AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ಮುಖ್ಯವಾಗಿ ಈ ವಿಷಯಗಳನ್ನು ಗಮನಿಸಬೇಕು ಎನ್ನುತ್ತಾರೆ ಚಾಣಕ್ಯ

ಅದ್ಧೂರಿಯಾಗಿ ಮದುವೆಯಾಗುವುದು ಮುಖ್ಯವಲ್ಲ, ನೂರು ಕಾಲ ಸುಖಿ ದಾಂಪತ್ಯ ಜೀವನವನ್ನು ನಡೆಸುವುದು ಮುಖ್ಯ. ಈ ದಾಂಪತ್ಯ ಜೀವನ ಸುಖವಾಗಿರಬೇಕೆಂದರೆ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಈ ಬಗ್ಗೆ ಚಾಣಕ್ಯರು ಕೂಡ ತಮ್ಮ ನೀತಿ ಶಾಸ್ತ್ರದಲ್ಲಿ ತಿಳಿಸಿದ್ದು, ಅಂದದ ಬದಲಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ಈ ಒಂದಷ್ಟು ಅಂಶಗಳನ್ನು ನೀವು ಗಮನಿಸಬೇಕು ಎಂದಿದ್ದಾರೆ. ಹಾಗಿದ್ರೆ ಸಂಗಾತಿಯನ್ನು ಆಯ್ಕೆ ಮಾಡುವಾಗ ಯಾವ ವಿಷಯಗಳನ್ನು ಗಮನಿಸಬೇಕು ಎಂಬುದನ್ನು ನೋಡೋಣ ಬನ್ನಿ,

Chanakya Niti: ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ಮುಖ್ಯವಾಗಿ ಈ ವಿಷಯಗಳನ್ನು ಗಮನಿಸಬೇಕು ಎನ್ನುತ್ತಾರೆ ಚಾಣಕ್ಯ
Cಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Oct 20, 2025 | 6:08 PM

Share

ಸುಂದರ ಸುಖಿ ದಾಂಪತ್ಯ ಜೀವನ, ಒಂದೊಳ್ಳೆ ಸಂಗಾತಿಯನ್ನು (life partner) ಹೊಂದುವುದು ಪ್ರತಿಯೊಬ್ಬರ ಕನಸು. ಆದರೆ ಈ ಭಾಗ್ಯ ಎಲ್ಲರಿಗೂ ಇರುವುದಿಲ್ಲ. ಹೌದು ನೂರು ಕಾಲ ಸುಖವಾಗಿ ಸಂಸಾರ ಮಾಡಬೇಕೆಂದು ದಾಂಪತ್ಯ ಜೀವನಕ್ಕೆ ಖುಷಿ ಖುಷಿಯಾಗಿ ಕಾಲಿಟ್ಟವರು ಒಂದಷ್ಟು ಕಾರಣಗಳಿಂದ ಬೇರೆ ಬೇರೆಯಾಗುತ್ತಾರೆ. ಹೀಗಾಗಬಾರದೆಂದರೆ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಉತ್ತಮ ಜೀವನ ಸಂಗಾತಿ ಜೊತೆಗಿದ್ದರೆ ಮಾತ್ರ ದಾಂಪತ್ಯ ಜೀವನ ಸುಂದರವಾಗಿರುತ್ತದೆ. ಆಚಾರ್ಯ ಚಾಣಕ್ಯರು ಸಹ ಸಂಗಾತಿಯನ್ನು ಆಯ್ಕೆ ಮಾಡುವಾಗ ಬರೀ ಅಂದ ಚೆಂದವನ್ನು ನೋಡುವುದು ಮಾತ್ರವಲ್ಲ, ಕೆಲವು ಪ್ರಮುಖ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ. ಹೀಗಿರುವಾಗ ನೀವು ಸಹಸಂಗಾತಿಯನ್ನು ಆಯ್ಕೆ ಮಾಡುವ ಮೊದಲು ಚಾಣಕ್ಯರ ಈ  ಸಲಹೆಗಳನ್ನು ಪಾಲಿಸಿ.

ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ಗಮನಿಸಬೇಕಾದ ಅಂಶಗಳು:

ಬಾಹ್ಯ ಸೌಂದರ್ಯಕ್ಕಿಂತ ಗುಣಗಳ ಮೇಲೆ ಗಮನ ಹರಿಸಿ: ಅನೇಕ ಜನರು ಕೇವಲ ಬಾಹ್ಯ ಸೌಂದರ್ಯವನ್ನು ನೋಡಿ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡುತ್ತಾರೆ. ಆದರೆ ಕೇವಲ ಸೌಂದರ್ಯವನ್ನು ಮಾತ್ರ ಪರಿಗಣನೆಗೆ ತೆಗೆದುಕೊಂಡರೆ  ದಾಂಪತ್ಯ ಜೀವನ ಯಶಸ್ವಿಯಾಗುವುದಿಲ್ಲ. ಸೌಂದರ್ಯದ ಹೊರತಾಗಿ ಗುಣ ನಡತೆಯನ್ನು ಸಹ ಪರಿಗಣಿಸಬೇಕು.

ಕುಟುಂಬ ಮೌಲ್ಯ: ಮದುವೆಗೂ ಮುನ್ನ ನೀವು ಆಯ್ಕೆ ಮಾಡುವ ಸಂಗಾತಿ ಕುಟುಂಬಕ್ಕೆ ಎಷ್ಟು ಮೌಲ್ಯ ನೀಡುತ್ತಾರೆ ಎಂಬುದನ್ನು ತಿಳಿದುಕೊಳ್ಳುವುದು ಸಹ ಮುಖ್ಯವಾಗಿದೆ. ಹೌದು ಕುಟುಂಬ ಸದಸ್ಯರಿಗೆ ಎಷ್ಟು ಪ್ರಾಮುಖ್ಯತೆ ನೀಡುತ್ತಾರೆ, ಕುಟುಂಬ ಸದಸ್ಯರನ್ನು ಹೇಗೆ ನಡೆಸಿಕೊಳ್ಳುತ್ತಾರೆ, ಹಿರಿಯರಿಗೆ ಗೌರವ ನೀಡುತ್ತಾರೆಯೇ ಇತ್ಯಾದಿ ಅಂಶಗಳ ಬಗ್ಗೆ ತಿಳಿದುಕೊಳ್ಳಬೇಕು ಎನ್ನುತ್ತಾರೆ ಆಚಾರ್ಯ ಚಾಣಕ್ಯ.

ಇದನ್ನೂ ಓದಿ
Image
ಮಹಿಳೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಈ ತಪ್ಪುಗಳನ್ನು ಮಾಡಬಾರದು
Image
ವಿದ್ಯಾರ್ಥಿಗಳು ಈ ಅಭ್ಯಾಸಗಳನ್ನು ತ್ಯಜಿಸಲೇಬೇಕು ಎನ್ನುತ್ತಾರೆ ಚಾಣಕ್ಯ
Image
ಚಾಣಕ್ಯರ ಪ್ರಕಾರ ಈ ಅಭ್ಯಾಸಗಳಿರುವ ಜನ ಮಾತ್ರ ಶ್ರೀಮಂತರಾಗುತ್ತಾರಂತೆ
Image
ಇಂತಹ ಸ್ನೇಹಿತರು ಶತ್ರುಗಳಿಗಿಂತ ಹೆಚ್ಚು ಅಪಾಯಕಾರಿ

ತಾಳ್ಮೆ ಇದೆಯೇ ಎಂಬುದನ್ನು ಪರೀಕ್ಷಿಸಿ: ತಾಳ್ಮೆ ಇರುವ ವ್ಯಕ್ತಿ ಜೀವನದಲ್ಲಿ ಯಾವುದೇ ಕಠಿಣ ಪರಿಸ್ಥಿತಿಯನ್ನು ಸಹ ಎದುರಿಸಬಲ್ಲ ಮತ್ತು ತಾಳ್ಮೆ ಇರುವವರು ಎಲ್ಲೂ ವಿಚಲಿತರಾಗದೆ ಪರಿಸ್ಥಿಯನ್ನು ತಾಳ್ಮೆಯಿಂದ ನಿಭಾಯಿಸುತ್ತಾರೆ ಎಂದು ಚಾಣಕ್ಯರು ಹೇಳುತ್ತಾರೆ. ಆದ್ದರಿಂದ ಭವಿಷ್ಯದ ದೃಷ್ಟಿಯಿಂದ ನಿಮ್ಮ ಸಂಗಾತಿಗೆ ತಾಳ್ಮೆ ಇದೆಯೇ ಎಂಬುದನ್ನು ಪರೀಕ್ಷಿಸಿ

ಉತ್ತಮ ನಡತೆ:  ಎಲ್ಲರನ್ನೂ ಗೌರವಿಸುತ್ತಾರೆಯೇ, ಸಂಬಂಧಗಳಿಗೆ ಬೆಲೆ ಕೊಡುತ್ತಾರೆಯೇ ಎಂಬುದನ್ನು ಗಮನಿಸಬೇಕು. ಏಕೆಂದರೆ ಮೌಲ್ಯಗಳ ಕೊರತೆಯ ವ್ಯಕ್ತಿಯನ್ನು ದುರಹಂಕಾರಿಯನ್ನಾಗಿ ಮಾಡುತ್ತದೆ ಮತ್ತು ಅಂತಹವರು ತಮ್ಮ ಸಂಗಾತಿಯನ್ನು ಸಹ ಗೌರವಿಸಲಾರರು ಎನ್ನುತ್ತಾರೆ ಚಾಣಕ್ಯ.

ಇದನ್ನೂ ಓದಿ: ಮಹಿಳೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಮೂರು ತಪ್ಪುಗಳನ್ನು ಎಂದಿಗೂ ಮಾಡಬಾರದಂತೆ

ಮುಂಗೋಪದ ಬಗ್ಗೆ ಪರೀಕ್ಷಿಸಿ: ಸಂಗಾತಿಯನ್ನು ಆಯ್ಕೆ ಮಾಡುವಾಗ ಅವರು ಮುಂಗೋಪವನ್ನು ಹೊಂದಿದ್ದಾರೆಯೇ ಎಂಬುದನ್ನು ಪರೀಕ್ಷಿಸಲು ಮರೆಯದಿರಿ. ಆಚಾರ್ಯ ಚಾಣಕ್ಯರ ಪ್ರಕಾರ, ಕೋಪದ ಸ್ವಭಾವದ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದರಿಂದ ದಾಂಪತ್ಯ ಜೀವನವು ತೊಂದರೆಗೊಳಗಾಗುತ್ತದೆ ಮತ್ತು ಇದು ಅತೃಪ್ತಿಗೆ ಕಾರಣವಾಗಬಹುದು. ಹಾಗಾಗಿ ತಾಳ್ಮೆಯಿಂದ ಸಂಸಾರವನ್ನು ನಿಭಾಯಿಸಿಕೊಂಡು ಹೋಗುವಂತಹ ಜೀವನ ಸಂಗಾತಿಯನ್ನು ಆಯ್ಕೆ ಮಾಡಿ.

ದಯಾಳು ಮತ್ತು ಸಹಿಷ್ಣು ಸ್ವಭಾವ: ಆಚಾರ್ಯ ಚಾಣಕ್ಯರ ಪ್ರಕಾರ, ದಯಾಳು ಸ್ವಭಾವದ ವ್ಯಕ್ತಿಯು ಇತರರ ಭಾವನೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ  ಅದೇ ರೀತಿ ಅವರು ತಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸುತ್ತಾರ. ಇದಲ್ಲದೆ, ಸಹಿಷ್ಣು ಸ್ವಭಾವದವರು  ಜೀವನದ ಏರಿಳಿತಗಳನ್ನು  ತಾಳ್ಮೆಯಿಂದ ನಿಭಾಯಿಸುತ್ತಾರೆ. ಆದ್ದರಿಂದ ಇಂತಹ ಗುಣಗಳಿರುವ ಸಂಗಾತಿಯನ್ನೇ ಆಯ್ಕೆ ಮಾಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ