AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಜೀವನದಲ್ಲಿ ಮುಂದುವರೆಯಲು ಬಯಸಿದರೆ ಈ ವಿಚಾರಗಳ ಬಗ್ಗೆ ಹಿಂಜರಿಕೆ ಪಡಬಾರದು

ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಯಶಸ್ಸು, ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು ಎಂದು ಹೇಳಿರುವಂತೆ ಜೀವನದಲ್ಲಿ ಮುಂದೆ ಸಾಗಲು ಬಯಸಿದರೆ ಒಂದಷ್ಟು ವಿಚಾರಗಳ ಬಗ್ಗೆ ನಾಚಿಕೆ ಪಡಬಾರದು ಎಂಬುದನ್ನು ಹೇಳಿದ್ದಾರೆ. ಹಾಗಿದ್ದರೆ ಚಾಣಕ್ಯರು ಹೇಳಿರುವಂತೆ ಜೀವನದಲ್ಲಿ ಯಾವ ವಿಚಾರಗಳ ಬಗ್ಗೆ ನಾಚಿಕೆ ಪಡಬಾರದು ಎಂಬುದನ್ನು ನೋಡೋಣ ಬನ್ನಿ.

Chanakya Niti: ಜೀವನದಲ್ಲಿ ಮುಂದುವರೆಯಲು ಬಯಸಿದರೆ ಈ ವಿಚಾರಗಳ ಬಗ್ಗೆ ಹಿಂಜರಿಕೆ ಪಡಬಾರದು
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Mar 22, 2026 | 8:02 PM

Share

ಯಾರು ಏನೆನ್ನುತ್ತಾರೋ, ಸಮಾಜ ನಮ್ಮ ಬಗ್ಗೆ ಏನೆಂದುಕೊಳ್ಳುತ್ತೋ  ಎಂಬ ಅಂಜಿಕೆ, ಭಯ, ನಾಚಿಕೆಯಿಂದ ತಾವು ಅಂದುಕೊಂಡ ಕೆಲಸಗಳನ್ನು ಮಾಡಲು ಹಿಂಜರಿಯುತ್ತಾರೆ. ಈ ರೀತಿಯ ಹಿಂಜರಿಕೆಯಿದ್ದರೆ, ಯಶಸ್ಸು (success) ಗಳಿಸಲು, ಜೀವನದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಈ ಕೆಲವು ವಿಚಾರಗಳ ಬಗ್ಗೆ ನಾಚಿಕೆ ಪಟ್ಟರೆ, ಹಿಂಜರಿದರೆ  ಜೀವನದಲ್ಲಿ ಎಂದಿಗೂ ಮುಂದುವರೆಯಲು ಸಾಧ್ಯವಿಲ್ಲವಂತೆ. ಹಾಗಿದ್ರೆ ಜೀವನದಲ್ಲಿ ಯಾವ ಸಂಗತಿಗಳ ನಾಚಿಕೆ ಪಡಬಾರದು ಎಂಬುದನ್ನು ನೋಡೋಣ ಬನ್ನಿ.

ಜೀವನದಲ್ಲಿ ಈ ವಿಚಾರಗಳ ಬಗ್ಗೆ ಎಂದಿಗೂ ಹಿಂಜರಿಯಬೇಡಿ:

ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ: ಅನೇಕ ಬಾರಿ, ಜನ ತಮ್ಮ ನಿರ್ಧಾರಗಳು ಸರಿಯಾಗಿದ್ದರೂ ಸಹ, ಅವರು ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಲು ಹಿಂಜರಿಯುತ್ತಾರೆ. ಇತರರ ಮುಂದೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಎಂದಿಗೂ ನಾಚಿಕೆಪಡಬಾರದು, ಅದೇ ರೀತಿ, ಯಾರಾದರೂ ತಪ್ಪು ಮಾಡಿದರೆ, ಅದನ್ನು ಧೈರ್ಯದಿಂದ ತಪ್ಪು ಎಂದು ಹೇಳಲು ಎಂದಿಗೂ ಹಿಂಜರಿಯಬಾರದು ಎನ್ನುತ್ತಾರೆ ಚಾಣಕ್ಯ. ಧೈರ್ಯದಿಂದ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಹಿಂಜರಿಯುವ ವ್ಯಕ್ತಿ ಜೀವನದಲ್ಲಿ ಎಂದಿಗೂ ಯಶಸ್ಸನ್ನು ಸಾಧಿಸುವುದಿಲ್ಲ.

ತಿನ್ನಲು ಹಿಂಜರಿಯಬೇಡಿ:  ಕೆಲವು ಜನರು ಇತರರ ಮುಂದೆ ತಿನ್ನಲು ಹಿಂಜರಿಯುತ್ತಾರೆ. ಕೆಲವೊಮ್ಮೆ, ನಾಚಿಕೆಯಿಂದಾಗಿ, ಅವರು ತಮ್ಮ ನೆಚ್ಚಿನ ಆಹಾರವನ್ನು ತಿನ್ನಲು ಸಹ ಹಿಂಜರಿಯುತ್ತಾರೆ. ಆಚಾರ್ಯ ಚಾಣಕ್ಯರು ಆಹಾರವು ನಿಮ್ಮ ದೇಹದ ಪ್ರಾಥಮಿಕ ಅಗತ್ಯವಾಗಿದೆ ಮತ್ತು ನೀವು ಅದರ ಬಗ್ಗೆ ಎಂದಿಗೂ ಮುಜುಗರಪಡಬಾರದು ಎಂದು ಹೇಳುತ್ತಾರೆ. ಹಾಗೆ ಮಾಡುವ ವ್ಯಕ್ತಿ ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಆಹಾರದ ಬಗ್ಗೆ ನಾಚಿಕೆಪಡುವುದರಿಂದ, ವ್ಯಕ್ತಿಯು ಸ್ವತಃ ಹಸಿವಿನಿಂದ ಇರುತ್ತಾನೆ. ಆಹಾರಕ್ಕಾಗಿ ಮಾತನಾಡಲು ಸಾಧ್ಯವಾಗದ ವ್ಯಕ್ತಿ ಎಂದಿಗೂ ಇತರರ ಪರವಾಗಿ ನಿಲ್ಲಲು ಸಾಧ್ಯವಿಲ್ಲ ಎಂದು ಆಚಾರ್ಯ ಚಾಣಕ್ಯ ಹೇಳಿದ್ದಾರೆ.

ಹಣ ಕೇಳುವಾಗ ನಾಚಿಕೆ ಪಡಬೇಡಿ: ಯಾರಿಂದಲೂ ಹಣವನ್ನು ಎರವಲು ಪಡೆಯುವುದು ಸರಿಯಲ್ಲ, ಅದು ಸಾಲದ ಹೊರೆಯನ್ನು ಹೆಚ್ಚಿಸುತ್ತದೆ. ಆದರೆ ನಿಮಗೆ ತೀರಾ ಹಣದ ಅಗತ್ಯವಿದ್ದರೆ ನೀವು ಎಂದಿಗೂ ಹಣ ಕೇಳಲು ನಾಚಿಕೆಪಡಬಾರದು ಅಥವಾ ಹಿಂಜರಿಯಬಾರದು. ಆದಾಗ್ಯೂ, ಸಮಯಕ್ಕೆ ಸರಿಯಾಗಿ ಹಿಂದಿರುಗಿಸುವ ಸಾಮರ್ಥ್ಯವಿದ್ದರೆ ಮಾತ್ರ ಹಣವನ್ನು ಕೇಳಿ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಒಬ್ಬ ವ್ಯಕ್ತಿಯು ತನ್ನ ವ್ಯವಹಾರ ಮತ್ತು ವ್ಯಾಪಾರವನ್ನು  ನಿಭಾಯಿಸಲು, ಹಣ ಕೇಳಲು ಹಿಂಜರಿಯುವವರು ಜೀವನದಲ್ಲಿ ಯಸಸ್ಸನ್ನು ಗಳಿಸಲು ಸಾಧ್ಯವಿಲ್ಲ.

ಇದನ್ನೂ ಓದಿ: ಜೀವನದ ಪ್ರಮುಖ ವಿಷಯಗಳ ಬಗ್ಗೆ ಎಂದಿಗೂ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಜ್ಞಾನವನ್ನು ಪಡೆಯಲು ನಾಚಿಕೆ ಪಡಬೇಡಿ:  ಆಚಾರ್ಯ ಚಾಣಕ್ಯರ ಪ್ರಕಾರ, ಯಾರಿಂದಲೂ ಜ್ಞಾನವನ್ನು  ಅಥವಾ ಒಳ್ಳೆಯ ವಿಚಾರಗಳನ್ನು ಕೇಳಿ ಪಡೆಯಲು ನಾಚಿಕೆಪಡಬಾರದು ಎನ್ನುತ್ತಾರೆ ಚಾಣಕ್ಯ.  ಹೌದು ಯಾವುದೇ ಅನುಮಾನವನ್ನು ನಿವಾರಿಸಲು, ಒಳ್ಳೆಯ ವಿಚಾರಗಳನ್ನು ಕಳೆಯಲು ನಾಚಿಕೆಪಡಬಾರದು. ಜ್ಞಾನ ಸಂಪಾದಿಸಲು ಹಿಂಜರಿಯುವ ವ್ಯಕ್ತಿಗಳು ಜೀವನದಲ್ಲಿ ಮುಂದುವರೆಯಲು ಎಂದಿಗೂ ಸಾಧ್ಯವಿಲ್ಲ. ಹಾಗಾಗಿ ನೀವು  ಜ್ಞಾನ ಸಂಪಾದಿಸಲು ನಾಚಿಕೆ ಪಡಬೇಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!