AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಜೀವನದಲ್ಲಿ ಹಣ, ಶ್ರೀಮಂತಿಕೆ ಗಳಿಸಲು ಚಾಣಕ್ಯರ ಈ ಮಾತುಗಳನ್ನು ಪಾಲಿಸಿ

ಜೀವನದಲ್ಲಿ ಸಿಕ್ಕಾಪಟ್ಟೆ ದುಡ್ಡು ಮಾಡ್ಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಸರಿಯಾದ ರೀತಿಯಲ್ಲಿ ಹಣ ಗಳಿಕೆ ಮಾಡುವುದು ಹೇಗೆ, ಶ್ರೀಮಂತರಾಗುವುದು ಹೇಗೆ ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ನಿಮಗೂ ಸಹ ಶ್ರೀಮಂತಿಕೆ ಗಳಿಸುವ ಬಯಕೆ ಇದ್ಯಾ? ಹಾಗಿದ್ರೆ ಆಚಾರ್ಯ ಚಾಣಕ್ಯರು ಹೇಳಿಕೊಟ್ಟಿರುವ ತತ್ವಗಳನ್ನು ಪಾಲಿಸಿ.

Chanakya Niti: ಜೀವನದಲ್ಲಿ ಹಣ, ಶ್ರೀಮಂತಿಕೆ ಗಳಿಸಲು ಚಾಣಕ್ಯರ ಈ ಮಾತುಗಳನ್ನು ಪಾಲಿಸಿ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Mar 12, 2026 | 8:50 PM

Share

ಶ್ರೀಮಂತರಾಗಬೇಕು, ಜೀವನದಲ್ಲಿ ದುಡ್ಡು ಗಳಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಕಠಿಣ ಪರಿಶ್ರಮ ಪಡುತ್ತಾರೆ. ಹಣ ಗಳಿಸಲು ಕಠಿಣ ಪರಿಶ್ರಮ ಒಂದೇ ಸಾಲಲ್ಲ, ಈ ಕೆಲವೊಂದು ಸಲಹೆಗಳನ್ನೂ ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಹಾಗಿದ್ರೆ ಆಚರ್ಯ ಚಾಣಕ್ಯರು ಹೇಳಿರುವಂತೆ  ಜೀವನದಲ್ಲಿ ಆರ್ಥಿಕ ಸ್ಥಿರತೆ ಮತ್ತು ಸಮೃದ್ಧಿ ಲಭಿಸಲು ಯಾವ ವಿಷಯಗಳಿಗೆ ಗಮನ ಕೊಡಬೇಕು ಎಂಬುದನ್ನು ನೋಡೋಣ ಬನ್ನಿ.

ಹಣ, ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು?

ದುಂದುವೆಚ್ಚವನ್ನು ತಪ್ಪಿಸಿ: ಹಣವು ನಿಮ್ಮ ಉತ್ತಮ ಸ್ನೇಹಿತನಾಗಿದ್ದು, ಅದು ಕಷ್ಟದ ಸಮಯದಲ್ಲಿ ನಿಮಗೆ ಸಾಕಷ್ಟು ಸಹಾಯಕ್ಕೆ ಬುರುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಆದ್ದರಿಂದ ಹಣವನ್ನು ನೀರಿನಂತೆ ಖರ್ಚು ಮಾಡಬಾರದು, ಅನಗತ್ಯ ವಿಷಯಗಳಿಗೆ ಹಣ ಖರ್ಚು ಮಾಡುವವನು ಎಂದಿಗೂ ಶ್ರೀಮಂತನಾಗಲು ಸಾಧ್ಯವಿಲ್ಲ. ಹಾಗಾಗಿ ಒಂದೊಂದು ರೂಪಾಯಿಯನ್ನೂ ಬುದ್ಧಿವಂತಿಕೆಯಿಂದ ಖರ್ಚು ಮಾಡಬೇಕು. ಆದಾಯದ ಸ್ವಲ್ಪ ಭಾಗವನ್ನು ಉಳಿಸಬೇಕು. ಆಗ ಮಾತ್ರ ಸಾಕಷ್ಟು ದುಡ್ಡು ಮಾಡಲು ಸಾಧ್ಯ.

 ಉತ್ತಮ ರೀತಿಯಲ್ಲಿ ಹೂಡಿಕೆ ಮಾಡಿ: ಚಾಣಕ್ಯ ನೀತಿಯ ಪ್ರಕಾರ, ಗಳಿಸಿದ ಹಣವನ್ನು ಪೆಟ್ಟಿಗೆಯಲ್ಲಿ ಸಂಗ್ರಹಿಸಿಡುವ ಬದಲು ಅದನ್ನು ನೀರಿನಂತೆ ಹರಿಯಲು ಬಿಡಬೇಕು. ಅಂದರೆ ಸರಿಯಾದ ಸ್ಥಳದಲ್ಲಿ ಹೂಡಿಕೆ ಮಾಡಬೇಕು. ಹೀಗೆ ಸರಿಯಾದ ಸ್ಥಳದಲ್ಲಿ ನೀವು ಹೂಡಿಕೆ ಮಾಡುವುದರಿಂದ ನಿಮ್ಮ ಸಂಪತ್ತು ಹೆಚ್ಚಾಗುತ್ತದೆ.  ಅದೇ ತಪ್ಪು ವಿಧಾನಗಳ ಮೂಲಕ ಅಥವಾ ಯಾರನ್ನಾದರೂ ಮೋಸ ಮಾಡಿ ಗಳಿಸಿದ ಹಣವು ಹೆಚ್ಚು ಕಾಲ ಉಳಿಯುವುದಿಲ್ಲ. ಈ ರೀತಿ ಗಳಿಸಿದ ಹಣವು ವಿನಾಶಕ್ಕೆ ಕಾರಣವಾಗುತ್ತದೆ, ಆದ್ದರಿಂದ  ಯಾವಾಗಲೂ ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಹಣವನ್ನು ಗಳಿಸಬೇಕು ಎಂದು ಹೇಳುತ್ತಾರೆ ಚಾಣಕ್ಯ.

ಇದನ್ನೂ ಓದಿ: ನೀವು ಮಾನಸಿಕವಾಗಿ ಸದೃಢರಾಗಬೇಕಂದ್ರೆ ಚಾಣಕ್ಯರ ಕಿವಿಮಾತುಗಳನ್ನು ಪಾಲಿಸಿ

ಅದೃಷ್ಟವನ್ನು ಅವಲಂಬಿಸಬೇಡಿ, ಕಷ್ಟಪಟ್ಟು ಕೆಲಸ ಮಾಡಿ: ಸೋಮಾರಿತನ ಮನುಷ್ಯನ ದೊಡ್ಡ ಶತ್ರು ಎಂದು ಚಾಣಕ್ಯ ಸ್ಪಷ್ಟವಾಗಿ ಹೇಳಿದ್ದಾರೆ. ಅದೃಷ್ಟವನ್ನು ಮಾತ್ರ ಅವಲಂಬಿಸಿ ಕೆಲಸ ಮಾಡದವರು ಶ್ರೀಮಂತಿಕೆಯನ್ನು ಗಳಿಸಲು ಸಾಧ್ಯವೇ ಇಲ್ಲ. ಕಷ್ಟಪಟ್ಟು ದುಡಿಯುವವರು ಮಾತ್ರ ಯಶಸ್ಸನ್ನು ಗಳಿಸಲು ಸಾಧ್ಯ. ಹಾಗಾಗಿ  ಅದೃಷ್ಟವನ್ನು ಅವಲಂಬಿಸುವ ಬದಲು ಕಷ್ಟಪಟ್ಟು ದುಡಿಯಿರಿ.

ಒಳ್ಳೆಯ ವ್ಯಕ್ತಿಗಳ ಸಹವಾಸ: ಭವಿಷ್ಯದಲ್ಲಿ ನೀವು ಎಷ್ಟು ಯಶಸ್ವಿಯಾಗುತ್ತೀರಿ ಎಂಬುದನ್ನು ನಿಮ್ಮ ಸಹವಾಸ ನಿರ್ಧರಿಸುತ್ತದೆ. ನಿಮ್ಮ ಸ್ನೇಹಿತರು ಅಥವಾ ನಿಮ್ಮ ಸಂಘ ಕೆಟ್ಟದಾಗಿದ್ದರೆ, ನೀವು ಎಂದಿಗೂ ಪ್ರಗತಿ ಹೊಂದಲು ಸಾಧ್ಯವಿಲ್ಲ. ತಮ್ಮ ಗುರಿಗಳನ್ನು ಸಾಧಿಸಲು ದೃಢನಿಶ್ಚಯ ಹೊಂದಿರುವ ಮತ್ತು ಯಾವಾಗಲೂ ಪ್ರಗತಿಯ ಬಗ್ಗೆ ಯೋಚಿಸುವ ಜನರ ಸಹವಾಸದಲ್ಲಿರಿ, ಇದು ನಿಮ್ಮ ಆಲೋಚನಾ ವಿಧಾನವನ್ನು ಬದಲಾಯಿಸುತ್ತದೆ.  ಅದೇ ಕೆಟ್ಟ ಚಟಗಳನ್ನು ಹೊಂದಿರುವವ ಸಹವಾಸದಲ್ಲಿದ್ದರೆ ನಿಮ್ಮ ಜೀವನವೇ ಹಾಳಾಗುತ್ತದೆ. ಹಾಗಾಗಿ ಉತ್ತಮ ಜನರ ಸಹವಾಸವನ್ನು ಬೆಳೆಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us