AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಗಂಡನಾದವನು ತನ್ನ ಹೆಂಡತಿಯ ಬಳಿ ಆಡುವ ಈ ಮಾತುಗಳು ಸುಂದರ ಸಂಬಂಧವನ್ನೇ ಹಾಳು ಮಾಡುತ್ತದೆ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಯಶಸ್ಸು, ಶ್ರೀಮತಿಂಕೆ ಮಾತ್ರವಲ್ಲ ಗಂಡ ಹೆಂಡತಿಯ ಸಂಬಂಧದ ಬಗ್ಗೆಯೂ ಸಾಕಷ್ಟು ವಿಚಾರಗಳನ್ನು ತಿಳಿಸಿದ್ದಾರೆ. ದಾಂಪತ್ಯ ಜೀವನ ಹಾಲು ಜೇನಿನಂತೆ ಇರಲು ಗಂಡ ಹೆಂಡತಿ ಹೇಗಿರಬೇಕು ಎಂಬುದನ್ನೂ ಸಹ ವಿವರಿಸಿದ್ದಾರೆ. ಅದೇ ರೀತಿ ಅವರು ದಾಂಪತ್ಯ ಜೀವನದಲ್ಲಿ ಮಾತುಗಳು ನಿರ್ಣಾಯಕ ಪಾತ್ರವನ್ನು ವಹಿಸುವುದರಿಂದ ಗಂಡ ತನ್ನ ಹೆಂಡತಿಯ ಬಳಿ ಈ ಮಾತುಗಳನ್ನು ಎಂದಿಗೂ ಆಡಬಾರದೆಂದಿದ್ದಾರೆ. ಆ ಮಾತುಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ಗಂಡನಾದವನು ತನ್ನ ಹೆಂಡತಿಯ ಬಳಿ ಆಡುವ ಈ ಮಾತುಗಳು ಸುಂದರ ಸಂಬಂಧವನ್ನೇ ಹಾಳು ಮಾಡುತ್ತದೆ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: May 02, 2026 | 6:54 PM

Share

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಎಂಬ ಮಾತಿನಂತೆ ಕೆಲವೊಂದು ಮಾತುಗಳಿಂದಲೇ ಸಂಬಂಧ ಹಾಳಾಗುತ್ತದೆ. ಹೌದು ಕೆಲವೊಂದು ಕಠೋರ ಮಾತುಗಳು ಸಂಬಂಧದ ಅಡಿಪಾಯವನ್ನೇ ಅಲುಗಾಡಿಸುತ್ತದೆ. ಅದರಲ್ಲೂ ಗಂಡನಾದವನು (Husband) ತನ್ನ ಹೆಂಡತಿಗೆ ಈ ಕೆಲವೊಂದು ಮಾತುಗಳನ್ನಾಡಿದರೆ ಸುಂದರ ದಾಂಪತ್ಯ ಜೀವನವೇ ಹಾಳಾಗಿ ಹೋಗುವ ಸಾಧ್ಯತೆ ಇರುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ದಾಂಪತ್ಯ ಜೀವನದಲ್ಲಿ ಸದಾ ಸಂತೋಷ ನೆಲೆಸಲು, ಗಂಡ ಹೆಂಡತಿ ನೆಮ್ಮದಿಯಿಂದ ಸಂಸಾರ ಸಾಗಿಸಲು ಗಂಡನಾದವನು ಹೆಂಡತಿಯ ಬಳಿ ಯಾವೆಲ್ಲ ಮಾತುಗಳನ್ನು ಆಡಬಾರದು, ಈ ಮಾತುಗಳ ಕಾರಣದಿಂದ ಸಂಸಾರದಲ್ಲಿ ಏನೆಲ್ಲಾ ತೊಂದರೆಗಳು ಉದ್ಭವಿಸುತ್ತದೆ ಎಂಬುದನ್ನು ನೋಡೋಣ ಬನ್ನಿ.

ಹೆಂಡತಿಯ ಬಳಿ ಎಂದಿಗೂ ಈ ಮಾತುಗಳನ್ನಾಡಬೇಡಿ:

ಸಾಮರ್ಥ್ಯ ಮತ್ತು ಸೌಂದರ್ಯವನ್ನು ಪ್ರಶ್ನಿಸುವುದು: ಆಚಾರ್ಯ ಚಾಣಕ್ಯರು ಹೇಳುವಂತೆವ್ಯಕ್ತಿಯ ಆತ್ಮವಿಶ್ವಾಸವೇ ಅವರ ದೊಡ್ಡ ಆಸ್ತಿ. ಗಂಡ ತನ್ನ ಹೆಂಡತಿಯ ನೋಟ, ಅಡುಗೆ ಶೈಲಿ ಅಥವಾ ಮಕ್ಕಳ ಪಾಲನೆಯನ್ನು ಪದೇ ಪದೇ ಟೀಕಿಸಿದರೆ, ಅದು ಅವಳ ಸ್ವಾಭಿಮಾನಕ್ಕೆ ತೀವ್ರ ಹಾನಿ ಮಾಡುತ್ತದೆ. ನಿರಂತರ ಟೀಕೆಗಳು ಹೆಂಡತಿಯ ಮನಸ್ಸನ್ನು ಘಾಸಿ ಮಾಡುತ್ತದೆ ಮತ್ತು  ಮನೆಯಲ್ಲಿ  ತಾನು ಹೊರಗಿನವಳಂತೆ ಭಾವಿಸುವಂತೆ ಮಾಡುತ್ತದೆ, ಇದು ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗಬಹುದು. ಆದ್ದರಿಂದ ಹೆಂಡತಿಯ ಸಾಮರ್ಥ್ಯ ಮತ್ತು ಸೌಂದರ್ಯದ ಬಗ್ಗೆ ಋಣಾತ್ಮಕ ಮಾತುಗಳನ್ನಾಡಬೇಡಿ.

ಇತರ ಮಹಿಳೆಯರೊಂದಿಗೆ ಹೆಂಡತಿಯನ್ನು ಹೋಲಿಸಿ ಮಾತನಾಡುವುದು: ಯಾವುದೇ ಕಾರಣಕ್ಕೂ ಹೆಂಡತಿಯನ್ನು ಬೇರೊಬ್ಬ ಮಹಿಳೆಯೊಂದಿಗೆ ಹೋಲಿಸಿ ಮಾತನಾಡಬೇಡಿ. ಅದು ಸ್ನೇಹಿತರಾಗಿರಲಿ, ಸಂಬಂಧಿಕರಾಗಿರಲಿ ಅಥವಾ ಸೆಲೆಬ್ರಿಟಿಯಾಗಿರಲಿ, ನಿಮ್ಮ ಹೆಂಡತಿಯನ್ನು ಬೇರೆಯವರೊಂದಿಗೆ ಎಂದಿಗೂ ಹೋಲಿಸಬೇಡಿ. ಪ್ರತಿಯೊಬ್ಬ ವ್ಯಕ್ತಿಗೂ ಅವರದೇ ಆದ ವಿಶಿಷ್ಟ ಗುಣಗಳಿರುತ್ತದೆ. ಹಾಗಾಗಿ ಹೋಲಿಕೆ ಮಾಡುವುದರಿಂದ  ನಿಮ್ಮ ಹೆಂಡತಿಯಲ್ಲಿ ಅಭದ್ರತೆಯ ಭಾವನೆಯನ್ನು ಮೂಡಿಸುತ್ತದೆ ಮತ್ತು ಅಸಮಾಧಾನವನ್ನು ಉಂಟುಮಾಡುತ್ತವೆ, ಇದು ನಿಧಾನವಾಗಿ ಆಕೆಗೆ ನಿಮ್ಮ ಮೇಲಿರುವ ಪ್ರೀತಿಯನ್ನು ನಾಶಪಡಿಸುತ್ತದೆ ಎಂದು ಹೇಳಿದ್ದಾರೆ ಚಾಣಕ್ಯ.

ನಿಂದನೀಯ ಪದಗಳ ಬಳಕೆ: ನಿಂದನೀಯ ಪದ ಬಳಕೆ, ನಿನ್ನ ಕೈಯಿಂದ ಯಾವ ಕೆಲಸವನ್ನು ಸರಿಯಾಗಿ ಮಾಡಲು ಸಾಧ್ಯವಿಲ್ಲ ಅಂತೆಲ್ಲಾ ಭಾವನಾತ್ಮಕ ಹಿಂಸೆ ನೀಡಿದರೆ ಸಂಬಂಧ ಹಳಸಿ ಹೋಗುತ್ತದೆ. ಮನೆಯ ಶಾಂತಿ ನೆಮ್ಮದಿಯೂ ಹಾಳಾಗುತ್ತದೆ. ಆದ್ದರಿಂದ ಗಂಡನಾದವನು ಯಾವುದೇ ಕಾರಣಕ್ಕೂ ಹೆಂಡತಿಗೆ ನಿಂದನೀಯ ಪದಗಳಿಂದ ಮಾತನಾಡಬಾರದು.

ಇದನ್ನೂ ಓದಿ: ಪದೇ ಪದೇ ಹಣವನ್ನು ಸಾಲ ಪಡೆಯುವುದರಿಂದ ಏನಾಗುತ್ತದೆ ಗೊತ್ತಾ?

ಅಭಿಪ್ರಾಯಗಳು ಮತ್ತು ತೀರ್ಪುಗಳನ್ನು ನಿರ್ಲಕ್ಷಿಸುವುದು: ದಾಂಪತ್ಯ ಜೀವನದಲ್ಲಿ ಗಂಡ ಹೆಂಡತಿ ಇಬ್ಬರೂ ಸಮಾನರೇ. ಹೀಗಿರುವಾಗ ಗಂಡನು ಹೆಂಡತಿಯ ಆಲೋಚನೆಗಳು, ಭಾವನೆಗಳು ಅಥವಾ ನಿರ್ಧಾರಗಳನ್ನು ನಿರಂತರವಾಗಿ ನಿರ್ಲಕ್ಷಿಸಿದರೆ, ಸಂಬಂಧವು ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ. ಹಾಗಾಗಿ ಗಂಡನಾದವನು ಹೆಂಡತಿಯ ನಿರ್ಧಾರ, ಮಾತುಗಳಿಗೆ ಗೌರವ ನೀಡಬೇಕು.

ವಿಷಾದ ವ್ಯಕ್ತಪಡಿಸುವುದು: ಕೋಪದಲ್ಲಿ ನಿನ್ನನ್ನು ಯಾಕಾದ್ರೂ ಮಾದುವೆಯಾದ್ನೋ, ಮನೆ ಬಿಟ್ಟು ಹೋಗು ಇಂತಹ ಅಪಾಯಕಾರಿ ಮಾತುಗಳನ್ನಾಡುವುದರಿಂದ ಖಂಡಿತವಾಗಿಯೂ ಸಂಬಂಧದಲ್ಲಿ ಬಿರುಕು ಮೂಡುತ್ತದೆ. ಹಾಗಾಗಿ ಎಷ್ಟೇ ಕೋಪಗೊಂಡರೂ ಸರಿ ಗಂಡ ತನ್ನ ಹೆಂಡತಿಯ ಮುಂದೆ ಇಂತಹ ಕಠೋರ ಮಾತುಗಳನ್ನಾಡಬಾರದು. ಚಾಣಕ್ಯರ ಪ್ರಕಾರ, ತಾಳ್ಮೆ, ಪ್ರೀತಿ ವಿಶ್ವಾಸ, ನಂಬಿಕೆ, ಹಿತವಾದ ಮಾತು, ಮಾತಿನ ಮೇಲಿನ ಹಿಡಿತ ಇವೆಲ್ಲವೂ ಗಂಡ ಹೆಂಡತಿಯ ಸಂಬಂಧವನ್ನು ಬಲಪಡಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು