AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ನಿಮ್ಮ ಜೀವನದಲ್ಲಿ ಸದಾ ಈ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಿ

ಜೀವನದಲ್ಲಿ ಯಶಸ್ಸು ಪಡೆಯಲು ಚಾಣಕ್ಯ ಎರಡು ವಿಶೇಷ ಸೂತ್ರಗಳನ್ನು ಹೇಳಿದ್ದಾರೆ. ಎರಡು ರೆಕ್ಕೆಗಳ ಸಹಾಯದಿಂದ ಪಕ್ಷಿಗಳು ಹೇಗೆ ಆಕಾಶದಲ್ಲಿ ಹಾರುತ್ತವೆಯೋ ಅದೇ ರೀತಿ ಕರ್ಮ ಮತ್ತು ಜ್ಞಾನದ ಎರಡು ರೆಕ್ಕೆಗಳ ಸಹಾಯದಿಂದ ಮನುಷ್ಯನು ಯಶಸ್ಸಿನ ಆಕಾಶದಲ್ಲಿ ಹಾರಲು ಸಾಧ್ಯವಾಗುತ್ತದೆ.

ಚಾಣಕ್ಯ ನೀತಿ: ನಿಮ್ಮ ಜೀವನದಲ್ಲಿ ಸದಾ ಈ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಿ
Chanakya Niti
ಅಕ್ಷತಾ ವರ್ಕಾಡಿ
|

Updated on: Aug 03, 2023 | 6:11 PM

Share

ಆಚಾರ್ಯ ಚಾಣಕ್ಯ(Chanakya) ಅವರು ತಮ್ಮ ನೀತಿಗಳಿಂದಾಗಿ ಇಂದಿಗೂ ಪ್ರಸಿದ್ಧರಾಗಿದ್ದಾರೆ. ಅವರ ನೀತಿಗಳನ್ನು ಅಳವಡಿಸಿಕೊಳ್ಳುವ ಮೂಲಕ, ದೈನಂದಿನ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ತಪ್ಪಿಸಬಹುದು. ಚಾಣಕ್ಯನ ನೀತಿಗಳು ಯಶಸ್ಸಿಗೆ ಹಾದಿ ಮಾಡಿ ಕೊಡುತ್ತದೆ ಎಂದು ಇಂದಿಗೂ ನಂಬುತ್ತಾರೆ. ಆದ್ದರಿಂದ ನೀವು ಎಷ್ಟೇ ಒಳ್ಳೆಯವರಾಗಿದ್ದರೂ ಕೂಡ ನಿಮ್ಮ ಒಂದು ನಿಮ್ಮನ್ನು ಕೆಟ್ಟವರನ್ನಾಗಿ ಸಮಾಜದಲ್ಲಿ ಬಿಂಬಿಸಬಹುದು ಚಾಣಕ್ಯ ನೀತಿ(Chanakya Niti) ಯಲ್ಲಿ ವಿವರಿಸಲಾಗಿದೆ.

ಕರ್ಮ ಮತ್ತು ಜ್ಞಾನ ಯಶಸ್ಸಿನ ಹಾದಿ:

ಜೀವನದಲ್ಲಿ ಯಶಸ್ಸು ಪಡೆಯಲು ಚಾಣಕ್ಯ ಎರಡು ವಿಶೇಷ ಸೂತ್ರಗಳನ್ನು ಹೇಳಿದ್ದಾನೆ. ಎರಡು ರೆಕ್ಕೆಗಳ ಸಹಾಯದಿಂದ ಪಕ್ಷಿಗಳು ಹೇಗೆ ಆಕಾಶದಲ್ಲಿ ಹಾರುತ್ತವೆಯೋ ಅದೇ ರೀತಿ ಕರ್ಮ ಮತ್ತು ಜ್ಞಾನದ ಎರಡು ರೆಕ್ಕೆಗಳ ಸಹಾಯದಿಂದ ಮನುಷ್ಯನು ಯಶಸ್ಸಿನ ಆಕಾಶದಲ್ಲಿ ಹಾರಲು ಸಾಧ್ಯವಾಗುತ್ತದೆ ಎಂದು ಚಾಣಕ್ಯ ನೀತಿ ಹೇಳುತ್ತದೆ. ನೀವು ಸಂತೋಷದಿಂದ ಮತ್ತು ಯಶಸ್ವಿಯಾಗಲು ಬಯಸಿದರೆ, ಯಾವಾಗಲೂ ಸತ್ಯವನ್ನು ಮಾತನಾಡಿ, ಬುದ್ಧಿವಂತಿಕೆಯಿಂದ ಖರ್ಚು ಮಾಡಿ, ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ ಎಂದು ಚಾಣಕ್ಯ ಹೇಳುತ್ತಾರೆ.

ಶತ್ರು ಹಾಗೂ ಸ್ನೇಹಿತ:

ಚಾಣಕ್ಯ ನೀತಿಯ ಪ್ರಕಾರ ಶತ್ರು ಮತ್ತು ದುರ್ಬಲ ಸ್ನೇಹಿತ ಇಬ್ಬರೂ ಯಾವಾಗಲೂ ನೋವುಂಟುಮಾಡುತ್ತಾರೆ. ಒಬ್ಬರು ಅವರೊಂದಿಗೆ ಜಾಗರೂಕರಾಗಿರಬೇಕು ಎಂದು ಹೇಳುತ್ತಾರೆ.

ಬುದ್ಧಿವಂತಿಕೆಯು ಅಜ್ಞಾನವನ್ನು ನಾಶಪಡಿಸುತ್ತದೆ:

ಪ್ರತಿಯೊಬ್ಬರ ಜೀವನದಲ್ಲೂ ಬುದ್ಧಿವಂತಿಕೆ ಎಂಬುದು ತುಂಬಾ ಮುಖ್ಯವಾಗಿರುತ್ತದೆ. ಬುದ್ಧಿವಂತಿಕೆಯು ಅಜ್ಞಾನವನ್ನು ನಾಶಪಡಿಸುತ್ತದೆ ಮತ್ತು ಬುದ್ಧಿವಂತಿಕೆಯಿಂದ ದೊಡ್ಡ ಸಮಸ್ಯೆಗಳನ್ನು ಸುಲಭವಾಗಿ ಜಯಿಸಬಹುದು. ಹಸಿದಿರುವುದು ಬುದ್ಧಿಶಕ್ತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಅದು ವ್ಯಕ್ತಿಯ ಚಿತ್ರಣಕ್ಕೆ ಹಾನಿ ಮಾಡುತ್ತದೆ ಎಂದು ಚಾಣಕ್ಯ ಹೇಳುತ್ತಾರೆ.

ಇದನ್ನೂ ಓದಿ: ಚಾಣಕ್ಯ ನೀತಿ: ವೈವಾಹಿಕ ಜೀವನದ ಸಂತೋಷಕ್ಕಾಗಿ ದಂಪತಿಗಳಿಗೆ ಆಚಾರ್ಯ ಚಾಣಕ್ಯರ ಕೆಲವು ಸಲಹೆಗಳು

ಸ್ನೇಹಿತರ ಸಹವಾಸ:

ಚಾಣಕ್ಯನ ಪ್ರಕಾರ, ಗೌರವವಿಲ್ಲದ ಸ್ಥಳ, ಸ್ನೇಹಿತರು ಮತ್ತು ಸಂಬಂಧಿಕರು ಇಲ್ಲದ ಸ್ಥಳದಲ್ಲಿ ಉಳಿಯುವುದು ಯಾವುದೇ ಪ್ರಯೋಜನವನ್ನು ತರುವುದಿಲ್ಲ. ಅಂತಹ ಸ್ಥಳವನ್ನು ತಕ್ಷಣವೇ ಬಿಡಬೇಕು ಎಂದು ಹೇಳುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​​ ಮಾಡಿ: 

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ