AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti : ಗಂಡ ಹೆಂಡತಿ ಸಂಬಂಧವನ್ನು ಹಾಳು ಮಾಡುವ ವಿಚಾರಗಳಿವು

ಯಾವ ಸಂಬಂಧಗಳಲ್ಲಿ ಮನಸ್ತಾಪ ಹಾಗೂ ಜಗಳಗಳು ಇಲ್ಲ ಹೇಳಿ,.ಆದರೆ ಜಗಳವೇ ಜೀವನವಾಗಿಬಿಟ್ಟರೆ ನೆಮ್ಮದಿಗೆ ಜಾಗವಿಲ್ಲ. ಆದರೆ ಮುನಿಸು ಇದ್ದಲ್ಲಿ ಪ್ರೀತಿ ಹೆಚ್ಚಾಗುತ್ತದೆ ಎನ್ನಲಾಗುತ್ತದೆ. ಗಂಡ ಹೆಂಡತಿ ಸಂಬಂಧವು ಇದಕ್ಕೆ ಹೊರತಾಗಿಲ್ಲ. ಸಂಗಾತಿಗಳಿಬ್ಬರ ನಡುವೆ ಬಾಂಧವ್ಯವನ್ನು ಈ ಸಣ್ಣ ಪುಟ್ಟ ವಿಚಾರಗಳನ್ನು ಹಾಳು ಮಾಡುತ್ತವೆ. ಇವುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕೆಂದು ಚಾಣಕ್ಯನು ತಿಳಿಸುತ್ತಾನೆ.

Chanakya Niti : ಗಂಡ ಹೆಂಡತಿ ಸಂಬಂಧವನ್ನು ಹಾಳು ಮಾಡುವ ವಿಚಾರಗಳಿವು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Sep 28, 2024 | 5:42 PM

Share

ಸಂಬಂಧಗಳು ಬಹಳ ಸೂಕ್ಷ್ಮವಾದುದು. ಯಾವುದೇ ಸಂಬಂಧಗಳಿರಲಿ ಅದನ್ನು ಬಹಳ ಕಾಳಜಿಯುತವಾಗಿ ನಿಭಾಯಿಸಿಕೊಂಡು ಹೋಗಬೇಕು. ಕೆಲವೊಮ್ಮೆ ನಮ್ಮ ವರ್ತನೆ ಹಾಗೂ ನಡವಳಿಕೆಯಿಂದಲೇ ಸಂಬಂಧಗಳು ಹಾಳಾಗುತ್ತದೆ. ಅದರಲ್ಲಿಯೂ ಈ ದಂಪತಿಗಳ ನಡುವೆ ವೈಮನಸ್ಸು ಮೂಡಲು ಹಾಗೂ ಸಂಬಂಧವು ಹಾಳಾಗಲು ಈ ಕೆಲವು ಅಂಶಗಳು ಕಾರಣವಾಗುತ್ತದೆ. ಹೀಗಾಗಿ ಸತಿಪತಿಗಳಿಬ್ಬರೂ ಈ ಕೆಲವು ವಿಷಯಗಳಲ್ಲಿ ಬದಲಾವಣೆ ಮಾಡಿಕೊಂಡು ಜೊತೆಗೆ ಬಾಳುವುದು ಸಂಬಂಧವನ್ನು ಗಟ್ಟಿಯಾಗಿಸುತ್ತದೆ.

  • ಸಣ್ಣ ಪುಟ್ಟ ವಿಷಯಕ್ಕೂ ಕೋಪಿಸುವುದು : ಚಾಣಕ್ಯ ನೀತಿಯ ಪ್ರಕಾರ, ಕೋಪವು ಎಲ್ಲರಿಗೂ ಕೆಟ್ಟದು. ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧದಲ್ಲಿ ಕೋಪವು ಹಾನಿಕಾರಕವೆಂದು ಹೇಳಿದ್ದಾನೆ. ಸಂಗಾತಿಗಳಿಬ್ಬರೂ ಕೋಪಗೊಂಡಾಗ ಇಬ್ಬರಿಗೂ ಒಳ್ಳೆಯದು ಮತ್ತು ಕೆಟ್ಟದ್ದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಸಣ್ಣ ವಿಷಯಗಳು ವೈವಾಹಿಕ ಜೀವನದಲ್ಲಿ ದೊಡ್ಡ ತಿರುವು ತೆಗೆದುಕೊಳ್ಳುತ್ತದೆ. ಹೀಗಾಗಿ ಗಂಡ ಹೆಂಡತಿಯರಿಬ್ಬರೂ ದೂರವಾಗುವ ಸನ್ನಿವೇಶವು ಎದುರಾಗುತ್ತದೆ.
  • ಒಬ್ಬರನ್ನೊಬ್ಬರು ಗೌರವಿಸದಿರುವುದು: ಪ್ರತಿ ಸಂಬಂಧದಲ್ಲೂ ಗೌರವ ಬಹಳ ಮುಖ್ಯ. ಚಾಣಕ್ಯ ನೀತಿಯ ಪ್ರಕಾರ, ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ಪರಸ್ಪರ ಗೌರವವು ನೀಡುವುದು ಅವಶ್ಯಕ. ಸಂಬಂಧದಲ್ಲಿ ಗೌರವವನ್ನು ನೀಡದೇ ಹೋದಲ್ಲಿ ವೈವಾಹಿಕ ಜೀವನವು ಹಾಳಾಗುವ ಸಾಧ್ಯತೆಯೇ ಹೆಚ್ಚು ಎನ್ನುತ್ತಾನೆ ಚಾಣಕ್ಯ.
  • ಸಂವಹನದ ಕೊರತೆ : ಪತಿ-ಪತ್ನಿಯರಿಬ್ಬರೂ ಸುಖ-ದುಃಖದಲ್ಲಿ ಪಾಲುದಾರರಾಗಿದ್ದು, ಪರಸ್ಪರ ಮಾತನಾಡುವುದು ಬಹಳ ಮುಖ್ಯ. ಒಬ್ಬರು ಏನನ್ನಾದರೂ ಮನಸ್ಸಿನಲ್ಲಿಟ್ಟುಕೊಂಡರೆ ತಪ್ಪು ತಿಳುವಳಿಕೆ ಹೆಚ್ಚಾಗುತ್ತದೆ. ನೀವು ಪರಸ್ಪರ ಮಾತನಾಡದಿದ್ದರೆ ನಿಮ್ಮ ಜೀವನದಲ್ಲಿ ಸಂಬಂಧದಲ್ಲಿ ಬಿರುಕು ಉಂಟಾಗುತ್ತದೆ.
  • ಸತ್ಯವನ್ನು ಮರೆಮಾಚುವುದು : ಪತಿ-ಪತ್ನಿಯರ ನಡುವಿನ ಸಂಬಂಧವು ತುಂಬಾ ಸೂಕ್ಷ್ಮವಾಗಿದೆ ಎಂದು ಹೇಳಲಾಗುತ್ತದೆ. ಎಂದಿಗೂ ಕೂಡ ಜೀವನ ಸಂಗಾತಿಯಿಂದ ಸತ್ಯವನ್ನು ಮರೆಮಾಡಿ ಸುಳ್ಳು ಹೇಳುವುದು ಸರಿಯಲ್ಲ. ನೀವು ಮುಚ್ಚಿಟ್ಟ ಸತ್ಯವು ಮೂರನೇ ವ್ಯಕ್ತಿಯಿಂದ ತಿಳಿದರೆ ಸಂಗಾತಿಯ ಮೇಲಿದ್ದ ನಂಬಿಕೆಯೂ ಕಡಿಮೆಯಾಗುತ್ತದೆ. ಇದರಿಂದ ದಾಂಪತ್ಯ ಜೀವನವು ಹಾಳಾಗುವ ಸಾಧ್ಯತೆಯಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?