AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಈ ಅಂಶಗಳೇ ಮುಖ್ಯ ಕಾರಣ

ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ಸಲಹೆಗಳನ್ನು ಅನುಸರಿಸಿದರೆ ಗಂಡ ಹೆಂಡತಿ ಸುಖವಾಗಿ ಸಂಸಾರ ಸಾಗಿಸಬಹುದು. ಅದೇ ರೀತಿ ಕೆಲವೊಂದು ವಿಚಾರಗಳು ಗಂಡ ಹೆಂಡತಿಯ ನಡುವಿನ ಸಂಬಂಧವನ್ನು ಹಾಳು ಮಾಡುತ್ತದೆ. ಅದನ್ನು ತಿದ್ದಿ ನಡೆದರೆ ಸುಖಿ ದಾಂಪತ್ಯ ಜೀವನವನ್ನು ನಡೆಸಬಹುದು ಎಂದಿದ್ದಾರೆ. ಹಾಗಾದ್ರೆ ಯಾವ ವಿಷಯಗಳು ದಾಂಪತ್ಯ ಜೀವನ ಹಾಳಾಗಲು ಕಾರಣ ಎಂಬುದನ್ನು ನೋಡೋಣ ಬನ್ನಿ.

Chanakya Niti: ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಈ ಅಂಶಗಳೇ ಮುಖ್ಯ ಕಾರಣ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Feb 21, 2026 | 6:59 PM

Share

ಗಂಡ ಹೆಂಡತಿಯ ಸಂಬಂಧ (relationship) ಎನ್ನುವಂತಹದ್ದು ತುಂಬಾನೇ ಅಮೂಲ್ಯ ಮತ್ತು ವಿಶೇಷವಾದದ್ದು. ಈ ಸಂಬಂಧವನ್ನು ಜೋಪಾನವಾಗಿ ಕಾಪಾಡಿಕೊಳ್ಳುವುದು ತುಂಬಾನೇ ಮುಖ್ಯ, ಇಲ್ಲದಿದ್ದರೆ ಒಡೆದು ಹೋಗುತ್ತದೆ. ಅದರಲ್ಲೂ ಈ ಕೆಲವು ಅಂಶಗಳು ವಿಚ್ಛೇದನಕ್ಕೂ ಕಾರಣವಾಗಬಹುದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಅವುಗಳನ್ನು ಸರಿಪಡಿಸಿಕೊಂಡರೆ ಖಂಡಿತವಾಗಿಯೂ ಸಂಸಾರ ಹಾಲು ಜೇನಿನಂತಿರುತ್ತದೆ ಎಂದು ಹೇಳಿದ್ದಾರೆ. ಹಾಗಿದ್ದರೆ ಯಾವ ಅಂಶಗಳು ಗಂಡ ಹೆಂಡತಿಯ ಸಂಬಂಧದ ನಡುವೆ ಬಿರುಕು ಮೂಡಲು ಕಾರಣವಾಗುತ್ತದೆ ಎಂಬುದನ್ನು ನೋಡೋಣ ಬನ್ನಿ.

ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಕಾರಣ ಈ ಅಂಶ:

ಸಂವಹನದ ಕೊರತೆ: ಸಂಬಂಧವನ್ನು ಬಲಪಡಿಸುವಲ್ಲಿ ಸಂವಹನ ಬಹುಮುಖ್ಯ ಪಾತ್ರ ವಹಿಸುತ್ತದೆ. ಸಣ್ಣಪುಟ್ಟ ಜಗಳಗಳಾದಾಗ ಮಾತು ಬಿಟ್ಟು ಕುಳಿತರೆ ಅಂತಹ ಸಂದರ್ಭಗಳಲ್ಲಿ ಸಂಬಂಧ ಮತ್ತಷ್ಟು ದೂರವಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಪತಿಪತ್ನಿಯರು ಮಾತು ಬಿಡಬಾರದು.

ಸ್ವಾರ್ಥ ಮನೋಭಾವನೆ: ಗಂಡ ತನ್ನ ಬಗ್ಗೆ ಮಾತ್ರ, ಹೆಂಡತಿ ಆಕೆಯ ಬಗ್ಗೆ ಮಾತ್ರ ಯೋಚಿಸಿದರೆ, ಗಂಡನ ಬಗ್ಗೆ ಪ್ರೀತಿ ತೋರದೆ ಸ್ವಾರ್ಥ ಭಾವನೆಯಿಂದ ಜೀವನ ನಡೆಸಿದರೆ, ಅಂತಹ ಸಂಬಂಧ ಎಂದಿಗೂ ಶಾಶ್ವತವಾಗಿ ಉಳಿಯುವುದಿಲ್ಲ. ಹಾಗಾಗಿ ಸಂಬಂಧದಲ್ಲಿ ಸ್ವಾರ್ಥ ಭಾವನೆ ಇರಬಾರದು.

ಅಹಂಕಾರ: ನಾನೇ ಸರಿ, ನಾನು ಮಾಡಿದ್ದೆಲ್ಲವೂ ಸರಿ ಎಂಬ ಅಹಂಕಾರ ಮನೋಭಾವನೆ ಇದ್ದರೆ ಆ ಸಂಬಂಧ ಹಾಳಾಗುತ್ತದೆ. ಹಾಗಾಗಿ ಗಂಡ ಹೆಂಡತಿಯ ನಡುವೆ ನಾನೇ ಸರಿ ಎಂಬ ಅಹಂಕಾರ ಇರಬಾರದು.

ಗುಟ್ಟುಗಳ ಬಗ್ಗೆ ಇನ್ನೊಬ್ಬರ ಬಳಿ ಹೇಳುವುದು: ಪ್ರತಿಯೊಬ್ಬ ವ್ಯಕ್ತಿಗೂ ಸಾಮರ್ಥ್ಯ ಮತ್ತು ದೌರ್ಬಲ್ಯ ಇದ್ದೇ ಇರುತ್ತದೆ. ಹೀಗಿರುವಾಗ ಗಂಡ ಹೆಂಡತಿಯ ಹಾಗೂ ಪತಿ ತನ್ನ ಪತ್ನಿಯ ದೌರ್ಬಲ್ಯಗಳನ್ನು ಇತರೊಂದಿಗೆ ಹಂಚಿಕೊಳ್ಳಬಾರದು.  ಹಾಗೆ ಮಾಡುವುದರಿಂದ ನಿಮ್ಮ ಸಂಬಂಧದಲ್ಲಿ ಬಿರುಕು ಉಂಟಾಗುತ್ತದೆ.

ಇದನ್ನೂ ಓದಿ: ಕೆಲವು ಸಂದರ್ಭಗಳಲ್ಲಿ ಮೌನವಾಗಿರುವುದೇ ಉತ್ತಮ

ಕೋಪ: ಪ್ರತಿಯೊಂದು ವಿಷಯಕ್ಕೂ ಕೋಪ ಮಾಡಿಕೊಳ್ಳಬಾರದು. ಏಕೆಂದರೆ ಕೋಪವು ಸಂಘರ್ಷ ಮತ್ತು ಅಪಶ್ರುತಿಗೆ ಕಾರಣವಾಗುತ್ತದೆ. ಹಾಗಾಗಿ ಗಂಡ ಹೆಂಡತಿಯ ನಡುವೆ ಕೋಪ ಇರಬಾರದು.

ಅಗೌರವ ತೋರುವುದು: ಗಂಡ-ಹೆಂಡತಿಯ ಸಂಬಂಧದಲ್ಲಿ ಪ್ರೀತಿಯಷ್ಟೇ ಗೌರವವೂ ಮುಖ್ಯ. ಒಬ್ಬರನ್ನೊಬ್ಬರು ಅಗೌರವ ತೋರಿಸಿದರೆ, ಅಂತಹ ಸಂಬಂಧ ಹೆಚ್ಚು ಕಾಲ ಉಳಿಯುವುದಿಲ್ಲ.

ಸುಳ್ಳು ಹೇಳುವುದು: ಗಂಡ ಹೆಂಡತಿ ನಡುವಿನ ಸಂಬಂಧವು ನಂಬಿಕೆಯ ಮೇಲೆ ನಿಂತಿದೆ. ಹೀಗಿರುವಾಗ ಒಬ್ಬರಿಗೊಬ್ಬರು ಸುಳ್ಳು ಹೇಳಿದರೆ, ಪರಸ್ಪರ ಏನನ್ನಾದರೂ ಮರೆಮಾಡಿದರೆ ಅದು ಸಂಬಂಧವನ್ನೇ ನಾಶ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ