AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದಾಲ್ಚಿನ್ನಿ ನೀರು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯಕ

ದಾಲ್ಚಿನ್ನಿ ನೀರು ಆರೋಗ್ಯಕ್ಕೆ ಒಳ್ಳೆಯದು. ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಕೇವಲ ರುಚಿಯಷ್ಟೇ ಅಲ್ಲದೇ ಔಷಧೀಯ ರೂಪದಲ್ಲಿಯೂ ಬಳಸಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

Health Tips: ದಾಲ್ಚಿನ್ನಿ ನೀರು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯಕ
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Nov 01, 2021 | 9:18 AM

Share

ದಾಲ್ಚಿನ್ನಿಯನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ಬಳಸಲಾಗುತ್ತದೆ. ಇದು ಒಳ್ಳೆಯ ಪರಿಮಳದ ಜೊತೆಗೆ ರುಚಿಯನ್ನು ನೀಡುತ್ತದೆ. ಇದೊಂದೇ ಅಲ್ಲದೇ ಆರೋಗ್ಯ ಸುಧಾರಣೆಗೂ ಸಹ ದಾಲ್ಚಿನ್ನಿ ತುಂಬಾ ಒಳ್ಳೆಯದು. ದಾಲ್ಚಿನ್ನಿ ನೀರು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿ. 

ದಾಲ್ಚಿನ್ನಿ ಆರೋಗ್ಯ ಮತ್ತು ಶಕ್ತಿಯುತ ಔಷಧೀಯ ಗುಣಗಳನ್ನು ಹೊಂದಿದೆ. ಜ್ವರ, ಶೀತ, ಕೆಮ್ಮಿನಂತಹ ಆರೋಗ್ಯ ಸಮಸ್ಯೆಗಳಿಗೆ ದಾಲ್ಚಿನ್ನಿ ನೀರು ಪ್ರಯೋಜನಕಾರಿ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜೊತೆಗೆ ಬಿಸಿ ನೀರಿನಲ್ಲಿ ದಾಲ್ಚಿನ್ನಿ ಸೇರಿಸುವುದರಿಂದ ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕರಗಿಸಲು ಸಹಾಯಕವಾಗಿದೆ. ಇದು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.

ಸಂಶೋಧನೆಯ ಪ್ರಕಾರ ನಿಮ್ಮ ದೈನಂದಿನ ಆಹಾರದಲ್ಲಿ 1 ಗ್ರಾಂ ದಾಲ್ಚಿನ್ನಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ. ಟೈಪ್ 2 ಮಧುಮೇಹವನ್ನು ನಿಯಂತ್ರಿಸಲು ಸಹಾಯಕ. ದಾಲ್ಚಿನ್ನಿ ಆಂಟಿಬಯೋಟಿಕ್, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ.

ಒಂದು ಲೀಟರ್ ನೀರಿಗೆ 1 ದಾಲ್ಚಿನ್ನಿ ಕಡ್ಡಿಯನ್ನು ಸೇರಿಸಿ. ಚೆನ್ನಾಗಿ ಕುದಿಸಿ. ಅದಕ್ಕೆ ನಿಂಬೆ ರಸವನ್ನು ಸೇರಿಸುವ ಮೂಲಕ ದಾಲ್ಚಿನ್ನಿ ನೀರನ್ನು ಸವಿಯಬಹುದು. ಈ ರೀತಿ ವಾರಕ್ಕೆ ಒಮ್ಮೆ ಸೇವಿಸುವ ಅಭ್ಯಾಸ ಒಳ್ಳೆಯದು. ನೀವು ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ, ಆರೋಗ್ಯದಲ್ಲಿ ಏನೇ ಏರು ಪೇರು ಕಂಡು ಬಂದರೂ ವೈದ್ಯರಲ್ಲಿ ಸಲಹೆ ಪಡೆಯಿರಿ. ಯಾವುದೇ ಕಾರಣಕ್ಕೂ ಆರೋಗ್ಯದ ಕುರಿತಾಗಿ ನಿರ್ಲಕ್ಷ್ಯ ಬೇಡ.

ಇದನ್ನೂ ಓದಿ:

Curry Leaves Tea: ಕರಿಬೇವಿನ ಚಹಾದ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳು

Health Benefits: ಮಹಿಳೆಯರು ಆರೋಗ್ಯವನ್ನು ಈ ರೀತಿ ನೋಡಿಕೊಳ್ಳಬೇಕು

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ