AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Constipation: ಮಲಬದ್ಧತೆ ಸಮಸ್ಯೆಯಿಂದ ಬೇಗನೆ ಮುಕ್ತಿ ಪಡೆಯಲು ಪಾಪ್ ಕಾರ್ನ್!

ಬದಲಾದ ಆಹಾರ ಪದ್ಧತಿಯಿಂದಾಗಿ, ಅನೇಕ ಜನರು ಮಲವಿಸರ್ಜನೆಯಲ್ಲೂ ತೊಂದರೆ ಎದುರಿಸುತ್ತಾರೆ. ಒಂದರ್ಥದಲ್ಲಿ ಇದು ಹೊಟ್ಟೆಯ ಸಮಸ್ಯೆಯೂ ಹೌದು. ಮಲಬದ್ಧತೆಯೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಾಗಿ ಈ ಸಮಸ್ಯೆಯನ್ನು ಎಷ್ಟು ಸಾಧ್ಯವೋ ಅಷ್ಟು ಸುಲಭವಾಗಿ ಹೋಗಲಾಡಿಸುವುದು ಉತ್ತಮ.

Constipation: ಮಲಬದ್ಧತೆ ಸಮಸ್ಯೆಯಿಂದ ಬೇಗನೆ ಮುಕ್ತಿ ಪಡೆಯಲು ಪಾಪ್ ಕಾರ್ನ್!
Constipation Relief FoodsImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Dec 17, 2023 | 5:57 PM

ಬದಲಾದ ಆಹಾರ ಪದ್ಧತಿಯಿಂದಾಗಿ, ಅನೇಕ ಜನರು ಮಲವಿಸರ್ಜನೆಯಲ್ಲೂ ತೊಂದರೆ ಎದುರಿಸುತ್ತಾರೆ. ಒಂದರ್ಥದಲ್ಲಿ ಇದು ಹೊಟ್ಟೆಯ ಸಮಸ್ಯೆಯೂ ಹೌದು. ಮಲಬದ್ಧತೆಯೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಾಗಿ ಈ ಸಮಸ್ಯೆಯನ್ನು ಎಷ್ಟು ಸಾಧ್ಯವೋ ಅಷ್ಟು ಸುಲಭವಾಗಿ ಹೋಗಲಾಡಿಸುವುದು ಉತ್ತಮ. ಇಂತಹ ಸಮಸ್ಯೆಗಳನ್ನು ಎದುರಿಸಲು ಮುಖ್ಯ ಕಾರಣ ಆಹಾರ ಪದ್ಧತಿ. ನಾರಿನಂಶ ಮತ್ತು ನೀರು ಕಡಿಮೆ ಇರುವ ಆಹಾರ ಸೇವಿಸಿದರೆ ತಿಂದ ಆಹಾರ ಜೀರ್ಣವಾಗದೇ ಮಲಬದ್ಧತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹಾಗಾಗಿ ನಿಮ್ಮ ಆಹಾರ ಕ್ರಮದಲ್ಲಿ ಖಂಡಿತ ಬದಲಾವಣೆ ಮಾಡಿಕೊಳ್ಳಿ. ಪಾಪ್ ಕಾರ್ನ್ ಈ ಸಮಸ್ಯೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ ಎಂದು ನಿಮಗೇನಿಸುತ್ತದೆಯೇ?

ಪಾಪ್‌ಕಾರ್ನ್:

ಅನೇಕ ಜನರು ಸಿನಿಮಾ ನೋಡುವ ಸಮಯದಲ್ಲಿ ಅಥವಾ ಸಮಯ ಕಳೆಯಲು ಪಾಪ್ ಕಾರ್ನ್ ತಿನ್ನುತ್ತಾರೆ. ಇದನ್ನು ತಿಂದರೆ ಹೊಟ್ಟೆ ಉಬ್ಬುತ್ತದೆ ಎಂದು ಹಲವರು ಭಾವಿಸುತ್ತಾರೆ. ಆದರೆ ವಾಸ್ತವವಾಗಿ ಪಾಪ್ ಕಾರ್ನ್ ತಿನ್ನುವುದರಿಂದ ಮಲಬದ್ಧತೆ ಸಮಸ್ಯೆಯಿಂದ ಬೇಗನೆ ಮುಕ್ತಿ ಪಡೆಯಬಹುದು. ಏಕೆಂದರೆ ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದೆ. ಹಾಗಾಗಿ ಪ್ರತಿದಿನ ಸಂಜೆ ಪಾಪ್ ಕಾರ್ನ್ ತಿನ್ನುವುದು ತುಂಬಾ ಒಳ್ಳೆಯದು.

ಇದನ್ನೂ ಓದಿ:  ಎದೆ ಉರಿ, ಅಸಿಡಿಟಿ ಸಮಸ್ಯೆಗೆ ‘ಆಂಟಾಸಿಡ್’ ತೆಗೆದುಕೊಳ್ಳುತ್ತಿದ್ದರೆ ಇಂದೇ ಬಿಟ್ಟುಬಿಡಿ; ಬದಲಾಗಿ ಈ ಮನೆಮದ್ದು ಟ್ರೈ ಮಾಡಿ

ಓಟ್ಸ್:

ಓಟ್ಸ್ ಅನ್ನು ನಿಯಮಿತವಾಗಿ ತಿನ್ನುವುದರಿಂದ ಮಲಬದ್ಧತೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಓಟ್ಸ್ ನಲ್ಲಿ ನಾರಿನಂಶ ಅಧಿಕವಾಗಿದೆ. ಈ ಕಾರಣದಿಂದಾಗಿ, ಸೇವಿಸಿದ ಆಹಾರವು ತ್ವರಿತವಾಗಿ ಜೀರ್ಣವಾಗುತ್ತದೆ ಮತ್ತು ಹೊರಹಾಕಲ್ಪಡುತ್ತದೆ. ಇದಲ್ಲದೆ, ನೀವು ಜೀರ್ಣಕಾರಿ ಮತ್ತು ಹೊಟ್ಟೆಯ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ಆಗಾಗ ಓಟ್ಸ್ ಸೇವಿಸುವುದು ಉತ್ತಮ.

ಸಿಹಿ ಗೆಣಸು:

ಚಳಿಗಾಲದಲ್ಲಿ ಸಾಧ್ಯವಾದಷ್ಟು ಸಿಹಿಗೆಣಸು ಸೇವಿಸಿ. ಇದನ್ನು ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ಇದು ಹೆಚ್ಚಿನ ಫೈಬರ್ ಅಂಶ ಮತ್ತು ನೀರಿನ ಅಂಶವನ್ನು ಹೊಂದಿದೆ. ಇದಲ್ಲದೆ, ಸಿಹಿ ಗೆಣಸಿನ ಗುಣಲಕ್ಷಣಗಳು ಕರುಳನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ