AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಕೋಪವನ್ನು ನಿಯಂತ್ರಿಸುವುದು ಹೇಗೆ? ಇಲ್ಲಿದೆ ಚಾಣಕ್ಯರ ಸಲಹೆ

ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ, ಒಬ್ಬ ವ್ಯಕ್ತಿಯು ಭಾವನೆಗಳನ್ನು ನಿಯಂತ್ರಿಸುವುದು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದ್ದಾರೆ. ಅವರ ಪ್ರಕಾರ, ಒಬ್ಬ ವ್ಯಕ್ತಿಯು ತನ್ನ ಭಾವನೆಗಳನ್ನು, ವಿಶೇಷವಾಗಿ ಕೋಪವನ್ನು ನಿಯಂತ್ರಿಸಲು ಕಲಿತರೆ, ತಾಳ್ಮೆಯಿಂದ ಇದ್ದರೆ ಆತ ಜೀವನದಲ್ಲಿ ದೊಡ್ಡದನ್ನು ಸಾಧಿಸಬಹುದು. ಹಾಗಿದ್ದರೆ ಕೋಪವನ್ನು ನಿಯಂತ್ರಿಸಲು ಚಾಣಕ್ಯರ ಸಲಹೆಗಳೇನು ಎಂಬುದನ್ನು ವಿವರವಾಗಿ ನೋಡೋಣ.

Chanakya Niti: ಕೋಪವನ್ನು ನಿಯಂತ್ರಿಸುವುದು ಹೇಗೆ? ಇಲ್ಲಿದೆ ಚಾಣಕ್ಯರ ಸಲಹೆ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jul 04, 2026 | 7:17 PM

Share

ಕೋಪವು (anger) ಮನುಷ್ಯನ ದೊಡ್ಡ ಶತ್ರು ಅಂತಾನೇ ಹೇಳಬಹುದು. ಇದು ಸಂಬಂಧವನ್ನು ಹಾಳು ಮಾಡುವುದು ಮಾತ್ರವಲ್ಲ ನಾವು ಜೀವನಪರ್ಯಂತ ವಿಷಾದಿಸುವಂತೆ ಮಾಡುತ್ತವೆ. ಚಾಣಕ್ಯರ ಪ್ರಕಾರ ಕೋಪವು ಬೆಂಕಿಯಾಗಿದ್ದು, ಆ ಕೋಪ ಮೊದಲು ನಮ್ಮನ್ನೇ ಸುಟ್ಟು ಹಾಕುತ್ತದೆ. ಹಾಗಾಗಿ ಕೋಪವನ್ನು ನಿಯಂತ್ರಿಸುವುದು ತುಂಬಾನೇ ಮುಖ್ಯ. ಒಬ್ಬ ವ್ಯಕ್ತಿಯು ತನ್ನ ಕೋಪವನ್ನು ಸಮಯಕ್ಕೆ ಸರಿಯಾಗಿ ಗುರುತಿಸಲು ಮತ್ತು ನಿಯಂತ್ರಿಸಲು ಕಲಿತರೆ, ಅವನು ಜೀವನದಲ್ಲಿ ಅನೇಕ ತೊಂದರೆಗಳನ್ನು ತಪ್ಪಿಸಬಹುದು ಎಂದು ಚಾಣಕ್ಯರು ಹೇಳಿದ್ದಾರೆ. ಜೊತೆಗೆ ಅವರು ಕೋಪವನ್ನು ನಿಯಂತ್ರಿಸಲು ಒಂದಷ್ಟು ಸಲಹೆಗಳನ್ನು ಕೂಡ ನೀಡಿದ್ದಾರೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಕೋಪ ಬಂದಾಗ ಏನು ಮಾಡಬೇಕು? ಕೋಪವನ್ನು ನಿಯಂತ್ರಿಸುವುದು ಹೇಗೆ?

ಆಚಾರ್ಯ ಚಾಣಕ್ಯರ ಪ್ರಕಾರ, ತನ್ನ ಕೋಪವನ್ನು ಜಯಿಸಬಲ್ಲ ವ್ಯಕ್ತಿಯು ಜೀವನದ ಅನೇಕ ಸವಾಲುಗಳನ್ನು ಹೆಚ್ಚಿನ ಬುದ್ಧಿವಂತಿಕೆಯಿಂದ ಜಯಿಸಬಹುದು. ಸ್ವಯಂ ನಿಯಂತ್ರಣ, ತಾಳ್ಮೆ ಮತ್ತು ವಿವೇಕವು ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಕೋಪವು ಪ್ರಾಬಲ್ಯ ಸಾಧಿಸಲು ಬಿಡುವ ಬದಲು ಅದನ್ನು ನಿಯಂತ್ರಿಸುವ ಕಲೆಯನ್ನು ಕಲಿಯುವುದು ನಿಜವಾದ ಬುದ್ಧಿವಂತಿಕೆ ಮತ್ತು ಬಲವಾದ ವ್ಯಕ್ತಿತ್ವದ ಸಂಕೇತವೆಂದು ಅವರು ಹೇಳಿದ್ದಾರೆ.

ನಿಮ್ಮನ್ನು ನೀವು ಶಾಂತಗೊಳಿಸಿ: ಕೋಪ ಬಂದಾಗ ತಕ್ಷಣ ಪ್ರತಿಕ್ರಿಯಿಸುವ ಬದಲು, ಸ್ವಲ್ಪ ಸಮಯ ಶಾಂತವಾಗಿರಿ. ಆಳವಾದ ಉಸಿರನ್ನು ತೆಗೆದುಕೊಳ್ಳಿ, ಸ್ವಲ್ಪ ನೀರು ಕುಡಿಯಿರಿ ಅಥವಾ ಸ್ವಲ್ಪ ಸಮಯದವರೆಗೆ ಪರಿಸ್ಥಿತಿಯಿಂದ ದೂರವಿರಿ. ಈ ಸಣ್ಣ ವಿರಾಮವು ದೊಡ್ಡ ವಾದವನ್ನು ತಪ್ಪಿಸಬಹುದು.

ಮಾತನಾಡುವ ಮೊದಲು ಯೋಚಿಸಿ: ಕೋಪದಲ್ಲಿ ಮಾತನಾಡುವ ಕಠಿಣ ಮಾತುಗಳು ಸಂಬಂಧಗಳ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಒಮ್ಮೆ ಮಾತನಾಡಿದ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ, ಏನನ್ನಾದರೂ ಹೇಳುವ ಮೊದಲು, ಅದು ನಿಜವಾಗಿಯೂ ಅಗತ್ಯವಿದೆಯೇ ಅಥವಾ ಇಲ್ಲವೇ ಎಂದು ಯೋಚಿಸುವುದು ಮುಖ್ಯ.

ಸಮಸ್ಯೆಯ ಮೇಲೆ ಗಮನಹರಿಸಿ, ವ್ಯಕ್ತಿಯಲ್ಲ: ಪ್ರತಿಯೊಬ್ಬರ ನಡವಳಿಕೆಯ ಹಿಂದೆಯೂ ಒಂದು ಕಾರಣವಿರಬಹುದು. ಒಬ್ಬ ವ್ಯಕ್ತಿಯ ನಡವಳಿಕೆ ನಿಮಗೆ ಕೋಪ ತರಿಸುತ್ತಿದೆ ಎಂದಾದ್ರೆ ಆ ವ್ಯಕ್ತಿಯ ಮೇಲೆ ಕೋಪಗೊಳ್ಳುವ ಬದಲು, ಸಮಸ್ಯೆಯ ಮೂಲವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಇದರಿಂದ ಸಂಬಂಧ ಹಾಳಾಗುವುದಿಲ್ಲ.

ಇದನ್ನೂ ಓದಿ: ಯೌವನಲ್ಲಿ ಕಲಿಯುವ ವಿಷಯಗಳು ನಿಮ್ಮ ಭವಿಷ್ಯದ ದಿಕ್ಕನ್ನು ನಿರ್ಧರಿಸುತ್ತದೆ

ಕೋಪವನ್ನು ಸಕಾರಾತ್ಮಕ ಶಕ್ತಿಯನ್ನಾಗಿ ಪರಿವರ್ತಿಸಿ: ಚಾಣಕ್ಯರ ಸಿದ್ಧಾಂತದ ಪ್ರಕಾರ, ನಕಾರಾತ್ಮಕ ಭಾವನೆಗಳನ್ನು ಸ್ಫೂರ್ತಿಯಾಗಿ ಪರಿವರ್ತಿಸಬೇಕು. ಕಠಿಣ ಪರಿಶ್ರಮ, ಸ್ವ-ಅಭಿವೃದ್ಧಿ ಮತ್ತು ಗುರಿಗಳತ್ತ ಸಾಗಲು ಕೋಪವನ್ನು ಶಕ್ತಿಯಾಗಿ ಬಳಸುವುದು ಹೆಚ್ಚು ಪ್ರಯೋಜನಕಾರಿ ಎಂದು ಅವರು ಹೇಳಿದ್ದಾರೆ.

ಸಮಾಧಾನದಿಂದ ನಿರ್ಧಾರ ತೆಗೆದುಕೊಳ್ಳಿ: ಕೋಪದ ಸ್ಥಿತಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಹೆಚ್ಚಾಗಿ ತಪ್ಪಾಗಿರುತ್ತವೆ. ಆದ್ದರಿಂದ, ಮನಸ್ಸು ಶಾಂತವಾದ ನಂತರವೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.

ಕೋಪದಿಂದ ಉಂಟಾಗುವ ಹಾನಿಗಳೇನು?

ಅತಿಯಾದ ಕೋಪವು ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಇದು ಒತ್ತಡವನ್ನು ಹೆಚ್ಚಿಸುತ್ತದೆ, ಸಂಬಂಧಗಳಲ್ಲಿ ಬಿರುಕುಗಳನ್ನು ಮೂಡಿಸುತ್ತದೆ. ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಲು ಕಾರಣವಾಗಬಹುದು. ಮತ್ತು ಕೋಪ  ವ್ಯಕ್ತಿಯ ಖ್ಯಾತಿಯ ಮೇಲೂ ಪರಿಣಾಮ ಬೀರಬಹುದು. ಕೆಲವೊಮ್ಮೆ, ಒಂದು ಕ್ಷಣದ ಕೋಪವು ಸುಂದರ ಸಂಬಂಧಗಳನ್ನು ನಾಶಪಡಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ