AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಶ್ರೀಮಂತಿಕೆಯನ್ನು ಗಳಿಸಬೇಕೆಂದರೆ ಮೊದಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಬಡತನವನ್ನು ನಿವಾರಿಸಿ ಶ್ರೀಮಂತರಾಗುವ ಮಾರ್ಗಗಳನ್ನು ವಿವರಿಸಿದ್ದಾರೆ. ಚಾಣಕ್ಯರ ಪ್ರಕಾರ, ನೀವು ಬಡತನದ ಬಲೆಯಿಂದ ಪಾರಾಗಲು ಮತ್ತು ಸಂಪತ್ತಿನ ಏಣಿಯನ್ನು ಏರಲು ಬಯಸಿದರೆ, ನೀವು ಮೊದಲು ನಿಮ್ಮ ಆಲೋಚನೆಯನ್ನು ಬದಲಾಯಿಸಬೇಕು, ಕೆಲವೊಂದು ಸಕಾರಾತ್ಮಕ ಅಭ್ಯಾಸಗಳನ್ನು ರೂಢಿಸಬೇಕು ಎಂದಿದ್ದಾರೆ. ಕಡು ಬಡವನನ್ನೂ ಶ್ರೀಮಂತನನ್ನಾಗಿ ಮಾಡುವ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ಶ್ರೀಮಂತಿಕೆಯನ್ನು ಗಳಿಸಬೇಕೆಂದರೆ ಮೊದಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Mar 01, 2026 | 4:21 PM

Share

ಶ್ರೀಮಂತರಾಗಬೇಕೆಂಬ (rich) ಆಸೆ ಯಾರಿಗೆ ತಾನೆ ಇರೋಲ್ಲ ಹೇಳಿ. ಪ್ರತಿಯೊಬ್ಬರೂ ಸಹ ಶ್ರೀಮಂತಿಕೆ, ಸಂಪತ್ತನ್ನು ಗಳಿಸಬೇಕು ಎಂದು ಬಯಸುತ್ತಾರೆ. ಆದರೆ ಶ್ರೀಮಂತಿಕೆಯನ್ನು ಗಳಿಸುವ ಸರಿಯಾದ ಮಾರ್ಗದ ಬಗ್ಗೆ ಹಲವರಿಗೆ ತಿಳಿದಿಲ್ಲ. ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಬಡತನವನ್ನು ನಿವಾರಿಸಿ ಶ್ರೀಮಂತರಾಗುವುದು ಹೇಗೆ, ಶ್ರೀಮಂತರಾಗಲು ಯಾವೆಲ್ಲಾ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದ್ದಾರೆ. ಈ ಸಕಾರಾತ್ಮಕ ಅಭ್ಯಾಸಗಳನ್ನು ಅಳವಡಿಸಿಕೊಂಡರೆ ಕಡು ಬಡವನು ಸಹ ಶ್ರೀಮಂತನಾಗುತ್ತಾನಂತೆ. ಹಾಗಿದ್ರೆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು?

ಎಲ್ಲವನ್ನೂ ಪೂರ್ಣ ಶ್ರದ್ಧೆಯಿಂದ ಮಾಡಿ: ಕಠಿಣ ಪರಿಶ್ರಮವಿಲ್ಲದೆ ಜೀವನದಲ್ಲಿ ಯಶಸ್ಸು ಅಸಾಧ್ಯ ಎಂದು ಚಾಣಕ್ಯ ನಂಬಿದ್ದರು. ನೀವು ನಿಜವಾಗಿಯೂ ಶ್ರೀಮಂತರಾಗಲು ಬಯಸಿದರೆ, ನೀವು ಪ್ರತಿದಿನ ಶ್ರದ್ಧೆಯಿಂದ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.

ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಿ: ನೀವು ಶ್ರೀಮಂತರಾಗಲು ಬಯಸಿದರೆ, ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಚ್ಚರಿಕೆಯಿಂದ ಯೋಚಿಸಬೇಕು, ಏಕೆಂದರೆ ಅದು ನಿಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಚಾಣಕ್ಯ ಹೇಳಿದ್ದಾರೆ. ವರ್ತಮಾನದಲ್ಲಿ, ವ್ಯರ್ಥ ಖರ್ಚು ಮತ್ತು ಪದೇ ಪದೇ ಸಾಲ ಪಡೆಯುವುದು ನಿಮ್ಮನ್ನು ಶ್ರೀಮಂತರಾಗುವುದನ್ನು ತಡೆಯುವ ಬಹುದೊಡ್ಡ ತಪ್ಪುಗಳಾಗಿದ್ದು, ಈ ತಪ್ಪುಗಳನ್ನು ಮಾಡದಿರಿ.

ಸಮಯದ ಮೌಲ್ಯವನ್ನು ಅರ್ಥಮಾಡಿಕೊಳ್ಳಿ: ಒಬ್ಬ ವ್ಯಕ್ತಿಯು ಬಡತನದಿಂದ ಮೇಲೆದ್ದು ಶ್ರೀಮಂತನಾಗಲು ಬಯಸಿದರೆ, ಅವನು ಸಮಯದ ಮೌಲ್ಯವನ್ನು ಅರ್ಥಮಾಡಿಕೊಳ್ಳಬೇಕು. ಸೋಮಾರಿತನವನ್ನು ಬಿಟ್ಟು ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸಬೇಕು.

ನಿರಂತರ ಕಲಿಕೆ: ಚಾಣಕ್ಯ ನೀತಿಯ ಪ್ರಕಾರ, ಜ್ಞಾನವು ಜಗತ್ತಿನ ಅತ್ಯಂತ ದೊಡ್ಡ ಸಂಪತ್ತು ಮತ್ತು ಅದನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲು ಸಾಧ್ಯವಿಲ್ಲ. ನೀವು ಯಶಸ್ಸಿನ ಏಣಿಯನ್ನು ಏರಲು ಬಯಸಿದರೆ, ನೀವು ಕಲಿಯುವ ಅಭ್ಯಾಸವನ್ನು ಬಿಟ್ಟುಕೊಡಬಾರದು ಮತ್ತು ಪ್ರತಿದಿನ ಹೊಸದನ್ನು ಕಲಿಯಬೇಕು.

ನಿಮ್ಮ ಬಗ್ಗೆ ವಿಶ್ವಾಸವಿರಲಿ: ಬಡತನದ ಬೇಗೆಯಿಂದ ಹೊರಬರಲು ಬಯಸಿದರೆ ಮೊದಲು ನಿಮ್ಮ ಬಗ್ಗೆ ನಿಮಗೆ ವಿಶ್ವಾಸವಿರಬೇಕು ಎಂದು ಆಚಾರ್ಯ ಚಾಣಕ್ಯ ವಿವರಿಸುತ್ತಾರೆ. ಜೀವನವು ಸವಾಲುಗಳನ್ನು ಒಡ್ಡಿದಾಗಲೆಲ್ಲಾ, ಭಯಪಟ್ಟು ಹಿಂದೆ ಸರಿಯಬಾರದು, ಬದಲಾಗಿ ಆ ಸವಾಲುಗಳನ್ನು ಧೈರ್ಯದಿಂದ ಸ್ವೀಕರಿಸಬೇಕು. ಆಗ ಮಾತ್ರ ಯಶಸ್ಸು ಶ್ರೀಮಂತಿಕೆ ಗಳಿಸಲು ಸಾಧ್ಯ.

ವ್ಯರ್ಥ ಖರ್ಚು ಬೇಡ: ಶ್ರೀಮಂತರಾಗಲು ಹಣ ಸಂಪಾದನೆ ಮಾಡುವುದು ಮಾತ್ರವಲ್ಲ, ಅದನ್ನು ಬುದ್ಧಿವಂತಿಕೆಯಿಂದ ಖರ್ಚು ಮಾಡುವುದು ಸಹ ಮುಖ್ಯ. ಹಾಗಾಗಿ ಹಣವನ್ನು ಯಾವುದೇ ಕಾರಣಕ್ಕೂ ವ್ಯರ್ಥ ಖರ್ಚು ಮಾಡಬೇಡಿ.

ಇದನ್ನೂ ಓದಿ: ಮನೆಯಲ್ಲಿ ಹಣ ಉಳಿಯದಿರಲು ಕಾರಣವೇ ತಪ್ಪುಗಳು

ನಿಮ್ಮ ರಹಸ್ಯಗಳನ್ನು ಯಾರಿಗೂ ಹೇಳಬೇಡಿ: ನಿಮ್ಮ ಆಲೋಚನೆ, ಯೋಜನೆಗಳನ್ನು ಅವು ಪೂರ್ಣಗೊಳ್ಳುವವರೆಗೆ ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮ ಆಲೋಚನೆಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದು ನಿಮ್ಮ ಪ್ರಗತಿಗೆ ಅಡ್ಡಿಯಾಗಬಹುದು. ಆದ್ದರಿಂದ ನಿಮ್ಮ ಎಲ್ಲಾ ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

ಕಠಿಣ ಪರಿಶ್ರಮ: ಕಷ್ಟಪಟ್ಟು ಕೆಲಸ ಮಾಡಲು ಹೆದರುವ ವ್ಯಕ್ತಿಯ ಬಳಿ ಹಣ ಎಂದಿಗೂ ಉಳಿಯುವುದಿಲ್ಲ, ಹಾಗಾಗಿ ಕಷ್ಟಪಟ್ಟು ಕೆಲಸ ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಲಕ್ಷ್ಮಿ ದೇವಿಯು ಸಂತೃಪ್ತಳಾಗುತ್ತಾಳೆ  ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಯಾವುದೇ ಅಡ್ಡದಾರಿಯಿಂದ ಶ್ರೀಮಂತಿಕೆ ಗಳಿಸಲು ಸಾಧ್ಯವಿಲ್ಲ, ಕಠಿಣ ಪರಿಶ್ರಮದ ಮೂಲಕ ಮಾತ್ರ ಸಾಧ್ಯ. ಆದ್ದರಿಂದ ಕಷ್ಟಪಟ್ಟು ಕೆಲಸ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ