AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Constipation: ಮಲಬದ್ಧತೆ ಸಮಸ್ಯೆಯಿಂದ ಬೇಗನೆ ಮುಕ್ತಿ ಪಡೆಯಲು ಪಾಪ್ ಕಾರ್ನ್!

ಬದಲಾದ ಆಹಾರ ಪದ್ಧತಿಯಿಂದಾಗಿ, ಅನೇಕ ಜನರು ಮಲವಿಸರ್ಜನೆಯಲ್ಲೂ ತೊಂದರೆ ಎದುರಿಸುತ್ತಾರೆ. ಒಂದರ್ಥದಲ್ಲಿ ಇದು ಹೊಟ್ಟೆಯ ಸಮಸ್ಯೆಯೂ ಹೌದು. ಮಲಬದ್ಧತೆಯೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಾಗಿ ಈ ಸಮಸ್ಯೆಯನ್ನು ಎಷ್ಟು ಸಾಧ್ಯವೋ ಅಷ್ಟು ಸುಲಭವಾಗಿ ಹೋಗಲಾಡಿಸುವುದು ಉತ್ತಮ.

Constipation: ಮಲಬದ್ಧತೆ ಸಮಸ್ಯೆಯಿಂದ ಬೇಗನೆ ಮುಕ್ತಿ ಪಡೆಯಲು ಪಾಪ್ ಕಾರ್ನ್!
Constipation Relief FoodsImage Credit source: Pinterest
ಅಕ್ಷತಾ ವರ್ಕಾಡಿ
|

Updated on: Dec 17, 2023 | 5:57 PM

Share

ಬದಲಾದ ಆಹಾರ ಪದ್ಧತಿಯಿಂದಾಗಿ, ಅನೇಕ ಜನರು ಮಲವಿಸರ್ಜನೆಯಲ್ಲೂ ತೊಂದರೆ ಎದುರಿಸುತ್ತಾರೆ. ಒಂದರ್ಥದಲ್ಲಿ ಇದು ಹೊಟ್ಟೆಯ ಸಮಸ್ಯೆಯೂ ಹೌದು. ಮಲಬದ್ಧತೆಯೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಾಗಿ ಈ ಸಮಸ್ಯೆಯನ್ನು ಎಷ್ಟು ಸಾಧ್ಯವೋ ಅಷ್ಟು ಸುಲಭವಾಗಿ ಹೋಗಲಾಡಿಸುವುದು ಉತ್ತಮ. ಇಂತಹ ಸಮಸ್ಯೆಗಳನ್ನು ಎದುರಿಸಲು ಮುಖ್ಯ ಕಾರಣ ಆಹಾರ ಪದ್ಧತಿ. ನಾರಿನಂಶ ಮತ್ತು ನೀರು ಕಡಿಮೆ ಇರುವ ಆಹಾರ ಸೇವಿಸಿದರೆ ತಿಂದ ಆಹಾರ ಜೀರ್ಣವಾಗದೇ ಮಲಬದ್ಧತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹಾಗಾಗಿ ನಿಮ್ಮ ಆಹಾರ ಕ್ರಮದಲ್ಲಿ ಖಂಡಿತ ಬದಲಾವಣೆ ಮಾಡಿಕೊಳ್ಳಿ. ಪಾಪ್ ಕಾರ್ನ್ ಈ ಸಮಸ್ಯೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ ಎಂದು ನಿಮಗೇನಿಸುತ್ತದೆಯೇ?

ಪಾಪ್‌ಕಾರ್ನ್:

ಅನೇಕ ಜನರು ಸಿನಿಮಾ ನೋಡುವ ಸಮಯದಲ್ಲಿ ಅಥವಾ ಸಮಯ ಕಳೆಯಲು ಪಾಪ್ ಕಾರ್ನ್ ತಿನ್ನುತ್ತಾರೆ. ಇದನ್ನು ತಿಂದರೆ ಹೊಟ್ಟೆ ಉಬ್ಬುತ್ತದೆ ಎಂದು ಹಲವರು ಭಾವಿಸುತ್ತಾರೆ. ಆದರೆ ವಾಸ್ತವವಾಗಿ ಪಾಪ್ ಕಾರ್ನ್ ತಿನ್ನುವುದರಿಂದ ಮಲಬದ್ಧತೆ ಸಮಸ್ಯೆಯಿಂದ ಬೇಗನೆ ಮುಕ್ತಿ ಪಡೆಯಬಹುದು. ಏಕೆಂದರೆ ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದೆ. ಹಾಗಾಗಿ ಪ್ರತಿದಿನ ಸಂಜೆ ಪಾಪ್ ಕಾರ್ನ್ ತಿನ್ನುವುದು ತುಂಬಾ ಒಳ್ಳೆಯದು.

ಇದನ್ನೂ ಓದಿ:  ಎದೆ ಉರಿ, ಅಸಿಡಿಟಿ ಸಮಸ್ಯೆಗೆ ‘ಆಂಟಾಸಿಡ್’ ತೆಗೆದುಕೊಳ್ಳುತ್ತಿದ್ದರೆ ಇಂದೇ ಬಿಟ್ಟುಬಿಡಿ; ಬದಲಾಗಿ ಈ ಮನೆಮದ್ದು ಟ್ರೈ ಮಾಡಿ

ಓಟ್ಸ್:

ಓಟ್ಸ್ ಅನ್ನು ನಿಯಮಿತವಾಗಿ ತಿನ್ನುವುದರಿಂದ ಮಲಬದ್ಧತೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಓಟ್ಸ್ ನಲ್ಲಿ ನಾರಿನಂಶ ಅಧಿಕವಾಗಿದೆ. ಈ ಕಾರಣದಿಂದಾಗಿ, ಸೇವಿಸಿದ ಆಹಾರವು ತ್ವರಿತವಾಗಿ ಜೀರ್ಣವಾಗುತ್ತದೆ ಮತ್ತು ಹೊರಹಾಕಲ್ಪಡುತ್ತದೆ. ಇದಲ್ಲದೆ, ನೀವು ಜೀರ್ಣಕಾರಿ ಮತ್ತು ಹೊಟ್ಟೆಯ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ಆಗಾಗ ಓಟ್ಸ್ ಸೇವಿಸುವುದು ಉತ್ತಮ.

ಸಿಹಿ ಗೆಣಸು:

ಚಳಿಗಾಲದಲ್ಲಿ ಸಾಧ್ಯವಾದಷ್ಟು ಸಿಹಿಗೆಣಸು ಸೇವಿಸಿ. ಇದನ್ನು ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ಇದು ಹೆಚ್ಚಿನ ಫೈಬರ್ ಅಂಶ ಮತ್ತು ನೀರಿನ ಅಂಶವನ್ನು ಹೊಂದಿದೆ. ಇದಲ್ಲದೆ, ಸಿಹಿ ಗೆಣಸಿನ ಗುಣಲಕ್ಷಣಗಳು ಕರುಳನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ