AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮಕ್ಕಳು ಬ್ರೇಕ್​ಫಾಸ್ಟ್ ಸ್ಕಿಪ್ ಮಾಡ್ತಿದ್ದಾರಾ, ಈ ಅಭ್ಯಾಸ ಮಕ್ಕಳನ್ನು ಖಿನ್ನತೆಗೆ ದೂಡಬಹುದು

ಶಾಲೆಗೆ ಹೋಗಲು ಹೊತ್ತಾಯಿತೆಂದು ತಿಂಡಿ ತಿನ್ನದೇ ಮಕ್ಕಳನ್ನು ಶಾಲೆಗೆ ಹೋಗಲು ಬಿಡಬೇಡಿ, ಅಥವಾ ಈ ತಿಂಡಿ ಇಷ್ಟವಿಲ್ಲ ಎಂದು ಮೂಗು ಮುರಿದರೂ ಸೇರಿದಷ್ಟು ತಿನ್ನುವಂತೆ ಹೇಳಿ ಜತೆಗೆ ಹಣ್ಣು, ಮೊಳಕೆ ಕಾಳು ಏನನ್ನಾದರೂ ನೀಡಿ.

ನಿಮ್ಮ ಮಕ್ಕಳು ಬ್ರೇಕ್​ಫಾಸ್ಟ್ ಸ್ಕಿಪ್ ಮಾಡ್ತಿದ್ದಾರಾ, ಈ ಅಭ್ಯಾಸ ಮಕ್ಕಳನ್ನು ಖಿನ್ನತೆಗೆ ದೂಡಬಹುದು
Breakfast
TV9 Web
| Edited By: |

Updated on: Aug 25, 2022 | 9:56 AM

Share

ಶಾಲೆಗೆ ಹೋಗಲು ಹೊತ್ತಾಯಿತೆಂದು ತಿಂಡಿ ತಿನ್ನದೇ ಮಕ್ಕಳನ್ನು ಶಾಲೆಗೆ ಹೋಗಲು ಬಿಡಬೇಡಿ, ಅಥವಾ ಈ ತಿಂಡಿ ಇಷ್ಟವಿಲ್ಲ ಎಂದು ಮೂಗು ಮುರಿದರೂ ಸೇರಿದಷ್ಟು ತಿನ್ನುವಂತೆ ಹೇಳಿ ಜತೆಗೆ ಹಣ್ಣು, ಮೊಳಕೆ ಕಾಳು ಏನನ್ನಾದರೂ ನೀಡಿ. ಬೆಳಗ್ಗಿನ ತಿಂಡಿ ತಿನ್ನುವುದನ್ನು ಮಕ್ಕಳು ಎಂದೂ ಬಿಡಬಾರದು, ಸೇರಿದಷ್ಟು ತಿಂಡಿಯನ್ನು ತಿನ್ನಲೇಬೇಕು, ಇಲ್ಲವಾದಲ್ಲಿ ಈ ಅಭ್ಯಾಸವು ಮಕ್ಕಳನ್ನು ಆತಂಕ ಅಥವಾ ಖಿನ್ನತೆಗೆ ದೂಡಬಹುದು ಎಂದು ಅಧ್ಯಯನವೊಂದು ಹೇಳಿದೆ.

ಒಂದೊಮ್ಮೆ ಮಕ್ಕಳು ಬೆಳಗಿನ ಉಪಾಹಾರ ಸೇವಿಸದಿದ್ದರೆ ಶಾಲೆಯಲ್ಲಿ ಚಟುವಟಿಕೆಯಿಂದಿರಲು ಸಾಧ್ಯವಿಲ್ಲ, ಒಂದೊಮ್ಮೆ ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ಸೇವಿಸಿದರೆ ಕ್ರಮೇಣವಾಗಿ ಮಗುವಿನ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇತ್ತೀಚಿನ ಅಧ್ಯಯನದ ಪ್ರಕಾರ ಮನೆಯಲ್ಲಿ ಆರೋಗ್ಯಕರ ಉಪಹಾರ ಸೇವಿಸುವ ಮಕ್ಕಳ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ.

ಹಿಂದಿನ ಸಂಶೋಧನೆಯು ಪೌಷ್ಟಿಕ ಉಪಹಾರದ ಪ್ರಾಮುಖ್ಯತೆಯನ್ನು ಸೂಚಿಸಿದ್ದರೂ, ಮಕ್ಕಳು ಉಪಹಾರವನ್ನು ತಿನ್ನುತ್ತಾರೆಯೇ ಅಥವಾ ಇಲ್ಲವೇ, ಹಾಗೆಯೇ ಅವರು ಎಲ್ಲಿ ಮತ್ತು ಏನು ಸೇವಿಸುತ್ತಾರೆ ಎಂಬ ವರದಿಯ ಪರಿಣಾಮಗಳನ್ನು ಗುರುತಿಸಲಾಗಿದೆ.

ಸಂಶೋಧನೆಗಳನ್ನು ಫ್ರಾಂಟಿಯರ್ಸ್ ಇನ್ ನ್ಯೂಟ್ರಿಷನ್ ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ. ಕೇವಲ ತಿಂಡಿಯನ್ನು ತಿನ್ನುವುದು ಮಾತ್ರ ಮುಖ್ಯವಲ್ಲ ಮಕ್ಕಳು ಎಲ್ಲಿ ಹಾಗೂ ಯಾವ ರೀತಿಯ ಆಹಾರವನ್ನು ಸೇವಿಸುತ್ತಾರೆ ಎಂಬುದು ಕೂಡ ಮುಖ್ಯವಾಗಿರುತ್ತದೆ.

ಬೆಳಗಿನ ಉಪಾಹಾರವನ್ನು ಬಿಡುವುದರಿಂದ ಮಕ್ಕಳಲ್ಲಿ ಮಾನಸಿಕ ಸಮಸ್ಯೆ ಉಂಟಾಗುತ್ತದೆ. ಮನೆಯ ತಿಂಡಿ ಬಿಟ್ಟು ಹೊರಗಡೆ ತಿಂಡಿಯನ್ನು ಸೇವಿಸುವುದು ಬೆಳಗ್ಗೆಯ ತಿಂಡಿ ಸೇವಿಸದೆ ಇರುವುದಕ್ಕಿಂತಲೂ ಕೆಟ್ಟ ಅಭ್ಯಾಸವಾಗಿದೆ. ಮನೆಯಿಂದ ಹೊರಗಿರುವ ಊಟವು ಮನೆಯಲ್ಲಿ ತಯಾರಿಸಿದ ಆಹಾರಕ್ಕಿಂತ ಕಡಿಮೆ ಪೌಷ್ಟಿಕಾಂಶವನ್ನು ಹೊಂದಿರುವುದು ಇದಕ್ಕೆ ಕಾರಣ ಎಂದು ಅಧ್ಯಯನ ಹೇಳಿದೆ.

ಕಾಫಿ, ಹಾಲು, ಚಹಾ, ಚಾಕೊಲೇಟ್, ಕೋಕೋ, ಮೊಸರು, ಬ್ರೆಡ್, ಟೋಸ್ಟ್, ಧಾನ್ಯಗಳು ಮತ್ತು ಪೇಸ್ಟ್ರಿಗಳು ವರ್ತನೆಯ ಸಮಸ್ಯೆಗಳ ಕಡಿಮೆ ಅಪಾಯವನ್ನು ಹೊಂದಿವೆ. ಮೊಟ್ಟೆಗಳು, ಚೀಸ್ ಹೆಚ್ಚಿನ ಅಪಾಯವನ್ನು ಹೊಂದಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್