AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೋಸೆ ತಯಾರಿಸುವಾಗ ನೀವು ಮಾಡುವ ಸಾಮಾನ್ಯ ತಪ್ಪುಗಳು ಇಲ್ಲಿವೆ

ಸೆಲೆಬ್ರಿಟಿ ಬಾಣಸಿಗ ಸಂಜೀವ್ ಕಪೂರ್ ಅವರು ದೋಸೆ ತಯಾರಿಸುವಾಗ ಜನರು ಮಾಡುವ ಸಾಮಾನ್ಯ ತಪ್ಪುಗಳನ್ನು ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ದೋಸೆ ತಯಾರಿಸುವಾಗ ನೀವು ಮಾಡುವ ಸಾಮಾನ್ಯ ತಪ್ಪುಗಳು ಇಲ್ಲಿವೆ
Image Credit source: Instagram
ಅಕ್ಷತಾ ವರ್ಕಾಡಿ
|

Updated on:Mar 02, 2023 | 5:36 PM

Share

ದೋಸೆ ಪ್ರತಿಯೊಂದು ಮನೆಯಲ್ಲೂ ವಾರದಲ್ಲಿ ಎರಡು ಸಲವಾದರೂ ಇದ್ದೇ ಇರುತ್ತದೆ. ಆದರೆ ನೀವು ದೋಸೆ ಮಾಡುವ ಸರಿಯಾದ ಕ್ರಮದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ದೋಸೆ ಸರಿಯಾಗಿ ಕಾವಲಿಯಿಂದ ಏಳುವುದಿಲ್ಲ ಎಂಬುದು ಸಾಕಷ್ಟು ಗೃಹಿಣಿಯರ ಸಮಸ್ಯೆ. ಸೆಲೆಬ್ರಿಟಿ ಬಾಣಸಿಗರಾದ ಸಂಜೀವ್ ಕಪೂರ್ ದೋಸೆ ತಯಾರಿಸುವಾಗ ಜನರು ಮಾಡುವ ಸಾಮಾನ್ಯ ತಪ್ಪುಗಳು ಮತ್ತು ಸರಿಯಾದ ಕ್ರಮದಲ್ಲಿ ದೋಸೆ ಮಾಡುವುದು ಹೇಗೆ ಎಂಬುದನ್ನು ಹಂಚಿಕೊಂಡಿದ್ದಾರೆ.

ಸಂಜೀವ್ ಕಪೂರ್ ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ:

View this post on Instagram

A post shared by Sanjeev Kapoor (@sanjeevkapoor)

ತವಾಗೆ ಎಣ್ಣೆ ಹಚ್ಚುವ ಸರಿಯಾದ ಕ್ರಮ:

ಬಾಣಸಿಗ ಸಂಜೀವ್ ಕಪೂರ್ ಅವರು ದೋಸೆ ತಯಾರಿಸುವಾಗ ತವಾಗೆ ಎಣ್ಣೆ ಹಚ್ಚುವ ಸರಿಯಾದ ಕ್ರಮದ ಬಗ್ಗೆ ತಿಳಿಸಿದ್ದಾರೆ. ನೀವು ಸಾಮಾನ್ಯವಾಗಿ ದೋಸೆ ಮಾಡುವ ಮೊದಲು ತವಾಗೆ ಎಣ್ಣೆ ಹಾಕಿ ನಂತರ ಅದನ್ನು ಗ್ರೀಸ್​​ ಮಾಡುತ್ತೀರಿ. ಆದರೆ ಇನ್ನು ಮುಂದೆ ಆ ರೀತಿ ಮಾಡದಿರಿ ಎಂದು ಸಲಹೆ ನೀಡುತ್ತಾರೆ. ಬದಲಾಗಿ ಒಂದು ಇರುಳ್ಳಿಯನ್ನು ಮಧ್ಯದಿಂದ ಎರಡು ಭಾಗಗಳಾಗಿ ಕತ್ತರಿಸಿ. ನಂತರ ಒಂದು ಭಾಗವನ್ನು ತೆಗೆದುಕೊಂಡು ತವಾಗೆ ಎಣ್ಣೆ ಹಚ್ಚಿದ ನಂತರ ಇರುಳ್ಳಿಯ ಅರ್ಧ ಭಾಗದಿಂದ ಎಣ್ಣೆಯನ್ನು ಚೆನ್ನಾಗಿ ಹರಡಿ ಎಂದು ಹೇಳಿದ್ದಾರೆ.

ನೀವು ನಾನ್ ಸ್ಟಿಕ್ ತವಾ ಬಳಸುತ್ತಿದ್ದರೆ ಎಣ್ಣೆ ಹಚ್ಚುವ ಅಗತ್ಯವಿಲ್ಲ ಎಂದು ಅವರು ಹೇಳುತ್ತಾರೆ. ಎಣ್ಣೆ ಹಚ್ಚದೇ ನೀವು ಸುಲಭವಾಗಿ ದೋಸೆ ತಯಾರಿಸಬಹುದು ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ಒಣ ಮಾವಿನ ಚಟ್ನಿ ಮಾಡುವುದು ಹೇಗೆ? ಇಲ್ಲಿದೆ ಪಾಕ ವಿಧಾನ

ಮಧ್ಯಮ ಉರಿಯಲ್ಲಿರಲಿ:

ನೀವು ಹಿಟ್ಟನ್ನು ಸುರಿಯುವ ಮೊದಲು ತವಾ ಬಿಸಿಯಾಗಿರಬೇಕು ನಿಜ. ಆದರೆ ತವಾವನ್ನು ತುಂಬಾ ಬಿಸಿ ಮಾಡಬೇಡಿ. ಜೊತೆಗೆ ಹಿಟ್ಟನ್ನು ಸುರಿದ ನಂತರ ದೋಸೆ ಮಧ್ಯಮ ಉರಿಯಲ್ಲಿರಲಿ ಎಂದು ಅವರು ಹೇಳುತ್ತಾರೆ.

ಹಿಟ್ಟಿನ ಸ್ಥಿರತೆ:

ನೀವು ಪ್ರತಿ ಬಾರಿ ದೋಸೆ ತಯಾರಿಸುವಾಗ ಹಿಟ್ಟಿನ ಸ್ಥಿರತೆ ತುಂಬಾ ಅಗತ್ಯ. ಇದು ತುಂಬಾ ದಪ್ಪವಾಗಿರಬಾರದು ಅಥವಾ ತುಂಬಾ ನೀರಾಗಿ ಕೂಡ ಇರಬಾರದು. ಸರಿಯಾಗಿ ಇದ್ದರೆ ಮಾತ್ರ ನೀವು ಮಾಡುವ ದೋಸೆ ಪರಿಪೂರ್ಣವಾಗಲು ಸಾಧ್ಯ ಎಂದು ಕಪೂರ್​ ಹೇಳುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:35 pm, Thu, 2 March 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್