AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿದಿರಿನಲ್ಲಿ ತಯಾರಿಸಿದ ಚಿಕನ್ ಬಿರಿಯಾನಿ, ಇಲ್ಲಿದೆ ನೋಡಿ

ಫುಡ್ ಬ್ಲಾಗರ್​​ಗಳಾದ ಕೋಮಲ್ ಮತ್ತು ಅಭಿಷೇಕ್ ಅವರು ಹಂಚಿಕೊಂಡಿರುವ ಲಕ್ನೋದ ಬ್ಯಾಂಬೂ ಬಿರಿಯಾನಿ ತಯಾರಿಸುವ ವಿಡಿಯೋ ಇನ್ಸ್ಟಾಗ್ರಾಮ್​​​ನಲ್ಲಿ ವೈರಲ್ ಆಗಿದೆ.

Viral Video: ಬಿದಿರಿನಲ್ಲಿ ತಯಾರಿಸಿದ ಚಿಕನ್ ಬಿರಿಯಾನಿ, ಇಲ್ಲಿದೆ ನೋಡಿ
ಬಿದಿರಿನಲ್ಲಿ ತಯಾರಿಸಿದ ಚಿಕನ್ ಬಿರಿಯಾನಿ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 22, 2023 | 6:16 PM

ಪ್ರಪಂಚದಾದ್ಯಂತ ಕೋಟ್ಯಾಂತರ ಜನರು ಇಷ್ಟಪಟ್ಟು ಇನ್ನುವ ಭಕ್ಷ್ಯವೆಂದರೆ ಅದು ಬಿರಿಯಾನಿ. ಅದಕ್ಕೆ ಯಾವುದೇ ಪರಿಚಯದ ಅಗತ್ಯವಿಲ್ಲ. ಬಿರಿಯಾನಿ ಎಂದರೆ ಸಾಕು ಬಾಯಲ್ಲಿ ನೀರೂರುತ್ತದೆ. ಅಷ್ಟು ಪ್ರಸಿದ್ಧವಾಗಿದೆ ಈ ಬಿರಿಯಾನಿ. ಅದರಲ್ಲೂ ಭಾರತದಲ್ಲಿ ಈ ಭಕ್ಷ್ಯಕ್ಕೆ ಹೆಚ್ಚಿನ ಅಭಿಮಾನಿಗಳಿದ್ದಾರೆ. ಬಿರಿಯಾನಿಯಲ್ಲೂ ಅನೇಕ ವಿಧಗಳಿವೆ. ಸಾಮಾನ್ಯವಾಗಿ ಮಟನ್ ಮತ್ತು ಚಿಕನ್ ಬಳಸಿ ಬಿರಿಯಾನಿ ತಯಾರಿಸಲಾಗುತ್ತದೆ. ಈಗ ಈ ಬಿರಿಯಾನಿಯ ಮಾತು ಏಕೆಂದರೆ, ಲಕ್ನೋದಲ್ಲಿ ಬಿರಿಯಾನಿ ತಯಾರಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಹಾರ ಪ್ರಿಯರ ಗಮನವನ್ನು ಸೆಳೆದಿದೆ. ಇನ್ಸ್ಟಾಗ್ರಾಮ್​​​ನಲ್ಲಿ ಜನಪ್ರಿಯ ಫುಡ್ ಬ್ಲಾಗರ್ ಗಳಾದ ಕೋಮಲ್ ಮತ್ತು ಅಭಿಷೇಕ್ ಅವರು ‘ದಿ ಪುಡೀ ಹ್ಯಾಟ್’ ಎಂಬ ಹೆಸರಿನ ಬಿರಿಯಾನಿಯ ತಯಾರಿಕೆಯ ವಿಡೀಯೋ ಕ್ಲಿಪ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಬ್ಯಾಂಬೂ ಬಿರಿಯಾನಿ. ನೀವು ಎಂದಾದರೂ ಈ ಬಿರಿಯಾನಿಯನ್ನು ಪ್ರಯತ್ನಿಸಿದ್ದೀರಾ? ಎಂದು ಅವರು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ನೀವು ಮಾಡಿದ್ದೆಲ್ಲ ಸಹಿಸಿಕೊಂಡು ಬಿರಿಯಾನಿ ಹಾಕುವ ದೇಶ ಇದಲ್ಲ; ಎಸ್​ಡಿಪಿಐ ಮುಖಂಡಗೆ ಸಿಟಿ ರವಿ ತಿರುಗೇಟು

ವೈರಲ್ ಆಗಿರುವ ಈ ವಿಡಿಯೋದಲ್ಲಿ ಬಿರಿಯಾನಿ ಮಾಡುವ ವಿಧಾನವನ್ನು ತೋರಿಸಲಾಗಿದೆ. ಇದರಲ್ಲಿ ಬಿರಿಯಾನಿಯನ್ನು ಬೇಯಿಸಲು ಬಿದಿರನ್ನು ಬಳಸಲಾಗಿದೆ. ಮೊದಲು ಬಿದಿರಿನ ಒಳಗೆ ಚಿಕನ್ ತುಂಡುಗಳು, ವಿವಿಧ ಮಸಾಲೆಗಳು, ಎಣ್ಣೆ ಉಪ್ಪನ್ನು ಸೇರಿಸಿ ಒಂದು ಚಮಚದ ಸಹಾಯದಿಂದ ಚೆನ್ನಾಗಿ ಮಿಶ್ರಣ ಮಾಡಲಾಗುತ್ತದೆ. ನಂತರ ಅದಕ್ಕೆ ಬೇಯಿಸಿದ ಬಿರಿಯಾನಿ (ಬಾಸುಮತಿ) ಅನ್ನವನ್ನು ಸೇರಿಸಿ ಅದನ್ನು ಮುಚ್ಚಲಾಗುತ್ತದೆ. ನಂತರ ಅದನ್ನು ಕಲ್ಲಿದ್ದಲಿನಲ್ಲಿ ಕಡಿಮೆ ಜ್ವಾಲೆಯಲ್ಲಿ ಸಂಪೂರ್ಣವಾಗಿ ಬೇಯಿಸಲಾಗುತ್ತದೆ. ಅದು ಸಂಪೂರ್ಣವಾಗಿ ಬೆಂದ ಬಳಿಕ ಒಂದು ಪ್ಲೇಟ್​​ಗೆ ಸರ್ವ್ ಮಾಡಲಾಗುತ್ತದೆ. ಈ ವೀಡಿಯೋ ನೋಡಿದ ಬಿರಿಯಾನಿ ಪ್ರಿಯರ ಬಾಯಲ್ಲಿ ನೀರೂರುವುದಂತೂ ಖಂಡಿತ. ಈ ವಿಡಿಯೋ 7 ಸಾವಿರಕ್ಕಿಂತಲೂ ಹೆಚ್ಚು ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಮತ್ತು ಹೆಚ್ಚಿನ ಕಮೆಂಟ್​​​ಗಳನ್ನು ಕೂಡಾ ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ