AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಚಾಣಕ್ಯರ ಪ್ರಕಾರ ಹಣ, ಶ್ರೀಮಂತಿಕೆ ಪಡೆಯಲು ಈ ಅಭ್ಯಾಸಗಳನ್ನು ನೀವು ತ್ಯಜಿಸಲೇಬೇಕು

ನಮ್ಮ ಉನ್ನತಿ, ಅವನತಿಗಳಿಗೆ ನಮ್ಮ ಅಭ್ಯಾಸಗಳು ಕೂಡ ಮುಖ್ಯ ಕಾರಣವಾಗುತ್ತವೆ. ಹೌದು ನಾವು ಯಾರ ಸಹವಾಸದಲ್ಲಿದ್ದೇವೆ, ಕೆಟ್ಟ ಚಟಗಳು ಇವೆಲ್ಲವೂ ಕೂಡ ನಮ್ಮ ಮೇಲೆ ಸಾಕಷ್ಟು ಪರಿಣಾಮವನ್ನು ಬೀರುತ್ತದೆ. ಅದಕ್ಕಾಗಿಯೇ ಕೆಟ್ಟ ಅಭ್ಯಾಸಗಳನ್ನು ಬಿಟ್ಟುಬಿಡಬೇಕೆಂದು ಹಲವರು ಹೇಳುತ್ತಾರೆ. ಅದರಲ್ಲೂ ಈ ನಾಲ್ಕು ಅಭ್ಯಾಸಗಳಿದ್ದರೆ ಎಂದಿಗೂ ಹಣ, ಶ್ರೀಮಂತಿಕೆ ಗಳಿಸಲು ಸಾಧ್ಯವೇ ಇಲ್ಲ ಎಂದು ಚಾಣಕ್ಯರು ಹೇಳುತ್ತಾರೆ. ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ಚಾಣಕ್ಯರ ಪ್ರಕಾರ ಹಣ, ಶ್ರೀಮಂತಿಕೆ ಪಡೆಯಲು ಈ ಅಭ್ಯಾಸಗಳನ್ನು ನೀವು ತ್ಯಜಿಸಲೇಬೇಕು
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on:Nov 22, 2025 | 9:41 AM

Share

ಜೀವನದಲ್ಲಿ ಸಾಕಷ್ಟು ಹಣ (money) ಗಳಿಸಬೇಕು, ಶ್ರೀಮಂತಿಕೆ ಗಳಿಸಬೇಕು ಎಂದು ಎಲ್ಲರೂ ಬಯಸುತ್ತಾರೆ. ಇವೆಲ್ಲವನ್ನೂ ಗಳಿಸಲು ಕಠಿಣ ಪರಿಶ್ರಮದ ಜೊತೆಗೆ ಉತ್ತಮ ಗುಣಗಳನ್ನು ಸಹ ಅಳವಡಿಸಿಕೊಳ್ಳಬೇಕಾಗುತ್ತದೆ. ಏಕೆಂದರೆ ನಮ್ಮ ಉನ್ನತಿ ಮತ್ತು ಅವನತಿಗೆ ನಮ್ಮಲ್ಲಿರುವ ಗುಣಗಳು, ಅಭ್ಯಾಸಗಳು ಕೂಡ ಮುಖ್ಯ ಕಾರಣವಾಗುತ್ತದೆ. ಅದಕ್ಕಾಗಿಯೇ ಹಿರಿಯರು ಕೆಟ್ಟವರ ಸಹವಾಸ ಮಾಡಬೇಕು, ಕೆಟ್ಟ ಚಟಗಳಿಗೆ ದಾಸರಾಗಬೇಡಿ ಎಂದು ಹೇಳುವುದು. ಇದರ ಜೊತೆಗೆ ಈ ಕೆಲವು ಅಭ್ಯಾಸಗಳನ್ನು ಹೊಂದಿರುವವರು ಜೀವನದಲ್ಲಿ ಎಂದಿಗೂ ಶ್ರೀಮಂತಿಕೆ, ಹಣ ಗಳಿಸಲು ಸಾಧ್ಯವಿಲ್ಲ ಅವರು ಬಡವರಾಗಿಯೇ ಉಳಿದು ಬಿಡುತ್ತಾರೆ, ಹಾಗಾಗಿ ಆಭ್ಯಾಸಗಳನ್ನು ತಕ್ಷಣ ತ್ಯಜಿಸಿ ಎಂದು ಚಾಣಕ್ಯರು ಸಲಹೆ ನೀಡಿದ್ದಾರೆ. ಹಾಗಿದ್ದರೆ ಶ್ರೀಮಂತಿಕೆ ಗಳಿಸಲು ಯಾವೆಲ್ಲಾ ಅಭ್ಯಾಸಗಳನ್ನು ತ್ಯಜಿಸಲೇಬೇಕು ಎಂಬುದನ್ನು ನೋಡೋಣ ಬನ್ನಿ.

ಶ್ರೀಮಂತಿಕೆ ಗಳಿಸಲು ಯಾವೆಲ್ಲಾ ಅಭ್ಯಾಸಗಳನ್ನು ತ್ಯಜಿಸಬೇಕು ಗೊತ್ತಾ?

ಹಣ ಖರ್ಚು ಮಾಡುವ ಅಭ್ಯಾಸ: ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡುವ ಅಭ್ಯಾಸವು ವ್ಯಕ್ತಿಯನ್ನು ಬಡವನನ್ನಾಗಿ ಮಾಡಬಹುದು. ಒಬ್ಬ ವ್ಯಕ್ತಿಯು ಅನಗತ್ಯವಾಗಿ ಹಣವನ್ನು ಖರ್ಚು ಮಾಡುತ್ತಲೇ ಇದ್ದರೆ, ಗಳಿಸಿದ ನಂತರವೂ ಅವನ ಜೇಬು ಯಾವಾಗಲೂ ಖಾಲಿಯಾಗಿರುತ್ತದೆ. ಆಚಾರ್ಯ ಚಾಣಕ್ಯ ಪ್ರಕಾರ, ಒಬ್ಬ ವ್ಯಕ್ತಿ ಯಾವಾಗಲೂ ತನ್ನ ಆದಾಯದ ಸ್ವಲ್ಪ ಭಾಗವನ್ನು ತನ್ನ ಭವಿಷ್ಯಕ್ಕಾಗಿ ಉಳಿಸಬೇಕು. ಅಗತ್ಯವಿರುವ ವಸ್ತುಗಳಿಗೆ ಮಾತ್ರ ಹಣವನ್ನು ಖರ್ಚು ಮಾಡಬೇಕು. ಈ ಅಭ್ಯಾಸದಿಂದ ವ್ಯಕ್ತಿಯು ಎಂದಿಗೂ ಹಣದ ಕೊರತೆಯನ್ನು ಎದುರಿಸುವುದಿಲ್ಲ.

ಅನಗತ್ಯವಾಗಿ ಸಾಲ ಪಡೆಯುವ ಅಭ್ಯಾಸ: ಚಾಣಕ್ಯ ನೀತಿಯ ಪ್ರಕಾರ, ಯಾರೂ ಅನಗತ್ಯವಾಗಿ ಯಾರಿಂದಲೂ ಹಣವನ್ನು ಸಾಲ ಪಡೆಯಬಾರದು. ಒಬ್ಬ ವ್ಯಕ್ತಿಯಿಂದ ಹಣವನ್ನು ಎರವಲು ಪಡೆಯುವ ಅಭ್ಯಾಸವು ಅವನನ್ನು ಬಡವನನ್ನಾಗಿ ಮಾಡುವುದಲ್ಲದೆ, ಅವನಿಗೆ ಸಾಲದ ಹೊರೆಯನ್ನೂ ತರುತ್ತದೆ. ಅಂತಹ ಅಭ್ಯಾಸಗಳನ್ನು ಹೊಂದಿರುವ ಜನರು ಯಾವಾಗಲೂ ಬಡತನದಲ್ಲಿಯೇ ಇರುತ್ತಾರೆ. ಅವರು ಎಂದಿಗೂ ಸಂಪತ್ತನ್ನು ಗಳಿಸಲು ಸಾಧ್ಯವಾಗುವುದಿಲ್ಲ. ಸಂಪೂರ್ಣ ಆದಾಯವನ್ನು ಸಾಲ ತೀರಿಸಲು ಖರ್ಚು ಮಾಡಲಾಗುತ್ತದೆ.

ನಿರಂತರ ತಿನ್ನುವ ಅಭ್ಯಾಸ: ಹೊಟ್ಟೆಬಾಕ ಸ್ವಭಾವದ ವ್ಯಕ್ತಿಯು ತಿನ್ನುವುದರ ಮೇಲೆ ಮಾತ್ರ ಗಮನಹರಿಸುತ್ತಾನೆ ಮತ್ತು ಯಾವಾಗಲೂ ತಿನ್ನುವ ಈ ಅಭ್ಯಾಸವು ಅವನಿಗೆ ಸಂಪತ್ತನ್ನು ಸಂಗ್ರಹಿಸಲು ಅವಕಾಶ ನೀಡುವುದಿಲ್ಲ, ಆತ ಯಾವಾಗಲೂ ತಿನ್ನುವುದರ ಕಡೆಗೆಯೇ ಗಮನಹರಿಸುತ್ತಾನೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ.

ಇದನ್ನೂ ಓದಿ: ಚಾಣಕ್ಯರ ಪ್ರಕಾರ ನಿಮ್ಮ ಜೀವನದಲ್ಲಿ ಕೆಟ್ಟ ಸಮಯ ಬರುತ್ತಿದೆ ಎಂಬುದರ ಮುನ್ಸೂಚನೆಗಳಿವು

ಸೋಮಾರಿತನ: ಜೀವನದಲ್ಲಿ ಎಂದಿಗೂ ಆರ್ಥಿಕ ತೊಂದರೆಗಳು ಬರಬಾರದೆಂದರೆ  ನೀವು ಸೋಮಾರಿತನವನ್ನು ತ್ಯಜಿಸಬೇಕು. ಏಕೆಂದರೆ ಸೋಮಾರಿ ವ್ಯಕ್ತಿಯು ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಾಗುವುದಿಲ್ಲ. ಅವನು ಬಡವನಾಗಿಯೇ ಉಳಿಯುತ್ತಾನೆ. ಹಾಗಾಗಿ ಹಣ, ಶ್ರೀಮಂತಿಕೆ ಗಳಿಸಲು ಬಯಸಿದರೆ ನೀವು ಸೋಮಾರಿತವನ್ನು ಬಿಟ್ಟು ಗುರಿ ಸಾಧಿಸುವ ಕಡೆಗೆ ಗಮನಹರಿಸಬೇಕು ಎನ್ನುತ್ತಾರೆ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 am, Sat, 22 November 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ