AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಕೆಲಸದ ಸ್ಥಳದಲ್ಲಿ ಗೌರವ, ಪ್ರಗತಿ ಸಾಧಿಸಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಪಾಲಿಸಿ

ಕೆಲಸದ ಸ್ಥಳದಲ್ಲಿ ಗೌರವ ಗಳಿಸಬೇಕು, ವೃತ್ತಿ ಬದುಕಿನಲ್ಲಿ ಯಶಸ್ಸನ್ನು ಗಳಿಸಬೇಕು ಎಂಬ ಕನಸು ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಇದಕ್ಕಾಗಿ ಪ್ರತಿಯೊಬ್ಬರೂ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಕಠಿಣ ಪರಿಶ್ರಮದ ಹೊರತಾಗಿಯೂ ಕೆಲವರಿಗೆ ಕೆಲಸದಲ್ಲಿ ಯಶಸ್ಸು ಎನ್ನುವುದು ಸಿಗುವುದಿಲ್ಲ. ಹೀಗಿರುವಾಗ ಚಾಣಕ್ಯರ ಈ ಕೆಲವೊಂದು ತತ್ವಗಳನ್ನು ಪಾಲಿಸುವ ಮೂಲಕ ವೃತ್ತಿ ಬದುಕಿನಲ್ಲಿ ಯಶಸ್ಸನ್ನು ಗಳಿಸಬಹುದು.

Chanakya Niti: ಕೆಲಸದ ಸ್ಥಳದಲ್ಲಿ ಗೌರವ, ಪ್ರಗತಿ ಸಾಧಿಸಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಪಾಲಿಸಿ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Mar 03, 2026 | 8:41 PM

Share

ವೃತ್ತಿ ಜೀವನದಲ್ಲಿ ಯಶಸ್ಸಿನ  (success) ಮೆಟ್ಟಿಲೇರಬೇಕು ಎಂಬ ಕನಸ್ಸು ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಕೆಲವೊಮ್ಮೆ, ಕಠಿಣ ಪರಿಶ್ರಮದ ಹೊರತಾಗಿಯೂ,  ಅರ್ಹವಾದ ಗೌರವ ಮತ್ತು ಪ್ರಗತಿ ಸಿಗುವುದಿಲ್ಲ. ಯಶಸ್ಸು ಸಾಧಿಸಲು, ಕೆಲಸದ ಸ್ಥಳದಲ್ಲಿ ಗೌರವ ಗಳಿಸಲು ಕೇವಲ ಕಠಿಣ ಪರಿಶ್ರಮ ಸಾಕಾಗುವುದಿಲ್ಲ, ನಿಮ್ಮ ಬುದ್ಧಿವಂತಿಕೆ ಮತ್ತು ಒಂದಷ್ಟು ನಡವಳಿಕೆಗಳನ್ನು ಅಳವಡಿಸಿಕೊಳ್ಳುವುದು ತುಂಬಾ ಮುಖ್ಯ ಎಂದು ಆಚಾರ್ಯ ಚಾಣಕ್ಯರು ಶತಮಾನಗಳ ಹಿಂದೆಯೇ ತಿಳಿಸಿಕೊಟ್ಟಿದ್ದಾರೆ. ನೀವು ಸಹ ಕೆಲಸದಲ್ಲಿ ಯಶಸ್ಸನ್ನು ಗಳಿಸಲು ಬಯಸಿದರೆ ಚಾಣಕ್ಯರ ಈ ಕೆಲವು ರಹಸ್ಯ ಮಂತ್ರಗಳನ್ನು ತಪ್ಪದೆ ಪಾಲಿಸಿ.

ಕೆಲಸದ ಸ್ಥಳದಲ್ಲಿ ಗೌರವ ಗಳಿಸಲು ಪಾಲಿಸಬೇಕಾದ ತತ್ವಗಳು:

ನಮ್ಮ ದೌರ್ಬಲ್ಯವನ್ನು ಯಾರಿಗೂ ಹೇಳಬೇಡಿ: ಆಚಾರ್ಯ ಚಾಣಕ್ಯ ಹೇಳುವಂತೆ, ಒಬ್ಬ ವ್ಯಕ್ತಿಯು ತನ್ನ ದೌರ್ಬಲ್ಯಗಳನ್ನು ಎಂದಿಗೂ ಇತರರಿಗೆ ಬಹಿರಂಗಪಡಿಸಬಾರದು. ನೀವು ಕಚೇರಿಯಲ್ಲಿ ನಿಮ್ಮ ನ್ಯೂನತೆಗಳನ್ನು ಬಹಿರಂಗವಾಗಿ ಹೇಳಿದರೆ, ನಿಮ್ಮ ವಿರೋಧಿಗಳು ಅವುಗಳನ್ನು ಬಳಸಿಕೊಳ್ಳಬಹುದು. ಹಾಗಾಗಿ ನಿಮ್ಮ ದೌರ್ಬಲ್ಯಗಳ ಬಗ್ಗೆ ಕೆಲಸದ ಸ್ಥಳದಲ್ಲಿ ಯಾರೊಂದಿಗೂ ಹಂಚಿಕೊಳ್ಳಬೇಡಿ. ಬದಲಿಗೆ ನಿಮ್ಮ ಕಠಿಣ ಪರಿಶ್ರಮ ಮತ್ತು ಸಾಮರ್ಥ್ಯಗಳನ್ನು ನಂಬಿರಿ.

ಇತರರ ತಪ್ಪುಗಳಿಂದ ಕಲಿಯಿರಿ: ಆಚಾರ್ಯ ಚಾಣಕ್ಯರು  ಹೇಳುವಂತೆ ಬುದ್ಧಿವಂತ ವ್ಯಕ್ತಿ ಎಂದರೆ ಆತ ಇತರರ ತಪ್ಪುಗಳಿಂದ ಕಲಿಯುವವನು. ಕಚೇರಿ ವಾತಾವರಣವನ್ನು ಅರ್ಥಮಾಡಿಕೊಳ್ಳಿ, ಇತರರು ವಿಫಲರಾದಾಗ ಅದಕ್ಕೆ ಕಾರಣಗಳೇನು ಎಂಬುದನ್ನು ಗಮನಿಸಿ ಮತ್ತು ಅದೇ ತಪ್ಪುಗಳನ್ನು  ನೀವು ಪುನರಾವರ್ತಿಸುವುದನ್ನು ತಪ್ಪಿಸಿ.

ನಿಮ್ಮ ಯೋಜನೆಗಳನ್ನು ರಹಸ್ಯವಾಗಿಡಿ: ನಿಮ್ಮ ಕೆಲಸ ಅಥವಾ ಯೋಜನೆ ಪೂರ್ಣಗೊಳ್ಳುವವರೆಗೆ ಅದರ ಬಗ್ಗೆ ಯಾರೊಂದಿಗೂ ಹಂಚಿಕೊಳ್ಳಬೇಡಿ. ಇದರಿಂದ ನಿಮ್ಮ ಪ್ರಗತಿಗೆ ಅಡ್ಡಿಯಾಗಬಹುದು. ನಿಮ್ಮ ಯೋಜನೆಗಳನ್ನು ಹಂಚಿಕೊಳ್ಳಲೇಬೇಕೆಂದರೆ ನಿಮ್ಮ ಮುಂದಿನ ಹೆಜ್ಜೆಗಳನ್ನು ವಿಶ್ವಾಸಾರ್ಹ ವ್ಯಕ್ತಿಗಳೊಂದಿಗೆ ಮಾತ್ರ ಹಂಚಿಕೊಳ್ಳಿ.

ಶಿಸ್ತು ಮತ್ತು ಸಮಯಕ್ಕೆ ಗೌರವ: ಸಮಯವನ್ನು ಗೌರವಿಸದವರಿಗೆ ಯಶಸ್ಸು ಸಿಗುವುದಿಲ್ಲ. ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುವುದು ಮತ್ತು ಸಮಯಕ್ಕೆ ಸರಿಯಾಗಿ ನಿಮ್ಮ ಕೆಲಸಗಳನ್ನು ಪೂರ್ಣ ಗೊಳಿಸುವುದು, ಇದು ನಿಮಗೆ ವೃತ್ತಿಪರ ಇಮೇಜ್ ನೀಡುತ್ತದೆ. ಅಷ್ಟೇ ಅಲ್ಲದೆ ಇದು ನಿಮಗೆ ಕೆಲಸದ ಸ್ಥಳದಲ್ಲಿ ಯಶಸ್ಸು ಮತ್ತು ಗೌರವವನ್ನು ತಂದುಕೊಡುತ್ತದೆ.

ಇದನ್ನೂ ಓದಿ: ತಪ್ಪಿಯೂ ಇಂತಹ ಜನರಿಗೆ ಸಹಾಯ ಮಾಡಬಾರದು

ಕೆಲಸ ಪ್ರಾರಂಭಿಸುವ ಮೊದಲು ನಿಮ್ಮನ್ನು ನೀವು  ಕೇಳಬೇಕಾದ 3 ಪ್ರಶ್ನೆಗಳು:

ಚಾಣಕ್ಯನ ಪ್ರಕಾರ, ಯಾವುದೇ ದೊಡ್ಡ ಯೋಜನೆ ಅಥವಾ ಕೆಲಸವನ್ನು ಕೈಗೆತ್ತಿಕೊಳ್ಳುವ ಮೊದಲು, ನಿಮ್ಮನ್ನು ನೀವು ಮೂರು ಪ್ರಶ್ನೆಗಳನ್ನು ಕೇಳಿಕೊಳ್ಳಿ.

  • ನಾನು ಈ ಕೆಲಸ ಏಕೆ ಮಾಡುತ್ತಿದ್ದೇನೆ?
  • ಇದರ ಫಲಿತಾಂಶ ಏನಾಗುತ್ತದೆ?
  • ನಾನು ಇದರಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆಯೇ?

ಈ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರಗಳು ನಿಮ್ಮಲ್ಲಿ ಇದ್ದಾಗ ಮಾತ್ರ ನೀವು ಮುಂದುವರಿಯಬೇಕು. ಈ ಸ್ಪಷ್ಟತೆಯು ನಿಮ್ಮನ್ನು ಕಚೇರಿಯಲ್ಲಿ ಹೆಚ್ಚು ಗಂಭೀರವಾಗಿ ಮತ್ತು ಸಂಯಮದಿಂದ ಕಾಣುವಂತೆ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ