AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿದಿರಿನಲ್ಲಿ ತಯಾರಿಸಿದ ಚಿಕನ್ ಬಿರಿಯಾನಿ, ಇಲ್ಲಿದೆ ನೋಡಿ

ಫುಡ್ ಬ್ಲಾಗರ್​​ಗಳಾದ ಕೋಮಲ್ ಮತ್ತು ಅಭಿಷೇಕ್ ಅವರು ಹಂಚಿಕೊಂಡಿರುವ ಲಕ್ನೋದ ಬ್ಯಾಂಬೂ ಬಿರಿಯಾನಿ ತಯಾರಿಸುವ ವಿಡಿಯೋ ಇನ್ಸ್ಟಾಗ್ರಾಮ್​​​ನಲ್ಲಿ ವೈರಲ್ ಆಗಿದೆ.

Viral Video: ಬಿದಿರಿನಲ್ಲಿ ತಯಾರಿಸಿದ ಚಿಕನ್ ಬಿರಿಯಾನಿ, ಇಲ್ಲಿದೆ ನೋಡಿ
ಬಿದಿರಿನಲ್ಲಿ ತಯಾರಿಸಿದ ಚಿಕನ್ ಬಿರಿಯಾನಿ
ಮಾಲಾಶ್ರೀ ಅಂಚನ್​
| Edited By: |

Updated on: Apr 22, 2023 | 6:16 PM

Share

ಪ್ರಪಂಚದಾದ್ಯಂತ ಕೋಟ್ಯಾಂತರ ಜನರು ಇಷ್ಟಪಟ್ಟು ಇನ್ನುವ ಭಕ್ಷ್ಯವೆಂದರೆ ಅದು ಬಿರಿಯಾನಿ. ಅದಕ್ಕೆ ಯಾವುದೇ ಪರಿಚಯದ ಅಗತ್ಯವಿಲ್ಲ. ಬಿರಿಯಾನಿ ಎಂದರೆ ಸಾಕು ಬಾಯಲ್ಲಿ ನೀರೂರುತ್ತದೆ. ಅಷ್ಟು ಪ್ರಸಿದ್ಧವಾಗಿದೆ ಈ ಬಿರಿಯಾನಿ. ಅದರಲ್ಲೂ ಭಾರತದಲ್ಲಿ ಈ ಭಕ್ಷ್ಯಕ್ಕೆ ಹೆಚ್ಚಿನ ಅಭಿಮಾನಿಗಳಿದ್ದಾರೆ. ಬಿರಿಯಾನಿಯಲ್ಲೂ ಅನೇಕ ವಿಧಗಳಿವೆ. ಸಾಮಾನ್ಯವಾಗಿ ಮಟನ್ ಮತ್ತು ಚಿಕನ್ ಬಳಸಿ ಬಿರಿಯಾನಿ ತಯಾರಿಸಲಾಗುತ್ತದೆ. ಈಗ ಈ ಬಿರಿಯಾನಿಯ ಮಾತು ಏಕೆಂದರೆ, ಲಕ್ನೋದಲ್ಲಿ ಬಿರಿಯಾನಿ ತಯಾರಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಹಾರ ಪ್ರಿಯರ ಗಮನವನ್ನು ಸೆಳೆದಿದೆ. ಇನ್ಸ್ಟಾಗ್ರಾಮ್​​​ನಲ್ಲಿ ಜನಪ್ರಿಯ ಫುಡ್ ಬ್ಲಾಗರ್ ಗಳಾದ ಕೋಮಲ್ ಮತ್ತು ಅಭಿಷೇಕ್ ಅವರು ‘ದಿ ಪುಡೀ ಹ್ಯಾಟ್’ ಎಂಬ ಹೆಸರಿನ ಬಿರಿಯಾನಿಯ ತಯಾರಿಕೆಯ ವಿಡೀಯೋ ಕ್ಲಿಪ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಬ್ಯಾಂಬೂ ಬಿರಿಯಾನಿ. ನೀವು ಎಂದಾದರೂ ಈ ಬಿರಿಯಾನಿಯನ್ನು ಪ್ರಯತ್ನಿಸಿದ್ದೀರಾ? ಎಂದು ಅವರು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ನೀವು ಮಾಡಿದ್ದೆಲ್ಲ ಸಹಿಸಿಕೊಂಡು ಬಿರಿಯಾನಿ ಹಾಕುವ ದೇಶ ಇದಲ್ಲ; ಎಸ್​ಡಿಪಿಐ ಮುಖಂಡಗೆ ಸಿಟಿ ರವಿ ತಿರುಗೇಟು

ವೈರಲ್ ಆಗಿರುವ ಈ ವಿಡಿಯೋದಲ್ಲಿ ಬಿರಿಯಾನಿ ಮಾಡುವ ವಿಧಾನವನ್ನು ತೋರಿಸಲಾಗಿದೆ. ಇದರಲ್ಲಿ ಬಿರಿಯಾನಿಯನ್ನು ಬೇಯಿಸಲು ಬಿದಿರನ್ನು ಬಳಸಲಾಗಿದೆ. ಮೊದಲು ಬಿದಿರಿನ ಒಳಗೆ ಚಿಕನ್ ತುಂಡುಗಳು, ವಿವಿಧ ಮಸಾಲೆಗಳು, ಎಣ್ಣೆ ಉಪ್ಪನ್ನು ಸೇರಿಸಿ ಒಂದು ಚಮಚದ ಸಹಾಯದಿಂದ ಚೆನ್ನಾಗಿ ಮಿಶ್ರಣ ಮಾಡಲಾಗುತ್ತದೆ. ನಂತರ ಅದಕ್ಕೆ ಬೇಯಿಸಿದ ಬಿರಿಯಾನಿ (ಬಾಸುಮತಿ) ಅನ್ನವನ್ನು ಸೇರಿಸಿ ಅದನ್ನು ಮುಚ್ಚಲಾಗುತ್ತದೆ. ನಂತರ ಅದನ್ನು ಕಲ್ಲಿದ್ದಲಿನಲ್ಲಿ ಕಡಿಮೆ ಜ್ವಾಲೆಯಲ್ಲಿ ಸಂಪೂರ್ಣವಾಗಿ ಬೇಯಿಸಲಾಗುತ್ತದೆ. ಅದು ಸಂಪೂರ್ಣವಾಗಿ ಬೆಂದ ಬಳಿಕ ಒಂದು ಪ್ಲೇಟ್​​ಗೆ ಸರ್ವ್ ಮಾಡಲಾಗುತ್ತದೆ. ಈ ವೀಡಿಯೋ ನೋಡಿದ ಬಿರಿಯಾನಿ ಪ್ರಿಯರ ಬಾಯಲ್ಲಿ ನೀರೂರುವುದಂತೂ ಖಂಡಿತ. ಈ ವಿಡಿಯೋ 7 ಸಾವಿರಕ್ಕಿಂತಲೂ ಹೆಚ್ಚು ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಮತ್ತು ಹೆಚ್ಚಿನ ಕಮೆಂಟ್​​​ಗಳನ್ನು ಕೂಡಾ ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ