AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water : ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು

ಬೇಸಿಗೆಯ ಧಗೆ ಹೆಚ್ಚುತ್ತಿದೆ. ಸುಡುವ ಬಿಸಿಲಿನ ತಾಪಕ್ಕೆ ಎಷ್ಟು ನೀರು ಹಾಗೂ ಜ್ಯೂಸ್ ಕುಡಿದರೂ ದಾಹವಂತೂ ತೀರುವುದೇ ಇಲ್ಲ. ಹೀಗಾದಾಗ ಹೆಚ್ಚಿನವರು ದಾಹವನ್ನು ನೀಗಿಸಲು ಎಳನೀರನ್ನು ಕುಡಿಯುತ್ತಾರೆ. ರಸ್ತೆ ಬದಿಯಲ್ಲಿ ಮಾರಾಟ ಮಾಡಲಾಗುವ ಈ ಎಳನೀರನ್ನು ನೇರವಾಗಿ ಕುಡಿಯುವುದರಿಂದ ಆರೋಗ್ಯಕ್ಕೆ ತೊಂದರೆಯಾಗುವ ಸಾಧ್ಯತೆಗಳು ಅಧಿಕವಾಗಿವೆ. ನೀವೇನಾದರೂ ಎಳನೀರು ಕಂಡೊಡನೆ ಕುಡಿಯಲು ಮುಂದಾಗುವಿರಿಯಾದರೆ ಈ ಕೆಲವು ಅಡ್ಡಪರಿಣಾಮಗಳ ಬಗ್ಗೆ ತಿಳಿದಿರುವುದು ಒಳ್ಳೆಯದು.

Coconut Water : ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 06, 2024 | 11:23 AM

Share

ಬಿಸಿಲಿನ ತಾಪಕ್ಕೆ ಎಷ್ಟೇ ನೀರು ಕುಡಿದರೂ ದಾಹ ಮಾತ್ರ ನೀಗುವುದಿಲ್ಲ. ಹೀಗಾಗಿ ಹೆಚ್ಚಿನವರು ಏಳನೀರನ್ನು ಕುಡಿಯಲು ಇಷ್ಟ ಪಡುತ್ತಾರೆ. ಎಳನೀರಲ್ಲಿ ಕಾರ್ಬೋಹೈಡ್ರೇಟ್ಸ್ ಮತ್ತು ಪೊಟ್ಯಾಷಿಯಮ್, ಸೋಡಿಯಂ ಮತ್ತು ಮೆಗ್ನೀಷಿಯಮ್‌ನಂಥ ಎಲೆಕ್ಟ್ರೋಲೈಟ್ ನಂತಹ ಅಂಶಗಳು ಹೇರಳವಾಗಿದ್ದು, ದೇಹವನ್ನು ಹೈಡ್ರೇಟ್ ಮಾಡುತ್ತದೆ. ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ.

ಈ ನೀರು ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಿ ದೇಹದ ಪೊಟ್ಯಾಷಿಯಮ್ ಅಂಶವನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ನೈಸರ್ಗಿಕವಾಗಿಯೂ ಕಡಿಮೆ ಕ್ಯಾಲರಿ ಹೊಂದಿದ್ದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಖನಿಜ ಮತ್ತು ಪೊಟ್ಯಾಸಿಯಮ್ ಹೇರಳವಾಗಿದೆ. ಮೂತ್ರಪಿಂಡ ಮತ್ತು ಹೊಟ್ಟೆ ಉರಿ ಸಮಸ್ಯೆ ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಆದರೆ ಎಲ್ಲರ ನೆಚ್ಚಿನ ಪಾನೀಯವಾಗಿರುವ ಈ ಎಳನೀರನ್ನು ನೇರವಾಗಿ ಕುಡಿಯಬೇಡಿ.

ಇದನ್ನೂ ಓದಿ:ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಬಾರಿ ಮುಖ ತೊಳೆಯಬೇಕು?

ಹಿಂದೊಮ್ಮೆ ಡೆನ್ಮಾರ್ಕ್‌ನ 69 ವರ್ಷದ ವ್ಯಕ್ತಿಯೊಬ್ಬರು ಹಾಳಾದ ತೆಂಗಿನ ನೀರನ್ನು ಸೇವಿಸಿ ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರು. ಆ ಬಳಿಕ ಎಳನೀರಿನ ಒಳಭಾಗವು ಕೊಳೆತಿದೆ ಎನ್ನುವುದು ತಿಳಿಯಿತು. ಎಳನೀರು ಒಳ್ಳೆದಿದೆಯೇ ಎಂದು ತಿಳಿಯಲು ನೀರನ್ನು ಪಾರದರ್ಶಕ ಗಾಜಿನೊಳಗೆ ಸುರಿದು ನೋಡಿದರೆ ಎಳನೀರು ಒಳ್ಳೆದಿದೆಯೇ ಎಂದು ತಿಳಿಯುತ್ತದೆ. ಕುಡಿಯುವ ಮೊದಲು ತೆಂಗಿನಕಾಯಿಯ ಒಳಭಾಗವನ್ನು ಪರೀಕ್ಷಿಸಬೇಕು. ನೀವು ಕುಡಿಯುವ ಎಳನೀರು ಕೆಟ್ಟು ಹೋಗಿದ್ದರೆ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡುವ ಸಾಧ್ಯತೆ ಅಧಿಕವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​