AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಯೌವನದಲ್ಲಿ ಈ ಕೆಲಸಗಳನ್ನು ಮಾಡಿದರೆ ವೃದ್ಧಾಪ್ಯವು ಸಂತೋಷದಿಂದಿರುವುದು

ಕೊನೆಗಾಲದಲ್ಲಿ ನೆಮ್ಮದಿಯಾಗಿರಬೇಕು, ಯಾವುದೇ ನೋವು, ಹತಾಶೆಯಿಲ್ಲದೆ ಸಂತೋಷದಿಂದ ಕಾಲ ಕಳೆಯಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಹೀಗೆ ವೃದ್ಧಾಪ್ಯ ಸಂತೋಷ, ಶಾಂತಿಯಿಂದ ಕೂಡಿರಬೇಕೆಂದರೆ ಯೌವನದಲ್ಲಿ ಒಂದಷ್ಟು ಕೆಲಸಗಳನ್ನು ತಪ್ಪದೇ ಮಾಡಲೇಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಅವು ಯಾವುವು ಎಂಬ ಸಂಕ್ಷಿಪ್ತ ವರದಿ ಇಲ್ಲಿದೆ.

Chanakya Niti: ಯೌವನದಲ್ಲಿ ಈ ಕೆಲಸಗಳನ್ನು ಮಾಡಿದರೆ ವೃದ್ಧಾಪ್ಯವು ಸಂತೋಷದಿಂದಿರುವುದು
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Feb 17, 2026 | 7:47 PM

Share

ಯೌವನದಲ್ಲಿರುವಾಗ ಮಾಡುವ ಕೆಲವೊಂದು ತಪ್ಪುಗಳು ವೃದ್ಧಾಪ್ಯವನ್ನು (old age) ನರಕ ಮಾಡುತ್ತಂತೆ. ಹೌದು ಇಂದು ಮಾಡುವ ತಪ್ಪಿನಿಂದ ಕೊನೆಗಾಲದಲ್ಲಿ ಮಕ್ಕಳ ಪ್ರೀತಿಯೂ ಸಿಗೋದಿಲ್ಲ, ನೆಮ್ಮದಿಯೂ ಇರೋಲ್ಲ, ಮುಖ್ಯವಾಗಿ ಆಹಾರಕ್ಕೂ ಪರದಾಡಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ವೃದ್ಧಾಪ್ಯವು ಶಾಂತಿ ಮತ್ತು ಸಂತೋಷದಿಂದ ಕೂಡಿರಬೇಕೆಂದರೆ ಯೌನದಲ್ಲಿರುವಾಗ ಈ ಒಂದಷ್ಟು ಕೆಲಸಗಳನ್ನು ತಪ್ಪದೆ ಮಾಡಲೇಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಹಾಗಿದ್ರೆ ಕೊನೆಗಾಲದಲ್ಲಿ ನೆಮ್ಮದಿಯಾಗಿ ಜೀವನ ನಡೆಸಲು ಮುಂಚಿತವಾಗಿಯೇ ಏನೆಲ್ಲಾ ಮಾಡಬೇಕು ಎಂಬುದನ್ನು ತಿಳಿಯಿರಿ.

ವೃದ್ಧಾಪ್ಯವು ಸಂತೋಷದಿಂದ ಕೂಡಿರಲು ಈ ಕೆಲಸಗಳನ್ನು ಇಂದೇ ಮಾಡಿ:

ಹಣ ಉಳಿತಾಯ ಬಹಳ ಮುಖ್ಯ: ಯೌವನದ ಆಸೆಗಳನ್ನು ಅನುಸರಿಸಲು ನಿಮ್ಮ ಎಲ್ಲಾ ಗಳಿಕೆಯನ್ನು ವ್ಯರ್ಥ ಮಾಡುವುದು ಅತ್ಯಂತ ಮೂರ್ಖತನವೆಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ನಿಮ್ಮ ಸ್ವಂತ ಮಗ ಕೂಡ ವೃದ್ಧಾಪ್ಯದಲ್ಲಿ ನಿಮ್ಮನ್ನು ಕೈಬಿಡಬಹುದು, ಇಂತಹ ಸಮಯದಲ್ಲಿ ನೀವು ಕೂಡಿಟ್ಟ ಹಣ, ನೀವು ಗಳಿಸಿದ ಆಸ್ತಿ ನಿಮ್ಮ ಸಹಾಯಕ್ಕೆ ಬರುತ್ತದೆ. ಹಾಗಾಗಿ ನಿಮಗಾಗಿ, ನಿಮ್ಮ ಸ್ವಂತಕ್ಕಾಗಿ ಒಂದಷ್ಟು ಹಣವನ್ನು ಕೂಡಿಡಿ. ಇದು ನೀವು ವೃದ್ಧಾಪ್ಯದಲ್ಲಿ ಇನ್ನೊಬ್ಬರ ಮುಂದೆ ಕೈ ಚಾಚುವುದನ್ನು ತಪ್ಪಿಸುತ್ತದೆ, ನೆಮ್ಮದಿಯ, ಸ್ವಾಭಿಮಾನದ ಜೀವನ ನಡೆಸಲಲು ಅನುವು ಮಾಡಿಕೊಡುತ್ತದೆ.

ನಿಮ್ಮ ಆರೋಗ್ಯದ ಬಗ್ಗೆ ಯಾವಾಗಲೂ ವಿಶೇಷ ಕಾಳಜಿ ವಹಿಸಿ: ನಮ್ಮ ಯೌವನದಲ್ಲಿ, ಆರೋಗ್ಯದ ಬಗ್ಗೆ ತುಂಬಾನೇ ಕಾಳಜಿ ವಹಿಸಬೇಕು ಅದಕ್ಕಾಗಿ ದೈಹಿಕ ವ್ಯಾಯಾಮ ಮಾಡಬೇಕು, ಸಮತೋಲಿತ, ಆರೋಗ್ಯಕರ ಆಹಾರವನ್ನು ಸೇವನೆ ಮಾಡಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಇಂದು ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸಿದರೆ ವೃದ್ಧಾಪ್ಯದಲ್ಲಿ ಆಸ್ಪತ್ರೆಯಲ್ಲೇ ಜೀವನವನ್ನು ಕಳೆಯಬೇಕಾಗುತ್ತದೆ ಎಚ್ಚರ.

ಇದನ್ನೂ ಓದಿ: ಗುಣಗಳು ವ್ಯಕ್ತಿಗೆ ಯಶಸ್ಸು, ಗೌರವವನ್ನು ತಂದುಕೊಡುತ್ತದೆ

ನಿಮ್ಮ ಮಕ್ಕಳಿಗೆ ಒಳ್ಳೆಯ ಮೌಲ್ಯಗಳನ್ನು ಕಲಿಸಿ: ನಿಮ್ಮ ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಅವರನ್ನೇ ಆಸ್ತಿ ಮಾಡಿ. ಒಳ್ಳೆಯ ಸಂಸ್ಕಾರಗಳನ್ನು ಕಲಿಸಿ. ಇಂತಹ ಮಕ್ಕಳು ಖಂಡಿತವಾಗಿಯೂ ಕೊನೆಗಾಲದಲ್ಲಿ ನಿಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಬರೀ ವಿದ್ಯೆ ಕಲಿಸಿ, ಸಂಸ್ಕಾರ, ಹೆತ್ತವರ ಮೌಲ್ಯ ಏನೆಂಬುದನ್ನು ಕಲಿಸದಿದ್ದರೆ, ಅಂತಹ ಮಕ್ಕಳಿಂದ ಕೊನೆಗಾದಲ್ಲಿ ಬರಿ ನೋವನ್ನೇ ತಿನ್ನಬೇಕಾಗುತ್ತದೆ. ಆದ್ದರಿಂದ ಮುಖ್ಯವಾಗಿ ಮಕ್ಕಳಿಗೆ ಒಳ್ಳೆಯ ಮೌಲ್ಯಗಳನ್ನು ಕಲಿಸುತ್ತ ಗಮನ ನೀಡಿ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ.

ಧಾರ್ಮಿಕ ಯಾರ್ಯ ಮತ್ತು ದಾನ, ಸದ್ಗುಣ:  ಯೌವನದಲ್ಲಿ ಮಾಡುವ ದಾನ ಮತ್ತು ಒಳ್ಳೆಯ ಕಾರ್ಯಗಳು ಸಮಾಜದಲ್ಲಿ ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ. ಇದು ನಿಮಗೆ ಸಂತೋಷವನ್ನು ನೀಡುವುದು ಮಾತ್ರವಲ್ಲ ಕೊನೆಗಾಲದಲ್ಲಿ ಈ ದಾನ ಧರ್ಮ ಒಂದಲ್ಲಾ ಒಂದು ರೀತಿಯಲ್ಲಿ ನಿಮ್ಮ ಸಹಾಯಕ್ಕೆ ಬರುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಆದ್ದರಿಂದ ಒಳ್ಳೆಯ ಕಾರ್ಯಗಳನ್ನು ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ