AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water : ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು

ಬೇಸಿಗೆಯ ಧಗೆ ಹೆಚ್ಚುತ್ತಿದೆ. ಸುಡುವ ಬಿಸಿಲಿನ ತಾಪಕ್ಕೆ ಎಷ್ಟು ನೀರು ಹಾಗೂ ಜ್ಯೂಸ್ ಕುಡಿದರೂ ದಾಹವಂತೂ ತೀರುವುದೇ ಇಲ್ಲ. ಹೀಗಾದಾಗ ಹೆಚ್ಚಿನವರು ದಾಹವನ್ನು ನೀಗಿಸಲು ಎಳನೀರನ್ನು ಕುಡಿಯುತ್ತಾರೆ. ರಸ್ತೆ ಬದಿಯಲ್ಲಿ ಮಾರಾಟ ಮಾಡಲಾಗುವ ಈ ಎಳನೀರನ್ನು ನೇರವಾಗಿ ಕುಡಿಯುವುದರಿಂದ ಆರೋಗ್ಯಕ್ಕೆ ತೊಂದರೆಯಾಗುವ ಸಾಧ್ಯತೆಗಳು ಅಧಿಕವಾಗಿವೆ. ನೀವೇನಾದರೂ ಎಳನೀರು ಕಂಡೊಡನೆ ಕುಡಿಯಲು ಮುಂದಾಗುವಿರಿಯಾದರೆ ಈ ಕೆಲವು ಅಡ್ಡಪರಿಣಾಮಗಳ ಬಗ್ಗೆ ತಿಳಿದಿರುವುದು ಒಳ್ಳೆಯದು.

Coconut Water : ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು
ಸಾಯಿನಂದಾ
| Edited By: |

Updated on: May 06, 2024 | 11:23 AM

Share

ಬಿಸಿಲಿನ ತಾಪಕ್ಕೆ ಎಷ್ಟೇ ನೀರು ಕುಡಿದರೂ ದಾಹ ಮಾತ್ರ ನೀಗುವುದಿಲ್ಲ. ಹೀಗಾಗಿ ಹೆಚ್ಚಿನವರು ಏಳನೀರನ್ನು ಕುಡಿಯಲು ಇಷ್ಟ ಪಡುತ್ತಾರೆ. ಎಳನೀರಲ್ಲಿ ಕಾರ್ಬೋಹೈಡ್ರೇಟ್ಸ್ ಮತ್ತು ಪೊಟ್ಯಾಷಿಯಮ್, ಸೋಡಿಯಂ ಮತ್ತು ಮೆಗ್ನೀಷಿಯಮ್‌ನಂಥ ಎಲೆಕ್ಟ್ರೋಲೈಟ್ ನಂತಹ ಅಂಶಗಳು ಹೇರಳವಾಗಿದ್ದು, ದೇಹವನ್ನು ಹೈಡ್ರೇಟ್ ಮಾಡುತ್ತದೆ. ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ.

ಈ ನೀರು ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಿ ದೇಹದ ಪೊಟ್ಯಾಷಿಯಮ್ ಅಂಶವನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ನೈಸರ್ಗಿಕವಾಗಿಯೂ ಕಡಿಮೆ ಕ್ಯಾಲರಿ ಹೊಂದಿದ್ದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಖನಿಜ ಮತ್ತು ಪೊಟ್ಯಾಸಿಯಮ್ ಹೇರಳವಾಗಿದೆ. ಮೂತ್ರಪಿಂಡ ಮತ್ತು ಹೊಟ್ಟೆ ಉರಿ ಸಮಸ್ಯೆ ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಆದರೆ ಎಲ್ಲರ ನೆಚ್ಚಿನ ಪಾನೀಯವಾಗಿರುವ ಈ ಎಳನೀರನ್ನು ನೇರವಾಗಿ ಕುಡಿಯಬೇಡಿ.

ಇದನ್ನೂ ಓದಿ:ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಬಾರಿ ಮುಖ ತೊಳೆಯಬೇಕು?

ಹಿಂದೊಮ್ಮೆ ಡೆನ್ಮಾರ್ಕ್‌ನ 69 ವರ್ಷದ ವ್ಯಕ್ತಿಯೊಬ್ಬರು ಹಾಳಾದ ತೆಂಗಿನ ನೀರನ್ನು ಸೇವಿಸಿ ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರು. ಆ ಬಳಿಕ ಎಳನೀರಿನ ಒಳಭಾಗವು ಕೊಳೆತಿದೆ ಎನ್ನುವುದು ತಿಳಿಯಿತು. ಎಳನೀರು ಒಳ್ಳೆದಿದೆಯೇ ಎಂದು ತಿಳಿಯಲು ನೀರನ್ನು ಪಾರದರ್ಶಕ ಗಾಜಿನೊಳಗೆ ಸುರಿದು ನೋಡಿದರೆ ಎಳನೀರು ಒಳ್ಳೆದಿದೆಯೇ ಎಂದು ತಿಳಿಯುತ್ತದೆ. ಕುಡಿಯುವ ಮೊದಲು ತೆಂಗಿನಕಾಯಿಯ ಒಳಭಾಗವನ್ನು ಪರೀಕ್ಷಿಸಬೇಕು. ನೀವು ಕುಡಿಯುವ ಎಳನೀರು ಕೆಟ್ಟು ಹೋಗಿದ್ದರೆ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡುವ ಸಾಧ್ಯತೆ ಅಧಿಕವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ