AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮಕ್ಕಳು ಬ್ರೇಕ್​ಫಾಸ್ಟ್ ಸ್ಕಿಪ್ ಮಾಡ್ತಿದ್ದಾರಾ, ಈ ಅಭ್ಯಾಸ ಮಕ್ಕಳನ್ನು ಖಿನ್ನತೆಗೆ ದೂಡಬಹುದು

ಶಾಲೆಗೆ ಹೋಗಲು ಹೊತ್ತಾಯಿತೆಂದು ತಿಂಡಿ ತಿನ್ನದೇ ಮಕ್ಕಳನ್ನು ಶಾಲೆಗೆ ಹೋಗಲು ಬಿಡಬೇಡಿ, ಅಥವಾ ಈ ತಿಂಡಿ ಇಷ್ಟವಿಲ್ಲ ಎಂದು ಮೂಗು ಮುರಿದರೂ ಸೇರಿದಷ್ಟು ತಿನ್ನುವಂತೆ ಹೇಳಿ ಜತೆಗೆ ಹಣ್ಣು, ಮೊಳಕೆ ಕಾಳು ಏನನ್ನಾದರೂ ನೀಡಿ.

ನಿಮ್ಮ ಮಕ್ಕಳು ಬ್ರೇಕ್​ಫಾಸ್ಟ್ ಸ್ಕಿಪ್ ಮಾಡ್ತಿದ್ದಾರಾ, ಈ ಅಭ್ಯಾಸ ಮಕ್ಕಳನ್ನು ಖಿನ್ನತೆಗೆ ದೂಡಬಹುದು
Breakfast
TV9 Web
| Updated By: ನಯನಾ ರಾಜೀವ್|

Updated on: Aug 25, 2022 | 9:56 AM

Share

ಶಾಲೆಗೆ ಹೋಗಲು ಹೊತ್ತಾಯಿತೆಂದು ತಿಂಡಿ ತಿನ್ನದೇ ಮಕ್ಕಳನ್ನು ಶಾಲೆಗೆ ಹೋಗಲು ಬಿಡಬೇಡಿ, ಅಥವಾ ಈ ತಿಂಡಿ ಇಷ್ಟವಿಲ್ಲ ಎಂದು ಮೂಗು ಮುರಿದರೂ ಸೇರಿದಷ್ಟು ತಿನ್ನುವಂತೆ ಹೇಳಿ ಜತೆಗೆ ಹಣ್ಣು, ಮೊಳಕೆ ಕಾಳು ಏನನ್ನಾದರೂ ನೀಡಿ. ಬೆಳಗ್ಗಿನ ತಿಂಡಿ ತಿನ್ನುವುದನ್ನು ಮಕ್ಕಳು ಎಂದೂ ಬಿಡಬಾರದು, ಸೇರಿದಷ್ಟು ತಿಂಡಿಯನ್ನು ತಿನ್ನಲೇಬೇಕು, ಇಲ್ಲವಾದಲ್ಲಿ ಈ ಅಭ್ಯಾಸವು ಮಕ್ಕಳನ್ನು ಆತಂಕ ಅಥವಾ ಖಿನ್ನತೆಗೆ ದೂಡಬಹುದು ಎಂದು ಅಧ್ಯಯನವೊಂದು ಹೇಳಿದೆ.

ಒಂದೊಮ್ಮೆ ಮಕ್ಕಳು ಬೆಳಗಿನ ಉಪಾಹಾರ ಸೇವಿಸದಿದ್ದರೆ ಶಾಲೆಯಲ್ಲಿ ಚಟುವಟಿಕೆಯಿಂದಿರಲು ಸಾಧ್ಯವಿಲ್ಲ, ಒಂದೊಮ್ಮೆ ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ಸೇವಿಸಿದರೆ ಕ್ರಮೇಣವಾಗಿ ಮಗುವಿನ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇತ್ತೀಚಿನ ಅಧ್ಯಯನದ ಪ್ರಕಾರ ಮನೆಯಲ್ಲಿ ಆರೋಗ್ಯಕರ ಉಪಹಾರ ಸೇವಿಸುವ ಮಕ್ಕಳ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ.

ಹಿಂದಿನ ಸಂಶೋಧನೆಯು ಪೌಷ್ಟಿಕ ಉಪಹಾರದ ಪ್ರಾಮುಖ್ಯತೆಯನ್ನು ಸೂಚಿಸಿದ್ದರೂ, ಮಕ್ಕಳು ಉಪಹಾರವನ್ನು ತಿನ್ನುತ್ತಾರೆಯೇ ಅಥವಾ ಇಲ್ಲವೇ, ಹಾಗೆಯೇ ಅವರು ಎಲ್ಲಿ ಮತ್ತು ಏನು ಸೇವಿಸುತ್ತಾರೆ ಎಂಬ ವರದಿಯ ಪರಿಣಾಮಗಳನ್ನು ಗುರುತಿಸಲಾಗಿದೆ.

ಸಂಶೋಧನೆಗಳನ್ನು ಫ್ರಾಂಟಿಯರ್ಸ್ ಇನ್ ನ್ಯೂಟ್ರಿಷನ್ ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ. ಕೇವಲ ತಿಂಡಿಯನ್ನು ತಿನ್ನುವುದು ಮಾತ್ರ ಮುಖ್ಯವಲ್ಲ ಮಕ್ಕಳು ಎಲ್ಲಿ ಹಾಗೂ ಯಾವ ರೀತಿಯ ಆಹಾರವನ್ನು ಸೇವಿಸುತ್ತಾರೆ ಎಂಬುದು ಕೂಡ ಮುಖ್ಯವಾಗಿರುತ್ತದೆ.

ಬೆಳಗಿನ ಉಪಾಹಾರವನ್ನು ಬಿಡುವುದರಿಂದ ಮಕ್ಕಳಲ್ಲಿ ಮಾನಸಿಕ ಸಮಸ್ಯೆ ಉಂಟಾಗುತ್ತದೆ. ಮನೆಯ ತಿಂಡಿ ಬಿಟ್ಟು ಹೊರಗಡೆ ತಿಂಡಿಯನ್ನು ಸೇವಿಸುವುದು ಬೆಳಗ್ಗೆಯ ತಿಂಡಿ ಸೇವಿಸದೆ ಇರುವುದಕ್ಕಿಂತಲೂ ಕೆಟ್ಟ ಅಭ್ಯಾಸವಾಗಿದೆ. ಮನೆಯಿಂದ ಹೊರಗಿರುವ ಊಟವು ಮನೆಯಲ್ಲಿ ತಯಾರಿಸಿದ ಆಹಾರಕ್ಕಿಂತ ಕಡಿಮೆ ಪೌಷ್ಟಿಕಾಂಶವನ್ನು ಹೊಂದಿರುವುದು ಇದಕ್ಕೆ ಕಾರಣ ಎಂದು ಅಧ್ಯಯನ ಹೇಳಿದೆ.

ಕಾಫಿ, ಹಾಲು, ಚಹಾ, ಚಾಕೊಲೇಟ್, ಕೋಕೋ, ಮೊಸರು, ಬ್ರೆಡ್, ಟೋಸ್ಟ್, ಧಾನ್ಯಗಳು ಮತ್ತು ಪೇಸ್ಟ್ರಿಗಳು ವರ್ತನೆಯ ಸಮಸ್ಯೆಗಳ ಕಡಿಮೆ ಅಪಾಯವನ್ನು ಹೊಂದಿವೆ. ಮೊಟ್ಟೆಗಳು, ಚೀಸ್ ಹೆಚ್ಚಿನ ಅಪಾಯವನ್ನು ಹೊಂದಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್