ಚಳಿಗಾಲದಲ್ಲಿ ಕೈಕಾಲುಗಳು ಮಂಜುಗಡ್ಡೆಯಂತೆ ತಣ್ಣಗಾಗುತ್ತವೆಯೇ? ಸಲಹೆ ಅನುಸರಿಸಿ

ವಯಸ್ಸಾದಂತೆ ಕೈಕಾಲು ಶೀತದ ಸಮಸ್ಯೆ ಚಳಿಗಾಲದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಆದಾಗ್ಯೂ, ಅನೇಕರು ಚಿಕ್ಕ ವಯಸ್ಸಿನಲ್ಲೂ ಇಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ಚಳಿಯಲ್ಲಿ ಕೈಕಾಲು ಬೆಚ್ಚಗಿಡುವುದು ಹೇಗೆ? ಇಲ್ಲಿದೆ ಟಿಪ್ಸ್.

ಚಳಿಗಾಲದಲ್ಲಿ ಕೈಕಾಲುಗಳು ಮಂಜುಗಡ್ಡೆಯಂತೆ ತಣ್ಣಗಾಗುತ್ತವೆಯೇ? ಸಲಹೆ ಅನುಸರಿಸಿ
Cold Hands and feet

Updated on: Jan 23, 2024 | 8:45 PM

ಚಳಿಗಾಲದಲ್ಲಿ ಹಲವರ ಕೈಕಾಲು ಮಂಜುಗಡ್ಡೆಯಂತೆ ತಣ್ಣಗಾಗುತ್ತದೆ. ಇದರಿಂದ ಕೆಲವರು ನೋವನ್ನು ಸಹ ಅನುಭವಿಸುತ್ತಾರೆ. ಚಳಿಗಾಲದಲ್ಲಿ ಚಳಿಯಿಂದಾಗಿ ಕೈ ಕಾಲುಗಳಲ್ಲಿರುವ ರಕ್ತನಾಳಗಳು ಸೆಟೆದುಕೊಳ್ಳುತ್ತವೆ. ಇದು ರಕ್ತದ ಹರಿವನ್ನು ತಡೆಯುತ್ತದೆ. ಈ ಕಾರಣದಿಂದಾಗಿ ಅನೇಕ ಜನರು ಚಳಿಗಾಲದಲ್ಲಿ ಶೀತದ ಕೈ ಮತ್ತು ಪಾದದ ಸಮಸ್ಯೆಯಿಂದ ಬಳಲುತ್ತಾರೆ. ವಯಸ್ಸಾದಂತೆ ಕೈಕಾಲು ಶೀತದ ಸಮಸ್ಯೆ ಚಳಿಗಾಲದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಆದಾಗ್ಯೂ, ಅನೇಕರು ಚಿಕ್ಕ ವಯಸ್ಸಿನಲ್ಲೂ ಇಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ಚಳಿಯಲ್ಲಿ ಕೈಕಾಲು ಬೆಚ್ಚಗಿಡುವುದು ಹೇಗೆ? ಇಲ್ಲಿದೆ ಟಿಪ್ಸ್.

ಸಾಕ್ಸ್ ಮತ್ತು ಕೈಗವಸುಗಳನ್ನು ಧರಿಸಿ:

ನೀವು ಉಣ್ಣೆಯ ಹೆಣೆದ ಸಾಕ್ಸ್ ಮತ್ತು ಕೈಗವಸುಗಳನ್ನು ಧರಿಸಿದರೆ ನೀವು ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತೀರಿ. ಇದು ನಿಮ್ಮ ಕೈ ಮತ್ತು ಪಾದಗಳನ್ನು ಬೆಚ್ಚಗಾಗಿಸುತ್ತದೆ. ಇದಲ್ಲದೇ ನೀವು ಹೀಟಿಂಗ್​​ ಪ್ಯಾಡ್ ಅನ್ನು ಸಹ ಬಳಸಬಹುದು.

ಮಸಾಜ್​​ ಮಾಡಿ:

ಸಾಸಿವೆ ಎಣ್ಣೆಯನ್ನು ಕೈ ಕಾಲುಗಳಿಗೆ ಚೆನ್ನಾಗಿ ಮಸಾಜ್ ಮಾಡಿ. ಇದು ರಕ್ತದ ಹರಿವನ್ನು ಹೆಚ್ಚಿಸುತ್ತದೆ ಮತ್ತು ಬೆಚ್ಚಗಿರುತ್ತದೆ. ರಾತ್ರಿ ಮಲಗುವ ಮುನ್ನ ಸಾಸಿವೆ ಎಣ್ಣೆಯನ್ನು ಕೈ ಕಾಲುಗಳಿಗೆ ಚೆನ್ನಾಗಿ ಮಸಾಜ್ ಮಾಡಿ ಮಲಗಿ.

ವ್ಯಾಯಾಮ ಮಾಡಿ:

ಚಳಿಯಲ್ಲಿ ನಿಮ್ಮ ದೇಹವನ್ನು ಬೆಚ್ಚಗಿಡಲು ಪ್ರತಿದಿನ ವ್ಯಾಯಾಮ ಮಾಡಿ. ಪ್ರತಿದಿನ 30 ನಿಮಿಷಗಳ ಕಾಲ ಯೋಗ ಮಾಡುವುದರಿಂದ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಇದು ಕೈ ಮತ್ತು ಪಾದಗಳನ್ನು ಬೆಚ್ಚಗಾಗಿಸುತ್ತದೆ.

ಇದನ್ನೂ ಓದಿ: ಮಕ್ಕಳಲ್ಲಿ ಹೃದಯಾಘಾತ ಉಂಟಾಗುವ ಲಕ್ಷಣಗಳೇನು?

ಆರೋಗ್ಯಕರ ಆಹಾರ:

ದೇಹವನ್ನು ಬೆಚ್ಚಗಿಡುವಲ್ಲಿ ಚಳಿಗಾಲದ ಆಹಾರವು ವಿಶೇಷ ಪಾತ್ರವನ್ನು ವಹಿಸುತ್ತದೆ. ಅಲ್ಲದೆ, ನಿಮ್ಮ ದೇಹದಲ್ಲಿ ಕಬ್ಬಿಣದ ಕೊರತೆಯಿದ್ದರೆ, ನಿಮ್ಮ ಕೈಗಳು ಮತ್ತು ಪಾದಗಳು ತಣ್ಣಗಾಗಬಹುದು. ಹಾಗಾಗಿ ಈ ಋತುವಿನಲ್ಲಿ ಪೌಷ್ಠಿಕಾಂಶವಿರುವ ಆಹಾರವನ್ನು ಸೇವಿಸುವುದು ಮುಖ್ಯ.

ಸಾಕಷ್ಟು ನೀರು ಕುಡಿಯಿರಿ:

ಅನೇಕ ಜನರು ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುತ್ತಾರೆ. ದೇಹದಲ್ಲಿ ದ್ರವದ ಕೊರತೆ ಇರುತ್ತದೆ, ದೇಹವು ನಿರ್ಜಲೀಕರಣಗೊಂಡರೆ, ಕೈಗಳು ಮತ್ತು ಪಾದಗಳು ತಣ್ಣಗಾಗಬಹುದು. ಆದ್ದರಿಂದ ಶೀತದಲ್ಲಿ ಸಾಕಷ್ಟು ನೀರು ಕುಡಿಯಿರಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us