AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಕೈಕಾಲುಗಳು ಮಂಜುಗಡ್ಡೆಯಂತೆ ತಣ್ಣಗಾಗುತ್ತವೆಯೇ? ಸಲಹೆ ಅನುಸರಿಸಿ

ವಯಸ್ಸಾದಂತೆ ಕೈಕಾಲು ಶೀತದ ಸಮಸ್ಯೆ ಚಳಿಗಾಲದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಆದಾಗ್ಯೂ, ಅನೇಕರು ಚಿಕ್ಕ ವಯಸ್ಸಿನಲ್ಲೂ ಇಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ಚಳಿಯಲ್ಲಿ ಕೈಕಾಲು ಬೆಚ್ಚಗಿಡುವುದು ಹೇಗೆ? ಇಲ್ಲಿದೆ ಟಿಪ್ಸ್.

ಚಳಿಗಾಲದಲ್ಲಿ ಕೈಕಾಲುಗಳು ಮಂಜುಗಡ್ಡೆಯಂತೆ ತಣ್ಣಗಾಗುತ್ತವೆಯೇ? ಸಲಹೆ ಅನುಸರಿಸಿ
Cold Hands and feet
Follow us
ಅಕ್ಷತಾ ವರ್ಕಾಡಿ
|

Updated on: Jan 23, 2024 | 8:45 PM

ಚಳಿಗಾಲದಲ್ಲಿ ಹಲವರ ಕೈಕಾಲು ಮಂಜುಗಡ್ಡೆಯಂತೆ ತಣ್ಣಗಾಗುತ್ತದೆ. ಇದರಿಂದ ಕೆಲವರು ನೋವನ್ನು ಸಹ ಅನುಭವಿಸುತ್ತಾರೆ. ಚಳಿಗಾಲದಲ್ಲಿ ಚಳಿಯಿಂದಾಗಿ ಕೈ ಕಾಲುಗಳಲ್ಲಿರುವ ರಕ್ತನಾಳಗಳು ಸೆಟೆದುಕೊಳ್ಳುತ್ತವೆ. ಇದು ರಕ್ತದ ಹರಿವನ್ನು ತಡೆಯುತ್ತದೆ. ಈ ಕಾರಣದಿಂದಾಗಿ ಅನೇಕ ಜನರು ಚಳಿಗಾಲದಲ್ಲಿ ಶೀತದ ಕೈ ಮತ್ತು ಪಾದದ ಸಮಸ್ಯೆಯಿಂದ ಬಳಲುತ್ತಾರೆ. ವಯಸ್ಸಾದಂತೆ ಕೈಕಾಲು ಶೀತದ ಸಮಸ್ಯೆ ಚಳಿಗಾಲದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಆದಾಗ್ಯೂ, ಅನೇಕರು ಚಿಕ್ಕ ವಯಸ್ಸಿನಲ್ಲೂ ಇಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ಚಳಿಯಲ್ಲಿ ಕೈಕಾಲು ಬೆಚ್ಚಗಿಡುವುದು ಹೇಗೆ? ಇಲ್ಲಿದೆ ಟಿಪ್ಸ್.

ಸಾಕ್ಸ್ ಮತ್ತು ಕೈಗವಸುಗಳನ್ನು ಧರಿಸಿ:

ನೀವು ಉಣ್ಣೆಯ ಹೆಣೆದ ಸಾಕ್ಸ್ ಮತ್ತು ಕೈಗವಸುಗಳನ್ನು ಧರಿಸಿದರೆ ನೀವು ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತೀರಿ. ಇದು ನಿಮ್ಮ ಕೈ ಮತ್ತು ಪಾದಗಳನ್ನು ಬೆಚ್ಚಗಾಗಿಸುತ್ತದೆ. ಇದಲ್ಲದೇ ನೀವು ಹೀಟಿಂಗ್​​ ಪ್ಯಾಡ್ ಅನ್ನು ಸಹ ಬಳಸಬಹುದು.

ಮಸಾಜ್​​ ಮಾಡಿ:

ಸಾಸಿವೆ ಎಣ್ಣೆಯನ್ನು ಕೈ ಕಾಲುಗಳಿಗೆ ಚೆನ್ನಾಗಿ ಮಸಾಜ್ ಮಾಡಿ. ಇದು ರಕ್ತದ ಹರಿವನ್ನು ಹೆಚ್ಚಿಸುತ್ತದೆ ಮತ್ತು ಬೆಚ್ಚಗಿರುತ್ತದೆ. ರಾತ್ರಿ ಮಲಗುವ ಮುನ್ನ ಸಾಸಿವೆ ಎಣ್ಣೆಯನ್ನು ಕೈ ಕಾಲುಗಳಿಗೆ ಚೆನ್ನಾಗಿ ಮಸಾಜ್ ಮಾಡಿ ಮಲಗಿ.

ವ್ಯಾಯಾಮ ಮಾಡಿ:

ಚಳಿಯಲ್ಲಿ ನಿಮ್ಮ ದೇಹವನ್ನು ಬೆಚ್ಚಗಿಡಲು ಪ್ರತಿದಿನ ವ್ಯಾಯಾಮ ಮಾಡಿ. ಪ್ರತಿದಿನ 30 ನಿಮಿಷಗಳ ಕಾಲ ಯೋಗ ಮಾಡುವುದರಿಂದ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಇದು ಕೈ ಮತ್ತು ಪಾದಗಳನ್ನು ಬೆಚ್ಚಗಾಗಿಸುತ್ತದೆ.

ಇದನ್ನೂ ಓದಿ: ಮಕ್ಕಳಲ್ಲಿ ಹೃದಯಾಘಾತ ಉಂಟಾಗುವ ಲಕ್ಷಣಗಳೇನು?

ಆರೋಗ್ಯಕರ ಆಹಾರ:

ದೇಹವನ್ನು ಬೆಚ್ಚಗಿಡುವಲ್ಲಿ ಚಳಿಗಾಲದ ಆಹಾರವು ವಿಶೇಷ ಪಾತ್ರವನ್ನು ವಹಿಸುತ್ತದೆ. ಅಲ್ಲದೆ, ನಿಮ್ಮ ದೇಹದಲ್ಲಿ ಕಬ್ಬಿಣದ ಕೊರತೆಯಿದ್ದರೆ, ನಿಮ್ಮ ಕೈಗಳು ಮತ್ತು ಪಾದಗಳು ತಣ್ಣಗಾಗಬಹುದು. ಹಾಗಾಗಿ ಈ ಋತುವಿನಲ್ಲಿ ಪೌಷ್ಠಿಕಾಂಶವಿರುವ ಆಹಾರವನ್ನು ಸೇವಿಸುವುದು ಮುಖ್ಯ.

ಸಾಕಷ್ಟು ನೀರು ಕುಡಿಯಿರಿ:

ಅನೇಕ ಜನರು ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುತ್ತಾರೆ. ದೇಹದಲ್ಲಿ ದ್ರವದ ಕೊರತೆ ಇರುತ್ತದೆ, ದೇಹವು ನಿರ್ಜಲೀಕರಣಗೊಂಡರೆ, ಕೈಗಳು ಮತ್ತು ಪಾದಗಳು ತಣ್ಣಗಾಗಬಹುದು. ಆದ್ದರಿಂದ ಶೀತದಲ್ಲಿ ಸಾಕಷ್ಟು ನೀರು ಕುಡಿಯಿರಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್