AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water : ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು

ಬೇಸಿಗೆಯ ಧಗೆ ಹೆಚ್ಚುತ್ತಿದೆ. ಸುಡುವ ಬಿಸಿಲಿನ ತಾಪಕ್ಕೆ ಎಷ್ಟು ನೀರು ಹಾಗೂ ಜ್ಯೂಸ್ ಕುಡಿದರೂ ದಾಹವಂತೂ ತೀರುವುದೇ ಇಲ್ಲ. ಹೀಗಾದಾಗ ಹೆಚ್ಚಿನವರು ದಾಹವನ್ನು ನೀಗಿಸಲು ಎಳನೀರನ್ನು ಕುಡಿಯುತ್ತಾರೆ. ರಸ್ತೆ ಬದಿಯಲ್ಲಿ ಮಾರಾಟ ಮಾಡಲಾಗುವ ಈ ಎಳನೀರನ್ನು ನೇರವಾಗಿ ಕುಡಿಯುವುದರಿಂದ ಆರೋಗ್ಯಕ್ಕೆ ತೊಂದರೆಯಾಗುವ ಸಾಧ್ಯತೆಗಳು ಅಧಿಕವಾಗಿವೆ. ನೀವೇನಾದರೂ ಎಳನೀರು ಕಂಡೊಡನೆ ಕುಡಿಯಲು ಮುಂದಾಗುವಿರಿಯಾದರೆ ಈ ಕೆಲವು ಅಡ್ಡಪರಿಣಾಮಗಳ ಬಗ್ಗೆ ತಿಳಿದಿರುವುದು ಒಳ್ಳೆಯದು.

Coconut Water : ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು
ಸಾಯಿನಂದಾ
| Edited By: |

Updated on: May 06, 2024 | 11:23 AM

Share

ಬಿಸಿಲಿನ ತಾಪಕ್ಕೆ ಎಷ್ಟೇ ನೀರು ಕುಡಿದರೂ ದಾಹ ಮಾತ್ರ ನೀಗುವುದಿಲ್ಲ. ಹೀಗಾಗಿ ಹೆಚ್ಚಿನವರು ಏಳನೀರನ್ನು ಕುಡಿಯಲು ಇಷ್ಟ ಪಡುತ್ತಾರೆ. ಎಳನೀರಲ್ಲಿ ಕಾರ್ಬೋಹೈಡ್ರೇಟ್ಸ್ ಮತ್ತು ಪೊಟ್ಯಾಷಿಯಮ್, ಸೋಡಿಯಂ ಮತ್ತು ಮೆಗ್ನೀಷಿಯಮ್‌ನಂಥ ಎಲೆಕ್ಟ್ರೋಲೈಟ್ ನಂತಹ ಅಂಶಗಳು ಹೇರಳವಾಗಿದ್ದು, ದೇಹವನ್ನು ಹೈಡ್ರೇಟ್ ಮಾಡುತ್ತದೆ. ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ.

ಈ ನೀರು ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಿ ದೇಹದ ಪೊಟ್ಯಾಷಿಯಮ್ ಅಂಶವನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ನೈಸರ್ಗಿಕವಾಗಿಯೂ ಕಡಿಮೆ ಕ್ಯಾಲರಿ ಹೊಂದಿದ್ದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಖನಿಜ ಮತ್ತು ಪೊಟ್ಯಾಸಿಯಮ್ ಹೇರಳವಾಗಿದೆ. ಮೂತ್ರಪಿಂಡ ಮತ್ತು ಹೊಟ್ಟೆ ಉರಿ ಸಮಸ್ಯೆ ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಆದರೆ ಎಲ್ಲರ ನೆಚ್ಚಿನ ಪಾನೀಯವಾಗಿರುವ ಈ ಎಳನೀರನ್ನು ನೇರವಾಗಿ ಕುಡಿಯಬೇಡಿ.

ಇದನ್ನೂ ಓದಿ:ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಬಾರಿ ಮುಖ ತೊಳೆಯಬೇಕು?

ಹಿಂದೊಮ್ಮೆ ಡೆನ್ಮಾರ್ಕ್‌ನ 69 ವರ್ಷದ ವ್ಯಕ್ತಿಯೊಬ್ಬರು ಹಾಳಾದ ತೆಂಗಿನ ನೀರನ್ನು ಸೇವಿಸಿ ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರು. ಆ ಬಳಿಕ ಎಳನೀರಿನ ಒಳಭಾಗವು ಕೊಳೆತಿದೆ ಎನ್ನುವುದು ತಿಳಿಯಿತು. ಎಳನೀರು ಒಳ್ಳೆದಿದೆಯೇ ಎಂದು ತಿಳಿಯಲು ನೀರನ್ನು ಪಾರದರ್ಶಕ ಗಾಜಿನೊಳಗೆ ಸುರಿದು ನೋಡಿದರೆ ಎಳನೀರು ಒಳ್ಳೆದಿದೆಯೇ ಎಂದು ತಿಳಿಯುತ್ತದೆ. ಕುಡಿಯುವ ಮೊದಲು ತೆಂಗಿನಕಾಯಿಯ ಒಳಭಾಗವನ್ನು ಪರೀಕ್ಷಿಸಬೇಕು. ನೀವು ಕುಡಿಯುವ ಎಳನೀರು ಕೆಟ್ಟು ಹೋಗಿದ್ದರೆ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡುವ ಸಾಧ್ಯತೆ ಅಧಿಕವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!