AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಅತಿಯಾದ ನಿರೀಕ್ಷೆ ಒಳ್ಳೆಯದಲ್ಲ ಅನ್ನೋದು ಇದೇ ಕಾರಣಕ್ಕೆ ನೋಡಿ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಮಾನಸಿಕ ಶಾಂತಿ ಮತ್ತು ಯಶಸ್ವಿ ಜೀವನಕ್ಕೆ ನಿರ್ಣಾಯಕವಾದ ಅನೇಕ ಪಾಠಗಳನ್ನು ಹೇಳಿದ್ದಾರೆ. ಅದೇ ರೀತಿ ಅವರು ಇತರರಿಂದ ಅತಿಯಾದ ನಿರೀಕ್ಷೆ ಇಟ್ಟುಕೊಳ್ಳುವುದರಿಂದ ಅದು ಮನಸ್ಸಿನ ಮೇಲೆ ಹೇಗೆಲ್ಲಾ ಪರಿಣಾಮ ಬೀರುತ್ತದೆ ಎಂಬುದನ್ನು ಹೇಳಿದ್ದಾರೆ. ಜೊತೆಗೆ ಯಾರಿಂದಲೂ ಅತಿಯಾದ ನಿರೀಕ್ಷೆ ಇಟ್ಟುಕೊಳ್ಳಬೇಡಿ ಎಂದಿದ್ದಾರೆ. ಚಾಣಕ್ಯರ ಪ್ರಕಾರ ಅತಿಯಾದ ನಿರೀಕ್ಷೆ ಯಾಕೆ ಒಳ್ಳೆಯದಲ್ಲ ಎಂಬುದನ್ನು ನೋಡೋಣ ಬನ್ನಿ.

Chanakya Niti: ಅತಿಯಾದ ನಿರೀಕ್ಷೆ ಒಳ್ಳೆಯದಲ್ಲ ಅನ್ನೋದು ಇದೇ ಕಾರಣಕ್ಕೆ ನೋಡಿ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: May 07, 2026 | 6:05 PM

Share

ನಿರೀಕ್ಷೆ (expectations) ಇಟ್ಟುಕೊಳ್ಳುವುದು, ಒಬ್ಬರಿಂದೊಬ್ಬರು ಏನನ್ನಾದರೂ ಅಪೇಕ್ಷಿಸುವುದು ಮನುಷ್ಯನ ಸಹಜ ಗುಣ. ಕೆಲವೊಂದು ಬಾರಿ ನಾವು  ಒಬ್ಬರ ಮೇಲೆ ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಳ್ಳುತ್ತೇವೆ. ಅವರು ನಮ್ಮ ನಿರೀಕ್ಷೆಯಂತೆ ನಡೆದುಕೊಳ್ಳದಿದ್ದಾಗ ಮನಸ್ಸು ಒಡೆದು ಹೋಗುತ್ತದೆ. ಆದ್ದರಿಂದ ಯಾರಿಂದಲೂ ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಳ್ಳಬಾರದು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಹೀಗೆ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದು ಕ್ರಮೇಣ ನಮ್ಮ ಮನಸ್ಸು, ಆಲೋಚನೆ ಮತ್ತು ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ. ಇದು ನಮ್ಮ ಮನಸ್ಸು, ವ್ಯಕ್ತಿತ್ವದ ಮೇಲೆ ಪರಿಣಾಮ ಬೀರುತ್ತದೆ. ಒಟ್ಟಾರೆಯಾಗಿ ಅತಿಯಾದ ನಿರೀಕ್ಷೆಯಿಂದ ಏನೆಲ್ಲಾ ತೊಂದರೆಗಳು ಉದ್ಭವಿಸುತ್ತದೆ ಎಂಬುದನ್ನು ನೋಡೋಣ ಬನ್ನಿ.

ಅತಿಯಾದ ನಿರೀಕ್ಷೆ ಇಟ್ಟುಕೊಳ್ಳುವುದರಿಂದ ಏನಾಗುತ್ತದೆ?

ಹತಾಶೆ ಹೆಚ್ಚಾಗಬಹುದು: ಆಚಾರ್ಯ ಚಾಣಕ್ಯರ ಪ್ರಕಾರ, ನಾವು ಯಾರಿಂದಾದರೂ ಹೆಚ್ಚು ನಿರೀಕ್ಷಿಸಿದಾಗ, ಮತ್ತು ಅವರು ನಮ್ಮ ನಿರೀಕ್ಷೆಗಳನ್ನು ಪೂರೈಸದಿದ್ದರೆ, ನಾವು ತೀವ್ರ ನಿರಾಶೆಗೆ ಒಳಗಾಗುತ್ತೇವೆ. ಇದು ನಮ್ಮ ಮನಸ್ಸನ್ನು ಬೇಗನೆ ದುರ್ಬಲಗೊಳಿಸುತ್ತದೆ. ಚಾಣಕ್ಯ ನೀತಿಯ ಪ್ರಕಾರ, ಇತರರ ನಡವಳಿಕೆಯನ್ನು ನಿಯಂತ್ರಿಸುವುದು ನಮ್ಮ ನಿಯಂತ್ರಣಕ್ಕೆ ಮೀರಿದ್ದು. ಇತರರಿಂದ ಅತಿಯಾದ ನಿರೀಕ್ಷೆಗಳನ್ನು ತಪ್ಪಿಸಲು ಇದು ಒಂದು ಪ್ರಮುಖ ಕಾರಣವಾಗಿದೆ. ಆದ್ದರಿಂದ ಯಾರಿಂದಲೂ ಯಾವ ನಿರೀಕ್ಷೆಗಳನ್ನೂ ಇಟ್ಟುಕೊಳ್ಳಬೇಡಿ.

ಸಂಬಂಧಗಳಲ್ಲಿ ಒತ್ತಡ ಹೆಚ್ಚಾಗುತ್ತದೆ: ಚಾಣಕ್ಯ ನೀತಿಯ ಪ್ರಕಾರ, ಇತರರಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿರುವ ಅಭ್ಯಾಸ  ಸಂಬಂಧಗಳಲ್ಲಿ ಒತ್ತಡವನ್ನು ಉಂಟುಮಾಡುತ್ತದೆ. ಸಂಬಂಧದಲ್ಲಿ ನಮ್ಮ ನೆಚ್ಚಿನ ವ್ಯಕ್ತಿಯು ಯಾವಾಗಲೂ ನಮ್ಮ ನಿರೀಕ್ಷೆಗಳಿಗೆ ಅನುಗುಣವಾಗಿ ವರ್ತಿಸಬೇಕು, ಅವರು ನಮ್ಮ ಇಚ್ಛೆಯಂತೆಯೇ ಇರಬೇಕು ಎಂದು ನಾವು ಯಾವಾಗಲೂ ಆಶಿಸುತ್ತೇವೆ, ಆದರೆ ಪ್ರತಿಯೊಬ್ಬ ವ್ಯಕ್ತಿಯು ವಿಭಿನ್ನ ಆಲೋಚನೆ ಮತ್ತು ಮಿತಿಗಳನ್ನು ಹೊಂದಿರುತ್ತಾನೆ. ಆದ್ದರಿಂದ, ಇತರ ವ್ಯಕ್ತಿಯು ನಮ್ಮ ನಿರೀಕ್ಷೆಗಳನ್ನು ಪೂರೈಸಲು ವಿಫಲವಾದಾಗ, ಅದು ತಪ್ಪು ತಿಳುವಳಿಕೆಗೆ ಕಾರಣವಾಗುತ್ತದೆ.  ಮತ್ತು ಇದರಿಂದ ಕೋಪ, ಮನಸ್ತಾಪ ಉಂಟಾಗಿ ಸಂಬಂಧದಲ್ಲಿ ಬಿರುಕು ಮೂಡುತ್ತದೆ. ಹಾಗಾಗಿ ಅತಿಯಾದ ನಿರೀಕ್ಷೆ ಒಳ್ಳೆಯದಲ್ಲ.

ಮಾನಸಿಕ ಒತ್ತಡ ಹೆಚ್ಚಾಗುತ್ತದೆ: ನೀವು ನಿರಂತರವಾಗಿ ಇತರರಿಂದ ನಿರೀಕ್ಷೆಗಳನ್ನು ಇಟ್ಟುಕೊಂಡಾಗ, ಆ ನಿರೀಕ್ಷೆಗಳನ್ನು ಅವರು ಪೂರೈಸದಿದ್ದಾಗ, ನಿಮ್ಮ ಮನಸ್ಸು ಛಿದ್ರವಾಗುತ್ತದೆ. ನಾನು ಬಯಸಿದ್ದು ಏಕೆ ಸಿಗಲಿಲ್ಲ, ಅವರು ನಾನಂದುಕೊಂಡ ರೀತಿಯಲ್ಲಿ ಏಕೆ ಇಲ್ಲ ಹೀಗೆ ಇಂತಹ ಪ್ರಶ್ನೆಗಳು ನಿರಂತರವಾಗಿ ಮನಸ್ಸಿನಲ್ಲಿ ಸುಳಿದಾಡುತ್ತದೆ. ಈ ಆಲೋಚನೆಯು ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತದೆ  ಮತ್ತು ನಿಮ್ಮ ಸಂತೋಷವನ್ನು ಕಸಿದುಕೊಳ್ಳುತ್ತದೆ. ಹಾಗಾಗಿ ಯಾರಿಂದಲೂ ಏನನ್ನೂ ಅತಿಯಾಗಿ ನಿರೀಕ್ಷಿಸಬೇಡಿ.

ಇದನ್ನೂ ಓದಿ: ಜನರನ್ನು ಅವಮಾನಿಸುವ ತಪ್ಪನ್ನು ಎಂದಿಗೂ ಮಾಡಬೇಡಿ

ಆತ್ಮವಿಶ್ವಾಸ ಕಡಿಮೆಯಾಗುತ್ತದೆ: ಆಚಾರ್ಯ ಚಾಣಕ್ಯರ ಪ್ರಕಾರ, ನಾವು ಇತರರ ಮೇಲೆ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟಾಗ, ನಾವು ನಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಳ್ಳುತ್ತೇವೆ. ನಮ್ಮೆಲ್ಲಾ ವಿಶ್ವಾಸವನ್ನು ನಾವು ಅತಿಯಾಗಿ ನಿರೀಕ್ಷಿಸುವ ವ್ಯಕ್ತಿಯ ಮೇಲೆ ಇಟ್ಟುಬಿಡುತ್ತೇವೆ. ಈ ಮನಸ್ಥಿತಿಯು ವ್ಯಕ್ತಿಯನ್ನು ದುರ್ಬಲಗೊಳಿಸುತ್ತದೆ. ಈ ಆತ್ಮವಿಶ್ವಾಸದ ಕೊರತೆಯಿಂದ ಖಂಡಿತವಾಗಿಯೂ ವ್ಯಕ್ತಿ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಇತರರ ಮೇಲೆ ಅತಿಯಾಗಿ ನಿರೀಕ್ಷೆ ಇಟ್ಟುಕೊಳ್ಳುವ ಬದಲು ನಿಮ್ಮನ್ನು ನೀವು ನಂಬಿ, ವಿಶ್ವಾಸವನ್ನು ಇಟ್ಟುಕೊಳ್ಳಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ