AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Christmas 2025: ಯೇಸುಕ್ರಿಸ್ತರ ಜನ್ಮ ದಿನಾಚರಣೆಯ ಸಂಭ್ರಮ; ಕ್ರಿಸ್ಮಸ್‌ ಹಬ್ಬದ ಇತಿಹಾಸ, ಮಹತ್ವವನ್ನು ತಿಳಿಯಿರಿ

ಕ್ರಿಸ್‌ಮಸ್‌ ಹಬ್ಬವು ಕ್ರೈಸ್ತ ಧರ್ಮೀಯರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಪ್ರಪಂಚದಾದ್ಯಂತ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಕ್ರಿಸ್‌ಮಸ್ ಕೇವಲ ಧಾರ್ಮಿಕ ಆಚರಣೆಯಲ್ಲ, ಪ್ರೀತಿ, ಕರುಣೆ, ಶಾಂತಿ ಮತ್ತು ಮಾನವೀಯತೆಯ ಸಂಕೇತವಾಗಿದೆ. ಈ ಹಬ್ಬದ ಇತಿಹಾಸವೇನು, ಕ್ರಿಸ್‌ಮಸ್‌ ಹಬ್ಬ ಆರಂಭವಾಗಿದ್ದು ಹೇಗೆ ಈ ಎಲ್ಲದರ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

Christmas 2025: ಯೇಸುಕ್ರಿಸ್ತರ ಜನ್ಮ ದಿನಾಚರಣೆಯ ಸಂಭ್ರಮ; ಕ್ರಿಸ್ಮಸ್‌ ಹಬ್ಬದ ಇತಿಹಾಸ, ಮಹತ್ವವನ್ನು ತಿಳಿಯಿರಿ
ಕ್ರಿಸ್‌ಮಸ್‌Image Credit source: Freepik
ಮಾಲಾಶ್ರೀ ಅಂಚನ್​
|

Updated on:Dec 24, 2025 | 5:58 PM

Share

ಡಿಸೆಂಬರ್‌ ಎಂದಾಕ್ಷಣ ಮೊದಲಿಗೆ ನೆನಪಿಗೆ ಬರುವುದೇ ಕ್ರಿಸ್‌ಮಸ್‌ (Christmas) ಹಬ್ಬ. ಕ್ರೈಸ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈ ಕ್ರಿಸ್ಮಸ್‌  ಹಬ್ಬವನ್ನು  ಪ್ರಪಂಚದಾದ್ಯಂತ ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ, ವಿನೋದದ ಮೂಲಕ ಈ ಹಬ್ಬವನ್ನು ಆಚರಿಸುತ್ತೇವೆ. ಕ್ರಿಸ್‌ಮಸ್ ಕೇವಲ ಆಚರಣೆಯಲ್ಲ, ಇದು ಪ್ರೀತಿ, ಕರುಣೆ, ನಂಬಿಕೆ ಮತ್ತು ಮಾನವೀಯತೆಯ ಪುನರುಜ್ಜೀವನದ ಕಥೆಯಾಗಿದೆ. ಅಲ್ಲದೆ ಈ ಹಬ್ಬದ ಹಿಂದೆ ಆಳವಾದ ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವವಿದೆ, ಯೇಸು ಕ್ರಿಸ್ತರು ಜನಿಸಿದ ಪುಣ್ಯ ದಿನದಂದು ಕ್ರಿಸ್ಮಸ್‌ ಹಬ್ಬವನ್ನು ಆಚರಿಸುವ ಸಂಪ್ರದಾಯ ನಡೆದುಕೊಂಡು ಬಂದಿದ್ದು, ಈ ಹಬ್ಬದ ಇತಿಹಾಸವೇನು, ಕ್ರಿಸ್‌ಮಸ್‌ ಹಬ್ಬ ಆರಂಭವಾಗಿದ್ದು ಹೇಗೆ ಈ ಎಲ್ಲದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯೋಣ ಬನ್ನಿ.

ಕ್ರಿಸ್‌ಮಸ್ ಹಬ್ಬವನ್ನು ಏಕೆ ಆಚರಿಸಲಾಗುತ್ತದೆ?

ಯೇಸುಕ್ರಿಸ್ತರ ಜನ್ಮದಿನವಾದ ಡಿಸೆಂಬರ್‌ 25 ರಂದು ಕ್ರಿಸ್‌ಮಸ್ ಹಬ್ಬವನ್ನು ಆಚರಿಸಲಾಗುತ್ತದೆ. ಕ್ರಿಶ್ಚಿಯನ್ ನಂಬಿಕೆಯ ಪ್ರಕಾರ, ಯೇಸುಕ್ರಿಸ್ತರು ದೇವರ ಮಗ ಮತ್ತು ಮಾನವೀಯತೆಯ ರಕ್ಷಕರೆಂದು ಪರಿಗಣಿಸಲ್ಪಟ್ಟಿದ್ದಾರೆ. ಪ್ರೀತಿ, ಕ್ಷಮೆ, ಸೇವೆ ಮತ್ತು ತ್ಯಾಗದ ಮಾರ್ಗವನ್ನು ತೋರಿದ, ಸಮಾಜದಲ್ಲಿ ಕರುಣೆ ಮತ್ತು ಸಹೋದರತ್ವ ಪಾಠ ಮಾಡಿದ ಇವರನ್ನು ಸ್ಮರಿಸುವ ಸಲುವಾಗಿ ಕ್ರಿಸ್ಮಸ್‌ ಹಬ್ಬವನ್ನು ಆಚರಿಸಲಾಗುತ್ತದೆ.

ಕ್ರಿಸ್ಮಸ್‌ ಹಬ್ಬದ ಇತಿಹಾಸವೇನು?

ಬೈಬಲ್‌ನಲ್ಲಿ ಯೇಸುಕ್ರಿಸ್ತರ ನಿಖರವಾದ ಜನ್ಮ ದಿನಾಂಕದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇತಿಹಾಸಕಾರರ ಪ್ರಕಾರ, ರೋಮನ್ ಸಾಮ್ರಾಜ್ಯದಲ್ಲಿ, ಸೂರ್ಯ ದೇವರ ಹಬ್ಬವನ್ನು (ಸೋಲ್ ಇನ್ವಿಕ್ಟಸ್) ಡಿಸೆಂಬರ್ 25 ರಂದು ಆಚರಿಸಲಾಗುತ್ತಿತ್ತು. ಈ ಸಮಯವು ಚಳಿಗಾಲದ ಅಯನ ಸಂಕ್ರಾಂತಿಯ ಆಸುಪಾಸಿನಲ್ಲಿ ಬರುತ್ತದೆ, ಆಗ ಹಗಲು ಹೆಚ್ಚಿರುತ್ತವೆ. ಇದರಿಂದಾಗಿ ನಾಲ್ಕನೇ ಶತಮಾನದಲ್ಲಿ ನಾಲ್ಕನೇ ಶತಮಾನದಲ್ಲಿ ಕ್ರಿಶ್ಚಿಯನ್ ಧರ್ಮದ ವಿಸ್ತರಣೆಯ ಸಮಯದಲ್ಲಿ, ಚರ್ಚ್‌ಗಳು ಯೇಸುವಿನ ಜನ್ಮದಿನವನ್ನು ಡಿಸೆಂಬರ್ 25 ರಂದು ಆಚರಿಸುವುದಾಗಿ ಘೋಷಿಸಿದವು. ಹಳೆಯ ಸೂರ್ಯನ ಹಬ್ಬವನ್ನು ಆಧ್ಯಾತ್ಮಿಕ ಬೆಳಕಿನ ಹಬ್ಬವಾಗಿ, ಅಂದರೆ ಕತ್ತಲಿನಿಂದ ಬೆಳಕಿನೆಡೆಗೆ ಎಂಬ ಕಲ್ಪನೆಯೊಂದಿಗೆ ಕ್ರಿಸ್ಮಸ್‌ ಹಬ್ಬದ ಆಚರಣೆ ಶುರುವಾಯಿತು.

ಕ್ರಿಸ್‌ಮಸ್ ಹಬ್ಬವನ್ನು ಮೊದಲು ಔಪಚಾರಿಕವಾಗಿ ರೋಮ್‌ನಲ್ಲಿ ನಾಲ್ಕನೇ ಶತಮಾನದಲ್ಲಿ ಆಚರಿಸಲಾಯಿತು. ಕಾಲಾನಂತರದಲ್ಲಿ, ಈ ಆಚರಣೆಯು ಯುರೋಪಿನಾದ್ಯಂತ ಮತ್ತು ನಂತರ ಪ್ರಪಂಚದಾದ್ಯಂತ ಹರಡಿತು. ಕ್ರಿಸ್‌ಮಸ್ ಹಬ್ಬವು ಭಾರತಕ್ಕೆ ಪೋರ್ಚುಗೀಸ್ ಮತ್ತು ಬ್ರಿಟಿಷ್ ಮಿಷನರಿಗಳೊಂದಿಗೆ ಆಗಮಿಸಿತು. ಇಂದು ಪ್ರಪಂಚದಾದ್ಯಂತ ಈ ಹಬ್ಬವನ್ನು ಜಾತಿ ಧರ್ಮದ ಬೇಧವಿಲ್ಲದೆ ಆಚರಿಸಲಾಗುತ್ತಿದೆ.

ಕ್ರಿಸ್‌ಮಸ್‌ಗೆ ಸಂಬಂಧಿಸಿದ ಪ್ರಮುಖ ಸಂಪ್ರದಾಯಗಳೇನು?

ಕ್ರಿಸ್‌ಮಸ್ ದಿನದಂದು ಕ್ರಿಶ್ಚಿಯನ್ನರು ಚರ್ಚ್‌ಗೆ ಹೋಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮತ್ತು ಕ್ಯಾರೋಲ್‌ಗಳನ್ನು ಹಾಡಲಾಗುತ್ತದೆ. ಯೇಸುಕ್ರಿಸ್ತರ ಜನನವನ್ನು ಸಂಭ್ರಮಿಸುವ ಹಾಡುಗಳನ್ನು ಕ್ಯಾರೋಲ್‌ಗಳು ಎಂದು ಕರೆಯಲಾಗುತ್ತದೆ.  ಮುಖ್ಯವಾಗಿ  ಮನೆಗಳು ಮತ್ತು ಚರ್ಚ್‌ಗಳನ್ನು ದೀಪಗಳಿಂದ ಅಲಂಕರಿಸಲಾಗುತ್ತದೆ. ಕ್ರಿಸ್‌ಮಸ್ ಟ್ರೀ ಅಲಂಕರಿಸುವ, ಕೇಕ್ ಕತ್ತರಿಸುವ ಮತ್ತು ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಸಂಪ್ರದಾಯಗಳು ಇವೆ.

ಇದನ್ನೂ ಓದಿ: ಕ್ರಿಸ್ಮಸ್‌ ಹಬ್ಬಕ್ಕೆ ಮನೆಯಲ್ಲೇ ಬಲು ಸುಲಭವಾಗಿ ತಯಾರಿಸಿ ಆರೋಗ್ಯಕರ ಡ್ರೈಫ್ರೂಟ್‌ ಕೇಕ್‌

ಕ್ರಿಸ್‌ಮಸ್‌ ಹಬ್ಬದ ಸಾಮಾಜಿಕ ಮತ್ತು ಮಾನವೀಯ ಸಂದೇಶ:

ಕ್ರಿಸ್‌ಮಸ್ ಕೇವಲ ಆಚರಣೆಯಲ್ಲ, ಅಗತ್ಯವಿರುವವರಿಗೆ, ಬಡವರಿಗೆ ಸಹಾಯ ನೀಡುವ ಮತ್ತು ಸೇವೆ ಮಾಡುವ ದಿನವೂ ಆಗಿದೆ. ಪ್ರೀತಿ ಮತ್ತು ಕರುಣೆ ಸಮಾಜವನ್ನು ಉತ್ತಮವಾಗಿ ಬದಲಾಯಿಸಬಹುದು ಎಂದು ಈ ಹಬ್ಬವು ನಮಗೆ ಕಲಿಸುತ್ತದೆ. ಅದಕ್ಕಾಗಿಯೇ ಇಂದು ಪ್ರಪಂಚದಾದ್ಯಂತ ಶಾಂತಿ ಮತ್ತು ಮಾನವೀಯತೆಯ ಸಂದೇಶದೊಂದಿಗೆ ಕ್ರಿಸ್‌ಮಸ್ ಹಬ್ಬವನ್ನು ಆಚರಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Wed, 24 December 25

ಬಿಗ್ ಬಾಸ್: ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ
ಬಿಗ್ ಬಾಸ್: ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ
ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ