AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Child Health: ನಿಮ್ಮ ಮಕ್ಕಳು ಅಸಭ್ಯವಾಗಿ ವರ್ತಿಸಿದ್ರೆ ಗದರಬೇಡಿ, ತಿಳಿಹೇಳಿ! ಇಲ್ಲವಾದ್ರೆ ಪರಿಣಾಮ ತಪ್ಪಿದಲ್ಲ

ಬೇರೆಯವರ ಎದುರು ನಿಮ್ಮ ಮಕ್ಕಳನ್ನು ಗದರುವುದರಿಂದ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ.

Child Health: ನಿಮ್ಮ ಮಕ್ಕಳು ಅಸಭ್ಯವಾಗಿ ವರ್ತಿಸಿದ್ರೆ ಗದರಬೇಡಿ, ತಿಳಿಹೇಳಿ! ಇಲ್ಲವಾದ್ರೆ ಪರಿಣಾಮ ತಪ್ಪಿದಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 22, 2022 | 8:49 PM

Share

ಮಕ್ಕಳು ಸಾಮಾನ್ಯವಾಗಿ ಕಿಡಿಗೇಡಿಗಳು, ಅದಕ್ಕೆ ಅವರನ್ನು ಮಕ್ಕಳು (Child) ಎನ್ನುವುದು. ಚೇಷ್ಟೆ ಇಲ್ಲದ ಬಾಲ್ಯವಿಲ್ಲ. ನಾವೆಲ್ಲರೂ ಆ ಹಂತವನ್ನು ದಾಟಿದ್ದೇವೆ. ಈಗ ಅವರಿಗೆ ಮಾಡಬೇಡಿ ಎಂದು ಹೇಳಿದರೆ ಅವರು ಖಂಡಿತವಾಗಿಯೂ ಕೇಳಲ್ಲ. ಮನೆಯಲ್ಲಿ ಚಿಕ್ಕ ಮಕ್ಕಳಿದ್ದರೆ ಎಷ್ಟು ಗಲಾಟೆಯಾಗುತ್ತದೆ ಎಂಬುದನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಇದು ಕೆಲವೊಮ್ಮೆ ಸಂತಸ ಉಂಟು ಮಾಡಿದರೆ, ಇನ್ನು ಕೆಲವೊಮ್ಮೆ ಉತ್ತಮ ಅನುಭವವನ್ನು ನೀಡುತ್ತದೆ. ಆದರೆ ಕೆಲವು ಸಂದರ್ಭಗಳಲ್ಲಿ ಮಕ್ಕಳು ಮಾಡುವ ಕಿಡಿಗೇಡಿತನ ಗಂಭೀರವಾಗುತ್ತದೆ. ಇದರಿಂದ ಪೋಷಕರು ಅವರ ಮೇಲೆ ಕೋಪ ತೋರಿಸುತ್ತಾರೆ. ತ್ರಾಸದಾಯಕ ಮತ್ತು ಚೇಷ್ಟೆಯ ಮಕ್ಕಳೊಂದಿಗೆ ವ್ಯವಹರಿಸುವಾಗ ಪೋಷಕರು ತಾಳ್ಮೆ ಕಳೆದುಕೊಳ್ಳುತ್ತಾರೆ. ಕೆಲವೊಮ್ಮೆ ಅವರು ತಮ್ಮ ಸ್ನೇಹಿತರು ಅಥವಾ ಸಹಪಾಠಿಗಳ ಮುಂದೆ ಮಕ್ಕಳ ಮೇಲೆ ಕೋಪವನ್ನು ತೋರಿಸುತ್ತಾರೆ. ಆದರೆ ಹೀಗೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎನ್ನುತ್ತಾರೆ ಮಾನಸಿಕ ಆರೋಗ್ಯ ತಜ್ಞರು.

ಇದು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಆತಂಕವಿದೆ. ಇತರರ ಮುಂದೆ ಮಕ್ಕಳನ್ನು ಬೈಯುವುದು ಅನೇಕ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಸಮಸ್ಯೆಗಳು ಪ್ರೌಢಾವಸ್ಥೆಯವರೆಗೂ ಅವರನ್ನು ಬಾಧಿಸುತ್ತಲೇ ಇರುತ್ತವೆ. 13 ವರ್ಷ ವಯಸ್ಸಿನ ಮಕ್ಕಳ ವರ್ತನೆ ಮೇಲೆ ಅಧ್ಯಯನವನ್ನು ನಡೆಸಿದ್ದು, ಅವರ ಪೋಷಕರು ಬೈಯುತ್ತಿದ್ದು, ಈ ಅಧ್ಯಯನವು ಮಕ್ಕಳಲ್ಲಿ ಖಿನ್ನತೆಯ ಲಕ್ಷಣಗಳು ಕಂಡುಬಂದಿವೆ ಎನ್ನಲಾಗುತ್ತಿದೆ.

ಮಕ್ಕಳನ್ನು ಬೈಯುವುದರಿಂದ ಸಂಧಿವಾತ, ತಲೆನೋವು, ಬೆನ್ನು ಮತ್ತು ಕತ್ತಿನ ಸಮಸ್ಯೆಗಳಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದು ಅಧ್ಯಯನದಿಂದ ದೃಢಪಟ್ಟಿದೆ. ಈ ಅಧ್ಯಯನದ ಪ್ರಕಾರ ಪ್ರತಿಕೂಲ ಬಾಲ್ಯದ ಅನುಭವಗಳು ಆಘಾತಕಾರಿ ವೈದ್ಯಕೀಯ ಪರಿಸ್ಥಿತಿಗಳಿಗೆ ನಿಕಟ ಸಂಬಂಧ ಹೊಂದಿವೆ. ಆಘಾತಕಾರಿ ಬಾಲ್ಯದ ಅನುಭವಗಳು ಖಿನ್ನತೆ, ಬೈಪೋಲಾರ್ ಡಿಸಾರ್ಡರ್ ಮತ್ತು ಒತ್ತಡದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಗದರಿಸುವಿಕೆ ಮತ್ತು ಇತರ ಕಠಿಣ ಶಿಕ್ಷೆಯು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಬಹಳ ನಕಾರಾತ್ಮಕ ಪರಿಣಾಮ ಬೀರುತ್ತದೆ.

13 ವರ್ಷ ವಯಸ್ಸಿನ ಮಕ್ಕಳು ತಮ್ಮ ಹೆತ್ತವರೊಂದಿಗೆ ಕೋಪಗೊಳ್ಳುತ್ತಾರೆ ಎಂದು ಅಧ್ಯಯನಗಳು ಹೇಳುತ್ತವೆ. ಈ ಕಠಿಣ ನಡವಳಿಕೆಯು ಮಕ್ಕಳಿಗೆ ಶಿಸ್ತನ್ನು ಕಲಿಸುತ್ತದೆ ಎಂದು ಕೆಲವರು ನಂಬುತ್ತಾರೆ. ಆದರೆ ಇದಕ್ಕೆ ವಿರುದ್ಧವಾಗಿ ಇದು ಅವರ ನಡವಳಿಕೆಯಲ್ಲಿ ಹೆಚ್ಚಿನ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ನೆನಪಿನಲ್ಲಿಡಬೇಕು. ಆದುದರಿಂದಲೇ ಮಕ್ಕಳಿಗೆ ಚಿಕ್ಕಂದಿನಿಂದಲೇ ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದನ್ನು ಕಲಿಸುವ ಜವಾಬ್ದಾರಿ ಪೋಷಕರ ಮೇಲಿದೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ