ಭರವಸೆಯೊಂದಿಗೆ ಹೊಸ ವರ್ಷ ಪ್ರಾರಂಭವಾಗಿದೆ. ಈ ವರ್ಷದಲ್ಲಿ ಸುಖ, ಸಮೃದ್ಧಿ, ಯಶಸ್ಸು ತಮ್ಮದಾಗಬೇಕೆಂದು, ಅಂದುಕೊಂಡ ಕಾರ್ಯಗಳನ್ನು ಸಾಧಿಸಬೇಕು ಎಂದು ಹೆಚ್ಚಿನವರು ಬಯಸುತ್ತಾರೆ. ಇದೇ ರೀತಿ ನೀವು ಸಹ 2026 ರ ಹೊಸ ವರ್ಷದಲ್ಲಿ ಅಪಾರ ಯಶಸ್ಸನ್ನು ಸಾಧಿಸಲು ಬಯಸುತ್ತೀರಾ, ಹಾಗಿದ್ರೆ ಆಚಾರ್ಯ ಚಾಣಕ್ಯರ ಈ ತತ್ವಗಳನ್ನು ಇಂದಿನಿಂದಲೇ ಅನುಸರಿಸಲು ಪ್ರಾರಂಭಿಸಿ.

Chanakya Niti: 2026 ರಲ್ಲಿ ಯಶಸ್ಸು ನಿಮ್ಮದಾಗಲು ಆಚಾರ್ಯ ಚಾಣಕ್ಯರ ಈ ಸಲಹೆಗಳನ್ನು ಅನುಸರಿಸಿ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Jan 01, 2026 | 3:12 PM

Share

ಪ್ರತಿಯೊಬ್ಬರೂ ಜೀವನದಲ್ಲಿ ಪ್ರಗತಿ, ಯಶಸ್ಸನ್ನು (success) ಸಾಧಿಸುವ ಓಟದಲ್ಲಿರುತ್ತಾರೆ. ಈ ಪ್ರಯಾಣದಲ್ಲಿ, ಕೆಲವರು ಛಲದಿಂದ ಮುಂದೆ ಸಾಗಿದರೆ, ಇನ್ನೂ ಕೆಲವರು ತಾವು ಇಡುವ ತಪ್ಪು ಹೆಜ್ಜೆಗಳ ಕಾರಣದಿಂದ ಪ್ರಗತಿಯನ್ನು ಸಾಧಿಸದೆ ಹಿಂದೆಯೇ ಉಳಿದುಬಿಡುತ್ತಾರೆ. ಕೆಲವರು ಈ ಸೋಲುಗಳಿಗೆ ತಲೆ ಕೆಡಿಸಿಕೊಳ್ಳದೆ ಹೊಸ ವರ್ಷದ ಸಂದರ್ಭದಲ್ಲಿ ಹೊಸ ಆರಂಭ, ಭರವಸೆಗಳೊಂದಿಗೆ ಯಶಸ್ಸಿನತ್ತ ಹೆಜ್ಜೆ ಇಡಲು ಶ್ರಮಿಸುತ್ತಾರೆ. 2026 ರ ಈ ಹೊಸ ವರ್ಷದಲ್ಲಿ ನೀವು ಸಹ ಜೀವನದಲ್ಲಿ ಯಶಸ್ಸು ಸಾಧಿಸಲು, ಸಂತೋಷದಾಯಕ ಜೀವನವನ್ನು ನಡೆಸಲು ಬಯಸಿದರೆ ಆಚಾರ್ಯ ಚಾಣಕ್ಯರ ಈ ಯಶಸ್ಸಿನ ತತ್ವಗಳನ್ನು ಪಾಲಿಸಿ. ಇವುಗಳನ್ನು ಪಾಲಿಸಿದ್ದೇ ಆದಲ್ಲಿ ಈ ವರ್ಷ ನಿಮ್ಮ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳಾಗುವುದು ಖಂಡಿತ,

ಯಶಸ್ಸನ್ನು ಸಾಧಿಸಲು ಚಾಣಕ್ಯರ ಈ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ:

ಅಹಂಕಾರ ಬಿಟ್ಟು ಬಿಡಿ: ಚಾಣಕ್ಯರ ಪ್ರಕಾರ , ಕೋಪ ಮತ್ತು ಅಹಂಕಾರವು ನಿಮ್ಮ ಜೀವನದ ಪ್ರತಿಯೊಂದು ಅಂಶದಲ್ಲೂ ತಡೆಯನ್ನು ಉಂಟುಮಾಡುತ್ತವೆ. ಅಹಂ ಮತ್ತು ಕೋಪ ನಿಮ್ಮ ಜೀವನದ ಕಠಿಣ ಪರಿಶ್ರಮವನ್ನು ಹಾಳುಮಾಡುತ್ತದೆ. ಅವು ನಿಮ್ಮ ಸಾಮಾಜಿಕ ಗೌರವವನ್ನೂ ಕಸಿದುಕೊಳ್ಳುತ್ತವೆ. ಹಾಗಾಗಿ ಈ ಹೊಸ ವರ್ಷದ ಆರಂಭದಲ್ಲಿಯೇ ಕೋಪ ಮತ್ತು ಅಹಂಕಾರವನ್ನು ತ್ಯಾಜಿಸಿ.  ಇದು ನಿಮಗೆ ಯಶಸ್ಸನ್ನು ತರುವುದು ಖಚಿತ.

ಟೀಕೆಗೆ ಹೆದರಬೇಡಿ: ಜೀವನದಲ್ಲಿ ಟೀಕೆಗೆ ಎಂದಿಗೂ ಭಯಪಡಬಾರದು ಎಂದು ಚಾಣಕ್ಯ ಹೇಳುತ್ತಾರೆ. ಜೀವನದಲ್ಲಿ ಟೀಕೆಗೆ ಹೆದರುವ ವ್ಯಕ್ತಿ ತನ್ನ ಗುರಿಗಳನ್ನು ತಲುಪಲು ಸಾಧ್ಯವಿಲ್ಲ ಹಾಗಾಗಿ ಜೀವನದಲ್ಲಿ ಟೀಕೆಗೆ ಹೆದರಬೇಡಿ ಬದಲಾಗಿ ತಾಳ್ಮೆಯಿಂದ ಇದ್ದು, ಗುರಿ ಸಾಧಿಸುವತ್ತ ಗಮನಹರಿಸಿ.

ಸ್ವಾಭಿಮಾನ:  ಆಚಾರ್ಯ ಚಾಣಕ್ಯರ ಪ್ರಕಾರ, ಒಬ್ಬ ವ್ಯಕ್ತಿಯು ಇತರರನ್ನು ಗೌರವಿಸುವ ಮೊದಲು ತನ್ನನ್ನು ತಾನು ಗೌರವಿಸಿಕೊಳ್ಳಬೇಕು, ತನ್ನ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು, ನಿಮ್ಮ ಶಕ್ತಿಯ ಮೇಲೆ ನಂಬಿಕೆ ಇದ್ದರೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತದೆ.

ಒಳ್ಳೆಯವರ ಸಹವಾಸ: ಕೆಟ್ಟವರ ಸಹವಾಸದಿಂದ ಹಾನಿಯೇ ಹೆಚ್ಚು. ಹಾಗಾಗಿ ಈ ವರ್ಷ ಆದಷ್ಟು ಒಳ್ಳೆಯ, ಸಕಾರಾತ್ಮಕ ಮನಸ್ಸಿನ ಜನರೊಂದಿಗೆ ಬೆರೆಯಿರಿ. ಆಚಾರ್ಯ ಚಾಣಕ್ಯರ ಪ್ರಕಾರ, ನಿಮ್ಮ ಸಹವಾಸವು ನಿಮ್ಮ ಯಶಸ್ಸು ಹಾಗೂ ನಿಮ್ಮ ಸಾಮಾಜಿಕ ಇಮೇಜ್‌ನ ಮೇಲೂ ಪರಿಣಾಮ ಬೀರುತ್ತದೆ. ಆದ್ದರಿಂದ, ನೀವು ಎಂದಿಗೂ ಕೆಟ್ಟವರ ಸಹವಾಸ ಮಾಡಬಾರದು. ಕೆಟ್ಟ ಸಹವಾಸವು ನಿಮ್ಮತನವನ್ನು ಹಾಳುಮಾಡುವುದಲ್ಲದೆ ನಿಮ್ಮ ಭವಿಷ್ಯವನ್ನು ಹಾಳು ಮಾಡುತ್ತದೆ.

ಇದನ್ನೂ ಓದಿ: ನಿಮ್ಮ ವೈಯಕ್ತಿಯ ವಿಚಾರಗಳನ್ನು ಅಪ್ಪಿತಪ್ಪಿಯೂ ಸಂಬಂಧಿಕರ ಬಳಿ ಶೇರ್‌ ಮಾಡಬೇಡಿ

ಗುರಿಯನ್ನು ರೂಪಿಸಿ: ಗುರಿಯಿಲ್ಲದ ವ್ಯಕ್ತಿಯು ಎಂದಿಗೂ ಯಶಸ್ಸನ್ನು ಸಾಧ್ಯವಿಲ್ಲ ಎನ್ನುತ್ತಾರೆ ಚಾಣಕ್ಯ. ಆದ್ದರಿಂದ, ನೀವು ಜೀವನದಲ್ಲಿ ಒಂದು ಗುರಿಯನ್ನು ಹೊಂದಿರಬೇಕು ಮತ್ತು ಆ ಗುರಿಯನ್ನು ಸಾಧಿಸುವತ್ತ ಗಮನಹರಿಸಬೇಕು. 2026 ರ ಈ ಹೊಸ ವರ್ಷದಲ್ಲಿ ಗುರಿಗಳನ್ನು ಹೊಂದಿಸಿ, ಅದರ ಮೇಲೆ ಕೆಲಸ ಮಾಡುವ ಮೂಲಕ ನೀವು ಯಶಸ್ಸಿನತ್ತ ಸಾಗಬಹುದು.

ಜ್ಞಾನ ಸಂಪಾದನೆ: ಜ್ಞಾನಕ್ಕಿಂತ ದೊಡ್ಡದು ಯಾವುದೂ ಇಲ್ಲ, ಹೊಸ ವಿಷಯಗಳನ್ನು ಕಲಿಯುತ್ತಲೇ ಇರಿ.  ಈ ಜ್ಞಾನವು ನಿಮ್ಮನ್ನು ಯಶಸ್ವಿ ವ್ಯಕ್ತಿಯನ್ನಾಗಿ ಮಾಡುವುದಲ್ಲದೆ, ಸಮಾಜದಲ್ಲಿ ನಿಮಗೆ ಗೌರವವನ್ನು ಸಿಗುವಂತೆ ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು