AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಈ ನಾಲ್ಕು ಕೆಲಸಗಳನ್ನು ಮಾಡುವ ಜನರಿಗೆ ಎಂದಿಗೂ ಆರ್ಥಿಕ ಸಂಕಷ್ಟ ಎದುರಾಗುವುದಿಲ್ಲವಂತೆ

ಪ್ರತಿಯೊಬ್ಬರೂ ಸಹ ನಾನು ಹಣ ಸಂಪಾದನೆ ಮಾಡಬೇಕು, ಜೀವನದಲ್ಲಿ ಶ್ರೀಮಂತಿಕೆ, ಯಶಸ್ಸು ಗಳಿಸಬೇಕು ಎಂದು ಬಯಸುತ್ತಾರೆ. ಇದಕ್ಕಾಗಿ ಕಠಿಣ ಪರಿಶ್ರಮವನ್ನೂ ಪಡುತ್ತಾರೆ. ನೀವು ಸಹ ಜೀವನದಲ್ಲಿ ಎಂದಿಗೂ ಬಡತನ ಎದುರಾಗಬಾರದು, ಶ್ರೀಮಂತಿಕೆ ಲಭಿಸಬೇಕು ಎಂದು ಬಯಸುತ್ತಿದ್ದೀರಾ? ಹಾಗಿದ್ರೆ ಚಾಣಕ್ಯರು ಹೇಳಿರುವ ಈ ನಾಲ್ಕು ಕೆಲಸಗಳನ್ನು ತಪ್ಪದೆ ಮಾಡಿ. ಈ ಕೆಲಸಗಳನ್ನು ಮಾಡುವವರು ಜೀವನದಲ್ಲಿ ಎಂದಿಗೂ ಬಡತನವನ್ನು ಎದುರಿಸುವುದಿಲ್ಲವಂತೆ, ಹಾಗಿದ್ರೆ ಶ್ರೀಮಂತಿಕೆ ಗಳಿಸಲು ಮಾಡಬೇಕಾದ ಆ ಕೆಲಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ಈ ನಾಲ್ಕು ಕೆಲಸಗಳನ್ನು ಮಾಡುವ ಜನರಿಗೆ ಎಂದಿಗೂ ಆರ್ಥಿಕ ಸಂಕಷ್ಟ ಎದುರಾಗುವುದಿಲ್ಲವಂತೆ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Nov 10, 2025 | 7:07 PM

Share

ಬಡವರಾಗಿ ಹುಟ್ಟುವುದು ತಪ್ಪಲ್ಲ, ಆದರೆ ಬಡವರಾಗಿ ಸಾಯುವುದು ತಪ್ಪು ಎಂಬ ಮಾತೊಂದಿದೆ. ಇದಕ್ಕಾಗಿಯೇ ಜೀವನದಲ್ಲಿ ಹಣ ಸಂಪಾದನೆ ಮಾಡಲು, ಶ್ರೀಮಂತಿಕೆಯನ್ನು ಗಳಿಸಲು ಅನೇಕ ಕಠಿಣ ಶ್ರಮ ಪಡುತ್ತಾರೆ. ಇದರ ಜೊತೆಗೆ ಆಚಾರ್ಯ ಚಾಣಕ್ಯರು (Acharya Chanakya)  ಹೇಳಿರುವ ಈ ಒಂದಷ್ಟು ತತ್ವಗಳನ್ನು ಪಾಲಿಸುವ ಜನರು ಜೀವನದಲ್ಲಿ ಎಂದಿಗೂ ಆರ್ಥಿಕ ಸಂಕಷ್ಟವನ್ನು ಎದುರಿಸುವುದಿಲ್ಲವಂತೆ. ಹೌದು ಚಾಣಕ್ಯರು ಹೇಳಿರುವ ಈ ತತ್ವಗಳು ವ್ಯಕ್ತಿಯನ್ನು ಆರ್ಥಿಕವಾಗಿ ಸಮೃದ್ಧಗೊಳಿಸುವುದಲ್ಲದೆ, ಮಾನಸಿಕವಾಗಿ ಮತ್ತು ಸಾಮಾಜಿಕವಾಗಿಯೂ ಸಮೃದ್ಧಗೊಳಿಸುತ್ತದೆ. ಹಾಗಿದ್ದರೆ ಶ್ರೀಮಂತಿಕೆ, ಯಶಸ್ಸು ಗಳಿಸಲು ಪಾಲಿಸಬೇಕಾದ ಆ ನಿಯಮಗಳು ಯಾವುವು ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

ಶ್ರೀಮಂತಿಕೆ, ಯಶಸ್ಸು ಗಳಿಸಲು ನೀವು ಮಾಡಬೇಕಾದ ಕೆಲಸಗಳಿವು:

ಸಮಯಕ್ಕೆ ಗೌರವ ನೀಡುವುದು: ಸಮಯವನ್ನು ಗೌರವಿಸುವವರಿಗೆ ಮಾತ್ರ ಯಶಸ್ಸಿನ ಹಕ್ಕಿದೆ ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಒಬ್ಬ ವ್ಯಕ್ತಿಯು ಪ್ರತಿಯೊಂದು ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿದರೆ, ಆತ ಜೀವನದಲ್ಲಿ ಎಂದಿಗೂ ಹಿಂದೆ ಉಳಿಯುವುದಿಲ್ಲ. ಕಠಿಣ ಪರಿಶ್ರಮಿ, ಸಮಯಕ್ಕೆ ಗೌರ ನೀಡುವ ವ್ಯಕ್ತಿ ಎಂದಿಗೂ ಬಡವನಾಗಿಯೂ ಉಳಿಯುವುದಿಲ್ಲ. ಆದ್ದರಿಂದ ಸಮಯವನ್ನು ಬುದ್ಧಿವಂತಿಕೆಯಿಂದ ಸರಿಯಾದ ರೀತಿಯಲ್ಲಿ ಬಳಸಲು ಕಲಿಯಿರಿ ಎನ್ನುತ್ತಾರೆ ಚಾಣಕ್ಯ.

ಜ್ಞಾನ ಸಂಪಾದನೆ: ಆಚಾರ್ಯ ಚಾಣಕ್ಯರು ಹೇಳುವಂತೆ ವ್ಯಕ್ತಿಯ ದೊಡ್ಡ ಸಂಪತ್ತು ಅವನ ಜ್ಞಾನ. ಒಬ್ಬ ವ್ಯಕ್ತಿಯು ಜ್ನಾನ ಸಂಪಾದಿಸುವುದನ್ನು ಮುಂದುವರೆಸಿದರೆ, ಅವನು ಪ್ರತಿಯೊಂದು ಪರಿಸ್ಥಿತಿಯಲ್ಲೂ ತನ್ನನ್ನು ತಾನು ನಿಭಾಯಿಸಿಕೊಳ್ಳಲು ಕಲಿಯುತ್ತಾನೆ. ಅದು ವ್ಯವಹಾರವಾಗಿರಲಿ ಅಥವಾ ಉದ್ಯೋಗವಾಗಿರಲಿ, ಜ್ಞಾನವಿರುವ ವ್ಯಕ್ತಿಯು ಜೀವನದ ಪ್ರತಿ ಹಂತದಲ್ಲೂ ಮುಂದುವರಿಯುತ್ತಲೇ ಇರುತ್ತಾನೆ. ಬುದ್ಧಿವಂತಿಕೆ ಮತ್ತು ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಯು ಯಾವುದೇ ಕಠಿಣ ಪರಿಸ್ಥಿತಿಯನ್ನು ಸರಿಯಾದ ರೀತಿಯಲ್ಲಿ ಎದುರಿಸಿ ಯಶಸ್ಸನ್ನು ಸಾಧಿಸಬಹುದು.

ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮ: ಚಾಣಕ್ಯ ನೀತಿಯ ಪ್ರಕಾರ, ನೀವು ಕಷ್ಟಪಟ್ಟು ಕೆಲಸ ಮಾಡದಿದ್ದರೆ, ನೀವು ಜೀವನದಲ್ಲಿ ನಿಜವಾದ ಯಶಸ್ಸನ್ನು ಎಂದಿಗೂ ಸಾಧಿಸಲು ಸಾಧ್ಯವಿಲ್ಲ. ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮವು ಯಶಸ್ಸಿನ ಕೀಲಿಯಾಗಿದೆ. ಒಬ್ಬ ವ್ಯಕ್ತಿಯು ತನ್ನ ಕರ್ತವ್ಯಗಳನ್ನು ಸಮರ್ಪಣಾಭಾವದಿಂದ ನಿರ್ವಹಿಸಿದಾಗ, ಆತ ಸಂಪತ್ತನ್ನು ಗಳಿಸುವುದು ಮಾತ್ರವಲ್ಲದೆ ಗೌರವವನ್ನೂ ಉಳಿಸಿಕೊಳ್ಳುತ್ತಾನೆ. ಆದರೆ ಸೋಮಾರಿ ವ್ಯಕ್ತಿಗಳು ಬಡತನದಲ್ಲಿ ಸಿಲುಕಿರುತ್ತಾರೆ.

ಇದನ್ನೂ ಓದಿ: ಒಂದು ತಪ್ಪಿನಿಂದಾಗಿ, ನೀವು ಗಳಿಸಿದ ಹಣವೇ ನಿಮ್ಮ ವಿನಾಶಕ್ಕೆ ಕಾರಣವಾಗಬಹುದು ಎಚ್ಚರ

ಹಣ ಉಳಿತಾಯ: ಆಚಾರ್ಯ ಚಾಣಕ್ಯರು ಹಣವನ್ನು ಉಳಿತಾಯ ಮಾಡಿ ಮತ್ತು ಅದನ್ನು ಬುದ್ಧಿವಂತಿಕೆಯಿಂದ ಬಳಸಿ ಎಂದು ಹೇಳುತ್ತಾರೆ. ಅನೇಕ ಜನರು ತಮ್ಮ ಬಳಿ ಹಣವಿದ್ದರೆ, ಅದನ್ನು ಸರಿಯಾದ ಜಾಗದಲ್ಲಿ ಹೂಡಿಕೆ ಮಾಡುವ ಬದಲು ಬೇಕಾಬಿಟ್ಟಿ ಖರ್ಚು ಮಾಡುತ್ತಾರೆ. ಈ ರೀತಿ ಮಾಡಿದರೆ ಶ್ರೀಮಂತಿಕೆ ಗಳಿಸಲು ಸಾಧ್ಯವಿಲ್ಲ, ಆದ್ದರಿಂದ ಗಳಿಸಿದ ಹಣವನ್ನು ಸರಿಯಾದ ರೀತಿಯಲ್ಲಿ ಹೂಡಿಕೆ ಮಾಡುವುದು, ಎಷ್ಟು ಖರ್ಚು ಮಾಡಬೇಕು, ಎಷ್ಟು ಉಳಿತಾಯ ಮಾಡಬೇಕು ಎಂಬುದರ ಬಗ್ಗೆ ಸರಿಯಾದ ಜ್ಞಾನವಿರಬೇಕು. ಹಣಕ್ಕೆ ಸಂಬಂಧಿಸಿದ ಈ ಜ್ಞಾನ ಹೊಂದಿದವರು ಎಂದಿಗೂ ಆರ್ಥಿಕ ಸಂಕಷ್ಟವನ್ನು ಎದುರಿಸುವುದಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ