AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಜೀವನದಲ್ಲಿ ಯಶಸ್ಸು ಸಾಧಿಸಲು ಪ್ರತಿನಿತ್ಯ ಈ ಕೆಲಸಗಳನ್ನು ತಪ್ಪದೆ ಮಾಡಿ

ಜೀವನದಲ್ಲಿ ಯಶಸ್ವಿಯಾಗಲು ನೀವು ಕಷ್ಟಪಟ್ಟು ಪ್ರಯತ್ನಗಳನ್ನು ಪಡುತ್ತೀರಿ, ಈ ಕೆಲವೊಂದು ಚಾಣಕ್ಯನ ನೀತಿಯನ್ನು ಅನುಸರಿಸುವ ಮೂಲಕ ಯಶಸ್ಸನ್ನು ಸಾಧಿಸಲು ಸಹಾಯಕವಾಗಬಹುದು.

Chanakya Niti: ಜೀವನದಲ್ಲಿ ಯಶಸ್ಸು ಸಾಧಿಸಲು ಪ್ರತಿನಿತ್ಯ ಈ ಕೆಲಸಗಳನ್ನು ತಪ್ಪದೆ ಮಾಡಿ
Chanakya Niti
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: May 13, 2023 | 5:30 PM

ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಅನೆಕ ನೀತಿಗಳನ್ನು ಹೇಳಿದ್ದಾರೆ. ಯಶಸ್ಸು ಬರದಿದ್ದರೆ ಅದನ್ನು ಗಳಿಸಬೇಕು. ಅದಕ್ಕಾಗಿ ಶ್ರಮಿಸುವ ಸಂಕಲ್ಪವಿರಬೇಕು. ನೀವು ಕಷ್ಟಪಟ್ಟು ಕೆಲಸ ಮಾಡಿದರೆ, ಯಶಸ್ಸು ಖಂಡಿತವಾಗಿಯೂ ನಿಮ್ಮದಾಗುತ್ತದೆ. ಜೊತೆಗೆ ಯಶಸ್ಸನ್ನು ಸಾಧಿಸಲು ನೀವು ಚಾಣಕ್ಯನ ಕೆಲವೊಂದು ನೀತಿಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬಹುದು. ಯಶಸ್ಸಿನ ದಾರಿಯಲ್ಲಿ ಹಲವಾರು ರೀತಿಯ ಅಡೆತಡೆಗಳಿವೆ. ಅದು ನಮ್ಮ ತಾಳ್ಮೆಯನ್ನು ಕಳದುಕೊಳ್ಳುವಂತೆ ಮಾಡುತ್ತದೆ. ಆದ್ದರಿಂದ ಚಾಣಕ್ಯನ ಈ ನೀತಿಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಯಶಸ್ಸನ್ನು ಸಾಧಿಸಬಹುದು.

ಯಶಸ್ಸು ಸಾಧಿಸಲು ನೀವು ಪ್ರತಿನಿತ್ಯ ತಪ್ಪದೆ ಮಾಡಬೇಕಾದ ಕೆಲಸಗಳು:

ಬೆಳಗ್ಗೆ ಬೇಗ ಏಳಬೇಕು:

ನೀವು ಕಷ್ಟಪಟ್ಟು ಕೆಲಸ ಮಾಡಲು ಮತ್ತು ಆ ಸಂಕಲ್ಪವನ್ನು ಹೊಂದಲು ಬಯಸಿದರೆ, ನೀವು ಬೆಳಗ್ಗೆ ಬೇಗನೆ ಎದ್ದೇಳಬೇಕು. ಇದರಿಂದ ನೀವು ನಿಮ್ಮ ಗುರಿಯನ್ನು ತಲುಪಬಹುದು. ನೀವು ನಿಮ್ಮ ಗುರಿಯನ್ನು ಸಾಧಿಸಲು ಬಯಸಿದರೆ, ನೀವು ಒಂದು ಕ್ಷಣವೂ ವಿಳಂಬ ಮಾಡಬಾರದು. ಅದಕ್ಕಾಗಿ ಬೆಳಗ್ಗೆ ಬೇಗ ಏಳಬೇಕು. ಸಮಯ ವ್ಯರ್ಥ ನಿಮ್ಮ ಕೆಲಸವನ್ನು ನಿಯಮಿತವಾಗಿ ಮಾಡಬೇಕು.

ದಿನದ ಯೋಜನೆಯನ್ನು ಮಾಡಬೇಕು:

ದಿನದಲ್ಲಿ ನೀವು ಏನು ಮಾಡಲು ಬಯಸುತ್ತೀರಿ? ಅದನ್ನು ಯೋಜಿಸಬೇಕು. ಇದರಿಂದ ನಿವು ನಿಮ್ಮ ಕೆಲಸ ಮಾಡುವಾಗ ಯಾವುದೇ ಗೊಂದಲ ಇರುವುದಿಲ್ಲ. ಬೆಳಗ್ಗೆ ಎದ್ದ ನಂತರ ಸಮಯ ವ್ಯರ್ಥ ಮಾಡಬೇಡಿ ಎನ್ನುತ್ತಾರೆ ಚಾಣಕ್ಯ. ನಾವು ನಮ್ಮ ಸೋಮಾರಿತನವನ್ನು ಬದಿಗಿಟ್ಟು, ತಕ್ಷಣ ಕೆಲಸ ಪ್ರಾರಂಭಿಸಬೇಕು. ಅಲ್ಲದೆ ಯೋಜನೆಯ ಪ್ರಕಾರ ಕೆಲಸಗಳಿಗೆ ಆದ್ಯತೆ ನೀಡಬೇಕು. ಇದರಿಂದ ನಿಮ್ಮ ಯಶಸ್ಸಿನ ಹಾದಿ ಸುಲಭವಾದೀತು.

ಇದನ್ನೂ ಓದಿ: ನೀವು ತೂಕ ನಷ್ಟಕ್ಕೆ ಪ್ರಯತ್ನಿಸುತ್ತಿದ್ದರೆ, ಮೊದಲು ಈ ಕೆಲಸ ಮಾಡಿ

ಯಾವುದೇ ಕೆಲಸವನ್ನು ನಾಳೆಗೆ ಮುಂದೂಡಬೇಡಿ, ಇಂದೇ ಮಾಡಿ:

ಇಂದಿನ ಕೆಲಸವನ್ನು ಇಂದೇ ಮಾಡಬೇಕು ಎಂದು ಚಾಣಕ್ಯ ಹೇಳುತ್ತಾರೆ. ಇಂದಿನ ಕೆಲಸವನ್ನು ನಾಳೆಗೆ ಮುಂದೂಡಬೇಡಿ, ಇದರಿಂದ ನಿಮ್ಮ ಯೋಜನೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ಹಣವನ್ನು ಯಾವಾಗ ಬೇಕಾದರೂ ಗಳಿಸಬಹುದು. ಆದರೆ ಕಳೆದು ಹೋದ ಸಮಯವನ್ನು ಮರಳಿ ಪಡೆಯಲಾಗುವುದಿಲ್ಲ. ಅದಕ್ಕಾಗಿ ಯಾವುದೇ ಕೆಲಸವನ್ನು ಸಮಯಕ್ಕೆ ಸರಿಯಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಕೈಗೆತ್ತಿಕೊಂಡ ಕೆಲಸವನ್ನು ಮುಂದೂಡದೆ, ಸಿಕ್ಕಂತಹ ಅಮೂಲ್ಯ ಸಮಯವನ್ನು ಸದುಪಯೋಗಪಡಿಸಿಕೊಂಡರೆ, ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಲಭಿಸುತ್ತದೆ.

ಆರೋಗ್ಯಕರವಾಗಿರುವುದರ ಮೇಲೆ ಕೇಂದ್ರೀಕರಿಸಿ:

ನಿಮ್ಮ ಆರೋಗ್ಯವು ಉತ್ತಮವಾಗಿದ್ದರೆ, ನೀವು ಕೆಲಸ ಮಾಡಲು ನಿಮ್ಮನ್ನು ನೀವು ಪ್ರೇರೇಪಿಸುತ್ತೀರಿ. ಆದ್ದರಿಂದ ಉತ್ತಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುವುದು ಎಂಬುದರ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಬಿಡುವಿಲ್ಲದ ಜೀವನದಲ್ಲಿ ಮನುಷ್ಯ ತನ್ನ ಆಹಾರದ ಬಗ್ಗೆ ಗಮನಹರಿಸುವುದಿಲ್ಲ. ಅವನು ಸಮಯಕ್ಕೆ ಸರಿಯಾಗಿ ಉತ್ತಮ ಮತ್ತು ಪೌಷ್ಟಿಕಾಂಶಯುಕ್ತ ಆಹಾಋವನ್ನು ಸೇವಿಸಿದರೆ ಆರೋಗ್ಯಕರವಾಗಿರುತ್ತಾನೆ. ಇದು ಕೆಲಸ ಮಾಡುವಾಗ ಉತ್ಸಾಹವನ್ನು ಹೆಚ್ಚಿಸುತ್ತದೆ. ಈ ರೀತಿಯಾಗಿ ನೀವು ಯಶಸ್ಸಿನತ್ತ ಸಾಗಬಹುದು.

ವ್ಯಾಯಾಮಕ್ಕೆ ಒತ್ತು ನೀಡಿ:

ನೀವು ಉತ್ತಮವಾಗಿದ್ದರೆ ನಿಮ್ಮ ದಿನ ಚೆನ್ನಾಗಿರುತ್ತದೆ. ಯಾವುದೇ ಕೆಲಸದಲ್ಲಿ, ದೇಹಕ್ಕೆ ಬೆಂಬಲ ಎನ್ನುವಂತಹದ್ದು ಬೇಕಾಗುತ್ತದೆ. ಇದರಿಂದ ಕೆಲಸ ಮಾಡುವಾಗ ನಿಮಗೆ ಆಯಾಸವಾಗುವುದಿಲ್ಲ. ದೇಹದ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ಯಾವುದೇ ಗುರಿಯನ್ನು ಸಾಧಿಸಲು ದೇಹವು ಉತ್ತಮ ಸ್ಥಿತಿಯಲ್ಲಿರಬೇಕು. ಇದಕ್ಕಾಗಿ ನೀವು ವ್ಯಾಯಾಮದತ್ತ ಗಮನಹರಿಸಬೇಕು. ನೀವು ಯೋಗ ಮತ್ತು ವ್ಯಾಯಾಮಕ್ಕಾಗಿ ಪ್ರತಿದಿನ ಬೆಳಗ್ಗೆ ಸ್ವಲ್ಪ ಸಮಯವನ್ನು ಮೀಸಲಿಡಬೇಕು. ನೀವು ಆರೋಗ್ಯವಾಗಿದ್ದರೆ, ಪೂರ್ಣ ಶಕ್ತಿಯಿಂದ ನೀವು ಕೆಲಸ ಮಾಡಬಹುದು. ಇದರಿಂದ ಯಶಸ್ಸಿನ ಹಾದಿಯನ್ನು ತಲುಪಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ