Health Tips: ದಾಲ್ಚಿನ್ನಿ ನೀರು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯಕ

ದಾಲ್ಚಿನ್ನಿ ನೀರು ಆರೋಗ್ಯಕ್ಕೆ ಒಳ್ಳೆಯದು. ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಕೇವಲ ರುಚಿಯಷ್ಟೇ ಅಲ್ಲದೇ ಔಷಧೀಯ ರೂಪದಲ್ಲಿಯೂ ಬಳಸಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

Health Tips: ದಾಲ್ಚಿನ್ನಿ ನೀರು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯಕ
ಸಂಗ್ರಹ ಚಿತ್ರ
Follow us
| Updated By: shruti hegde

Updated on: Nov 01, 2021 | 9:18 AM

ದಾಲ್ಚಿನ್ನಿಯನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ಬಳಸಲಾಗುತ್ತದೆ. ಇದು ಒಳ್ಳೆಯ ಪರಿಮಳದ ಜೊತೆಗೆ ರುಚಿಯನ್ನು ನೀಡುತ್ತದೆ. ಇದೊಂದೇ ಅಲ್ಲದೇ ಆರೋಗ್ಯ ಸುಧಾರಣೆಗೂ ಸಹ ದಾಲ್ಚಿನ್ನಿ ತುಂಬಾ ಒಳ್ಳೆಯದು. ದಾಲ್ಚಿನ್ನಿ ನೀರು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿ. 

ದಾಲ್ಚಿನ್ನಿ ಆರೋಗ್ಯ ಮತ್ತು ಶಕ್ತಿಯುತ ಔಷಧೀಯ ಗುಣಗಳನ್ನು ಹೊಂದಿದೆ. ಜ್ವರ, ಶೀತ, ಕೆಮ್ಮಿನಂತಹ ಆರೋಗ್ಯ ಸಮಸ್ಯೆಗಳಿಗೆ ದಾಲ್ಚಿನ್ನಿ ನೀರು ಪ್ರಯೋಜನಕಾರಿ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜೊತೆಗೆ ಬಿಸಿ ನೀರಿನಲ್ಲಿ ದಾಲ್ಚಿನ್ನಿ ಸೇರಿಸುವುದರಿಂದ ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕರಗಿಸಲು ಸಹಾಯಕವಾಗಿದೆ. ಇದು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.

ಸಂಶೋಧನೆಯ ಪ್ರಕಾರ ನಿಮ್ಮ ದೈನಂದಿನ ಆಹಾರದಲ್ಲಿ 1 ಗ್ರಾಂ ದಾಲ್ಚಿನ್ನಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ. ಟೈಪ್ 2 ಮಧುಮೇಹವನ್ನು ನಿಯಂತ್ರಿಸಲು ಸಹಾಯಕ. ದಾಲ್ಚಿನ್ನಿ ಆಂಟಿಬಯೋಟಿಕ್, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ.

ಒಂದು ಲೀಟರ್ ನೀರಿಗೆ 1 ದಾಲ್ಚಿನ್ನಿ ಕಡ್ಡಿಯನ್ನು ಸೇರಿಸಿ. ಚೆನ್ನಾಗಿ ಕುದಿಸಿ. ಅದಕ್ಕೆ ನಿಂಬೆ ರಸವನ್ನು ಸೇರಿಸುವ ಮೂಲಕ ದಾಲ್ಚಿನ್ನಿ ನೀರನ್ನು ಸವಿಯಬಹುದು. ಈ ರೀತಿ ವಾರಕ್ಕೆ ಒಮ್ಮೆ ಸೇವಿಸುವ ಅಭ್ಯಾಸ ಒಳ್ಳೆಯದು. ನೀವು ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ, ಆರೋಗ್ಯದಲ್ಲಿ ಏನೇ ಏರು ಪೇರು ಕಂಡು ಬಂದರೂ ವೈದ್ಯರಲ್ಲಿ ಸಲಹೆ ಪಡೆಯಿರಿ. ಯಾವುದೇ ಕಾರಣಕ್ಕೂ ಆರೋಗ್ಯದ ಕುರಿತಾಗಿ ನಿರ್ಲಕ್ಷ್ಯ ಬೇಡ.

ಇದನ್ನೂ ಓದಿ:

Curry Leaves Tea: ಕರಿಬೇವಿನ ಚಹಾದ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳು

Health Benefits: ಮಹಿಳೆಯರು ಆರೋಗ್ಯವನ್ನು ಈ ರೀತಿ ನೋಡಿಕೊಳ್ಳಬೇಕು

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ