AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಆದಾಯ ಹೆಚ್ಚಿಸಿಕೊಳ್ಳಲು ಬಯಸಿದರೆ ಮೊದಲು ಈ ಅಭ್ಯಾಸಗಳನ್ನು ತ್ಯಜಿಸಿ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ಮಾತ್ರವಲ್ಲದೆ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಧಾರೆಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಆದಾಯವನ್ನು ಹೆಚ್ಚಿಸುವ ಮಾರ್ಗವನ್ನು ವಿವರಿಸಿದ್ದಾರೆ. ಆದಾಯವನ್ನು ಹೆಚ್ಚಿಸಲು ಮೊದಲು ಕೆಲವೊಂದು ಅಭ್ಯಾಸಗಳನ್ನು ಬದಲಾಯಿಸಲೇಬೇಕು ಎಂದಿದ್ದಾರೆ. ಹಾಗಿದ್ದರೆ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ಆದಾಯ ಹೆಚ್ಚಿಸಿಕೊಳ್ಳಲು ಬಯಸಿದರೆ ಮೊದಲು ಈ ಅಭ್ಯಾಸಗಳನ್ನು ತ್ಯಜಿಸಿ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Apr 27, 2026 | 7:51 PM

Share

ಆದಾಯವನ್ನು (income) ಹೆಚ್ಚಿಸಿಕೊಳ್ಳಬೇಕು, ಶ್ರೀಮಂತಿಕೆಯನ್ನು ಗಳಿಸಬೇಕು ಎಂದು ಪ್ರತಿಯೊಬ್ಬರು ಸಹ ಬಯಸುತ್ತಾರೆ. ಆದರೆ ಆದಾಯವನ್ನು ಹೇಗೆ ಹೆಚ್ಚಿಸಿಕೊಳ್ಳುವುದು ಎಂಬುದೇ ಅನೇಕರಿಗೆ ಗೊತ್ತಿಲ್ಲ. ಒಳ್ಳೆಯ ಜೀವನವನ್ನು ನಡೆಸಲು ಆದಾಯವನ್ನು ಹೆಚ್ಚಿಸಲು ನಮ್ಮ ಆಲೋಚನೆಗಳನ್ನು ಮತ್ತು ಅಭ್ಯಾಸಗಳನ್ನು ಬದಲಾಯಿಸಬೇಕು ಎಂದು ಆಚಾರ್ಯ ಚಾಣಕ್ಯರು. ಕೆಲವು ಕೆಟ್ಟ ಅಭ್ಯಾಸಗಳನ್ನು ಸುಧಾರಿಸದಿದ್ದರೆ, ನೀವು ಲಕ್ಷಾಂತರ ರೂಪಾಯಿಗಳನ್ನು ಗಳಿಸಿದರೂ, ಅದು ಎಂದಿಗೂ ಉಳಿಯುವುದಿಲ್ಲ. ಆದ್ದರಿಂದ, ನಿಮ್ಮ ಆದಾಯವನ್ನು ಹೆಚ್ಚಿಸಲು ಬಯಸಿದರೆ ಮೊದಲು ಈ ಕೆಲವೊಂದು ಕೆಟ್ಟ ಅಭ್ಯಾಸಗಳನ್ನು ತ್ಯಜಿಸಲೇಬೇಕು.

ಈ ಅಭ್ಯಾಸಗಳನ್ನು ತ್ಯಜಿಸಿದರೆ ಮಾತ್ರ ನಿಮ್ಮ ಆದಾಯ ಹೆಚ್ಚಾಗುತ್ತದೆ:

ಸಮಯ ವ್ಯರ್ಥ ಮಾಡುವ ಅಭ್ಯಾಸವನ್ನು ಬಿಟ್ಟುಬಿಡಿ: ಆಚಾರ್ಯ ಚಾಣಕ್ಯರ ಪ್ರಕಾರ, ಸಮಯವು ನಮ್ಮ ದೊಡ್ಡ ಸಂಪತ್ತು. ಆದ್ದರಿಂದ, ಸಮಯವನ್ನು ಗೌರವಿಸದ ಯಾರಾದರೂ ಜೀವನದಲ್ಲಿ ಎಂದಿಗೂ ದೊಡ್ಡ ಯಶಸ್ಸನ್ನು ಸಾಧಿಸಲು ಅಥವಾ ಹಣ ಗಳಿಸಲು ಸಾಧ್ಯವಿಲ್ಲ. ನೀವು ಯಾವುದೇ ಕೆಲಸ ಮಾಡದ ಸೋಮಾರಿತನದಿಂದ ಸಮಯವನ್ನು ವ್ಯರ್ಥ ಮಾಡುತ್ತಿದ್ದರೆ, ಈ ಅಭ್ಯಾಸವನ್ನು ಸರಿಪಡಿಸುವುದು ಬಹಳ ಮುಖ್ಯ. ನಿಮ್ಮ ಸಮಯವನ್ನು ಬುದ್ಧಿವಂತಿಕೆಯಿಂದ ಬಳಸುವುದು ನಿಮ್ಮ ಆದಾಯವನ್ನು ಹೆಚ್ಚಿಸುವ ಮೊದಲ ಹೆಜ್ಜೆ. ನೀವು ಯಾವುದೇ ಕೆಲಸವನ್ನು ಸರಿಯಾದ ಸಮಯದಲ್ಲಿ ಮಾಡಲು ಕಲಿತಾಗ, ನಿಮ್ಮ ಉತ್ಪಾದಕತೆ ಸ್ವಯಂಚಾಲಿತವಾಗಿ ಹೆಚ್ಚಾಗುತ್ತದೆ. ಆದಾಯವೂ ಹೆಚ್ಚಾಗುತ್ತದೆ.

ವ್ಯರ್ಥ ಖರ್ಚು ಮಾಡುವ ಅಭ್ಯಾಸವನ್ನು ಬಿಟ್ಟುಬಿಡಿ: ಆಚಾರ್ಯ ಚಾಣಕ್ಯರ ಪ್ರಕಾರ, ಹಣವನ್ನು ಉಳಿಸುವುದು  ಗಳಿಸುವಷ್ಟೇ ಮುಖ್ಯ. ಕೈಯಲ್ಲಿ ಹಣ ಇದ್ದಾದ ಅದನ್ನು ನಿಷ್ಪ್ರಯೋಜಕ ವಸ್ತುಗಳನ್ನು ಖರೀದಿಸಲು ಖರ್ಚು ಮಾಡಿದರೆ ಹಣವೆಲ್ಲಾ ವ್ಯರ್ಥವಾಗುತ್ತದೆ. ಅದರ ಬದಲು ಗಳಿಸಿದ ಹಣವನ್ನು ಸರಿಯಾದ ರೀತಿಯಲ್ಲಿ ಹೂಡಿಕೆ ಮಾಡುವುದನ್ನು ಕಲಿಯಿರಿ. ಇದರಿಂದ ಆದಾಯ ಕೂಡ ಹೆಚ್ಚಾಗುತ್ತದೆ. ಮತ್ತು ನೀವು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ.

ಸೋಮಾರಿತನವನ್ನು ಬಿಟ್ಟುಬಿಡಿ: ನಿಮ್ಮ ಯಶಸ್ಸಿನ ದೊಡ್ಡ ಶತ್ರು ನಿಮ್ಮ ಸ್ವಂತ ಸೋಮಾರಿತನ. ಚಾಣಕ್ಯ ನೀತಿಯ ಪ್ರಕಾರ, ಸೋಮಾರಿತನವನ್ನು ಬಿಟ್ಟು ಪರಿಶ್ರಮದಿಂದ ಕೆಲಸ ಮಾಡುವವರು ಮಾತ್ರ ಜೀವನದಲ್ಲಿ ಪ್ರಗತಿ ಸಾಧಿಸಲು ಸಾಧ್ಯ. ನೀವು ಪ್ರತಿಯೊಂದು ಕೆಲಸವನ್ನು ಮುಂದೂಡುತ್ತಲೇ ಇರುವ ಅಥವಾ ಕಠಿಣ ಪರಿಶ್ರಮದಿಂದ ದೂರ ಸರಿಯುವ ವ್ಯಕ್ತಿಯಾಗಿದ್ದರೆ, ನಿಮ್ಮ ಆದಾಯ ಎಂದಿಗೂ ಹೆಚ್ಚಾಗುವುದಿಲ್ಲ. ನೀವು ಮೊದಲು ನಿಮ್ಮ ದೈನಂದಿನ ದಿನಚರಿಯನ್ನು ಸುಧಾರಿಸಬೇಕು ಮತ್ತು ಕಠಿಣ ಪರಿಶ್ರಮವನ್ನು ಅಭ್ಯಾಸವನ್ನಾಗಿ ಮಾಡಿಕೊಳ್ಳಬೇಕು. ಆಗ ಮಾತ್ರ ಆದಾಯವನ್ನು ಹೆಚ್ಚಿಸಲು ಸಾಧ್ಯ.

ಇದನ್ನೂ ಓದಿ: ಅಭ್ಯಾಸಗಳು ನಿಮ್ಮನ್ನು ಒಂಟಿಯಾನ್ನಾಗಿಸುತ್ತದೆ ಎಚ್ಚರ!

ಕೆಟ್ಟ ಸಹವಾಸದಿಂದ ದೂರವಿರಿ: ನೀವು ಯಾವ ರೀತಿಯ ಜನರೊಂದಿಗೆ ಬೆರೆಯುತ್ತೀರಿ ಎಂಬುದು ನಿಮ್ಮ ಆಲೋಚನೆ ಮತ್ತು ನಿಮ್ಮ ಗಳಿಕೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ನೀವು ಕಠಿಣ ಪರಿಶ್ರಮದಿಂದ ದೂರ ಸರಿಯುವ ಅಥವಾ ನಕಾರಾತ್ಮಕ ಆಲೋಚನೆಗಳನ್ನು ಹೊಂದಿರುವ ಜನರೊಂದಿಗೆ ಸಹವಾಸ ಮಾಡಿದರೆ, ನೀವು ಕೂಡ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಆದ್ದರಿಂದ, ಆದಾಯವನ್ನು ಹೆಚ್ಚಿಸಲು ಬಯಸಿದರೆ ಸಕಾರಾತ್ಮಕ ,ಮನೋಭಾವವನ್ನು ಹೊಂದಿರುವ ಮತ್ತು ಕಷ್ಟಪಟ್ಟು ಕೆಲಸ ಮಾಡಲು ನಿಮ್ಮನ್ನು ಪ್ರೇರೇಪಿಸುವ ಜನರೊಂದಿಗೆ ಇರುವುದು ಮುಖ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ